Homeಕರ್ನಾಟಕದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ಈ ಪತ್ರವನ್ನೇ ದೂರು ಎಂದು ತಿಳಿದುಕೊಂಡು ಕ್ರಮ ಜರುಗಿಸಬೇಕೆಂದು ಅವರು ಕೋರಿದ್ದಾರೆ.

- Advertisement -
- Advertisement -

||ನಾನು ಗೌರಿ ಡೆಸ್ಕ್||

ಶಾಸಕರ ರಾಜೀನಾಮೆ, ಪಕ್ಷಾಂತರ ಸಾಧ್ಯತೆ, ಅನರ್ಹತೆಯ ಅರ್ಜಿ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ದೇವನೂರು ಮಹಾದೇವ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿಯವರು ವಿಧಾನಸಭಾಧ್ಯಕ್ಷರಿಗೆ ಖಾರವಾದ ಪತ್ರವನ್ನು ಬರೆದಿದ್ದಾರೆ. ರಾಜೀನಾಮೆ ಕೊಟ್ಟಿರುವ ಶಾಸಕರು ಹೊಣೆಗೇಡಿತನವನ್ನು ಪ್ರದರ್ಶಿಸಿದ್ದಾರಲ್ಲದೇ, ತಮಗೆ ಮತ ನೀಡಿದವರಿಗೆ ದ್ರೋಹವೆಸಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಪತ್ರವನ್ನೇ ದೂರು ಎಂದು ತಿಳಿದುಕೊಂಡು ಕ್ರಮ ಜರುಗಿಸಬೇಕೆಂದು ಅವರು ಕೋರಿದ್ದಾರೆ. ಪತ್ರದ ಪೂರ್ಣ ಪಾಠ ಈ ಕೆಳಕಂಡಂತಿದೆ.

ಇವರಿಗೆ,
ಸನ್ಮಾನ್ಯ ಸಭಾಧ್ಯಕ್ಷರು
ಕರ್ನಾಟಕ ವಿಧಾನಸಭೆ
ಬೆಂಗಳೂರು

ಮಾನ್ಯರೇ,
ವಿಷಯ: ಶಾಸಕರು ತಮ್ಮ ಆತ್ಮವನ್ನೂ ನಮ್ಮ ಮತವನ್ನೂ ಮಾರುತ್ತಿರುವ ಹೊತ್ತಿನಲ್ಲಿ
ರಾಜ್ಯದ ಹಾಗೂ ರಾಜಕಾರಣದ ಘನತೆಯನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ
ಮೇಲಿದೆ

ಈ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಅತ್ಯಂತ ಆಘಾತಕಾರಿಯಾಗಿವೆ. ಪಕ್ಷಾಂತರಗಳು ಎಲ್ಲಿಂದ ಎಲ್ಲಿಗೆ ಆಗುತ್ತಿದ್ದರೂ ಇದಕ್ಕೆ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳೂ ಕಾರಣವೆಂದೇ ನಾವು ಭಾವಿಸುತ್ತೇವೆ. ದೇಶದ ಸಂಸದೀಯ ಪ್ರಜಾತಂತ್ರವು ಕೊರತೆಗಳಿಂದ ಕೂಡಿರಬಹುದು. ಆದರೆ, ಸಂವಿಧಾನ ನಿರ್ಮಾತೃಗಳು ಮುಂಬರುವ ಪೀಳಿಗೆಗಳ ಮೇಲೆ ವಿಶ್ವಾಸವಿಟ್ಟು ಕೆಲವು ಅವಕಾಶಗಳನ್ನು ನೀಡಿದ್ದರು. ಅವುಗಳ ದುರುಪಯೋಗ ಮಾಡಿಕೊಂಡು ನಡೆದ ಅನೈತಿಕ ಪಕ್ಷಾಂತರಗಳನ್ನು ತಡೆಯುವ ಉದ್ದೇಶದಿಂದ ಪಕ್ಷಾಂತರ ನಿಷೇಧ ಕಾಯ್ದೆಯು 1985ರಲ್ಲಿ ಜಾರಿಗೆ ಬಂದಿತು. ನಂತರದಲ್ಲಿ 2003ರಲ್ಲಿ ಅದಕ್ಕೆ ತಿದ್ದುಪಡಿಯೂ ಬಂದಿತು.

