Homeಕರ್ನಾಟಕಮೋದಿಯವರು ‘ಮನ್ ಕಿ ಬಾತ್‍ನಲ್ಲಿ ಅಂತ್ಯೋದಯ; ದಿಲ್ ಕಾ ಕಾಮ್‍ನಲ್ಲಿ ಉಳ್ಳವರ ಸೇವಕ’ - ದೇವನೂರು

ಮೋದಿಯವರು ‘ಮನ್ ಕಿ ಬಾತ್‍ನಲ್ಲಿ ಅಂತ್ಯೋದಯ; ದಿಲ್ ಕಾ ಕಾಮ್‍ನಲ್ಲಿ ಉಳ್ಳವರ ಸೇವಕ’ – ದೇವನೂರು

- Advertisement -
- Advertisement -

ಸಂದರ್ಶನ
| ಡಾ.ಎಸ್ ತುಕಾರಾಂ |

ಪರ್ಯಾಯ ರಾಜಕಾರಣದ ಪ್ರಯತ್ನಗಳನ್ನು ನಡೆಸುತ್ತಾ ಸಕ್ರಿಯವಾಗಿರುವ ಕನ್ನಡದ ಮಹತ್ವದ ಲೇಖಕ ದೇವನೂರ ಮಹಾದೇವ ಅವರನ್ನು ತುಕಾರಾಂ ಅವರು ಸಂಯುಕ್ತ ಕರ್ನಾಟಕಕ್ಕಾಗಿ ಸಂದರ್ಶಿಸಿದ್ದರು. ಆ ಸಂದರ್ಶನದ ಪೂರ್ಣಪಾಠ ಇಲ್ಲಿದೆ. ಇದನ್ನು ಪ್ರಕಟಿಸಲು ಅನುಮತಿ ಕೊಟ್ಟ ದೇವನೂರ ಮಹಾದೇವ, ತುಕಾರಾಂ ಮತ್ತು ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾದ ಹುಣಸವಾಡಿ ರಾಜನ್ ಅವರಿಗೆ ಧನ್ಯವಾದಗಳು ತಿಳಿಸಲು ಬಯಸುತ್ತೇವೆ.

ನಿಮ್ಮ ಸ್ವರಾಜ್ ಇಂಡಿಯಾ ಪಕ್ಷ ಲೋಕಸಭೆಗೆ ರಾಜ್ಯದಲ್ಲಿ ಯಾವ ಅಭ್ಯರ್ಥಿಯನ್ನು ಚುನಾವಣೆಗೆ ನಿಲ್ಲಿಸಿಲ್ಲವಲ್ಲ, ಯಾಕೆ?
ರೈತ ಮತ್ತು ದಲಿತ ಸಂಘಟನೆಗಳ ಕೂಡಿಕೆಯ ಸ್ವರಾಜ್ ಇಂಡಿಯಾದ ನೆಲೆ ಇರುವುದು ಜಿಲ್ಲಾ ಪಂಚಾಯ್ತ್, ತಾಲ್ಲೂಕು ಪಂಚಾಯ್ತ್ ಕ್ಷೇತ್ರಗಳಲ್ಲಿ. ಹಾಗಾಗಿ ನಿಲ್ಲಿಸಿಲ್ಲ. ಈ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರಾಜ್ ಅವರಿಗೆ ಬೆಂಬಲ ನೀಡಿದ್ದೇವೆ.

• ಹಾಗದರೆ ಉಳಿದೆಡೆ ಲೋಕಸಭಾ ಕ್ಷೇತ್ರಗಳಲ್ಲಿ ನಿಮ್ಮ ಕೆಲಸ ಏನು?
ಸ್ವರಾಜ್ ಇಂಡಿಯಾ “ದೇಶಕ್ಕಾಗಿ ನಾವು” ಎಂಬ ಜಾಗೃತಿಯ ಆಂದೋಲನದ ಭಾಗವಾಗಿದೆ. ದೇಶವನ್ನು ಕಿತ್ತು ತಿನ್ನುತ್ತಿರುವ ನಿರುದ್ಯೋಗ, ತತ್ತರಿಸುತ್ತಿರುವ ಕೃಷಿ ಇತ್ಯಾದಿ ವಿಷಯಗಳನ್ನು ಮುನ್ನೆಲೆಗೆ ತಂದು ಚುನಾವಣಾ ಸಂದರ್ಭದಲ್ಲಿ ಚರ್ಚೆಯಾಗುವಂತೆ ವಾತಾವರಣ ಉಂಟುಮಾಡಿದ್ದೇವೆ. ಇದೇನು ಕಮ್ಮಿ ರಾಜಕಾರಣವಲ್ಲ!

