Homeಕರ್ನಾಟಕಮೋದಿಯವರು ‘ಮನ್ ಕಿ ಬಾತ್‍ನಲ್ಲಿ ಅಂತ್ಯೋದಯ; ದಿಲ್ ಕಾ ಕಾಮ್‍ನಲ್ಲಿ ಉಳ್ಳವರ ಸೇವಕ’ - ದೇವನೂರು

ಮೋದಿಯವರು ‘ಮನ್ ಕಿ ಬಾತ್‍ನಲ್ಲಿ ಅಂತ್ಯೋದಯ; ದಿಲ್ ಕಾ ಕಾಮ್‍ನಲ್ಲಿ ಉಳ್ಳವರ ಸೇವಕ’ – ದೇವನೂರು

- Advertisement -
- Advertisement -

ಸಂದರ್ಶನ
| ಡಾ.ಎಸ್ ತುಕಾರಾಂ |

ಪರ್ಯಾಯ ರಾಜಕಾರಣದ ಪ್ರಯತ್ನಗಳನ್ನು ನಡೆಸುತ್ತಾ ಸಕ್ರಿಯವಾಗಿರುವ ಕನ್ನಡದ ಮಹತ್ವದ ಲೇಖಕ ದೇವನೂರ ಮಹಾದೇವ ಅವರನ್ನು ತುಕಾರಾಂ ಅವರು ಸಂಯುಕ್ತ ಕರ್ನಾಟಕಕ್ಕಾಗಿ ಸಂದರ್ಶಿಸಿದ್ದರು. ಆ ಸಂದರ್ಶನದ ಪೂರ್ಣಪಾಠ ಇಲ್ಲಿದೆ. ಇದನ್ನು ಪ್ರಕಟಿಸಲು ಅನುಮತಿ ಕೊಟ್ಟ ದೇವನೂರ ಮಹಾದೇವ, ತುಕಾರಾಂ ಮತ್ತು ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾದ ಹುಣಸವಾಡಿ ರಾಜನ್ ಅವರಿಗೆ ಧನ್ಯವಾದಗಳು ತಿಳಿಸಲು ಬಯಸುತ್ತೇವೆ.

ನಿಮ್ಮ ಸ್ವರಾಜ್ ಇಂಡಿಯಾ ಪಕ್ಷ ಲೋಕಸಭೆಗೆ ರಾಜ್ಯದಲ್ಲಿ ಯಾವ ಅಭ್ಯರ್ಥಿಯನ್ನು ಚುನಾವಣೆಗೆ ನಿಲ್ಲಿಸಿಲ್ಲವಲ್ಲ, ಯಾಕೆ?
ರೈತ ಮತ್ತು ದಲಿತ ಸಂಘಟನೆಗಳ ಕೂಡಿಕೆಯ ಸ್ವರಾಜ್ ಇಂಡಿಯಾದ ನೆಲೆ ಇರುವುದು ಜಿಲ್ಲಾ ಪಂಚಾಯ್ತ್, ತಾಲ್ಲೂಕು ಪಂಚಾಯ್ತ್ ಕ್ಷೇತ್ರಗಳಲ್ಲಿ. ಹಾಗಾಗಿ ನಿಲ್ಲಿಸಿಲ್ಲ. ಈ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರಾಜ್ ಅವರಿಗೆ ಬೆಂಬಲ ನೀಡಿದ್ದೇವೆ.

• ಹಾಗದರೆ ಉಳಿದೆಡೆ ಲೋಕಸಭಾ ಕ್ಷೇತ್ರಗಳಲ್ಲಿ ನಿಮ್ಮ ಕೆಲಸ ಏನು?
ಸ್ವರಾಜ್ ಇಂಡಿಯಾ “ದೇಶಕ್ಕಾಗಿ ನಾವು” ಎಂಬ ಜಾಗೃತಿಯ ಆಂದೋಲನದ ಭಾಗವಾಗಿದೆ. ದೇಶವನ್ನು ಕಿತ್ತು ತಿನ್ನುತ್ತಿರುವ ನಿರುದ್ಯೋಗ, ತತ್ತರಿಸುತ್ತಿರುವ ಕೃಷಿ ಇತ್ಯಾದಿ ವಿಷಯಗಳನ್ನು ಮುನ್ನೆಲೆಗೆ ತಂದು ಚುನಾವಣಾ ಸಂದರ್ಭದಲ್ಲಿ ಚರ್ಚೆಯಾಗುವಂತೆ ವಾತಾವರಣ ಉಂಟುಮಾಡಿದ್ದೇವೆ. ಇದೇನು ಕಮ್ಮಿ ರಾಜಕಾರಣವಲ್ಲ!

