Homeಚಳವಳಿಮುಳುಗುತ್ತಿರುವ ಭಾರತ ಮತ್ತು ಅದರೊಳಗಿರುವ ನಾವು: ದೇವನೂರು ಮಹಾದೇವ

ಮುಳುಗುತ್ತಿರುವ ಭಾರತ ಮತ್ತು ಅದರೊಳಗಿರುವ ನಾವು: ದೇವನೂರು ಮಹಾದೇವ

- Advertisement -
- Advertisement -

ಇದು ಇತ್ತೀಚಿನ ಒಂದು ಸುದ್ದಿ: ಪ್ರಜಾವಾಣಿ 19 ಸೆಪ್ಟೆಂಬರ್ 2019ರ ಸಂಚಿಕೆಯಲ್ಲಿ `ಮೋದಿಗಾಗಿ ಜನರ ಮುಳುಗಡೆ’ ಎಂಬ ತಲೆಬರಹದಲ್ಲಿ ನರ್ಮದಾ ಬಚಾವೋ ಆಂದೋಲನದ ಮೇಧಾ ಪಾಟ್ಕರ್ ಅವರ ಟ್ವೀಟ್‍ನ್ನು ಉಲ್ಲೇಖಿಸಲಾಗಿದೆ.

ಮೇಧಾ ಪಾಟ್ಕರ್ ಅವರ ಟ್ವೀಟ್ ಹೀಗಿದೆ: `ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಸಲುವಾಗಿ ಸರ್ದಾರ್ ಸರೋವರವನ್ನು ಭರ್ತಿ ಮಾಡಲಾಗಿದೆ. ಹೀಗೆ ಭರ್ತಿ ಮಾಡಿರುವುದರಿಂದ ಸರೋವರದ ಹಿನ್ನೀರು 250 ಕಿ.ಮೀ.ನಷ್ಟು ಹಿಂದಕ್ಕೆ ಬಂದಿದೆ. ನೂರಾರು ಗ್ರಾಮಗಳು ಮುಳುಗಡೆಯಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ನಿರಾಶ್ರಿತರ ಗೋಳು ಮೋದಿ ಜನ್ಮ ದಿನಾಚರಣೆ ಸಂಭ್ರಮದಲ್ಲಿ ಮೂಲೆಗುಂಪಾಗಿದೆ’

ಇದನ್ನು ಓದಿದ ಮೇಲೆ ಮುಳುಗಡೆ, ನಿರಾಶ್ರಿತರು ಹಾಗೂ ಮೋದಿ ಜನ್ಮ ದಿನಾಚರಣೆ ಜೊತೆಗೂಡಿ ನನ್ನ ಮನಸ್ಸಲ್ಲಿ ಉಳಿದು ಬಿಟ್ಟಿತು. ನಿಧಾನಕ್ಕೆ ಈ ಮುಳುಗಡೆ ಭಾರತದ ಇಂದಿನ ಸ್ಥಿತಿಗತಿಗೆ ಕನ್ನಡಿ ಹಿಡಿದಂತೆ ಕಾಣಿಸತೊಡಗಿತು.

