Homeಕರ್ನಾಟಕದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

ಈ ಪತ್ರವನ್ನೇ ದೂರು ಎಂದು ತಿಳಿದುಕೊಂಡು ಕ್ರಮ ಜರುಗಿಸಬೇಕೆಂದು ಅವರು ಕೋರಿದ್ದಾರೆ.

- Advertisement -
- Advertisement -

||ನಾನು ಗೌರಿ ಡೆಸ್ಕ್||

ಶಾಸಕರ ರಾಜೀನಾಮೆ, ಪಕ್ಷಾಂತರ ಸಾಧ್ಯತೆ, ಅನರ್ಹತೆಯ ಅರ್ಜಿ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ದೇವನೂರು ಮಹಾದೇವ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿಯವರು ವಿಧಾನಸಭಾಧ್ಯಕ್ಷರಿಗೆ ಖಾರವಾದ ಪತ್ರವನ್ನು ಬರೆದಿದ್ದಾರೆ. ರಾಜೀನಾಮೆ ಕೊಟ್ಟಿರುವ ಶಾಸಕರು ಹೊಣೆಗೇಡಿತನವನ್ನು ಪ್ರದರ್ಶಿಸಿದ್ದಾರಲ್ಲದೇ, ತಮಗೆ ಮತ ನೀಡಿದವರಿಗೆ ದ್ರೋಹವೆಸಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಪತ್ರವನ್ನೇ ದೂರು ಎಂದು ತಿಳಿದುಕೊಂಡು ಕ್ರಮ ಜರುಗಿಸಬೇಕೆಂದು ಅವರು ಕೋರಿದ್ದಾರೆ. ಪತ್ರದ ಪೂರ್ಣ ಪಾಠ ಈ ಕೆಳಕಂಡಂತಿದೆ.

ಇವರಿಗೆ,
ಸನ್ಮಾನ್ಯ ಸಭಾಧ್ಯಕ್ಷರು
ಕರ್ನಾಟಕ ವಿಧಾನಸಭೆ
ಬೆಂಗಳೂರು

ಮಾನ್ಯರೇ,
ವಿಷಯ: ಶಾಸಕರು ತಮ್ಮ ಆತ್ಮವನ್ನೂ ನಮ್ಮ ಮತವನ್ನೂ ಮಾರುತ್ತಿರುವ ಹೊತ್ತಿನಲ್ಲಿ
ರಾಜ್ಯದ ಹಾಗೂ ರಾಜಕಾರಣದ ಘನತೆಯನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ
ಮೇಲಿದೆ

ಈ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಅತ್ಯಂತ ಆಘಾತಕಾರಿಯಾಗಿವೆ. ಪಕ್ಷಾಂತರಗಳು ಎಲ್ಲಿಂದ ಎಲ್ಲಿಗೆ ಆಗುತ್ತಿದ್ದರೂ ಇದಕ್ಕೆ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳೂ ಕಾರಣವೆಂದೇ ನಾವು ಭಾವಿಸುತ್ತೇವೆ. ದೇಶದ ಸಂಸದೀಯ ಪ್ರಜಾತಂತ್ರವು ಕೊರತೆಗಳಿಂದ ಕೂಡಿರಬಹುದು. ಆದರೆ, ಸಂವಿಧಾನ ನಿರ್ಮಾತೃಗಳು ಮುಂಬರುವ ಪೀಳಿಗೆಗಳ ಮೇಲೆ ವಿಶ್ವಾಸವಿಟ್ಟು ಕೆಲವು ಅವಕಾಶಗಳನ್ನು ನೀಡಿದ್ದರು. ಅವುಗಳ ದುರುಪಯೋಗ ಮಾಡಿಕೊಂಡು ನಡೆದ ಅನೈತಿಕ ಪಕ್ಷಾಂತರಗಳನ್ನು ತಡೆಯುವ ಉದ್ದೇಶದಿಂದ ಪಕ್ಷಾಂತರ ನಿಷೇಧ ಕಾಯ್ದೆಯು 1985ರಲ್ಲಿ ಜಾರಿಗೆ ಬಂದಿತು. ನಂತರದಲ್ಲಿ 2003ರಲ್ಲಿ ಅದಕ್ಕೆ ತಿದ್ದುಪಡಿಯೂ ಬಂದಿತು.