• ನೀವು “ದೇಶಕ್ಕಾಗಿ ನಾವು” ಅನ್ನುತ್ತಿದ್ದರೆ ಬಿಜೆಪಿಯವರು “ದೇಶಕ್ಕಾಗಿ ಮೋದಿ” ಅನ್ನುತ್ತಿದ್ದಾರಲ್ಲ!
ಅವರು ಭಾವನಾತ್ಮಕ ವಿಷಯಗಳನ್ನು ಚುನಾವಣಾ ವಿಷಯವಾಗಿ ಮಾಡಲು ಪ್ರಯತ್ನಿಸಿ ವಿಫಲರಾಗಿ ದಿಕ್ಕೆಟ್ಟು ‘ಮೋದಿ ಮೋದಿ’ ಎಂದು ಕಿರುಚುತ್ತಿದ್ದಾರೆ. ಹೀಗೆ ಕಿರುಚುತ್ತಿರುವವರು ಬಹುತೇಕ ನಿರುದ್ಯೋಗ ಯುವಕರು. ನಿರುದ್ಯೋಗ ಕಳೆದ ನಲವತ್ತೈದು ವರ್ಷಗಳಲ್ಲಿ ಇಷ್ಟೊಂದು ಕೆಳಮಟ್ಟಕ್ಕೆ ಇಳಿದಿರಲಿಲ್ಲ ಎಂದು ಅಂಕಿಅಂಶಗಳು ಹೇಳುತ್ತವೆ. ವರ್ಷಕ್ಕೆ ಕೋಟಿಗಟ್ಟಲೆ ಉದ್ಯೋಗ ನೀಡುತ್ತೇವೆ ಎಂದು ಜನತೆಗೆ ವಚನ ನೀಡಿ ಅಧಿಕಾರಕ್ಕೆ ಬಂದ ವ್ಯಕ್ತಿಯೊಬ್ಬ ನೀಡುವುದಿರಲಿ, ಯಥಾಸ್ಥಿತಿಯನ್ನು ಉಳಿಸಿಕೊಳ್ಳಲಿಲ್ಲ. ಬದಲಾಗಿ ಉದ್ಯೋಗ ನಷ್ಟ ಮಾಡಿಬಿಟ್ಟ. ವಚನಪಾಲಕ ರಾಮನನ್ನು ಈ ವಚನ ಭ್ರಷ್ಟರು ಹೇಗೆ ಉಚ್ಚಾರಣೆ ಮಾಡುತ್ತಾರೋ ನನಗೆ ಅರ್ಥವಾಗುತ್ತಿಲ್ಲ. ಬಹುಶಃ ಆತ್ಮಸಾಕ್ಷಿ ಅಳುಕು ಇಲ್ಲದವರಿಗೆ ಇದು ಸಾಧ್ಯವಾಗಬಹುದು. ಅದಕ್ಕೇ ಬಿಜೆಪಿ ಅಧ್ಯಕ್ಷ ಅಮಿತ್ ಷಾ ತಮ್ಮನ್ನು ಅಧಿಕಾರಕ್ಕೆ ತಂದ ತಮ್ಮ ಪ್ರಣಾಳಿಕೆಯ ಚುನಾವಣಾ ಭರವಸೆಗಳನ್ನು `ಚುನಾವಣಾ ಜುಮ್ಲಾ (ಸುಳ್ಳು)’ ಎಂದು ಹೇಳುತ್ತಾರೆ. ಇದು ನಿರ್ಲಜ್ಜತೆಯ ತುಟ್ಟತುದಿ.

