Homeಚಳವಳಿಮುಳುಗುತ್ತಿರುವ ಭಾರತ ಮತ್ತು ಅದರೊಳಗಿರುವ ನಾವು: ದೇವನೂರು ಮಹಾದೇವ

ಮುಳುಗುತ್ತಿರುವ ಭಾರತ ಮತ್ತು ಅದರೊಳಗಿರುವ ನಾವು: ದೇವನೂರು ಮಹಾದೇವ

- Advertisement -
- Advertisement -

ಇದು ಇತ್ತೀಚಿನ ಒಂದು ಸುದ್ದಿ: ಪ್ರಜಾವಾಣಿ 19 ಸೆಪ್ಟೆಂಬರ್ 2019ರ ಸಂಚಿಕೆಯಲ್ಲಿ `ಮೋದಿಗಾಗಿ ಜನರ ಮುಳುಗಡೆ’ ಎಂಬ ತಲೆಬರಹದಲ್ಲಿ ನರ್ಮದಾ ಬಚಾವೋ ಆಂದೋಲನದ ಮೇಧಾ ಪಾಟ್ಕರ್ ಅವರ ಟ್ವೀಟ್‍ನ್ನು ಉಲ್ಲೇಖಿಸಲಾಗಿದೆ.

ಮೇಧಾ ಪಾಟ್ಕರ್ ಅವರ ಟ್ವೀಟ್ ಹೀಗಿದೆ: `ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಸಲುವಾಗಿ ಸರ್ದಾರ್ ಸರೋವರವನ್ನು ಭರ್ತಿ ಮಾಡಲಾಗಿದೆ. ಹೀಗೆ ಭರ್ತಿ ಮಾಡಿರುವುದರಿಂದ ಸರೋವರದ ಹಿನ್ನೀರು 250 ಕಿ.ಮೀ.ನಷ್ಟು ಹಿಂದಕ್ಕೆ ಬಂದಿದೆ. ನೂರಾರು ಗ್ರಾಮಗಳು ಮುಳುಗಡೆಯಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ನಿರಾಶ್ರಿತರ ಗೋಳು ಮೋದಿ ಜನ್ಮ ದಿನಾಚರಣೆ ಸಂಭ್ರಮದಲ್ಲಿ ಮೂಲೆಗುಂಪಾಗಿದೆ’

ಇದನ್ನು ಓದಿದ ಮೇಲೆ ಮುಳುಗಡೆ, ನಿರಾಶ್ರಿತರು ಹಾಗೂ ಮೋದಿ ಜನ್ಮ ದಿನಾಚರಣೆ ಜೊತೆಗೂಡಿ ನನ್ನ ಮನಸ್ಸಲ್ಲಿ ಉಳಿದು ಬಿಟ್ಟಿತು. ನಿಧಾನಕ್ಕೆ ಈ ಮುಳುಗಡೆ ಭಾರತದ ಇಂದಿನ ಸ್ಥಿತಿಗತಿಗೆ ಕನ್ನಡಿ ಹಿಡಿದಂತೆ ಕಾಣಿಸತೊಡಗಿತು.

