Homeಚಳವಳಿಮುಳುಗುತ್ತಿರುವ ಭಾರತ ಮತ್ತು ಅದರೊಳಗಿರುವ ನಾವು: ದೇವನೂರು ಮಹಾದೇವ

ಮುಳುಗುತ್ತಿರುವ ಭಾರತ ಮತ್ತು ಅದರೊಳಗಿರುವ ನಾವು: ದೇವನೂರು ಮಹಾದೇವ

- Advertisement -
- Advertisement -

ಇದು ಇತ್ತೀಚಿನ ಒಂದು ಸುದ್ದಿ: ಪ್ರಜಾವಾಣಿ 19 ಸೆಪ್ಟೆಂಬರ್ 2019ರ ಸಂಚಿಕೆಯಲ್ಲಿ `ಮೋದಿಗಾಗಿ ಜನರ ಮುಳುಗಡೆ’ ಎಂಬ ತಲೆಬರಹದಲ್ಲಿ ನರ್ಮದಾ ಬಚಾವೋ ಆಂದೋಲನದ ಮೇಧಾ ಪಾಟ್ಕರ್ ಅವರ ಟ್ವೀಟ್‍ನ್ನು ಉಲ್ಲೇಖಿಸಲಾಗಿದೆ.

ಮೇಧಾ ಪಾಟ್ಕರ್ ಅವರ ಟ್ವೀಟ್ ಹೀಗಿದೆ: `ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಸಲುವಾಗಿ ಸರ್ದಾರ್ ಸರೋವರವನ್ನು ಭರ್ತಿ ಮಾಡಲಾಗಿದೆ. ಹೀಗೆ ಭರ್ತಿ ಮಾಡಿರುವುದರಿಂದ ಸರೋವರದ ಹಿನ್ನೀರು 250 ಕಿ.ಮೀ.ನಷ್ಟು ಹಿಂದಕ್ಕೆ ಬಂದಿದೆ. ನೂರಾರು ಗ್ರಾಮಗಳು ಮುಳುಗಡೆಯಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ನಿರಾಶ್ರಿತರ ಗೋಳು ಮೋದಿ ಜನ್ಮ ದಿನಾಚರಣೆ ಸಂಭ್ರಮದಲ್ಲಿ ಮೂಲೆಗುಂಪಾಗಿದೆ’

ಇದನ್ನು ಓದಿದ ಮೇಲೆ ಮುಳುಗಡೆ, ನಿರಾಶ್ರಿತರು ಹಾಗೂ ಮೋದಿ ಜನ್ಮ ದಿನಾಚರಣೆ ಜೊತೆಗೂಡಿ ನನ್ನ ಮನಸ್ಸಲ್ಲಿ ಉಳಿದು ಬಿಟ್ಟಿತು. ನಿಧಾನಕ್ಕೆ ಈ ಮುಳುಗಡೆ ಭಾರತದ ಇಂದಿನ ಸ್ಥಿತಿಗತಿಗೆ ಕನ್ನಡಿ ಹಿಡಿದಂತೆ ಕಾಣಿಸತೊಡಗಿತು.

