Homeಕರ್ನಾಟಕದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ಈ ಪತ್ರವನ್ನೇ ದೂರು ಎಂದು ತಿಳಿದುಕೊಂಡು ಕ್ರಮ ಜರುಗಿಸಬೇಕೆಂದು ಅವರು ಕೋರಿದ್ದಾರೆ.

- Advertisement -
- Advertisement -

||ನಾನು ಗೌರಿ ಡೆಸ್ಕ್||

ಶಾಸಕರ ರಾಜೀನಾಮೆ, ಪಕ್ಷಾಂತರ ಸಾಧ್ಯತೆ, ಅನರ್ಹತೆಯ ಅರ್ಜಿ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ದೇವನೂರು ಮಹಾದೇವ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿಯವರು ವಿಧಾನಸಭಾಧ್ಯಕ್ಷರಿಗೆ ಖಾರವಾದ ಪತ್ರವನ್ನು ಬರೆದಿದ್ದಾರೆ. ರಾಜೀನಾಮೆ ಕೊಟ್ಟಿರುವ ಶಾಸಕರು ಹೊಣೆಗೇಡಿತನವನ್ನು ಪ್ರದರ್ಶಿಸಿದ್ದಾರಲ್ಲದೇ, ತಮಗೆ ಮತ ನೀಡಿದವರಿಗೆ ದ್ರೋಹವೆಸಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಪತ್ರವನ್ನೇ ದೂರು ಎಂದು ತಿಳಿದುಕೊಂಡು ಕ್ರಮ ಜರುಗಿಸಬೇಕೆಂದು ಅವರು ಕೋರಿದ್ದಾರೆ. ಪತ್ರದ ಪೂರ್ಣ ಪಾಠ ಈ ಕೆಳಕಂಡಂತಿದೆ.

ಇವರಿಗೆ,
ಸನ್ಮಾನ್ಯ ಸಭಾಧ್ಯಕ್ಷರು
ಕರ್ನಾಟಕ ವಿಧಾನಸಭೆ
ಬೆಂಗಳೂರು

ಮಾನ್ಯರೇ,
ವಿಷಯ: ಶಾಸಕರು ತಮ್ಮ ಆತ್ಮವನ್ನೂ ನಮ್ಮ ಮತವನ್ನೂ ಮಾರುತ್ತಿರುವ ಹೊತ್ತಿನಲ್ಲಿ
ರಾಜ್ಯದ ಹಾಗೂ ರಾಜಕಾರಣದ ಘನತೆಯನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ
ಮೇಲಿದೆ

ಈ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಅತ್ಯಂತ ಆಘಾತಕಾರಿಯಾಗಿವೆ. ಪಕ್ಷಾಂತರಗಳು ಎಲ್ಲಿಂದ ಎಲ್ಲಿಗೆ ಆಗುತ್ತಿದ್ದರೂ ಇದಕ್ಕೆ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳೂ ಕಾರಣವೆಂದೇ ನಾವು ಭಾವಿಸುತ್ತೇವೆ. ದೇಶದ ಸಂಸದೀಯ ಪ್ರಜಾತಂತ್ರವು ಕೊರತೆಗಳಿಂದ ಕೂಡಿರಬಹುದು. ಆದರೆ, ಸಂವಿಧಾನ ನಿರ್ಮಾತೃಗಳು ಮುಂಬರುವ ಪೀಳಿಗೆಗಳ ಮೇಲೆ ವಿಶ್ವಾಸವಿಟ್ಟು ಕೆಲವು ಅವಕಾಶಗಳನ್ನು ನೀಡಿದ್ದರು. ಅವುಗಳ ದುರುಪಯೋಗ ಮಾಡಿಕೊಂಡು ನಡೆದ ಅನೈತಿಕ ಪಕ್ಷಾಂತರಗಳನ್ನು ತಡೆಯುವ ಉದ್ದೇಶದಿಂದ ಪಕ್ಷಾಂತರ ನಿಷೇಧ ಕಾಯ್ದೆಯು 1985ರಲ್ಲಿ ಜಾರಿಗೆ ಬಂದಿತು. ನಂತರದಲ್ಲಿ 2003ರಲ್ಲಿ ಅದಕ್ಕೆ ತಿದ್ದುಪಡಿಯೂ ಬಂದಿತು.

