Homeಕರ್ನಾಟಕದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ಈ ಪತ್ರವನ್ನೇ ದೂರು ಎಂದು ತಿಳಿದುಕೊಂಡು ಕ್ರಮ ಜರುಗಿಸಬೇಕೆಂದು ಅವರು ಕೋರಿದ್ದಾರೆ.

- Advertisement -
- Advertisement -

||ನಾನು ಗೌರಿ ಡೆಸ್ಕ್||

ಶಾಸಕರ ರಾಜೀನಾಮೆ, ಪಕ್ಷಾಂತರ ಸಾಧ್ಯತೆ, ಅನರ್ಹತೆಯ ಅರ್ಜಿ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ದೇವನೂರು ಮಹಾದೇವ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿಯವರು ವಿಧಾನಸಭಾಧ್ಯಕ್ಷರಿಗೆ ಖಾರವಾದ ಪತ್ರವನ್ನು ಬರೆದಿದ್ದಾರೆ. ರಾಜೀನಾಮೆ ಕೊಟ್ಟಿರುವ ಶಾಸಕರು ಹೊಣೆಗೇಡಿತನವನ್ನು ಪ್ರದರ್ಶಿಸಿದ್ದಾರಲ್ಲದೇ, ತಮಗೆ ಮತ ನೀಡಿದವರಿಗೆ ದ್ರೋಹವೆಸಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಪತ್ರವನ್ನೇ ದೂರು ಎಂದು ತಿಳಿದುಕೊಂಡು ಕ್ರಮ ಜರುಗಿಸಬೇಕೆಂದು ಅವರು ಕೋರಿದ್ದಾರೆ. ಪತ್ರದ ಪೂರ್ಣ ಪಾಠ ಈ ಕೆಳಕಂಡಂತಿದೆ.

ಇವರಿಗೆ,
ಸನ್ಮಾನ್ಯ ಸಭಾಧ್ಯಕ್ಷರು
ಕರ್ನಾಟಕ ವಿಧಾನಸಭೆ
ಬೆಂಗಳೂರು

ಮಾನ್ಯರೇ,
ವಿಷಯ: ಶಾಸಕರು ತಮ್ಮ ಆತ್ಮವನ್ನೂ ನಮ್ಮ ಮತವನ್ನೂ ಮಾರುತ್ತಿರುವ ಹೊತ್ತಿನಲ್ಲಿ
ರಾಜ್ಯದ ಹಾಗೂ ರಾಜಕಾರಣದ ಘನತೆಯನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ
ಮೇಲಿದೆ

ಈ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಅತ್ಯಂತ ಆಘಾತಕಾರಿಯಾಗಿವೆ. ಪಕ್ಷಾಂತರಗಳು ಎಲ್ಲಿಂದ ಎಲ್ಲಿಗೆ ಆಗುತ್ತಿದ್ದರೂ ಇದಕ್ಕೆ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳೂ ಕಾರಣವೆಂದೇ ನಾವು ಭಾವಿಸುತ್ತೇವೆ. ದೇಶದ ಸಂಸದೀಯ ಪ್ರಜಾತಂತ್ರವು ಕೊರತೆಗಳಿಂದ ಕೂಡಿರಬಹುದು. ಆದರೆ, ಸಂವಿಧಾನ ನಿರ್ಮಾತೃಗಳು ಮುಂಬರುವ ಪೀಳಿಗೆಗಳ ಮೇಲೆ ವಿಶ್ವಾಸವಿಟ್ಟು ಕೆಲವು ಅವಕಾಶಗಳನ್ನು ನೀಡಿದ್ದರು. ಅವುಗಳ ದುರುಪಯೋಗ ಮಾಡಿಕೊಂಡು ನಡೆದ ಅನೈತಿಕ ಪಕ್ಷಾಂತರಗಳನ್ನು ತಡೆಯುವ ಉದ್ದೇಶದಿಂದ ಪಕ್ಷಾಂತರ ನಿಷೇಧ ಕಾಯ್ದೆಯು 1985ರಲ್ಲಿ ಜಾರಿಗೆ ಬಂದಿತು. ನಂತರದಲ್ಲಿ 2003ರಲ್ಲಿ ಅದಕ್ಕೆ ತಿದ್ದುಪಡಿಯೂ ಬಂದಿತು.

