Homeಚಳವಳಿಮುಳುಗುತ್ತಿರುವ ಭಾರತ ಮತ್ತು ಅದರೊಳಗಿರುವ ನಾವು: ದೇವನೂರು ಮಹಾದೇವ

ಮುಳುಗುತ್ತಿರುವ ಭಾರತ ಮತ್ತು ಅದರೊಳಗಿರುವ ನಾವು: ದೇವನೂರು ಮಹಾದೇವ

- Advertisement -
- Advertisement -

ಇದು ಇತ್ತೀಚಿನ ಒಂದು ಸುದ್ದಿ: ಪ್ರಜಾವಾಣಿ 19 ಸೆಪ್ಟೆಂಬರ್ 2019ರ ಸಂಚಿಕೆಯಲ್ಲಿ `ಮೋದಿಗಾಗಿ ಜನರ ಮುಳುಗಡೆ’ ಎಂಬ ತಲೆಬರಹದಲ್ಲಿ ನರ್ಮದಾ ಬಚಾವೋ ಆಂದೋಲನದ ಮೇಧಾ ಪಾಟ್ಕರ್ ಅವರ ಟ್ವೀಟ್‍ನ್ನು ಉಲ್ಲೇಖಿಸಲಾಗಿದೆ.

ಮೇಧಾ ಪಾಟ್ಕರ್ ಅವರ ಟ್ವೀಟ್ ಹೀಗಿದೆ: `ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಸಲುವಾಗಿ ಸರ್ದಾರ್ ಸರೋವರವನ್ನು ಭರ್ತಿ ಮಾಡಲಾಗಿದೆ. ಹೀಗೆ ಭರ್ತಿ ಮಾಡಿರುವುದರಿಂದ ಸರೋವರದ ಹಿನ್ನೀರು 250 ಕಿ.ಮೀ.ನಷ್ಟು ಹಿಂದಕ್ಕೆ ಬಂದಿದೆ. ನೂರಾರು ಗ್ರಾಮಗಳು ಮುಳುಗಡೆಯಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ನಿರಾಶ್ರಿತರ ಗೋಳು ಮೋದಿ ಜನ್ಮ ದಿನಾಚರಣೆ ಸಂಭ್ರಮದಲ್ಲಿ ಮೂಲೆಗುಂಪಾಗಿದೆ’

ಇದನ್ನು ಓದಿದ ಮೇಲೆ ಮುಳುಗಡೆ, ನಿರಾಶ್ರಿತರು ಹಾಗೂ ಮೋದಿ ಜನ್ಮ ದಿನಾಚರಣೆ ಜೊತೆಗೂಡಿ ನನ್ನ ಮನಸ್ಸಲ್ಲಿ ಉಳಿದು ಬಿಟ್ಟಿತು. ನಿಧಾನಕ್ಕೆ ಈ ಮುಳುಗಡೆ ಭಾರತದ ಇಂದಿನ ಸ್ಥಿತಿಗತಿಗೆ ಕನ್ನಡಿ ಹಿಡಿದಂತೆ ಕಾಣಿಸತೊಡಗಿತು.