ಆದರೆ, ಎಲ್ಲಾ ಕಾಯ್ದೆಗಳಿಂದಲೂ ನುಸುಳಿಕೊಳ್ಳುವ ರೀತಿಯಲ್ಲಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಇನ್ನೂ ಹೆಚ್ಚಿನ ಅಧಿಕಾರ ಪಡೆದುಕೊಂಡು ಇನ್ನೊಂದು ಪಕ್ಷದಿಂದ ಸ್ಪರ್ಧಿಸುವ ಹೊಸದೊಂದು ಪ್ರಕ್ರಿಯೆಗೆ ನಮ್ಮ ರಾಜ್ಯ ಕರ್ನಾಟಕವೇ ಮೇಲ್ಪಂಕ್ತಿ ಹಾಕಿಕೊಟ್ಟಿದ್ದು ನಾವು ತಲೆತಗ್ಗಿಸುವ ವಿಚಾರವಾಗಿದೆ. ಇಂದು ಅಂತಹ ಇನ್ನೊಂದು ಸಂದರ್ಭ ನಮ್ಮ ರಾಜ್ಯದಲ್ಲಿ ಈಗ ಉಂಟಾಗಿದೆ. ಮೇಲೆ ಹೇಳಿರುವಂತೆ ಇದರ ಹೊಣೆಯನ್ನು ಮೂರೂ ಪ್ರಮುಖ ರಾಜಕೀಯ ಪಕ್ಷಗಳು ಹೊತ್ತುಕೊಳ್ಳಬೇಕಿದೆ.


ಇಂದು ಆಮಿಷ, ಒತ್ತಡ ಅಥವಾ ಇನ್ನಾವುದೋ ಕಾರಣಕ್ಕೆ ಸ್ವಹಿತಾಸಕ್ತಿಗಾಗಿ ಪಕ್ಷ ಬದಲಾಯಿಸುತ್ತಿರುವವರು ತಮ್ಮ ಆತ್ಮವನ್ನೂ, ತಮಗೆ ಮತ ನೀಡಿದ ಮತದಾರರ ಮತವನ್ನೂ ಮಾರಿಕೊಂಡಂತೆ ಎಂದೇ ನಾವು ಭಾವಿಸುತ್ತೇವೆ. ಶಾಸಕರಿಗೆ ರಾಜೀನಾಮೆ ನೀಡುವ ಹಕ್ಕು ಇದೆ ಎಂಬುದು ವಾಸ್ತವ. ಆದರೆ, ಇದನ್ನು ಕೇವಲ ತಾಂತ್ರಿಕ ವಿಚಾರವನ್ನಾಗಿ ನೋಡದೇ ಸಾರ್ವಜನಿಕ ರಾಜಕೀಯ ನೀತಿ ಸಂಹಿತೆಯ ಭಾಗವಾಗಿ ನೋಡಬೇಕಿದೆ. ಇಂದು ನಡೆಯುತ್ತಿರುವುದು ಪಕ್ಷಾಂತರವೇ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಮತದಾರರು ಅಭ್ಯರ್ಥಿ ಮಾತ್ರವಲ್ಲದೇ ಪಕ್ಷಕ್ಕೂ ಮತ ನೀಡಿರುತ್ತಾರೆ. ಹಲವು ಸಾರಿ ಅಭ್ಯರ್ಥಿ ಇಷ್ಟವಿಲ್ಲದಿದ್ದರೂ ಪಕ್ಷಕ್ಕೇ ಮತ ನೀಡಿರುವ ಸಾಧ್ಯತೆ ಇರುತ್ತದೆ. ಜೊತೆಗೆ ಐದು ವರ್ಷಕ್ಕೆಂದು ಅವರಿಗೆ ಮತ ನೀಡಿರುತ್ತಾರೆ. ಅದನ್ನು ಪೂರೈಸುವ ಹೊಣೆಗಾರಿಕೆಯೂ ಆಯ್ಕೆಯಾದವರದ್ದಾಗಿರುತ್ತದೆ. ಅನಾರೋಗ್ಯ, ಸಾವು ಇತ್ಯಾದಿ ಕಾರಣಗಳನ್ನು ಬಿಟ್ಟು ಇನ್ನಾವ ಕಾರಣಕ್ಕೆ ತೆರವು ಮಾಡಿದರೂ ಅದು ಹೊಣೆಗೇಡಿತನವಾಗುತ್ತದೆ. ಈಗ ನಡೆಯುತ್ತಿರುವುದು ಹೊಣೆಗೇಡಿತನ ಮಾತ್ರವಲ್ಲಾ, ದ್ರೋಹವೂ ಹೌದು. ರಾಜೀನಾಮೆ ನೀಡಿದವರು ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೂ ನಿಲ್ಲಬಾರದು, ಯಾವುದೇ ಅಧಿಕಾರದ ಸ್ಥಾನಗಳನ್ನೂ ಹೊಂದಬಾರದು ಎಂಬ ನಿಯಮವೂ ಜಾರಿಯಾಗಬೇಕಿದೆ.