ಆದರೆ, ಎಲ್ಲಾ ಕಾಯ್ದೆಗಳಿಂದಲೂ ನುಸುಳಿಕೊಳ್ಳುವ ರೀತಿಯಲ್ಲಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಇನ್ನೂ ಹೆಚ್ಚಿನ ಅಧಿಕಾರ ಪಡೆದುಕೊಂಡು ಇನ್ನೊಂದು ಪಕ್ಷದಿಂದ ಸ್ಪರ್ಧಿಸುವ ಹೊಸದೊಂದು ಪ್ರಕ್ರಿಯೆಗೆ ನಮ್ಮ ರಾಜ್ಯ ಕರ್ನಾಟಕವೇ ಮೇಲ್ಪಂಕ್ತಿ ಹಾಕಿಕೊಟ್ಟಿದ್ದು ನಾವು ತಲೆತಗ್ಗಿಸುವ ವಿಚಾರವಾಗಿದೆ. ಇಂದು ಅಂತಹ ಇನ್ನೊಂದು ಸಂದರ್ಭ ನಮ್ಮ ರಾಜ್ಯದಲ್ಲಿ ಈಗ ಉಂಟಾಗಿದೆ. ಮೇಲೆ ಹೇಳಿರುವಂತೆ ಇದರ ಹೊಣೆಯನ್ನು ಮೂರೂ ಪ್ರಮುಖ ರಾಜಕೀಯ ಪಕ್ಷಗಳು ಹೊತ್ತುಕೊಳ್ಳಬೇಕಿದೆ.


ಇಂದು ಆಮಿಷ, ಒತ್ತಡ ಅಥವಾ ಇನ್ನಾವುದೋ ಕಾರಣಕ್ಕೆ ಸ್ವಹಿತಾಸಕ್ತಿಗಾಗಿ ಪಕ್ಷ ಬದಲಾಯಿಸುತ್ತಿರುವವರು ತಮ್ಮ ಆತ್ಮವನ್ನೂ, ತಮಗೆ ಮತ ನೀಡಿದ ಮತದಾರರ ಮತವನ್ನೂ ಮಾರಿಕೊಂಡಂತೆ ಎಂದೇ ನಾವು ಭಾವಿಸುತ್ತೇವೆ. ಶಾಸಕರಿಗೆ ರಾಜೀನಾಮೆ ನೀಡುವ ಹಕ್ಕು ಇದೆ ಎಂಬುದು ವಾಸ್ತವ. ಆದರೆ, ಇದನ್ನು ಕೇವಲ ತಾಂತ್ರಿಕ ವಿಚಾರವನ್ನಾಗಿ ನೋಡದೇ ಸಾರ್ವಜನಿಕ ರಾಜಕೀಯ ನೀತಿ ಸಂಹಿತೆಯ ಭಾಗವಾಗಿ ನೋಡಬೇಕಿದೆ. ಇಂದು ನಡೆಯುತ್ತಿರುವುದು ಪಕ್ಷಾಂತರವೇ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಮತದಾರರು ಅಭ್ಯರ್ಥಿ ಮಾತ್ರವಲ್ಲದೇ ಪಕ್ಷಕ್ಕೂ ಮತ ನೀಡಿರುತ್ತಾರೆ. ಹಲವು ಸಾರಿ ಅಭ್ಯರ್ಥಿ ಇಷ್ಟವಿಲ್ಲದಿದ್ದರೂ ಪಕ್ಷಕ್ಕೇ ಮತ ನೀಡಿರುವ ಸಾಧ್ಯತೆ ಇರುತ್ತದೆ. ಜೊತೆಗೆ ಐದು ವರ್ಷಕ್ಕೆಂದು ಅವರಿಗೆ ಮತ ನೀಡಿರುತ್ತಾರೆ. ಅದನ್ನು ಪೂರೈಸುವ ಹೊಣೆಗಾರಿಕೆಯೂ ಆಯ್ಕೆಯಾದವರದ್ದಾಗಿರುತ್ತದೆ. ಅನಾರೋಗ್ಯ, ಸಾವು ಇತ್ಯಾದಿ ಕಾರಣಗಳನ್ನು ಬಿಟ್ಟು ಇನ್ನಾವ ಕಾರಣಕ್ಕೆ ತೆರವು ಮಾಡಿದರೂ ಅದು ಹೊಣೆಗೇಡಿತನವಾಗುತ್ತದೆ. ಈಗ ನಡೆಯುತ್ತಿರುವುದು ಹೊಣೆಗೇಡಿತನ ಮಾತ್ರವಲ್ಲಾ, ದ್ರೋಹವೂ ಹೌದು. ರಾಜೀನಾಮೆ ನೀಡಿದವರು ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೂ ನಿಲ್ಲಬಾರದು, ಯಾವುದೇ ಅಧಿಕಾರದ ಸ್ಥಾನಗಳನ್ನೂ ಹೊಂದಬಾರದು ಎಂಬ ನಿಯಮವೂ ಜಾರಿಯಾಗಬೇಕಿದೆ.