ಹೌದು, ಭಾರತದ ಆರ್ಥಿಕತೆ, ಕೈಗಾರಿಕೆ, ಬ್ಯಾಂಕ್, ಉದ್ಯೋಗ ಮುಳುಗಡೆಯಾಗುತ್ತಿವೆ. ಜಿಡಿಪಿಯೂ ಮುಳುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಭಾರತದ ಹಿರಿಮೆಯನ್ನು ಎತ್ತಿ ಹಿಡಿಯುತ್ತಿರುವ ಒಕ್ಕೂಟ ವ್ಯವಸ್ಥೆ, ಬಹುತ್ವ ಹಾಗೂ ಸ್ವಾಯತ್ತ ಸಂಸ್ಥೆಗಳಾದ ಚುನಾವಣಾ ಆಯೋಗ, ನ್ಯಾಯಾಂಗ, ಸಿಬಿಐ, ನಾಲ್ಕನೆಯ ಅಂಗ ಮಾಧ್ಯಮ ಇಂಥವುಗಳೂ ಸರ್ಕಾರದ ಹಸ್ತಕ್ಷೇಪದಿಂದ ಮುಳುಗುತ್ತ ಉಸಿರಾಡಲು ಕಷ್ಟ ಪಡುತ್ತಿವೆ. ಇನ್ನೊಂದು ಕಡೆ ಗುಂಪು ಹತ್ಯೆಗಳಾಗುತ್ತಿದ್ದರೂ ಕಾನೂನು ಸುವ್ಯವಸ್ಥೆ ಪಾಲನೆಯಾಗುತ್ತಿಲ್ಲ. ಇದೆಲ್ಲಾ ಏನನ್ನು ಹೇಳುತ್ತಿದೆ? ಆಳ್ವಿಕೆ ನಡೆಸುತ್ತಿರುವವರು ಅಸಮರ್ಥರು ಎಂದು ತಾನೆ? ಇಷ್ಟು ಸಾಲದು ಎಂಬಂತೆ so called ಅಭಿವೃದ್ಧಿ ಹೆಸರಿನಲ್ಲಿ ನಡೆದ ಅರಣ್ಯ ನಾಶ, ಗಣಿಗಾರಿಕೆ, ಪ್ರಕೃತಿ ಧ್ವಂಸದಿಂದ ಹುಚ್ಚು ಹೊಳೆ, ಭೂ ಕುಸಿತ, ಸಾವು-ನೋವು ಆಕ್ರಂದನ ಹೆಚ್ಚುತ್ತಿದೆ. ಸರ್ಕಾರಗಳು ಕಣ್ಣೆತ್ತಿಯೂ ನೋಡುತ್ತಿಲ್ಲ.

ಇದನ್ನೆಲ್ಲಾ ನೋಡಿದಾಗ ಭಾರತ ಮುಳುಗುತ್ತಿರುವ ಹಡಗು ಎನ್ನದೆ ಬೇರೆನು ಹೇಳಬೇಕು? ಹಡಗನ್ನು ಮುಳುಗಿಸುತ್ತಿರುವ ತೂತುಗಳ ಕಡೆಗೆ ಜನಸ್ತೋಮದ ಗಮನ ಹೋಗದಂತಿರಲು ಹಡಗಿನ ಕ್ಯಾಪ್ಟನ್‍ಗಳಿಂದ, ಮಹಾಭಾರತದ ವಿರಾಟ ಪರ್ವದ ಉತ್ತರನ ಪೌರುಷ ನಾಟಕ ನಡೆಯುತ್ತಿದೆ. ಈ ನಾಟಕದ ಭಾಗವಾಗಿಯೇ ಕಾಶ್ಮೀರದ ಸಮಸ್ಯೆಯನ್ನು ನೋಡಬೇಕು ಅನ್ನಿಸುತ್ತದೆ. ನೆನಪಿಸಿಕೊಳ್ಳೋಣ- ಶೇಖ್ ಅಬ್ದುಲ್ಲಾ ಇಲ್ಲದಿದ್ದರೆ ಕಾಶ್ಮೀರ ಭಾರತದ್ದು ಆಗುತ್ತಿರಲಿಲ್ಲ.