ಈ ಸ್ವೇಚ್ಛಾಚಾರವು ಪಕ್ಷಾಂತರ ನಿಷೇಧ ಕಾಯ್ದೆಯ ವ್ಯಾಪ್ತಿಯಲ್ಲಿಯೇ, ಕಾಯ್ದೆಗೆ ಹೆಗ್ಗಣಗಳಂತೆ ಬಿಲ ಕೊರೆದು, ಅದನ್ನೇ ಬುಡಮೇಲು ಮಾಡುವ ಕೃತ್ಯವಾಗಿದೆ. ಇದನ್ನು ವಿಧಾನಸಭಾಧ್ಯಕ್ಷರು ಗಂಭೀರವಾಗಿ ಪರಿಗಣಿಸಬೇಕಿದೆ.

ಇವೆಲ್ಲದರಿಂದ ಈಗಾಗಲೇ ಸಮಾಜದ ಮುಂದೆ ಪಾತಾಳಕ್ಕಿಳಿದಿರುವ ರಾಜಕೀಯ ವ್ಯವಸ್ಥೆಯ ಆತ್ಮವೇ ದಾಳಿಗೊಳಗಾಗುತ್ತಿದೆ. ಆದ್ದರಿಂದ ಇದನ್ನು ಸರಿಪಡಿಸಲು ಬೇಕಾದ ಎಲ್ಲಾ ಕ್ರಮಗಳನ್ನು ನೀವು ತೆಗೆದುಕೊಳ್ಳಲೇ- ಬೇಕೆಂದು ನಿಮ್ಮನ್ನು ಒತ್ತಾಯಿಸುತ್ತಿದ್ದೇವೆ. ಅಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ತಾವು, ತಮ್ಮ ವ್ಯಕ್ತಿಗತ ನಿಲುವುಗಳೇನಾಗಿದ್ದರೂ ತಪ್ಪಾದ ಮತ್ತು ಆತುರದ ನಿರ್ಧಾರಕ್ಕೆ ಬರಬಾರದೆಂಬುದು ನಮ್ಮ ಆಗ್ರಹ. ಇದನ್ನೇ ನೀವು ನಮ್ಮ ದೂರು ಎಂದೂ ಪರಿಗಣಿಸಬೇಕೆಂದು ಕೋರುತ್ತೇವೆ.

ಅಗತ್ಯವಿದ್ದರೆ ಉನ್ನತ ನ್ಯಾಯಾಲಯಗಳಿಗೂ ಹೋಗುವ ಮೂಲಕ ಸಂವಿಧಾನವನ್ನು ಕಾಪಾಡುವ ಹೊಣೆ ಹಾಗೂ ಅಧಿಕಾರ ಹೊಂದಿರುವ ನ್ಯಾಯಾಧೀಶರಲ್ಲೂ ಮನವಿ ಮಾಡಬೇಕೆಂದು ತೀರ್ಮಾನಿಸಿದ್ದೇವೆ. ಅಂತಹ ಪರಿಸ್ಥಿತಿ ಬಾರದಂತೆ, ಸಂವಿಧಾನಬದ್ಧ ಅಧಿಕಾರ ಹೊಂದಿರುವ ತಾವು ಪರಿಣಾಮಕಾರಿಯಾದ ಕ್ರಮ ತೆಗೆದುಕೊಳ್ಳುತ್ತೀರೆಂದು ಆಶಿಸುತ್ತೇವೆ.

ವಂದನೆಗಳೊಂದಿಗೆ,

ತಮ್ಮ ವಿಶ್ವಾಸಿಗಳು

ದೇವನೂರ ಮಹಾದೇವ ಎಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Gowri is still alive, who will inspire the coming generations. Devanur mahadev and h s doreswamy are pure souls fearless souls who have rightful thoughts for society. We welcome their opinions on today’s politics and hope it will be followed.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...