• ಆದರೆ ಬಿಜೆಪಿಯವರು ‘ದೇಶ ಮೊದಲು, ಪಕ್ಷ ನಂತರ, ಕೊನೆಗೆ ವ್ಯಕ್ತಿ’ ಅನ್ನುತ್ತಾರಲ್ಲ?
ಅವರ ನುಡಿ ನೋಡಬೇಡಿ, ನಡೆ ನೋಡಿ. ದೇಶದ ಸಾರ್ವಜನಿಕ ಸಂಪತ್ತನ್ನು ಮಾರುತ್ತಿರುವವರು ಯಾವ ನಾಲಿಗೆಯಲ್ಲಿ ದೇಶ ಮೊದಲು ಅನ್ನುತ್ತಿದ್ದಾರೆ? ಇದು ದೇಶವನ್ನೇ ಮಾರಿದಂತಾಗುವುದಿಲ್ಲವೇ? ಜೊತೆಗೆ ಪ್ರಧಾನ ಮಂತ್ರಿ ಮೋದಿಯವರ ಮಾತುಗಾರಿಕೆಯ ಏರಿಳಿತ, ಹಾವಭಾವ ನೋಡಿದರೆ ಏನನ್ನಿಸುತ್ತದೆ? ಇದು ಹಾರಾಜು ಹಾಕುವವರ ಹಾವಭಾವ, ಮಾತುಗಾರಿಕೆಯಂತೆ ಕಾಣುವುದಿಲ್ಲವೆ? ಇನ್ನು ಪಕ್ಷಕ್ಕೆ ಬಂದರೆ ಬಿಜೆಪಿ ಪಕ್ಷ ಎಲ್ಲಿದೆ? ಅದೊಂದು ಕೂಗುಮಾರಿ ಗುಂಪುಮಂದೆಯಾಗಿದೆ. ಅಲ್ಲಿರುವುದು ಇಬ್ಬರೆ. ಮೂರನೆಯವರಿಗೆ ಸ್ಥಾನವಿಲ್ಲ. ಜೊತೆಗೆ ಕೇಂದ್ರ ಸಚಿವ ಸಂಪುಟವನ್ನೇ ನೋಡಿ- ಅಲ್ಲಿರುವುದು ಒಬ್ಬರೆ! ಉಳಿದ ಸಚಿವರು ಪ್ರಧಾನಮಂತ್ರಿಗಳ ಪರಿಚಾರಕರು. ಬಿಜೆಪಿಯವರು ದೇಶ ಮೊದಲು, ಪಕ್ಷ ನಂತರ, ಕೊನೆಗೆ ವ್ಯಕ್ತಿ ಅಂತಾರಲ್ಲ ಅದನ್ನು ಮೋದಿಯವರು ತಲೆಕೆಳಗೆ ಮಾಡಿಬಿಟ್ಟರು. ಈ ಸಲದ ಚುನಾವಣಾ ಪ್ರಣಾಳಿಕೆ ನೋಡಿ- ಅಲ್ಲಿ ಮೋದಿಯವರೊಬ್ಬರ ಫೋಟೋ ಮಾತ್ರವಿದೆ.

• ಅಂದರೆ ಮೋದಿಯವರು ಏಕವ್ಯಕ್ತಿ ಅಧಿಕಾರ ಕೇಂದ್ರದತ್ತ ನಡೆಯುತ್ತಿದ್ದಾರೆ ಎನ್ನುವುದು ನಿಮ್ಮ ಆರೋಪವೇ?
ಶಾಸ್ತ್ರ ಕೇಳಲೇಬೇಕಾಗಿಲ್ಲ. ಮೋದಿಯವರದು ಏಕವ್ಯಕ್ತಿ ಕೇಂದ್ರಿತ ಅಧಿಕಾರ ಅನ್ನುವ ಮಾತು ಬಿಜೆಪಿ ಪಕ್ಷದ ನಾಯಕರ ಅಸಹಾಯಕ ಪಿಸುನುಡಿಗಳು.