ಸುಗತ ಶ್ರೀನಿವಾಸರಾಜು ಅವರು ಶೇಖ್ ಅಬ್ದುಲ್ಲಾ ಅವರ ವ್ಯಕ್ತಿತ್ವವನ್ನು ಕಣ್ಣಿಗೆಕಟ್ಟುವಂತೆ ವಿವರಿಸುತ್ತಾರೆ- ಶೇಖ್ ಅಬ್ದುಲ್ಲಾರನ್ನು ನೆಹರೂ ಸರ್ಕಾರ ಅನೇಕ ವರ್ಷಗಳ ಕಾಲ ಗೃಹಬಂಧನದಲ್ಲಿರಿಸಿ ಬಿಡುಗಡೆಗೊಳಿಸಿದ ನಂತರ ಅವರು ಪಾಕಿಸ್ತಾನಕ್ಕೂ ಒಮ್ಮೆ ಭೇಟಿ ನೀಡುತ್ತಾರೆ. ಆಗ ಪಾಕಿಸ್ತಾನದ ವಿದೇಶಾಂಗ ಸಚಿವರಾಗಿದ್ದ ಭುಟ್ಟೋ ಅವರು ಸ್ವತಃತಾವೇ ವಿಮಾನ ನಿಲ್ದಾಣಕ್ಕೆ ಬಂದು ಶೇಖ್‍ರನ್ನು ಸ್ವಾಗತಿಸುತ್ತಾರೆ. ಪಾಕಿಸ್ತಾನದಲ್ಲಿ ಅವರಿಗೆ ಭವ್ಯ ಸ್ವಾಗತ ಸಿಗುತ್ತದೆ. ಪಾಕಿಸ್ತಾನದ ಡಾನ್ ಪತ್ರಿಕೆ “ಶೇಖ್‍ ಅಬ್ದುಲ್ಲಾರಿಗೆ ನೆಹರೂ ಆಡಳಿತದ ಇಂಡಿಯಾ ಸಾಕಾಗಿ ಬೇಸತ್ತು ಹೋಗಿರಬೇಕು, ಕಾಶ್ಮೀರ ಪಾಕಿಸ್ತಾನಕ್ಕೆ ಸೇರಲು ಇದು ಸಕಾಲ” ಎಂದೆಲ್ಲಾ ಬರೆಯುತ್ತದೆ. ಒಂದು ಬೃಹತ್ ಸಾರ್ವಜನಿಕ ಸಭೆಯಲ್ಲಿ ಪತ್ರಿಕಾಕರ್ತರು ಅದೇ ಪ್ರಶ್ನೆ ಕೇಳಿದಾಗ ಶೇಖ್ ಅವರ ಉತ್ತರ- ‘ನೆಹರೂ ಒತ್ತಡಕ್ಕೆ ಸಿಲುಕಿ ನನ್ನನ್ನು ಬಂಧನದಲ್ಲಿ ಇರಿಸಿದ್ದಿರಬಹುದು. ಆದರೂ ಆತ ನನ್ನ ಸ್ನೇಹಿತನೆ. ಭಾರತ ಜಾತ್ಯಾತೀತ ದೇಶ. ಕಷ್ಟವೋ ಸುಖವೋ ಕಾಶ್ಮೀರ ಜಾತ್ಯಾತೀತ ಭಾರತದಲ್ಲಿ ಇರಲು ಬಯಸುತ್ತದೆ. ಇಸ್ಲಾಮಿಕ್ ರಿಪಬ್ಲಿಕ್ ಎನಿಸಿಕೊಂಡಿರುವ ಪಾಕಿಸ್ತಾನಕ್ಕಂತೂ ಸೇರುವುದಿಲ್ಲ’ ಎಂದು ನೇರವಾಗಿ ಸ್ಪಷ್ಟವಾಗಿ ಉತ್ತರಿಸುತ್ತಾರೆ.

ಶೇಖ್ ಅಬ್ದುಲ್ಲಾ ಅವರು ಭಾರತಕ್ಕೆ ಹಿಂತಿರುಗುವಾಗ ಅವರನ್ನು ಬೀಳ್ಕೊಡುವುದಕ್ಕೆ ಒಬ್ಬರೂ ಇರುವುದಿಲ್ಲ!. ಇದು ಕಾಶ್ಮೀರದ ಹೃದಯ. ಇದರ ಅರಿವಿಲ್ಲದ ಮೋದಿಶಾದ್ವಯರು ಕಾಶ್ಮೀರದ ನೆಲಕ್ಕೆ ಲಗ್ಗೆ ಇಟ್ಟರು. ಕಾಶ್ಮೀರಿ ಹೃದಯಕ್ಕೆ ಆಘಾತ ಮಾಡಿಬಿಟ್ಟರು. ಮೋದಿಶಾದ್ವಯರು ಚಕ್ರವರ್ತಿಯಂತೆ ನಡೆದುಕೊಳ್ಳಲಿಲ್ಲ, ಪಾಳೆಗಾರರಂತೆ ವರ್ತಿಸಿಬಿಟ್ಟರು.