ಹೌದು, ಭಾರತದ ಆರ್ಥಿಕತೆ, ಕೈಗಾರಿಕೆ, ಬ್ಯಾಂಕ್, ಉದ್ಯೋಗ ಮುಳುಗಡೆಯಾಗುತ್ತಿವೆ. ಜಿಡಿಪಿಯೂ ಮುಳುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಭಾರತದ ಹಿರಿಮೆಯನ್ನು ಎತ್ತಿ ಹಿಡಿಯುತ್ತಿರುವ ಒಕ್ಕೂಟ ವ್ಯವಸ್ಥೆ, ಬಹುತ್ವ ಹಾಗೂ ಸ್ವಾಯತ್ತ ಸಂಸ್ಥೆಗಳಾದ ಚುನಾವಣಾ ಆಯೋಗ, ನ್ಯಾಯಾಂಗ, ಸಿಬಿಐ, ನಾಲ್ಕನೆಯ ಅಂಗ ಮಾಧ್ಯಮ ಇಂಥವುಗಳೂ ಸರ್ಕಾರದ ಹಸ್ತಕ್ಷೇಪದಿಂದ ಮುಳುಗುತ್ತ ಉಸಿರಾಡಲು ಕಷ್ಟ ಪಡುತ್ತಿವೆ. ಇನ್ನೊಂದು ಕಡೆ ಗುಂಪು ಹತ್ಯೆಗಳಾಗುತ್ತಿದ್ದರೂ ಕಾನೂನು ಸುವ್ಯವಸ್ಥೆ ಪಾಲನೆಯಾಗುತ್ತಿಲ್ಲ. ಇದೆಲ್ಲಾ ಏನನ್ನು ಹೇಳುತ್ತಿದೆ? ಆಳ್ವಿಕೆ ನಡೆಸುತ್ತಿರುವವರು ಅಸಮರ್ಥರು ಎಂದು ತಾನೆ? ಇಷ್ಟು ಸಾಲದು ಎಂಬಂತೆ so called ಅಭಿವೃದ್ಧಿ ಹೆಸರಿನಲ್ಲಿ ನಡೆದ ಅರಣ್ಯ ನಾಶ, ಗಣಿಗಾರಿಕೆ, ಪ್ರಕೃತಿ ಧ್ವಂಸದಿಂದ ಹುಚ್ಚು ಹೊಳೆ, ಭೂ ಕುಸಿತ, ಸಾವು-ನೋವು ಆಕ್ರಂದನ ಹೆಚ್ಚುತ್ತಿದೆ. ಸರ್ಕಾರಗಳು ಕಣ್ಣೆತ್ತಿಯೂ ನೋಡುತ್ತಿಲ್ಲ.

ಇದನ್ನೆಲ್ಲಾ ನೋಡಿದಾಗ ಭಾರತ ಮುಳುಗುತ್ತಿರುವ ಹಡಗು ಎನ್ನದೆ ಬೇರೆನು ಹೇಳಬೇಕು? ಹಡಗನ್ನು ಮುಳುಗಿಸುತ್ತಿರುವ ತೂತುಗಳ ಕಡೆಗೆ ಜನಸ್ತೋಮದ ಗಮನ ಹೋಗದಂತಿರಲು ಹಡಗಿನ ಕ್ಯಾಪ್ಟನ್‍ಗಳಿಂದ, ಮಹಾಭಾರತದ ವಿರಾಟ ಪರ್ವದ ಉತ್ತರನ ಪೌರುಷ ನಾಟಕ ನಡೆಯುತ್ತಿದೆ. ಈ ನಾಟಕದ ಭಾಗವಾಗಿಯೇ ಕಾಶ್ಮೀರದ ಸಮಸ್ಯೆಯನ್ನು ನೋಡಬೇಕು ಅನ್ನಿಸುತ್ತದೆ. ನೆನಪಿಸಿಕೊಳ್ಳೋಣ- ಶೇಖ್ ಅಬ್ದುಲ್ಲಾ ಇಲ್ಲದಿದ್ದರೆ ಕಾಶ್ಮೀರ ಭಾರತದ್ದು ಆಗುತ್ತಿರಲಿಲ್ಲ.

