Homeಕರ್ನಾಟಕದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ಈ ಪತ್ರವನ್ನೇ ದೂರು ಎಂದು ತಿಳಿದುಕೊಂಡು ಕ್ರಮ ಜರುಗಿಸಬೇಕೆಂದು ಅವರು ಕೋರಿದ್ದಾರೆ.

- Advertisement -
- Advertisement -

||ನಾನು ಗೌರಿ ಡೆಸ್ಕ್||

ಶಾಸಕರ ರಾಜೀನಾಮೆ, ಪಕ್ಷಾಂತರ ಸಾಧ್ಯತೆ, ಅನರ್ಹತೆಯ ಅರ್ಜಿ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ದೇವನೂರು ಮಹಾದೇವ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿಯವರು ವಿಧಾನಸಭಾಧ್ಯಕ್ಷರಿಗೆ ಖಾರವಾದ ಪತ್ರವನ್ನು ಬರೆದಿದ್ದಾರೆ. ರಾಜೀನಾಮೆ ಕೊಟ್ಟಿರುವ ಶಾಸಕರು ಹೊಣೆಗೇಡಿತನವನ್ನು ಪ್ರದರ್ಶಿಸಿದ್ದಾರಲ್ಲದೇ, ತಮಗೆ ಮತ ನೀಡಿದವರಿಗೆ ದ್ರೋಹವೆಸಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಪತ್ರವನ್ನೇ ದೂರು ಎಂದು ತಿಳಿದುಕೊಂಡು ಕ್ರಮ ಜರುಗಿಸಬೇಕೆಂದು ಅವರು ಕೋರಿದ್ದಾರೆ. ಪತ್ರದ ಪೂರ್ಣ ಪಾಠ ಈ ಕೆಳಕಂಡಂತಿದೆ.

ಇವರಿಗೆ,
ಸನ್ಮಾನ್ಯ ಸಭಾಧ್ಯಕ್ಷರು
ಕರ್ನಾಟಕ ವಿಧಾನಸಭೆ
ಬೆಂಗಳೂರು

ಮಾನ್ಯರೇ,
ವಿಷಯ: ಶಾಸಕರು ತಮ್ಮ ಆತ್ಮವನ್ನೂ ನಮ್ಮ ಮತವನ್ನೂ ಮಾರುತ್ತಿರುವ ಹೊತ್ತಿನಲ್ಲಿ
ರಾಜ್ಯದ ಹಾಗೂ ರಾಜಕಾರಣದ ಘನತೆಯನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ
ಮೇಲಿದೆ

ಈ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಅತ್ಯಂತ ಆಘಾತಕಾರಿಯಾಗಿವೆ. ಪಕ್ಷಾಂತರಗಳು ಎಲ್ಲಿಂದ ಎಲ್ಲಿಗೆ ಆಗುತ್ತಿದ್ದರೂ ಇದಕ್ಕೆ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳೂ ಕಾರಣವೆಂದೇ ನಾವು ಭಾವಿಸುತ್ತೇವೆ. ದೇಶದ ಸಂಸದೀಯ ಪ್ರಜಾತಂತ್ರವು ಕೊರತೆಗಳಿಂದ ಕೂಡಿರಬಹುದು. ಆದರೆ, ಸಂವಿಧಾನ ನಿರ್ಮಾತೃಗಳು ಮುಂಬರುವ ಪೀಳಿಗೆಗಳ ಮೇಲೆ ವಿಶ್ವಾಸವಿಟ್ಟು ಕೆಲವು ಅವಕಾಶಗಳನ್ನು ನೀಡಿದ್ದರು. ಅವುಗಳ ದುರುಪಯೋಗ ಮಾಡಿಕೊಂಡು ನಡೆದ ಅನೈತಿಕ ಪಕ್ಷಾಂತರಗಳನ್ನು ತಡೆಯುವ ಉದ್ದೇಶದಿಂದ ಪಕ್ಷಾಂತರ ನಿಷೇಧ ಕಾಯ್ದೆಯು 1985ರಲ್ಲಿ ಜಾರಿಗೆ ಬಂದಿತು. ನಂತರದಲ್ಲಿ 2003ರಲ್ಲಿ ಅದಕ್ಕೆ ತಿದ್ದುಪಡಿಯೂ ಬಂದಿತು.