ಹೌದು, ಭಾರತದ ಆರ್ಥಿಕತೆ, ಕೈಗಾರಿಕೆ, ಬ್ಯಾಂಕ್, ಉದ್ಯೋಗ ಮುಳುಗಡೆಯಾಗುತ್ತಿವೆ. ಜಿಡಿಪಿಯೂ ಮುಳುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಭಾರತದ ಹಿರಿಮೆಯನ್ನು ಎತ್ತಿ ಹಿಡಿಯುತ್ತಿರುವ ಒಕ್ಕೂಟ ವ್ಯವಸ್ಥೆ, ಬಹುತ್ವ ಹಾಗೂ ಸ್ವಾಯತ್ತ ಸಂಸ್ಥೆಗಳಾದ ಚುನಾವಣಾ ಆಯೋಗ, ನ್ಯಾಯಾಂಗ, ಸಿಬಿಐ, ನಾಲ್ಕನೆಯ ಅಂಗ ಮಾಧ್ಯಮ ಇಂಥವುಗಳೂ ಸರ್ಕಾರದ ಹಸ್ತಕ್ಷೇಪದಿಂದ ಮುಳುಗುತ್ತ ಉಸಿರಾಡಲು ಕಷ್ಟ ಪಡುತ್ತಿವೆ. ಇನ್ನೊಂದು ಕಡೆ ಗುಂಪು ಹತ್ಯೆಗಳಾಗುತ್ತಿದ್ದರೂ ಕಾನೂನು ಸುವ್ಯವಸ್ಥೆ ಪಾಲನೆಯಾಗುತ್ತಿಲ್ಲ. ಇದೆಲ್ಲಾ ಏನನ್ನು ಹೇಳುತ್ತಿದೆ? ಆಳ್ವಿಕೆ ನಡೆಸುತ್ತಿರುವವರು ಅಸಮರ್ಥರು ಎಂದು ತಾನೆ? ಇಷ್ಟು ಸಾಲದು ಎಂಬಂತೆ so called ಅಭಿವೃದ್ಧಿ ಹೆಸರಿನಲ್ಲಿ ನಡೆದ ಅರಣ್ಯ ನಾಶ, ಗಣಿಗಾರಿಕೆ, ಪ್ರಕೃತಿ ಧ್ವಂಸದಿಂದ ಹುಚ್ಚು ಹೊಳೆ, ಭೂ ಕುಸಿತ, ಸಾವು-ನೋವು ಆಕ್ರಂದನ ಹೆಚ್ಚುತ್ತಿದೆ. ಸರ್ಕಾರಗಳು ಕಣ್ಣೆತ್ತಿಯೂ ನೋಡುತ್ತಿಲ್ಲ.

ಇದನ್ನೆಲ್ಲಾ ನೋಡಿದಾಗ ಭಾರತ ಮುಳುಗುತ್ತಿರುವ ಹಡಗು ಎನ್ನದೆ ಬೇರೆನು ಹೇಳಬೇಕು? ಹಡಗನ್ನು ಮುಳುಗಿಸುತ್ತಿರುವ ತೂತುಗಳ ಕಡೆಗೆ ಜನಸ್ತೋಮದ ಗಮನ ಹೋಗದಂತಿರಲು ಹಡಗಿನ ಕ್ಯಾಪ್ಟನ್‍ಗಳಿಂದ, ಮಹಾಭಾರತದ ವಿರಾಟ ಪರ್ವದ ಉತ್ತರನ ಪೌರುಷ ನಾಟಕ ನಡೆಯುತ್ತಿದೆ. ಈ ನಾಟಕದ ಭಾಗವಾಗಿಯೇ ಕಾಶ್ಮೀರದ ಸಮಸ್ಯೆಯನ್ನು ನೋಡಬೇಕು ಅನ್ನಿಸುತ್ತದೆ. ನೆನಪಿಸಿಕೊಳ್ಳೋಣ- ಶೇಖ್ ಅಬ್ದುಲ್ಲಾ ಇಲ್ಲದಿದ್ದರೆ ಕಾಶ್ಮೀರ ಭಾರತದ್ದು ಆಗುತ್ತಿರಲಿಲ್ಲ.