ಸುಗತ ಶ್ರೀನಿವಾಸರಾಜು ಅವರು ಶೇಖ್ ಅಬ್ದುಲ್ಲಾ ಅವರ ವ್ಯಕ್ತಿತ್ವವನ್ನು ಕಣ್ಣಿಗೆಕಟ್ಟುವಂತೆ ವಿವರಿಸುತ್ತಾರೆ- ಶೇಖ್ ಅಬ್ದುಲ್ಲಾರನ್ನು ನೆಹರೂ ಸರ್ಕಾರ ಅನೇಕ ವರ್ಷಗಳ ಕಾಲ ಗೃಹಬಂಧನದಲ್ಲಿರಿಸಿ ಬಿಡುಗಡೆಗೊಳಿಸಿದ ನಂತರ ಅವರು ಪಾಕಿಸ್ತಾನಕ್ಕೂ ಒಮ್ಮೆ ಭೇಟಿ ನೀಡುತ್ತಾರೆ. ಆಗ ಪಾಕಿಸ್ತಾನದ ವಿದೇಶಾಂಗ ಸಚಿವರಾಗಿದ್ದ ಭುಟ್ಟೋ ಅವರು ಸ್ವತಃತಾವೇ ವಿಮಾನ ನಿಲ್ದಾಣಕ್ಕೆ ಬಂದು ಶೇಖ್‍ರನ್ನು ಸ್ವಾಗತಿಸುತ್ತಾರೆ. ಪಾಕಿಸ್ತಾನದಲ್ಲಿ ಅವರಿಗೆ ಭವ್ಯ ಸ್ವಾಗತ ಸಿಗುತ್ತದೆ. ಪಾಕಿಸ್ತಾನದ ಡಾನ್ ಪತ್ರಿಕೆ “ಶೇಖ್‍ ಅಬ್ದುಲ್ಲಾರಿಗೆ ನೆಹರೂ ಆಡಳಿತದ ಇಂಡಿಯಾ ಸಾಕಾಗಿ ಬೇಸತ್ತು ಹೋಗಿರಬೇಕು, ಕಾಶ್ಮೀರ ಪಾಕಿಸ್ತಾನಕ್ಕೆ ಸೇರಲು ಇದು ಸಕಾಲ” ಎಂದೆಲ್ಲಾ ಬರೆಯುತ್ತದೆ. ಒಂದು ಬೃಹತ್ ಸಾರ್ವಜನಿಕ ಸಭೆಯಲ್ಲಿ ಪತ್ರಿಕಾಕರ್ತರು ಅದೇ ಪ್ರಶ್ನೆ ಕೇಳಿದಾಗ ಶೇಖ್ ಅವರ ಉತ್ತರ- ‘ನೆಹರೂ ಒತ್ತಡಕ್ಕೆ ಸಿಲುಕಿ ನನ್ನನ್ನು ಬಂಧನದಲ್ಲಿ ಇರಿಸಿದ್ದಿರಬಹುದು. ಆದರೂ ಆತ ನನ್ನ ಸ್ನೇಹಿತನೆ. ಭಾರತ ಜಾತ್ಯಾತೀತ ದೇಶ. ಕಷ್ಟವೋ ಸುಖವೋ ಕಾಶ್ಮೀರ ಜಾತ್ಯಾತೀತ ಭಾರತದಲ್ಲಿ ಇರಲು ಬಯಸುತ್ತದೆ. ಇಸ್ಲಾಮಿಕ್ ರಿಪಬ್ಲಿಕ್ ಎನಿಸಿಕೊಂಡಿರುವ ಪಾಕಿಸ್ತಾನಕ್ಕಂತೂ ಸೇರುವುದಿಲ್ಲ’ ಎಂದು ನೇರವಾಗಿ ಸ್ಪಷ್ಟವಾಗಿ ಉತ್ತರಿಸುತ್ತಾರೆ.

ಶೇಖ್ ಅಬ್ದುಲ್ಲಾ ಅವರು ಭಾರತಕ್ಕೆ ಹಿಂತಿರುಗುವಾಗ ಅವರನ್ನು ಬೀಳ್ಕೊಡುವುದಕ್ಕೆ ಒಬ್ಬರೂ ಇರುವುದಿಲ್ಲ!. ಇದು ಕಾಶ್ಮೀರದ ಹೃದಯ. ಇದರ ಅರಿವಿಲ್ಲದ ಮೋದಿಶಾದ್ವಯರು ಕಾಶ್ಮೀರದ ನೆಲಕ್ಕೆ ಲಗ್ಗೆ ಇಟ್ಟರು. ಕಾಶ್ಮೀರಿ ಹೃದಯಕ್ಕೆ ಆಘಾತ ಮಾಡಿಬಿಟ್ಟರು. ಮೋದಿಶಾದ್ವಯರು ಚಕ್ರವರ್ತಿಯಂತೆ ನಡೆದುಕೊಳ್ಳಲಿಲ್ಲ, ಪಾಳೆಗಾರರಂತೆ ವರ್ತಿಸಿಬಿಟ್ಟರು.