ಹೌದು, ಭಾರತದ ಆರ್ಥಿಕತೆ, ಕೈಗಾರಿಕೆ, ಬ್ಯಾಂಕ್, ಉದ್ಯೋಗ ಮುಳುಗಡೆಯಾಗುತ್ತಿವೆ. ಜಿಡಿಪಿಯೂ ಮುಳುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಭಾರತದ ಹಿರಿಮೆಯನ್ನು ಎತ್ತಿ ಹಿಡಿಯುತ್ತಿರುವ ಒಕ್ಕೂಟ ವ್ಯವಸ್ಥೆ, ಬಹುತ್ವ ಹಾಗೂ ಸ್ವಾಯತ್ತ ಸಂಸ್ಥೆಗಳಾದ ಚುನಾವಣಾ ಆಯೋಗ, ನ್ಯಾಯಾಂಗ, ಸಿಬಿಐ, ನಾಲ್ಕನೆಯ ಅಂಗ ಮಾಧ್ಯಮ ಇಂಥವುಗಳೂ ಸರ್ಕಾರದ ಹಸ್ತಕ್ಷೇಪದಿಂದ ಮುಳುಗುತ್ತ ಉಸಿರಾಡಲು ಕಷ್ಟ ಪಡುತ್ತಿವೆ. ಇನ್ನೊಂದು ಕಡೆ ಗುಂಪು ಹತ್ಯೆಗಳಾಗುತ್ತಿದ್ದರೂ ಕಾನೂನು ಸುವ್ಯವಸ್ಥೆ ಪಾಲನೆಯಾಗುತ್ತಿಲ್ಲ. ಇದೆಲ್ಲಾ ಏನನ್ನು ಹೇಳುತ್ತಿದೆ? ಆಳ್ವಿಕೆ ನಡೆಸುತ್ತಿರುವವರು ಅಸಮರ್ಥರು ಎಂದು ತಾನೆ? ಇಷ್ಟು ಸಾಲದು ಎಂಬಂತೆ so called ಅಭಿವೃದ್ಧಿ ಹೆಸರಿನಲ್ಲಿ ನಡೆದ ಅರಣ್ಯ ನಾಶ, ಗಣಿಗಾರಿಕೆ, ಪ್ರಕೃತಿ ಧ್ವಂಸದಿಂದ ಹುಚ್ಚು ಹೊಳೆ, ಭೂ ಕುಸಿತ, ಸಾವು-ನೋವು ಆಕ್ರಂದನ ಹೆಚ್ಚುತ್ತಿದೆ. ಸರ್ಕಾರಗಳು ಕಣ್ಣೆತ್ತಿಯೂ ನೋಡುತ್ತಿಲ್ಲ.

ಇದನ್ನೆಲ್ಲಾ ನೋಡಿದಾಗ ಭಾರತ ಮುಳುಗುತ್ತಿರುವ ಹಡಗು ಎನ್ನದೆ ಬೇರೆನು ಹೇಳಬೇಕು? ಹಡಗನ್ನು ಮುಳುಗಿಸುತ್ತಿರುವ ತೂತುಗಳ ಕಡೆಗೆ ಜನಸ್ತೋಮದ ಗಮನ ಹೋಗದಂತಿರಲು ಹಡಗಿನ ಕ್ಯಾಪ್ಟನ್‍ಗಳಿಂದ, ಮಹಾಭಾರತದ ವಿರಾಟ ಪರ್ವದ ಉತ್ತರನ ಪೌರುಷ ನಾಟಕ ನಡೆಯುತ್ತಿದೆ. ಈ ನಾಟಕದ ಭಾಗವಾಗಿಯೇ ಕಾಶ್ಮೀರದ ಸಮಸ್ಯೆಯನ್ನು ನೋಡಬೇಕು ಅನ್ನಿಸುತ್ತದೆ. ನೆನಪಿಸಿಕೊಳ್ಳೋಣ- ಶೇಖ್ ಅಬ್ದುಲ್ಲಾ ಇಲ್ಲದಿದ್ದರೆ ಕಾಶ್ಮೀರ ಭಾರತದ್ದು ಆಗುತ್ತಿರಲಿಲ್ಲ.

