Homeಚಳವಳಿಮುಳುಗುತ್ತಿರುವ ಭಾರತ ಮತ್ತು ಅದರೊಳಗಿರುವ ನಾವು: ದೇವನೂರು ಮಹಾದೇವ

ಮುಳುಗುತ್ತಿರುವ ಭಾರತ ಮತ್ತು ಅದರೊಳಗಿರುವ ನಾವು: ದೇವನೂರು ಮಹಾದೇವ

- Advertisement -
- Advertisement -

ಇದು ಇತ್ತೀಚಿನ ಒಂದು ಸುದ್ದಿ: ಪ್ರಜಾವಾಣಿ 19 ಸೆಪ್ಟೆಂಬರ್ 2019ರ ಸಂಚಿಕೆಯಲ್ಲಿ `ಮೋದಿಗಾಗಿ ಜನರ ಮುಳುಗಡೆ’ ಎಂಬ ತಲೆಬರಹದಲ್ಲಿ ನರ್ಮದಾ ಬಚಾವೋ ಆಂದೋಲನದ ಮೇಧಾ ಪಾಟ್ಕರ್ ಅವರ ಟ್ವೀಟ್‍ನ್ನು ಉಲ್ಲೇಖಿಸಲಾಗಿದೆ.

ಮೇಧಾ ಪಾಟ್ಕರ್ ಅವರ ಟ್ವೀಟ್ ಹೀಗಿದೆ: `ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಸಲುವಾಗಿ ಸರ್ದಾರ್ ಸರೋವರವನ್ನು ಭರ್ತಿ ಮಾಡಲಾಗಿದೆ. ಹೀಗೆ ಭರ್ತಿ ಮಾಡಿರುವುದರಿಂದ ಸರೋವರದ ಹಿನ್ನೀರು 250 ಕಿ.ಮೀ.ನಷ್ಟು ಹಿಂದಕ್ಕೆ ಬಂದಿದೆ. ನೂರಾರು ಗ್ರಾಮಗಳು ಮುಳುಗಡೆಯಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ನಿರಾಶ್ರಿತರ ಗೋಳು ಮೋದಿ ಜನ್ಮ ದಿನಾಚರಣೆ ಸಂಭ್ರಮದಲ್ಲಿ ಮೂಲೆಗುಂಪಾಗಿದೆ’

ಇದನ್ನು ಓದಿದ ಮೇಲೆ ಮುಳುಗಡೆ, ನಿರಾಶ್ರಿತರು ಹಾಗೂ ಮೋದಿ ಜನ್ಮ ದಿನಾಚರಣೆ ಜೊತೆಗೂಡಿ ನನ್ನ ಮನಸ್ಸಲ್ಲಿ ಉಳಿದು ಬಿಟ್ಟಿತು. ನಿಧಾನಕ್ಕೆ ಈ ಮುಳುಗಡೆ ಭಾರತದ ಇಂದಿನ ಸ್ಥಿತಿಗತಿಗೆ ಕನ್ನಡಿ ಹಿಡಿದಂತೆ ಕಾಣಿಸತೊಡಗಿತು.