• ಹಾಗಾದರೆ ಈ ಹಿಂದೆ ಇಂದಿರಾಗಾಂಧಿಯವರಿಗೂ ಏಕವ್ಯಕ್ತಿ ಅಧಿಕಾರ ಕೇಂದ್ರಿತ ಎಂಬ ಆರೋಪ ಇತ್ತಲ್ಲ?
ಹೌದು ಇತ್ತು. ಆದರೆ ಈ ಇಬ್ಬರ ನಡುವೆ ಒಂದು ವ್ಯತ್ಯಾಸವಿದೆ. ಇಂದಿರಾ ಅವರ ಆಡಳಿತದಲ್ಲಿ- ಬಡವರು, ಧ್ವನಿ ಇಲ್ಲದವರು, ಅಸಹಾಯಕರು ಉಸಿರಾಡುವಂತಹ ಸುಧಾರಣೆಗಳನ್ನು ತಂದರು. ಆದರೆ ಮೋದಿಯವರ ಆಡಳಿತದಲ್ಲಿ ಕೆಲವೇ ಕೆಲವು ಕಾರ್ಪೋರೇಟ್ ಕಂಪನಿಗಳ ಲಕ್ಷಾಂತರ ಕೋಟಿ ರೂಪಾಯಿಗಳ ಬಂಡವಾಳ ಬೆಳವಣಿಗೆಯಾಗುವುದಕ್ಕೆ ದೇಶದ ಪ್ರಧಾನಿ ಮೋದಿಯವರು ಒಬ್ಬ ವ್ಯವಸ್ಥಾಪಕನಂತೆ ಕಾರ್ಯ ನಿರ್ವಹಿಸಿಬಿಟ್ಟರು. ಅದಕ್ಕಾಗೇ, ಮೋದಿಯವರ ‘ಮನ್ ಕಿ ಬಾತ್‍ನಲ್ಲಿ ಅಂತ್ಯೋದಯ; ದಿಲ್ ಕಾ ಕಾಮ್‍ನಲ್ಲಿ ಉಳ್ಳವರ ಸೇವಕ’ ಎಂಬ ನಾಣ್ಣುಡಿ ಹುಟ್ಟಿಕೊಂಡಿದೆ.

• ನೀವು ವಿದ್ಯಾರ್ಥಿದೆಸೆಯಲ್ಲಿ ಲೋಹಿಯಾ ವಿಚಾರಧಾರೆಯ ಸಮಾಜವಾದಿ ಯುವಜನ ಸಭಾದಲ್ಲಿ ಇದ್ದವರು. ಲೋಹಿಯಾ ಅವರ ‘ಕಾಂಗ್ರೆಸ್ ವಿರೋಧಿ’ (Anti-Congress) ನಿಲುವಿಗೆ ಈಗ ನಿಮ್ಮ ಅಭಿಪ್ರಾಯ?
ಅಕ್ಷರ, ಪದಕ್ಕೆ ಅರ್ಥ ನೀಡಬಾರದು. ಅದರ ಆಂತರ್ಯ (Spirit) ನೋಡಬೇಕು. ಆ ಕಾಲಘಟ್ಟದಲ್ಲಿ ಲೋಹಿಯಾ ಹಾಗೂ ಅಂಬೇಡ್ಕರ್ ಅವರ ‘ಕಾಂಗ್ರೆಸ್ ವಿರೋಧಿ’ ಎಂದರೆ ಅದು ಆಂತರ್ಯದಲ್ಲಿ `ವ್ಯವಸ್ಥೆ ವಿರೋಧಿ’ (Anti- establishment) ಎಂದೇ ಅರ್ಥ. ಈ ಅರ್ಥದಲ್ಲಿ ಇಂದು ‘ವ್ಯವಸ್ಥೆ ವಿರೋಧಿ’ ನಿಲುವು ಎಂದರೆ ಏನು? ಇಂದು ಬಿಜೆಪಿ ದೇಶವನ್ನು ಆಳುತ್ತಿದೆ. ಈಗ ವ್ಯವಸ್ಥೆ ವಿರೋಧಿ ನಿಲುವು ಎಂದರೆ ಅದು ಬಿಜೆಪಿ ವಿರೋಧಿ ನಿಲುವು ಎಂದೇ ಆಗುತ್ತದೆ. ಸಮಾಜದ ಸಾಮರಸ್ಯ ಮತ್ತು ಸಮಾನತೆಗಾಗಿ ಅಂದರೆ ಮುಂಚಲನೆಗಾಗಿ ಬದಲಾವಣೆ ಬೇಕೆಂದಿದ್ದರೆ ಸಮುದಾಯ ಪ್ರಜ್ಞೆ ಯಾವಾಗಲೂ ವ್ಯವಸ್ಥೆ ವಿರೋಧಿ ನಿಲುವನ್ನು ಜಾಗೃತವಾಗಿರಿಸಿಕೊಂಡಿರಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...