ಕಾಶ್ಮೀರವನ್ನು ಛಿದ್ರಗೊಳಿಸಿದ್ದೂ ಕೂಡ ಭಾರತವೆಂಬ ಮುಳುಗುತ್ತಿರುವ ಹಡಗಿನಕಡೆ ಗಮನ ಹರಿಸದಿರಲಿ ಎಂಬುದಕ್ಕೇನೊ ಅನ್ನಿಸುತ್ತಿದೆ. ಹಾಗೇನೆ ಉತ್ತರನ ಪೌರುಷದಲ್ಲಿ ಉಪ ಪ್ರಸಂಗಗಳೂ ಆಗಾಗ ಬರುತ್ತವೆ. ‘ಒಂದೇ ಭಾಷೆ’ ಅನ್ನುವುದು – ಆಗ ಯಾರೂ ಮುಳುಗಡೆಕಡೆ ನೋಡುವುದಿಲ್ಲ. ‘ಒಂದೇ ಸಲ ಚುನಾವಣೆ’ ಅನ್ನುವುದು ಆಗ ಯಾರೂ ಮುಳುಗಡೆಕಡೆ ನೋಡುವುದಿಲ್ಲ. ಆರ್‍ಬಿಐ ಗೌರ್ನರ್ GDP ಐದಕ್ಕಿಂತ ಕೆಳಗಿಳಿಯುತ್ತದೆ ಎಂದು ಆತಂಕ ವ್ಯಕ್ತಪಡಿಸಿದಾಗ ಮಾರನೆ ದಿನವೇ `ಎರಡು ಪಾರ್ಟಿ ವ್ಯವಸ್ಥೆ’ ಅನ್ನುವುದು. ಆಗ ಯಾರು ಮುಳುಗಡೆಕಡೆ ನೋಡುವುದಿಲ್ಲ. ಏನೂ ಇಲ್ಲದಿದ್ದರೆ ‘ಮೈಸೂರ್ ಪಾಕ್ ನಮ್ಮದು’ ಅಂದು ಬಿಡುವುದು! ಹೀಗೆ ಸರ್ಕಾರ ನಡೆಯುತ್ತಿದೆ. ಭಾರತ ಎಂಬ ಹಡಗು ದಿನೇ ದಿನೇ ಮುಳುಗುತ್ತಿದೆ.

ಈ ಮುಳುಗಡೆ ಸಂದರ್ಭದಲ್ಲಿ ನಾವು ಮಾಡಬಹುದಾದರೂ ಏನು? ಉದ್ಯೋಗದ ಕುಸಿತ, GDP ಕುಸಿತ, ಸಾರ್ವಜನಿಕ ಸಂಪತ್ತಿನ ಧ್ವಂಸ ಇವುಗಳನ್ನು ಸರ್ಕಾರದ `ಅಚ್ಚೇ ದಿನ್’, `ವೈಬ್ರೆಂಟ್ ಇಂಡಿಯಾ’ ಇತ್ಯಾದಿ, ಇತ್ಯಾದಿ ಬಾಣ ಬಿರುಸು ಬಿಟ್ಟು ಬೇರೆಕಡೆ ಗಮನ ಸೆಳೆದಷ್ಟೂ ಅದನ್ನು ಮೀರಿಸುವಂತೆ ಉದ್ಯೋಗದ ಕುಸಿತ, GDP ಕುಸಿತ, ಸಾರ್ವಜನಿಕ ಸಂಪತ್ತಿನ ಧ್ವಂಸ ಇಂಥವುಗಳನ್ನು ಸಾರ್ವಜನಿಕ ಮಾತುಕತೆಯಾಗಿಸಬೇಕು. ಶ್ರೀಪಾದ ಭಟ್ ಒಂದು ಲೇಖನದಲ್ಲಿ ಹೇಳಿರುವಂತೆ `ಜನರ ನಿರೀಕ್ಷೆಗಳು ಮತ್ತು ಹತಾಶೆಗಳ ಆಳ ಮತ್ತು ಪ್ರಮಾಣವನ್ನು ಅರಿಯಬೇಕಾಗಿದೆ. ಬೌದ್ಧಿಕ ವಾಕ್ಚಾತುರ್ಯಕ್ಕಿಂತ ಪಿಸುಮಾತಿನ ಕನವರಿಕೆಗಳು ಜನ ಸಂಪರ್ಕಕ್ಕೆ ಅಗತ್ಯವಾಗಿದೆ. ಇವನ್ನು ಸಾಂಸ್ಕøತಿಕ, ರಾಜಕೀಯ, ಆರ್ಥಿಕ ನೆಲೆಯಲ್ಲಿ ಅರಿತುಕೊಳ್ಳಬೇಕು.’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...