ಸುಗತ ಶ್ರೀನಿವಾಸರಾಜು ಅವರು ಶೇಖ್ ಅಬ್ದುಲ್ಲಾ ಅವರ ವ್ಯಕ್ತಿತ್ವವನ್ನು ಕಣ್ಣಿಗೆಕಟ್ಟುವಂತೆ ವಿವರಿಸುತ್ತಾರೆ- ಶೇಖ್ ಅಬ್ದುಲ್ಲಾರನ್ನು ನೆಹರೂ ಸರ್ಕಾರ ಅನೇಕ ವರ್ಷಗಳ ಕಾಲ ಗೃಹಬಂಧನದಲ್ಲಿರಿಸಿ ಬಿಡುಗಡೆಗೊಳಿಸಿದ ನಂತರ ಅವರು ಪಾಕಿಸ್ತಾನಕ್ಕೂ ಒಮ್ಮೆ ಭೇಟಿ ನೀಡುತ್ತಾರೆ. ಆಗ ಪಾಕಿಸ್ತಾನದ ವಿದೇಶಾಂಗ ಸಚಿವರಾಗಿದ್ದ ಭುಟ್ಟೋ ಅವರು ಸ್ವತಃತಾವೇ ವಿಮಾನ ನಿಲ್ದಾಣಕ್ಕೆ ಬಂದು ಶೇಖ್‍ರನ್ನು ಸ್ವಾಗತಿಸುತ್ತಾರೆ. ಪಾಕಿಸ್ತಾನದಲ್ಲಿ ಅವರಿಗೆ ಭವ್ಯ ಸ್ವಾಗತ ಸಿಗುತ್ತದೆ. ಪಾಕಿಸ್ತಾನದ ಡಾನ್ ಪತ್ರಿಕೆ “ಶೇಖ್‍ ಅಬ್ದುಲ್ಲಾರಿಗೆ ನೆಹರೂ ಆಡಳಿತದ ಇಂಡಿಯಾ ಸಾಕಾಗಿ ಬೇಸತ್ತು ಹೋಗಿರಬೇಕು, ಕಾಶ್ಮೀರ ಪಾಕಿಸ್ತಾನಕ್ಕೆ ಸೇರಲು ಇದು ಸಕಾಲ” ಎಂದೆಲ್ಲಾ ಬರೆಯುತ್ತದೆ. ಒಂದು ಬೃಹತ್ ಸಾರ್ವಜನಿಕ ಸಭೆಯಲ್ಲಿ ಪತ್ರಿಕಾಕರ್ತರು ಅದೇ ಪ್ರಶ್ನೆ ಕೇಳಿದಾಗ ಶೇಖ್ ಅವರ ಉತ್ತರ- ‘ನೆಹರೂ ಒತ್ತಡಕ್ಕೆ ಸಿಲುಕಿ ನನ್ನನ್ನು ಬಂಧನದಲ್ಲಿ ಇರಿಸಿದ್ದಿರಬಹುದು. ಆದರೂ ಆತ ನನ್ನ ಸ್ನೇಹಿತನೆ. ಭಾರತ ಜಾತ್ಯಾತೀತ ದೇಶ. ಕಷ್ಟವೋ ಸುಖವೋ ಕಾಶ್ಮೀರ ಜಾತ್ಯಾತೀತ ಭಾರತದಲ್ಲಿ ಇರಲು ಬಯಸುತ್ತದೆ. ಇಸ್ಲಾಮಿಕ್ ರಿಪಬ್ಲಿಕ್ ಎನಿಸಿಕೊಂಡಿರುವ ಪಾಕಿಸ್ತಾನಕ್ಕಂತೂ ಸೇರುವುದಿಲ್ಲ’ ಎಂದು ನೇರವಾಗಿ ಸ್ಪಷ್ಟವಾಗಿ ಉತ್ತರಿಸುತ್ತಾರೆ.

ಶೇಖ್ ಅಬ್ದುಲ್ಲಾ ಅವರು ಭಾರತಕ್ಕೆ ಹಿಂತಿರುಗುವಾಗ ಅವರನ್ನು ಬೀಳ್ಕೊಡುವುದಕ್ಕೆ ಒಬ್ಬರೂ ಇರುವುದಿಲ್ಲ!. ಇದು ಕಾಶ್ಮೀರದ ಹೃದಯ. ಇದರ ಅರಿವಿಲ್ಲದ ಮೋದಿಶಾದ್ವಯರು ಕಾಶ್ಮೀರದ ನೆಲಕ್ಕೆ ಲಗ್ಗೆ ಇಟ್ಟರು. ಕಾಶ್ಮೀರಿ ಹೃದಯಕ್ಕೆ ಆಘಾತ ಮಾಡಿಬಿಟ್ಟರು. ಮೋದಿಶಾದ್ವಯರು ಚಕ್ರವರ್ತಿಯಂತೆ ನಡೆದುಕೊಳ್ಳಲಿಲ್ಲ, ಪಾಳೆಗಾರರಂತೆ ವರ್ತಿಸಿಬಿಟ್ಟರು.