ಆದರೆ, ಎಲ್ಲಾ ಕಾಯ್ದೆಗಳಿಂದಲೂ ನುಸುಳಿಕೊಳ್ಳುವ ರೀತಿಯಲ್ಲಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಇನ್ನೂ ಹೆಚ್ಚಿನ ಅಧಿಕಾರ ಪಡೆದುಕೊಂಡು ಇನ್ನೊಂದು ಪಕ್ಷದಿಂದ ಸ್ಪರ್ಧಿಸುವ ಹೊಸದೊಂದು ಪ್ರಕ್ರಿಯೆಗೆ ನಮ್ಮ ರಾಜ್ಯ ಕರ್ನಾಟಕವೇ ಮೇಲ್ಪಂಕ್ತಿ ಹಾಕಿಕೊಟ್ಟಿದ್ದು ನಾವು ತಲೆತಗ್ಗಿಸುವ ವಿಚಾರವಾಗಿದೆ. ಇಂದು ಅಂತಹ ಇನ್ನೊಂದು ಸಂದರ್ಭ ನಮ್ಮ ರಾಜ್ಯದಲ್ಲಿ ಈಗ ಉಂಟಾಗಿದೆ. ಮೇಲೆ ಹೇಳಿರುವಂತೆ ಇದರ ಹೊಣೆಯನ್ನು ಮೂರೂ ಪ್ರಮುಖ ರಾಜಕೀಯ ಪಕ್ಷಗಳು ಹೊತ್ತುಕೊಳ್ಳಬೇಕಿದೆ.


ಇಂದು ಆಮಿಷ, ಒತ್ತಡ ಅಥವಾ ಇನ್ನಾವುದೋ ಕಾರಣಕ್ಕೆ ಸ್ವಹಿತಾಸಕ್ತಿಗಾಗಿ ಪಕ್ಷ ಬದಲಾಯಿಸುತ್ತಿರುವವರು ತಮ್ಮ ಆತ್ಮವನ್ನೂ, ತಮಗೆ ಮತ ನೀಡಿದ ಮತದಾರರ ಮತವನ್ನೂ ಮಾರಿಕೊಂಡಂತೆ ಎಂದೇ ನಾವು ಭಾವಿಸುತ್ತೇವೆ. ಶಾಸಕರಿಗೆ ರಾಜೀನಾಮೆ ನೀಡುವ ಹಕ್ಕು ಇದೆ ಎಂಬುದು ವಾಸ್ತವ. ಆದರೆ, ಇದನ್ನು ಕೇವಲ ತಾಂತ್ರಿಕ ವಿಚಾರವನ್ನಾಗಿ ನೋಡದೇ ಸಾರ್ವಜನಿಕ ರಾಜಕೀಯ ನೀತಿ ಸಂಹಿತೆಯ ಭಾಗವಾಗಿ ನೋಡಬೇಕಿದೆ. ಇಂದು ನಡೆಯುತ್ತಿರುವುದು ಪಕ್ಷಾಂತರವೇ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಮತದಾರರು ಅಭ್ಯರ್ಥಿ ಮಾತ್ರವಲ್ಲದೇ ಪಕ್ಷಕ್ಕೂ ಮತ ನೀಡಿರುತ್ತಾರೆ. ಹಲವು ಸಾರಿ ಅಭ್ಯರ್ಥಿ ಇಷ್ಟವಿಲ್ಲದಿದ್ದರೂ ಪಕ್ಷಕ್ಕೇ ಮತ ನೀಡಿರುವ ಸಾಧ್ಯತೆ ಇರುತ್ತದೆ. ಜೊತೆಗೆ ಐದು ವರ್ಷಕ್ಕೆಂದು ಅವರಿಗೆ ಮತ ನೀಡಿರುತ್ತಾರೆ. ಅದನ್ನು ಪೂರೈಸುವ ಹೊಣೆಗಾರಿಕೆಯೂ ಆಯ್ಕೆಯಾದವರದ್ದಾಗಿರುತ್ತದೆ. ಅನಾರೋಗ್ಯ, ಸಾವು ಇತ್ಯಾದಿ ಕಾರಣಗಳನ್ನು ಬಿಟ್ಟು ಇನ್ನಾವ ಕಾರಣಕ್ಕೆ ತೆರವು ಮಾಡಿದರೂ ಅದು ಹೊಣೆಗೇಡಿತನವಾಗುತ್ತದೆ. ಈಗ ನಡೆಯುತ್ತಿರುವುದು ಹೊಣೆಗೇಡಿತನ ಮಾತ್ರವಲ್ಲಾ, ದ್ರೋಹವೂ ಹೌದು. ರಾಜೀನಾಮೆ ನೀಡಿದವರು ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೂ ನಿಲ್ಲಬಾರದು, ಯಾವುದೇ ಅಧಿಕಾರದ ಸ್ಥಾನಗಳನ್ನೂ ಹೊಂದಬಾರದು ಎಂಬ ನಿಯಮವೂ ಜಾರಿಯಾಗಬೇಕಿದೆ.