ಆದರೆ, ಎಲ್ಲಾ ಕಾಯ್ದೆಗಳಿಂದಲೂ ನುಸುಳಿಕೊಳ್ಳುವ ರೀತಿಯಲ್ಲಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಇನ್ನೂ ಹೆಚ್ಚಿನ ಅಧಿಕಾರ ಪಡೆದುಕೊಂಡು ಇನ್ನೊಂದು ಪಕ್ಷದಿಂದ ಸ್ಪರ್ಧಿಸುವ ಹೊಸದೊಂದು ಪ್ರಕ್ರಿಯೆಗೆ ನಮ್ಮ ರಾಜ್ಯ ಕರ್ನಾಟಕವೇ ಮೇಲ್ಪಂಕ್ತಿ ಹಾಕಿಕೊಟ್ಟಿದ್ದು ನಾವು ತಲೆತಗ್ಗಿಸುವ ವಿಚಾರವಾಗಿದೆ. ಇಂದು ಅಂತಹ ಇನ್ನೊಂದು ಸಂದರ್ಭ ನಮ್ಮ ರಾಜ್ಯದಲ್ಲಿ ಈಗ ಉಂಟಾಗಿದೆ. ಮೇಲೆ ಹೇಳಿರುವಂತೆ ಇದರ ಹೊಣೆಯನ್ನು ಮೂರೂ ಪ್ರಮುಖ ರಾಜಕೀಯ ಪಕ್ಷಗಳು ಹೊತ್ತುಕೊಳ್ಳಬೇಕಿದೆ.


ಇಂದು ಆಮಿಷ, ಒತ್ತಡ ಅಥವಾ ಇನ್ನಾವುದೋ ಕಾರಣಕ್ಕೆ ಸ್ವಹಿತಾಸಕ್ತಿಗಾಗಿ ಪಕ್ಷ ಬದಲಾಯಿಸುತ್ತಿರುವವರು ತಮ್ಮ ಆತ್ಮವನ್ನೂ, ತಮಗೆ ಮತ ನೀಡಿದ ಮತದಾರರ ಮತವನ್ನೂ ಮಾರಿಕೊಂಡಂತೆ ಎಂದೇ ನಾವು ಭಾವಿಸುತ್ತೇವೆ. ಶಾಸಕರಿಗೆ ರಾಜೀನಾಮೆ ನೀಡುವ ಹಕ್ಕು ಇದೆ ಎಂಬುದು ವಾಸ್ತವ. ಆದರೆ, ಇದನ್ನು ಕೇವಲ ತಾಂತ್ರಿಕ ವಿಚಾರವನ್ನಾಗಿ ನೋಡದೇ ಸಾರ್ವಜನಿಕ ರಾಜಕೀಯ ನೀತಿ ಸಂಹಿತೆಯ ಭಾಗವಾಗಿ ನೋಡಬೇಕಿದೆ. ಇಂದು ನಡೆಯುತ್ತಿರುವುದು ಪಕ್ಷಾಂತರವೇ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಮತದಾರರು ಅಭ್ಯರ್ಥಿ ಮಾತ್ರವಲ್ಲದೇ ಪಕ್ಷಕ್ಕೂ ಮತ ನೀಡಿರುತ್ತಾರೆ. ಹಲವು ಸಾರಿ ಅಭ್ಯರ್ಥಿ ಇಷ್ಟವಿಲ್ಲದಿದ್ದರೂ ಪಕ್ಷಕ್ಕೇ ಮತ ನೀಡಿರುವ ಸಾಧ್ಯತೆ ಇರುತ್ತದೆ. ಜೊತೆಗೆ ಐದು ವರ್ಷಕ್ಕೆಂದು ಅವರಿಗೆ ಮತ ನೀಡಿರುತ್ತಾರೆ. ಅದನ್ನು ಪೂರೈಸುವ ಹೊಣೆಗಾರಿಕೆಯೂ ಆಯ್ಕೆಯಾದವರದ್ದಾಗಿರುತ್ತದೆ. ಅನಾರೋಗ್ಯ, ಸಾವು ಇತ್ಯಾದಿ ಕಾರಣಗಳನ್ನು ಬಿಟ್ಟು ಇನ್ನಾವ ಕಾರಣಕ್ಕೆ ತೆರವು ಮಾಡಿದರೂ ಅದು ಹೊಣೆಗೇಡಿತನವಾಗುತ್ತದೆ. ಈಗ ನಡೆಯುತ್ತಿರುವುದು ಹೊಣೆಗೇಡಿತನ ಮಾತ್ರವಲ್ಲಾ, ದ್ರೋಹವೂ ಹೌದು. ರಾಜೀನಾಮೆ ನೀಡಿದವರು ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೂ ನಿಲ್ಲಬಾರದು, ಯಾವುದೇ ಅಧಿಕಾರದ ಸ್ಥಾನಗಳನ್ನೂ ಹೊಂದಬಾರದು ಎಂಬ ನಿಯಮವೂ ಜಾರಿಯಾಗಬೇಕಿದೆ.