ಕಾಶ್ಮೀರವನ್ನು ಛಿದ್ರಗೊಳಿಸಿದ್ದೂ ಕೂಡ ಭಾರತವೆಂಬ ಮುಳುಗುತ್ತಿರುವ ಹಡಗಿನಕಡೆ ಗಮನ ಹರಿಸದಿರಲಿ ಎಂಬುದಕ್ಕೇನೊ ಅನ್ನಿಸುತ್ತಿದೆ. ಹಾಗೇನೆ ಉತ್ತರನ ಪೌರುಷದಲ್ಲಿ ಉಪ ಪ್ರಸಂಗಗಳೂ ಆಗಾಗ ಬರುತ್ತವೆ. ‘ಒಂದೇ ಭಾಷೆ’ ಅನ್ನುವುದು – ಆಗ ಯಾರೂ ಮುಳುಗಡೆಕಡೆ ನೋಡುವುದಿಲ್ಲ. ‘ಒಂದೇ ಸಲ ಚುನಾವಣೆ’ ಅನ್ನುವುದು ಆಗ ಯಾರೂ ಮುಳುಗಡೆಕಡೆ ನೋಡುವುದಿಲ್ಲ. ಆರ್‍ಬಿಐ ಗೌರ್ನರ್ GDP ಐದಕ್ಕಿಂತ ಕೆಳಗಿಳಿಯುತ್ತದೆ ಎಂದು ಆತಂಕ ವ್ಯಕ್ತಪಡಿಸಿದಾಗ ಮಾರನೆ ದಿನವೇ `ಎರಡು ಪಾರ್ಟಿ ವ್ಯವಸ್ಥೆ’ ಅನ್ನುವುದು. ಆಗ ಯಾರು ಮುಳುಗಡೆಕಡೆ ನೋಡುವುದಿಲ್ಲ. ಏನೂ ಇಲ್ಲದಿದ್ದರೆ ‘ಮೈಸೂರ್ ಪಾಕ್ ನಮ್ಮದು’ ಅಂದು ಬಿಡುವುದು! ಹೀಗೆ ಸರ್ಕಾರ ನಡೆಯುತ್ತಿದೆ. ಭಾರತ ಎಂಬ ಹಡಗು ದಿನೇ ದಿನೇ ಮುಳುಗುತ್ತಿದೆ.

ಈ ಮುಳುಗಡೆ ಸಂದರ್ಭದಲ್ಲಿ ನಾವು ಮಾಡಬಹುದಾದರೂ ಏನು? ಉದ್ಯೋಗದ ಕುಸಿತ, GDP ಕುಸಿತ, ಸಾರ್ವಜನಿಕ ಸಂಪತ್ತಿನ ಧ್ವಂಸ ಇವುಗಳನ್ನು ಸರ್ಕಾರದ `ಅಚ್ಚೇ ದಿನ್’, `ವೈಬ್ರೆಂಟ್ ಇಂಡಿಯಾ’ ಇತ್ಯಾದಿ, ಇತ್ಯಾದಿ ಬಾಣ ಬಿರುಸು ಬಿಟ್ಟು ಬೇರೆಕಡೆ ಗಮನ ಸೆಳೆದಷ್ಟೂ ಅದನ್ನು ಮೀರಿಸುವಂತೆ ಉದ್ಯೋಗದ ಕುಸಿತ, GDP ಕುಸಿತ, ಸಾರ್ವಜನಿಕ ಸಂಪತ್ತಿನ ಧ್ವಂಸ ಇಂಥವುಗಳನ್ನು ಸಾರ್ವಜನಿಕ ಮಾತುಕತೆಯಾಗಿಸಬೇಕು. ಶ್ರೀಪಾದ ಭಟ್ ಒಂದು ಲೇಖನದಲ್ಲಿ ಹೇಳಿರುವಂತೆ `ಜನರ ನಿರೀಕ್ಷೆಗಳು ಮತ್ತು ಹತಾಶೆಗಳ ಆಳ ಮತ್ತು ಪ್ರಮಾಣವನ್ನು ಅರಿಯಬೇಕಾಗಿದೆ. ಬೌದ್ಧಿಕ ವಾಕ್ಚಾತುರ್ಯಕ್ಕಿಂತ ಪಿಸುಮಾತಿನ ಕನವರಿಕೆಗಳು ಜನ ಸಂಪರ್ಕಕ್ಕೆ ಅಗತ್ಯವಾಗಿದೆ. ಇವನ್ನು ಸಾಂಸ್ಕøತಿಕ, ರಾಜಕೀಯ, ಆರ್ಥಿಕ ನೆಲೆಯಲ್ಲಿ ಅರಿತುಕೊಳ್ಳಬೇಕು.’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...