ಈ ಸ್ವೇಚ್ಛಾಚಾರವು ಪಕ್ಷಾಂತರ ನಿಷೇಧ ಕಾಯ್ದೆಯ ವ್ಯಾಪ್ತಿಯಲ್ಲಿಯೇ, ಕಾಯ್ದೆಗೆ ಹೆಗ್ಗಣಗಳಂತೆ ಬಿಲ ಕೊರೆದು, ಅದನ್ನೇ ಬುಡಮೇಲು ಮಾಡುವ ಕೃತ್ಯವಾಗಿದೆ. ಇದನ್ನು ವಿಧಾನಸಭಾಧ್ಯಕ್ಷರು ಗಂಭೀರವಾಗಿ ಪರಿಗಣಿಸಬೇಕಿದೆ.

ಇವೆಲ್ಲದರಿಂದ ಈಗಾಗಲೇ ಸಮಾಜದ ಮುಂದೆ ಪಾತಾಳಕ್ಕಿಳಿದಿರುವ ರಾಜಕೀಯ ವ್ಯವಸ್ಥೆಯ ಆತ್ಮವೇ ದಾಳಿಗೊಳಗಾಗುತ್ತಿದೆ. ಆದ್ದರಿಂದ ಇದನ್ನು ಸರಿಪಡಿಸಲು ಬೇಕಾದ ಎಲ್ಲಾ ಕ್ರಮಗಳನ್ನು ನೀವು ತೆಗೆದುಕೊಳ್ಳಲೇ- ಬೇಕೆಂದು ನಿಮ್ಮನ್ನು ಒತ್ತಾಯಿಸುತ್ತಿದ್ದೇವೆ. ಅಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ತಾವು, ತಮ್ಮ ವ್ಯಕ್ತಿಗತ ನಿಲುವುಗಳೇನಾಗಿದ್ದರೂ ತಪ್ಪಾದ ಮತ್ತು ಆತುರದ ನಿರ್ಧಾರಕ್ಕೆ ಬರಬಾರದೆಂಬುದು ನಮ್ಮ ಆಗ್ರಹ. ಇದನ್ನೇ ನೀವು ನಮ್ಮ ದೂರು ಎಂದೂ ಪರಿಗಣಿಸಬೇಕೆಂದು ಕೋರುತ್ತೇವೆ.

ಅಗತ್ಯವಿದ್ದರೆ ಉನ್ನತ ನ್ಯಾಯಾಲಯಗಳಿಗೂ ಹೋಗುವ ಮೂಲಕ ಸಂವಿಧಾನವನ್ನು ಕಾಪಾಡುವ ಹೊಣೆ ಹಾಗೂ ಅಧಿಕಾರ ಹೊಂದಿರುವ ನ್ಯಾಯಾಧೀಶರಲ್ಲೂ ಮನವಿ ಮಾಡಬೇಕೆಂದು ತೀರ್ಮಾನಿಸಿದ್ದೇವೆ. ಅಂತಹ ಪರಿಸ್ಥಿತಿ ಬಾರದಂತೆ, ಸಂವಿಧಾನಬದ್ಧ ಅಧಿಕಾರ ಹೊಂದಿರುವ ತಾವು ಪರಿಣಾಮಕಾರಿಯಾದ ಕ್ರಮ ತೆಗೆದುಕೊಳ್ಳುತ್ತೀರೆಂದು ಆಶಿಸುತ್ತೇವೆ.

ವಂದನೆಗಳೊಂದಿಗೆ,

ತಮ್ಮ ವಿಶ್ವಾಸಿಗಳು

ದೇವನೂರ ಮಹಾದೇವ ಎಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Gowri is still alive, who will inspire the coming generations. Devanur mahadev and h s doreswamy are pure souls fearless souls who have rightful thoughts for society. We welcome their opinions on today’s politics and hope it will be followed.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....