ಆದರೆ, ಎಲ್ಲಾ ಕಾಯ್ದೆಗಳಿಂದಲೂ ನುಸುಳಿಕೊಳ್ಳುವ ರೀತಿಯಲ್ಲಿ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಇನ್ನೂ ಹೆಚ್ಚಿನ ಅಧಿಕಾರ ಪಡೆದುಕೊಂಡು ಇನ್ನೊಂದು ಪಕ್ಷದಿಂದ ಸ್ಪರ್ಧಿಸುವ ಹೊಸದೊಂದು ಪ್ರಕ್ರಿಯೆಗೆ ನಮ್ಮ ರಾಜ್ಯ ಕರ್ನಾಟಕವೇ ಮೇಲ್ಪಂಕ್ತಿ ಹಾಕಿಕೊಟ್ಟಿದ್ದು ನಾವು ತಲೆತಗ್ಗಿಸುವ ವಿಚಾರವಾಗಿದೆ. ಇಂದು ಅಂತಹ ಇನ್ನೊಂದು ಸಂದರ್ಭ ನಮ್ಮ ರಾಜ್ಯದಲ್ಲಿ ಈಗ ಉಂಟಾಗಿದೆ. ಮೇಲೆ ಹೇಳಿರುವಂತೆ ಇದರ ಹೊಣೆಯನ್ನು ಮೂರೂ ಪ್ರಮುಖ ರಾಜಕೀಯ ಪಕ್ಷಗಳು ಹೊತ್ತುಕೊಳ್ಳಬೇಕಿದೆ.


ಇಂದು ಆಮಿಷ, ಒತ್ತಡ ಅಥವಾ ಇನ್ನಾವುದೋ ಕಾರಣಕ್ಕೆ ಸ್ವಹಿತಾಸಕ್ತಿಗಾಗಿ ಪಕ್ಷ ಬದಲಾಯಿಸುತ್ತಿರುವವರು ತಮ್ಮ ಆತ್ಮವನ್ನೂ, ತಮಗೆ ಮತ ನೀಡಿದ ಮತದಾರರ ಮತವನ್ನೂ ಮಾರಿಕೊಂಡಂತೆ ಎಂದೇ ನಾವು ಭಾವಿಸುತ್ತೇವೆ. ಶಾಸಕರಿಗೆ ರಾಜೀನಾಮೆ ನೀಡುವ ಹಕ್ಕು ಇದೆ ಎಂಬುದು ವಾಸ್ತವ. ಆದರೆ, ಇದನ್ನು ಕೇವಲ ತಾಂತ್ರಿಕ ವಿಚಾರವನ್ನಾಗಿ ನೋಡದೇ ಸಾರ್ವಜನಿಕ ರಾಜಕೀಯ ನೀತಿ ಸಂಹಿತೆಯ ಭಾಗವಾಗಿ ನೋಡಬೇಕಿದೆ. ಇಂದು ನಡೆಯುತ್ತಿರುವುದು ಪಕ್ಷಾಂತರವೇ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಮತದಾರರು ಅಭ್ಯರ್ಥಿ ಮಾತ್ರವಲ್ಲದೇ ಪಕ್ಷಕ್ಕೂ ಮತ ನೀಡಿರುತ್ತಾರೆ. ಹಲವು ಸಾರಿ ಅಭ್ಯರ್ಥಿ ಇಷ್ಟವಿಲ್ಲದಿದ್ದರೂ ಪಕ್ಷಕ್ಕೇ ಮತ ನೀಡಿರುವ ಸಾಧ್ಯತೆ ಇರುತ್ತದೆ. ಜೊತೆಗೆ ಐದು ವರ್ಷಕ್ಕೆಂದು ಅವರಿಗೆ ಮತ ನೀಡಿರುತ್ತಾರೆ. ಅದನ್ನು ಪೂರೈಸುವ ಹೊಣೆಗಾರಿಕೆಯೂ ಆಯ್ಕೆಯಾದವರದ್ದಾಗಿರುತ್ತದೆ. ಅನಾರೋಗ್ಯ, ಸಾವು ಇತ್ಯಾದಿ ಕಾರಣಗಳನ್ನು ಬಿಟ್ಟು ಇನ್ನಾವ ಕಾರಣಕ್ಕೆ ತೆರವು ಮಾಡಿದರೂ ಅದು ಹೊಣೆಗೇಡಿತನವಾಗುತ್ತದೆ. ಈಗ ನಡೆಯುತ್ತಿರುವುದು ಹೊಣೆಗೇಡಿತನ ಮಾತ್ರವಲ್ಲಾ, ದ್ರೋಹವೂ ಹೌದು. ರಾಜೀನಾಮೆ ನೀಡಿದವರು ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೂ ನಿಲ್ಲಬಾರದು, ಯಾವುದೇ ಅಧಿಕಾರದ ಸ್ಥಾನಗಳನ್ನೂ ಹೊಂದಬಾರದು ಎಂಬ ನಿಯಮವೂ ಜಾರಿಯಾಗಬೇಕಿದೆ.