ಹೌದು, ಭಾರತದ ಆರ್ಥಿಕತೆ, ಕೈಗಾರಿಕೆ, ಬ್ಯಾಂಕ್, ಉದ್ಯೋಗ ಮುಳುಗಡೆಯಾಗುತ್ತಿವೆ. ಜಿಡಿಪಿಯೂ ಮುಳುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಭಾರತದ ಹಿರಿಮೆಯನ್ನು ಎತ್ತಿ ಹಿಡಿಯುತ್ತಿರುವ ಒಕ್ಕೂಟ ವ್ಯವಸ್ಥೆ, ಬಹುತ್ವ ಹಾಗೂ ಸ್ವಾಯತ್ತ ಸಂಸ್ಥೆಗಳಾದ ಚುನಾವಣಾ ಆಯೋಗ, ನ್ಯಾಯಾಂಗ, ಸಿಬಿಐ, ನಾಲ್ಕನೆಯ ಅಂಗ ಮಾಧ್ಯಮ ಇಂಥವುಗಳೂ ಸರ್ಕಾರದ ಹಸ್ತಕ್ಷೇಪದಿಂದ ಮುಳುಗುತ್ತ ಉಸಿರಾಡಲು ಕಷ್ಟ ಪಡುತ್ತಿವೆ. ಇನ್ನೊಂದು ಕಡೆ ಗುಂಪು ಹತ್ಯೆಗಳಾಗುತ್ತಿದ್ದರೂ ಕಾನೂನು ಸುವ್ಯವಸ್ಥೆ ಪಾಲನೆಯಾಗುತ್ತಿಲ್ಲ. ಇದೆಲ್ಲಾ ಏನನ್ನು ಹೇಳುತ್ತಿದೆ? ಆಳ್ವಿಕೆ ನಡೆಸುತ್ತಿರುವವರು ಅಸಮರ್ಥರು ಎಂದು ತಾನೆ? ಇಷ್ಟು ಸಾಲದು ಎಂಬಂತೆ so called ಅಭಿವೃದ್ಧಿ ಹೆಸರಿನಲ್ಲಿ ನಡೆದ ಅರಣ್ಯ ನಾಶ, ಗಣಿಗಾರಿಕೆ, ಪ್ರಕೃತಿ ಧ್ವಂಸದಿಂದ ಹುಚ್ಚು ಹೊಳೆ, ಭೂ ಕುಸಿತ, ಸಾವು-ನೋವು ಆಕ್ರಂದನ ಹೆಚ್ಚುತ್ತಿದೆ. ಸರ್ಕಾರಗಳು ಕಣ್ಣೆತ್ತಿಯೂ ನೋಡುತ್ತಿಲ್ಲ.

ಇದನ್ನೆಲ್ಲಾ ನೋಡಿದಾಗ ಭಾರತ ಮುಳುಗುತ್ತಿರುವ ಹಡಗು ಎನ್ನದೆ ಬೇರೆನು ಹೇಳಬೇಕು? ಹಡಗನ್ನು ಮುಳುಗಿಸುತ್ತಿರುವ ತೂತುಗಳ ಕಡೆಗೆ ಜನಸ್ತೋಮದ ಗಮನ ಹೋಗದಂತಿರಲು ಹಡಗಿನ ಕ್ಯಾಪ್ಟನ್‍ಗಳಿಂದ, ಮಹಾಭಾರತದ ವಿರಾಟ ಪರ್ವದ ಉತ್ತರನ ಪೌರುಷ ನಾಟಕ ನಡೆಯುತ್ತಿದೆ. ಈ ನಾಟಕದ ಭಾಗವಾಗಿಯೇ ಕಾಶ್ಮೀರದ ಸಮಸ್ಯೆಯನ್ನು ನೋಡಬೇಕು ಅನ್ನಿಸುತ್ತದೆ. ನೆನಪಿಸಿಕೊಳ್ಳೋಣ- ಶೇಖ್ ಅಬ್ದುಲ್ಲಾ ಇಲ್ಲದಿದ್ದರೆ ಕಾಶ್ಮೀರ ಭಾರತದ್ದು ಆಗುತ್ತಿರಲಿಲ್ಲ.