ಈ ಸ್ವೇಚ್ಛಾಚಾರವು ಪಕ್ಷಾಂತರ ನಿಷೇಧ ಕಾಯ್ದೆಯ ವ್ಯಾಪ್ತಿಯಲ್ಲಿಯೇ, ಕಾಯ್ದೆಗೆ ಹೆಗ್ಗಣಗಳಂತೆ ಬಿಲ ಕೊರೆದು, ಅದನ್ನೇ ಬುಡಮೇಲು ಮಾಡುವ ಕೃತ್ಯವಾಗಿದೆ. ಇದನ್ನು ವಿಧಾನಸಭಾಧ್ಯಕ್ಷರು ಗಂಭೀರವಾಗಿ ಪರಿಗಣಿಸಬೇಕಿದೆ.

ಇವೆಲ್ಲದರಿಂದ ಈಗಾಗಲೇ ಸಮಾಜದ ಮುಂದೆ ಪಾತಾಳಕ್ಕಿಳಿದಿರುವ ರಾಜಕೀಯ ವ್ಯವಸ್ಥೆಯ ಆತ್ಮವೇ ದಾಳಿಗೊಳಗಾಗುತ್ತಿದೆ. ಆದ್ದರಿಂದ ಇದನ್ನು ಸರಿಪಡಿಸಲು ಬೇಕಾದ ಎಲ್ಲಾ ಕ್ರಮಗಳನ್ನು ನೀವು ತೆಗೆದುಕೊಳ್ಳಲೇ- ಬೇಕೆಂದು ನಿಮ್ಮನ್ನು ಒತ್ತಾಯಿಸುತ್ತಿದ್ದೇವೆ. ಅಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ತಾವು, ತಮ್ಮ ವ್ಯಕ್ತಿಗತ ನಿಲುವುಗಳೇನಾಗಿದ್ದರೂ ತಪ್ಪಾದ ಮತ್ತು ಆತುರದ ನಿರ್ಧಾರಕ್ಕೆ ಬರಬಾರದೆಂಬುದು ನಮ್ಮ ಆಗ್ರಹ. ಇದನ್ನೇ ನೀವು ನಮ್ಮ ದೂರು ಎಂದೂ ಪರಿಗಣಿಸಬೇಕೆಂದು ಕೋರುತ್ತೇವೆ.

ಅಗತ್ಯವಿದ್ದರೆ ಉನ್ನತ ನ್ಯಾಯಾಲಯಗಳಿಗೂ ಹೋಗುವ ಮೂಲಕ ಸಂವಿಧಾನವನ್ನು ಕಾಪಾಡುವ ಹೊಣೆ ಹಾಗೂ ಅಧಿಕಾರ ಹೊಂದಿರುವ ನ್ಯಾಯಾಧೀಶರಲ್ಲೂ ಮನವಿ ಮಾಡಬೇಕೆಂದು ತೀರ್ಮಾನಿಸಿದ್ದೇವೆ. ಅಂತಹ ಪರಿಸ್ಥಿತಿ ಬಾರದಂತೆ, ಸಂವಿಧಾನಬದ್ಧ ಅಧಿಕಾರ ಹೊಂದಿರುವ ತಾವು ಪರಿಣಾಮಕಾರಿಯಾದ ಕ್ರಮ ತೆಗೆದುಕೊಳ್ಳುತ್ತೀರೆಂದು ಆಶಿಸುತ್ತೇವೆ.

ವಂದನೆಗಳೊಂದಿಗೆ,

ತಮ್ಮ ವಿಶ್ವಾಸಿಗಳು

ದೇವನೂರ ಮಹಾದೇವ ಎಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Gowri is still alive, who will inspire the coming generations. Devanur mahadev and h s doreswamy are pure souls fearless souls who have rightful thoughts for society. We welcome their opinions on today’s politics and hope it will be followed.

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...