ಈ ಸ್ವೇಚ್ಛಾಚಾರವು ಪಕ್ಷಾಂತರ ನಿಷೇಧ ಕಾಯ್ದೆಯ ವ್ಯಾಪ್ತಿಯಲ್ಲಿಯೇ, ಕಾಯ್ದೆಗೆ ಹೆಗ್ಗಣಗಳಂತೆ ಬಿಲ ಕೊರೆದು, ಅದನ್ನೇ ಬುಡಮೇಲು ಮಾಡುವ ಕೃತ್ಯವಾಗಿದೆ. ಇದನ್ನು ವಿಧಾನಸಭಾಧ್ಯಕ್ಷರು ಗಂಭೀರವಾಗಿ ಪರಿಗಣಿಸಬೇಕಿದೆ.

ಇವೆಲ್ಲದರಿಂದ ಈಗಾಗಲೇ ಸಮಾಜದ ಮುಂದೆ ಪಾತಾಳಕ್ಕಿಳಿದಿರುವ ರಾಜಕೀಯ ವ್ಯವಸ್ಥೆಯ ಆತ್ಮವೇ ದಾಳಿಗೊಳಗಾಗುತ್ತಿದೆ. ಆದ್ದರಿಂದ ಇದನ್ನು ಸರಿಪಡಿಸಲು ಬೇಕಾದ ಎಲ್ಲಾ ಕ್ರಮಗಳನ್ನು ನೀವು ತೆಗೆದುಕೊಳ್ಳಲೇ- ಬೇಕೆಂದು ನಿಮ್ಮನ್ನು ಒತ್ತಾಯಿಸುತ್ತಿದ್ದೇವೆ. ಅಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ತಾವು, ತಮ್ಮ ವ್ಯಕ್ತಿಗತ ನಿಲುವುಗಳೇನಾಗಿದ್ದರೂ ತಪ್ಪಾದ ಮತ್ತು ಆತುರದ ನಿರ್ಧಾರಕ್ಕೆ ಬರಬಾರದೆಂಬುದು ನಮ್ಮ ಆಗ್ರಹ. ಇದನ್ನೇ ನೀವು ನಮ್ಮ ದೂರು ಎಂದೂ ಪರಿಗಣಿಸಬೇಕೆಂದು ಕೋರುತ್ತೇವೆ.

ಅಗತ್ಯವಿದ್ದರೆ ಉನ್ನತ ನ್ಯಾಯಾಲಯಗಳಿಗೂ ಹೋಗುವ ಮೂಲಕ ಸಂವಿಧಾನವನ್ನು ಕಾಪಾಡುವ ಹೊಣೆ ಹಾಗೂ ಅಧಿಕಾರ ಹೊಂದಿರುವ ನ್ಯಾಯಾಧೀಶರಲ್ಲೂ ಮನವಿ ಮಾಡಬೇಕೆಂದು ತೀರ್ಮಾನಿಸಿದ್ದೇವೆ. ಅಂತಹ ಪರಿಸ್ಥಿತಿ ಬಾರದಂತೆ, ಸಂವಿಧಾನಬದ್ಧ ಅಧಿಕಾರ ಹೊಂದಿರುವ ತಾವು ಪರಿಣಾಮಕಾರಿಯಾದ ಕ್ರಮ ತೆಗೆದುಕೊಳ್ಳುತ್ತೀರೆಂದು ಆಶಿಸುತ್ತೇವೆ.

ವಂದನೆಗಳೊಂದಿಗೆ,

ತಮ್ಮ ವಿಶ್ವಾಸಿಗಳು

ದೇವನೂರ ಮಹಾದೇವ ಎಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Gowri is still alive, who will inspire the coming generations. Devanur mahadev and h s doreswamy are pure souls fearless souls who have rightful thoughts for society. We welcome their opinions on today’s politics and hope it will be followed.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....