ಸುಗತ ಶ್ರೀನಿವಾಸರಾಜು ಅವರು ಶೇಖ್ ಅಬ್ದುಲ್ಲಾ ಅವರ ವ್ಯಕ್ತಿತ್ವವನ್ನು ಕಣ್ಣಿಗೆಕಟ್ಟುವಂತೆ ವಿವರಿಸುತ್ತಾರೆ- ಶೇಖ್ ಅಬ್ದುಲ್ಲಾರನ್ನು ನೆಹರೂ ಸರ್ಕಾರ ಅನೇಕ ವರ್ಷಗಳ ಕಾಲ ಗೃಹಬಂಧನದಲ್ಲಿರಿಸಿ ಬಿಡುಗಡೆಗೊಳಿಸಿದ ನಂತರ ಅವರು ಪಾಕಿಸ್ತಾನಕ್ಕೂ ಒಮ್ಮೆ ಭೇಟಿ ನೀಡುತ್ತಾರೆ. ಆಗ ಪಾಕಿಸ್ತಾನದ ವಿದೇಶಾಂಗ ಸಚಿವರಾಗಿದ್ದ ಭುಟ್ಟೋ ಅವರು ಸ್ವತಃತಾವೇ ವಿಮಾನ ನಿಲ್ದಾಣಕ್ಕೆ ಬಂದು ಶೇಖ್‍ರನ್ನು ಸ್ವಾಗತಿಸುತ್ತಾರೆ. ಪಾಕಿಸ್ತಾನದಲ್ಲಿ ಅವರಿಗೆ ಭವ್ಯ ಸ್ವಾಗತ ಸಿಗುತ್ತದೆ. ಪಾಕಿಸ್ತಾನದ ಡಾನ್ ಪತ್ರಿಕೆ “ಶೇಖ್‍ ಅಬ್ದುಲ್ಲಾರಿಗೆ ನೆಹರೂ ಆಡಳಿತದ ಇಂಡಿಯಾ ಸಾಕಾಗಿ ಬೇಸತ್ತು ಹೋಗಿರಬೇಕು, ಕಾಶ್ಮೀರ ಪಾಕಿಸ್ತಾನಕ್ಕೆ ಸೇರಲು ಇದು ಸಕಾಲ” ಎಂದೆಲ್ಲಾ ಬರೆಯುತ್ತದೆ. ಒಂದು ಬೃಹತ್ ಸಾರ್ವಜನಿಕ ಸಭೆಯಲ್ಲಿ ಪತ್ರಿಕಾಕರ್ತರು ಅದೇ ಪ್ರಶ್ನೆ ಕೇಳಿದಾಗ ಶೇಖ್ ಅವರ ಉತ್ತರ- ‘ನೆಹರೂ ಒತ್ತಡಕ್ಕೆ ಸಿಲುಕಿ ನನ್ನನ್ನು ಬಂಧನದಲ್ಲಿ ಇರಿಸಿದ್ದಿರಬಹುದು. ಆದರೂ ಆತ ನನ್ನ ಸ್ನೇಹಿತನೆ. ಭಾರತ ಜಾತ್ಯಾತೀತ ದೇಶ. ಕಷ್ಟವೋ ಸುಖವೋ ಕಾಶ್ಮೀರ ಜಾತ್ಯಾತೀತ ಭಾರತದಲ್ಲಿ ಇರಲು ಬಯಸುತ್ತದೆ. ಇಸ್ಲಾಮಿಕ್ ರಿಪಬ್ಲಿಕ್ ಎನಿಸಿಕೊಂಡಿರುವ ಪಾಕಿಸ್ತಾನಕ್ಕಂತೂ ಸೇರುವುದಿಲ್ಲ’ ಎಂದು ನೇರವಾಗಿ ಸ್ಪಷ್ಟವಾಗಿ ಉತ್ತರಿಸುತ್ತಾರೆ.

ಶೇಖ್ ಅಬ್ದುಲ್ಲಾ ಅವರು ಭಾರತಕ್ಕೆ ಹಿಂತಿರುಗುವಾಗ ಅವರನ್ನು ಬೀಳ್ಕೊಡುವುದಕ್ಕೆ ಒಬ್ಬರೂ ಇರುವುದಿಲ್ಲ!. ಇದು ಕಾಶ್ಮೀರದ ಹೃದಯ. ಇದರ ಅರಿವಿಲ್ಲದ ಮೋದಿಶಾದ್ವಯರು ಕಾಶ್ಮೀರದ ನೆಲಕ್ಕೆ ಲಗ್ಗೆ ಇಟ್ಟರು. ಕಾಶ್ಮೀರಿ ಹೃದಯಕ್ಕೆ ಆಘಾತ ಮಾಡಿಬಿಟ್ಟರು. ಮೋದಿಶಾದ್ವಯರು ಚಕ್ರವರ್ತಿಯಂತೆ ನಡೆದುಕೊಳ್ಳಲಿಲ್ಲ, ಪಾಳೆಗಾರರಂತೆ ವರ್ತಿಸಿಬಿಟ್ಟರು.