ಈ ಸ್ವೇಚ್ಛಾಚಾರವು ಪಕ್ಷಾಂತರ ನಿಷೇಧ ಕಾಯ್ದೆಯ ವ್ಯಾಪ್ತಿಯಲ್ಲಿಯೇ, ಕಾಯ್ದೆಗೆ ಹೆಗ್ಗಣಗಳಂತೆ ಬಿಲ ಕೊರೆದು, ಅದನ್ನೇ ಬುಡಮೇಲು ಮಾಡುವ ಕೃತ್ಯವಾಗಿದೆ. ಇದನ್ನು ವಿಧಾನಸಭಾಧ್ಯಕ್ಷರು ಗಂಭೀರವಾಗಿ ಪರಿಗಣಿಸಬೇಕಿದೆ.

ಇವೆಲ್ಲದರಿಂದ ಈಗಾಗಲೇ ಸಮಾಜದ ಮುಂದೆ ಪಾತಾಳಕ್ಕಿಳಿದಿರುವ ರಾಜಕೀಯ ವ್ಯವಸ್ಥೆಯ ಆತ್ಮವೇ ದಾಳಿಗೊಳಗಾಗುತ್ತಿದೆ. ಆದ್ದರಿಂದ ಇದನ್ನು ಸರಿಪಡಿಸಲು ಬೇಕಾದ ಎಲ್ಲಾ ಕ್ರಮಗಳನ್ನು ನೀವು ತೆಗೆದುಕೊಳ್ಳಲೇ- ಬೇಕೆಂದು ನಿಮ್ಮನ್ನು ಒತ್ತಾಯಿಸುತ್ತಿದ್ದೇವೆ. ಅಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ತಾವು, ತಮ್ಮ ವ್ಯಕ್ತಿಗತ ನಿಲುವುಗಳೇನಾಗಿದ್ದರೂ ತಪ್ಪಾದ ಮತ್ತು ಆತುರದ ನಿರ್ಧಾರಕ್ಕೆ ಬರಬಾರದೆಂಬುದು ನಮ್ಮ ಆಗ್ರಹ. ಇದನ್ನೇ ನೀವು ನಮ್ಮ ದೂರು ಎಂದೂ ಪರಿಗಣಿಸಬೇಕೆಂದು ಕೋರುತ್ತೇವೆ.

ಅಗತ್ಯವಿದ್ದರೆ ಉನ್ನತ ನ್ಯಾಯಾಲಯಗಳಿಗೂ ಹೋಗುವ ಮೂಲಕ ಸಂವಿಧಾನವನ್ನು ಕಾಪಾಡುವ ಹೊಣೆ ಹಾಗೂ ಅಧಿಕಾರ ಹೊಂದಿರುವ ನ್ಯಾಯಾಧೀಶರಲ್ಲೂ ಮನವಿ ಮಾಡಬೇಕೆಂದು ತೀರ್ಮಾನಿಸಿದ್ದೇವೆ. ಅಂತಹ ಪರಿಸ್ಥಿತಿ ಬಾರದಂತೆ, ಸಂವಿಧಾನಬದ್ಧ ಅಧಿಕಾರ ಹೊಂದಿರುವ ತಾವು ಪರಿಣಾಮಕಾರಿಯಾದ ಕ್ರಮ ತೆಗೆದುಕೊಳ್ಳುತ್ತೀರೆಂದು ಆಶಿಸುತ್ತೇವೆ.

ವಂದನೆಗಳೊಂದಿಗೆ,

ತಮ್ಮ ವಿಶ್ವಾಸಿಗಳು

ದೇವನೂರ ಮಹಾದೇವ ಎಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Gowri is still alive, who will inspire the coming generations. Devanur mahadev and h s doreswamy are pure souls fearless souls who have rightful thoughts for society. We welcome their opinions on today’s politics and hope it will be followed.

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...