ಸುಗತ ಶ್ರೀನಿವಾಸರಾಜು ಅವರು ಶೇಖ್ ಅಬ್ದುಲ್ಲಾ ಅವರ ವ್ಯಕ್ತಿತ್ವವನ್ನು ಕಣ್ಣಿಗೆಕಟ್ಟುವಂತೆ ವಿವರಿಸುತ್ತಾರೆ- ಶೇಖ್ ಅಬ್ದುಲ್ಲಾರನ್ನು ನೆಹರೂ ಸರ್ಕಾರ ಅನೇಕ ವರ್ಷಗಳ ಕಾಲ ಗೃಹಬಂಧನದಲ್ಲಿರಿಸಿ ಬಿಡುಗಡೆಗೊಳಿಸಿದ ನಂತರ ಅವರು ಪಾಕಿಸ್ತಾನಕ್ಕೂ ಒಮ್ಮೆ ಭೇಟಿ ನೀಡುತ್ತಾರೆ. ಆಗ ಪಾಕಿಸ್ತಾನದ ವಿದೇಶಾಂಗ ಸಚಿವರಾಗಿದ್ದ ಭುಟ್ಟೋ ಅವರು ಸ್ವತಃತಾವೇ ವಿಮಾನ ನಿಲ್ದಾಣಕ್ಕೆ ಬಂದು ಶೇಖ್‍ರನ್ನು ಸ್ವಾಗತಿಸುತ್ತಾರೆ. ಪಾಕಿಸ್ತಾನದಲ್ಲಿ ಅವರಿಗೆ ಭವ್ಯ ಸ್ವಾಗತ ಸಿಗುತ್ತದೆ. ಪಾಕಿಸ್ತಾನದ ಡಾನ್ ಪತ್ರಿಕೆ “ಶೇಖ್‍ ಅಬ್ದುಲ್ಲಾರಿಗೆ ನೆಹರೂ ಆಡಳಿತದ ಇಂಡಿಯಾ ಸಾಕಾಗಿ ಬೇಸತ್ತು ಹೋಗಿರಬೇಕು, ಕಾಶ್ಮೀರ ಪಾಕಿಸ್ತಾನಕ್ಕೆ ಸೇರಲು ಇದು ಸಕಾಲ” ಎಂದೆಲ್ಲಾ ಬರೆಯುತ್ತದೆ. ಒಂದು ಬೃಹತ್ ಸಾರ್ವಜನಿಕ ಸಭೆಯಲ್ಲಿ ಪತ್ರಿಕಾಕರ್ತರು ಅದೇ ಪ್ರಶ್ನೆ ಕೇಳಿದಾಗ ಶೇಖ್ ಅವರ ಉತ್ತರ- ‘ನೆಹರೂ ಒತ್ತಡಕ್ಕೆ ಸಿಲುಕಿ ನನ್ನನ್ನು ಬಂಧನದಲ್ಲಿ ಇರಿಸಿದ್ದಿರಬಹುದು. ಆದರೂ ಆತ ನನ್ನ ಸ್ನೇಹಿತನೆ. ಭಾರತ ಜಾತ್ಯಾತೀತ ದೇಶ. ಕಷ್ಟವೋ ಸುಖವೋ ಕಾಶ್ಮೀರ ಜಾತ್ಯಾತೀತ ಭಾರತದಲ್ಲಿ ಇರಲು ಬಯಸುತ್ತದೆ. ಇಸ್ಲಾಮಿಕ್ ರಿಪಬ್ಲಿಕ್ ಎನಿಸಿಕೊಂಡಿರುವ ಪಾಕಿಸ್ತಾನಕ್ಕಂತೂ ಸೇರುವುದಿಲ್ಲ’ ಎಂದು ನೇರವಾಗಿ ಸ್ಪಷ್ಟವಾಗಿ ಉತ್ತರಿಸುತ್ತಾರೆ.

ಶೇಖ್ ಅಬ್ದುಲ್ಲಾ ಅವರು ಭಾರತಕ್ಕೆ ಹಿಂತಿರುಗುವಾಗ ಅವರನ್ನು ಬೀಳ್ಕೊಡುವುದಕ್ಕೆ ಒಬ್ಬರೂ ಇರುವುದಿಲ್ಲ!. ಇದು ಕಾಶ್ಮೀರದ ಹೃದಯ. ಇದರ ಅರಿವಿಲ್ಲದ ಮೋದಿಶಾದ್ವಯರು ಕಾಶ್ಮೀರದ ನೆಲಕ್ಕೆ ಲಗ್ಗೆ ಇಟ್ಟರು. ಕಾಶ್ಮೀರಿ ಹೃದಯಕ್ಕೆ ಆಘಾತ ಮಾಡಿಬಿಟ್ಟರು. ಮೋದಿಶಾದ್ವಯರು ಚಕ್ರವರ್ತಿಯಂತೆ ನಡೆದುಕೊಳ್ಳಲಿಲ್ಲ, ಪಾಳೆಗಾರರಂತೆ ವರ್ತಿಸಿಬಿಟ್ಟರು.