ಕಾಶ್ಮೀರವನ್ನು ಛಿದ್ರಗೊಳಿಸಿದ್ದೂ ಕೂಡ ಭಾರತವೆಂಬ ಮುಳುಗುತ್ತಿರುವ ಹಡಗಿನಕಡೆ ಗಮನ ಹರಿಸದಿರಲಿ ಎಂಬುದಕ್ಕೇನೊ ಅನ್ನಿಸುತ್ತಿದೆ. ಹಾಗೇನೆ ಉತ್ತರನ ಪೌರುಷದಲ್ಲಿ ಉಪ ಪ್ರಸಂಗಗಳೂ ಆಗಾಗ ಬರುತ್ತವೆ. ‘ಒಂದೇ ಭಾಷೆ’ ಅನ್ನುವುದು – ಆಗ ಯಾರೂ ಮುಳುಗಡೆಕಡೆ ನೋಡುವುದಿಲ್ಲ. ‘ಒಂದೇ ಸಲ ಚುನಾವಣೆ’ ಅನ್ನುವುದು ಆಗ ಯಾರೂ ಮುಳುಗಡೆಕಡೆ ನೋಡುವುದಿಲ್ಲ. ಆರ್‍ಬಿಐ ಗೌರ್ನರ್ GDP ಐದಕ್ಕಿಂತ ಕೆಳಗಿಳಿಯುತ್ತದೆ ಎಂದು ಆತಂಕ ವ್ಯಕ್ತಪಡಿಸಿದಾಗ ಮಾರನೆ ದಿನವೇ `ಎರಡು ಪಾರ್ಟಿ ವ್ಯವಸ್ಥೆ’ ಅನ್ನುವುದು. ಆಗ ಯಾರು ಮುಳುಗಡೆಕಡೆ ನೋಡುವುದಿಲ್ಲ. ಏನೂ ಇಲ್ಲದಿದ್ದರೆ ‘ಮೈಸೂರ್ ಪಾಕ್ ನಮ್ಮದು’ ಅಂದು ಬಿಡುವುದು! ಹೀಗೆ ಸರ್ಕಾರ ನಡೆಯುತ್ತಿದೆ. ಭಾರತ ಎಂಬ ಹಡಗು ದಿನೇ ದಿನೇ ಮುಳುಗುತ್ತಿದೆ.

ಈ ಮುಳುಗಡೆ ಸಂದರ್ಭದಲ್ಲಿ ನಾವು ಮಾಡಬಹುದಾದರೂ ಏನು? ಉದ್ಯೋಗದ ಕುಸಿತ, GDP ಕುಸಿತ, ಸಾರ್ವಜನಿಕ ಸಂಪತ್ತಿನ ಧ್ವಂಸ ಇವುಗಳನ್ನು ಸರ್ಕಾರದ `ಅಚ್ಚೇ ದಿನ್’, `ವೈಬ್ರೆಂಟ್ ಇಂಡಿಯಾ’ ಇತ್ಯಾದಿ, ಇತ್ಯಾದಿ ಬಾಣ ಬಿರುಸು ಬಿಟ್ಟು ಬೇರೆಕಡೆ ಗಮನ ಸೆಳೆದಷ್ಟೂ ಅದನ್ನು ಮೀರಿಸುವಂತೆ ಉದ್ಯೋಗದ ಕುಸಿತ, GDP ಕುಸಿತ, ಸಾರ್ವಜನಿಕ ಸಂಪತ್ತಿನ ಧ್ವಂಸ ಇಂಥವುಗಳನ್ನು ಸಾರ್ವಜನಿಕ ಮಾತುಕತೆಯಾಗಿಸಬೇಕು. ಶ್ರೀಪಾದ ಭಟ್ ಒಂದು ಲೇಖನದಲ್ಲಿ ಹೇಳಿರುವಂತೆ `ಜನರ ನಿರೀಕ್ಷೆಗಳು ಮತ್ತು ಹತಾಶೆಗಳ ಆಳ ಮತ್ತು ಪ್ರಮಾಣವನ್ನು ಅರಿಯಬೇಕಾಗಿದೆ. ಬೌದ್ಧಿಕ ವಾಕ್ಚಾತುರ್ಯಕ್ಕಿಂತ ಪಿಸುಮಾತಿನ ಕನವರಿಕೆಗಳು ಜನ ಸಂಪರ್ಕಕ್ಕೆ ಅಗತ್ಯವಾಗಿದೆ. ಇವನ್ನು ಸಾಂಸ್ಕøತಿಕ, ರಾಜಕೀಯ, ಆರ್ಥಿಕ ನೆಲೆಯಲ್ಲಿ ಅರಿತುಕೊಳ್ಳಬೇಕು.’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...