ಕಾಶ್ಮೀರವನ್ನು ಛಿದ್ರಗೊಳಿಸಿದ್ದೂ ಕೂಡ ಭಾರತವೆಂಬ ಮುಳುಗುತ್ತಿರುವ ಹಡಗಿನಕಡೆ ಗಮನ ಹರಿಸದಿರಲಿ ಎಂಬುದಕ್ಕೇನೊ ಅನ್ನಿಸುತ್ತಿದೆ. ಹಾಗೇನೆ ಉತ್ತರನ ಪೌರುಷದಲ್ಲಿ ಉಪ ಪ್ರಸಂಗಗಳೂ ಆಗಾಗ ಬರುತ್ತವೆ. ‘ಒಂದೇ ಭಾಷೆ’ ಅನ್ನುವುದು – ಆಗ ಯಾರೂ ಮುಳುಗಡೆಕಡೆ ನೋಡುವುದಿಲ್ಲ. ‘ಒಂದೇ ಸಲ ಚುನಾವಣೆ’ ಅನ್ನುವುದು ಆಗ ಯಾರೂ ಮುಳುಗಡೆಕಡೆ ನೋಡುವುದಿಲ್ಲ. ಆರ್‍ಬಿಐ ಗೌರ್ನರ್ GDP ಐದಕ್ಕಿಂತ ಕೆಳಗಿಳಿಯುತ್ತದೆ ಎಂದು ಆತಂಕ ವ್ಯಕ್ತಪಡಿಸಿದಾಗ ಮಾರನೆ ದಿನವೇ `ಎರಡು ಪಾರ್ಟಿ ವ್ಯವಸ್ಥೆ’ ಅನ್ನುವುದು. ಆಗ ಯಾರು ಮುಳುಗಡೆಕಡೆ ನೋಡುವುದಿಲ್ಲ. ಏನೂ ಇಲ್ಲದಿದ್ದರೆ ‘ಮೈಸೂರ್ ಪಾಕ್ ನಮ್ಮದು’ ಅಂದು ಬಿಡುವುದು! ಹೀಗೆ ಸರ್ಕಾರ ನಡೆಯುತ್ತಿದೆ. ಭಾರತ ಎಂಬ ಹಡಗು ದಿನೇ ದಿನೇ ಮುಳುಗುತ್ತಿದೆ.

ಈ ಮುಳುಗಡೆ ಸಂದರ್ಭದಲ್ಲಿ ನಾವು ಮಾಡಬಹುದಾದರೂ ಏನು? ಉದ್ಯೋಗದ ಕುಸಿತ, GDP ಕುಸಿತ, ಸಾರ್ವಜನಿಕ ಸಂಪತ್ತಿನ ಧ್ವಂಸ ಇವುಗಳನ್ನು ಸರ್ಕಾರದ `ಅಚ್ಚೇ ದಿನ್’, `ವೈಬ್ರೆಂಟ್ ಇಂಡಿಯಾ’ ಇತ್ಯಾದಿ, ಇತ್ಯಾದಿ ಬಾಣ ಬಿರುಸು ಬಿಟ್ಟು ಬೇರೆಕಡೆ ಗಮನ ಸೆಳೆದಷ್ಟೂ ಅದನ್ನು ಮೀರಿಸುವಂತೆ ಉದ್ಯೋಗದ ಕುಸಿತ, GDP ಕುಸಿತ, ಸಾರ್ವಜನಿಕ ಸಂಪತ್ತಿನ ಧ್ವಂಸ ಇಂಥವುಗಳನ್ನು ಸಾರ್ವಜನಿಕ ಮಾತುಕತೆಯಾಗಿಸಬೇಕು. ಶ್ರೀಪಾದ ಭಟ್ ಒಂದು ಲೇಖನದಲ್ಲಿ ಹೇಳಿರುವಂತೆ `ಜನರ ನಿರೀಕ್ಷೆಗಳು ಮತ್ತು ಹತಾಶೆಗಳ ಆಳ ಮತ್ತು ಪ್ರಮಾಣವನ್ನು ಅರಿಯಬೇಕಾಗಿದೆ. ಬೌದ್ಧಿಕ ವಾಕ್ಚಾತುರ್ಯಕ್ಕಿಂತ ಪಿಸುಮಾತಿನ ಕನವರಿಕೆಗಳು ಜನ ಸಂಪರ್ಕಕ್ಕೆ ಅಗತ್ಯವಾಗಿದೆ. ಇವನ್ನು ಸಾಂಸ್ಕøತಿಕ, ರಾಜಕೀಯ, ಆರ್ಥಿಕ ನೆಲೆಯಲ್ಲಿ ಅರಿತುಕೊಳ್ಳಬೇಕು.’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...