ಕಾಶ್ಮೀರವನ್ನು ಛಿದ್ರಗೊಳಿಸಿದ್ದೂ ಕೂಡ ಭಾರತವೆಂಬ ಮುಳುಗುತ್ತಿರುವ ಹಡಗಿನಕಡೆ ಗಮನ ಹರಿಸದಿರಲಿ ಎಂಬುದಕ್ಕೇನೊ ಅನ್ನಿಸುತ್ತಿದೆ. ಹಾಗೇನೆ ಉತ್ತರನ ಪೌರುಷದಲ್ಲಿ ಉಪ ಪ್ರಸಂಗಗಳೂ ಆಗಾಗ ಬರುತ್ತವೆ. ‘ಒಂದೇ ಭಾಷೆ’ ಅನ್ನುವುದು – ಆಗ ಯಾರೂ ಮುಳುಗಡೆಕಡೆ ನೋಡುವುದಿಲ್ಲ. ‘ಒಂದೇ ಸಲ ಚುನಾವಣೆ’ ಅನ್ನುವುದು ಆಗ ಯಾರೂ ಮುಳುಗಡೆಕಡೆ ನೋಡುವುದಿಲ್ಲ. ಆರ್‍ಬಿಐ ಗೌರ್ನರ್ GDP ಐದಕ್ಕಿಂತ ಕೆಳಗಿಳಿಯುತ್ತದೆ ಎಂದು ಆತಂಕ ವ್ಯಕ್ತಪಡಿಸಿದಾಗ ಮಾರನೆ ದಿನವೇ `ಎರಡು ಪಾರ್ಟಿ ವ್ಯವಸ್ಥೆ’ ಅನ್ನುವುದು. ಆಗ ಯಾರು ಮುಳುಗಡೆಕಡೆ ನೋಡುವುದಿಲ್ಲ. ಏನೂ ಇಲ್ಲದಿದ್ದರೆ ‘ಮೈಸೂರ್ ಪಾಕ್ ನಮ್ಮದು’ ಅಂದು ಬಿಡುವುದು! ಹೀಗೆ ಸರ್ಕಾರ ನಡೆಯುತ್ತಿದೆ. ಭಾರತ ಎಂಬ ಹಡಗು ದಿನೇ ದಿನೇ ಮುಳುಗುತ್ತಿದೆ.

ಈ ಮುಳುಗಡೆ ಸಂದರ್ಭದಲ್ಲಿ ನಾವು ಮಾಡಬಹುದಾದರೂ ಏನು? ಉದ್ಯೋಗದ ಕುಸಿತ, GDP ಕುಸಿತ, ಸಾರ್ವಜನಿಕ ಸಂಪತ್ತಿನ ಧ್ವಂಸ ಇವುಗಳನ್ನು ಸರ್ಕಾರದ `ಅಚ್ಚೇ ದಿನ್’, `ವೈಬ್ರೆಂಟ್ ಇಂಡಿಯಾ’ ಇತ್ಯಾದಿ, ಇತ್ಯಾದಿ ಬಾಣ ಬಿರುಸು ಬಿಟ್ಟು ಬೇರೆಕಡೆ ಗಮನ ಸೆಳೆದಷ್ಟೂ ಅದನ್ನು ಮೀರಿಸುವಂತೆ ಉದ್ಯೋಗದ ಕುಸಿತ, GDP ಕುಸಿತ, ಸಾರ್ವಜನಿಕ ಸಂಪತ್ತಿನ ಧ್ವಂಸ ಇಂಥವುಗಳನ್ನು ಸಾರ್ವಜನಿಕ ಮಾತುಕತೆಯಾಗಿಸಬೇಕು. ಶ್ರೀಪಾದ ಭಟ್ ಒಂದು ಲೇಖನದಲ್ಲಿ ಹೇಳಿರುವಂತೆ `ಜನರ ನಿರೀಕ್ಷೆಗಳು ಮತ್ತು ಹತಾಶೆಗಳ ಆಳ ಮತ್ತು ಪ್ರಮಾಣವನ್ನು ಅರಿಯಬೇಕಾಗಿದೆ. ಬೌದ್ಧಿಕ ವಾಕ್ಚಾತುರ್ಯಕ್ಕಿಂತ ಪಿಸುಮಾತಿನ ಕನವರಿಕೆಗಳು ಜನ ಸಂಪರ್ಕಕ್ಕೆ ಅಗತ್ಯವಾಗಿದೆ. ಇವನ್ನು ಸಾಂಸ್ಕøತಿಕ, ರಾಜಕೀಯ, ಆರ್ಥಿಕ ನೆಲೆಯಲ್ಲಿ ಅರಿತುಕೊಳ್ಳಬೇಕು.’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...