• ನೀವು “ದೇಶಕ್ಕಾಗಿ ನಾವು” ಅನ್ನುತ್ತಿದ್ದರೆ ಬಿಜೆಪಿಯವರು “ದೇಶಕ್ಕಾಗಿ ಮೋದಿ” ಅನ್ನುತ್ತಿದ್ದಾರಲ್ಲ!
ಅವರು ಭಾವನಾತ್ಮಕ ವಿಷಯಗಳನ್ನು ಚುನಾವಣಾ ವಿಷಯವಾಗಿ ಮಾಡಲು ಪ್ರಯತ್ನಿಸಿ ವಿಫಲರಾಗಿ ದಿಕ್ಕೆಟ್ಟು ‘ಮೋದಿ ಮೋದಿ’ ಎಂದು ಕಿರುಚುತ್ತಿದ್ದಾರೆ. ಹೀಗೆ ಕಿರುಚುತ್ತಿರುವವರು ಬಹುತೇಕ ನಿರುದ್ಯೋಗ ಯುವಕರು. ನಿರುದ್ಯೋಗ ಕಳೆದ ನಲವತ್ತೈದು ವರ್ಷಗಳಲ್ಲಿ ಇಷ್ಟೊಂದು ಕೆಳಮಟ್ಟಕ್ಕೆ ಇಳಿದಿರಲಿಲ್ಲ ಎಂದು ಅಂಕಿಅಂಶಗಳು ಹೇಳುತ್ತವೆ. ವರ್ಷಕ್ಕೆ ಕೋಟಿಗಟ್ಟಲೆ ಉದ್ಯೋಗ ನೀಡುತ್ತೇವೆ ಎಂದು ಜನತೆಗೆ ವಚನ ನೀಡಿ ಅಧಿಕಾರಕ್ಕೆ ಬಂದ ವ್ಯಕ್ತಿಯೊಬ್ಬ ನೀಡುವುದಿರಲಿ, ಯಥಾಸ್ಥಿತಿಯನ್ನು ಉಳಿಸಿಕೊಳ್ಳಲಿಲ್ಲ. ಬದಲಾಗಿ ಉದ್ಯೋಗ ನಷ್ಟ ಮಾಡಿಬಿಟ್ಟ. ವಚನಪಾಲಕ ರಾಮನನ್ನು ಈ ವಚನ ಭ್ರಷ್ಟರು ಹೇಗೆ ಉಚ್ಚಾರಣೆ ಮಾಡುತ್ತಾರೋ ನನಗೆ ಅರ್ಥವಾಗುತ್ತಿಲ್ಲ. ಬಹುಶಃ ಆತ್ಮಸಾಕ್ಷಿ ಅಳುಕು ಇಲ್ಲದವರಿಗೆ ಇದು ಸಾಧ್ಯವಾಗಬಹುದು. ಅದಕ್ಕೇ ಬಿಜೆಪಿ ಅಧ್ಯಕ್ಷ ಅಮಿತ್ ಷಾ ತಮ್ಮನ್ನು ಅಧಿಕಾರಕ್ಕೆ ತಂದ ತಮ್ಮ ಪ್ರಣಾಳಿಕೆಯ ಚುನಾವಣಾ ಭರವಸೆಗಳನ್ನು `ಚುನಾವಣಾ ಜುಮ್ಲಾ (ಸುಳ್ಳು)’ ಎಂದು ಹೇಳುತ್ತಾರೆ. ಇದು ನಿರ್ಲಜ್ಜತೆಯ ತುಟ್ಟತುದಿ.

• ಆದರೆ ಬಿಜೆಪಿಯವರು ‘ದೇಶ ಮೊದಲು, ಪಕ್ಷ ನಂತರ, ಕೊನೆಗೆ ವ್ಯಕ್ತಿ’ ಅನ್ನುತ್ತಾರಲ್ಲ?
ಅವರ ನುಡಿ ನೋಡಬೇಡಿ, ನಡೆ ನೋಡಿ. ದೇಶದ ಸಾರ್ವಜನಿಕ ಸಂಪತ್ತನ್ನು ಮಾರುತ್ತಿರುವವರು ಯಾವ ನಾಲಿಗೆಯಲ್ಲಿ ದೇಶ ಮೊದಲು ಅನ್ನುತ್ತಿದ್ದಾರೆ? ಇದು ದೇಶವನ್ನೇ ಮಾರಿದಂತಾಗುವುದಿಲ್ಲವೇ? ಜೊತೆಗೆ ಪ್ರಧಾನ ಮಂತ್ರಿ ಮೋದಿಯವರ ಮಾತುಗಾರಿಕೆಯ ಏರಿಳಿತ, ಹಾವಭಾವ ನೋಡಿದರೆ ಏನನ್ನಿಸುತ್ತದೆ? ಇದು ಹಾರಾಜು ಹಾಕುವವರ ಹಾವಭಾವ, ಮಾತುಗಾರಿಕೆಯಂತೆ ಕಾಣುವುದಿಲ್ಲವೆ? ಇನ್ನು ಪಕ್ಷಕ್ಕೆ ಬಂದರೆ ಬಿಜೆಪಿ ಪಕ್ಷ ಎಲ್ಲಿದೆ? ಅದೊಂದು ಕೂಗುಮಾರಿ ಗುಂಪುಮಂದೆಯಾಗಿದೆ. ಅಲ್ಲಿರುವುದು ಇಬ್ಬರೆ. ಮೂರನೆಯವರಿಗೆ ಸ್ಥಾನವಿಲ್ಲ. ಜೊತೆಗೆ ಕೇಂದ್ರ ಸಚಿವ ಸಂಪುಟವನ್ನೇ ನೋಡಿ- ಅಲ್ಲಿರುವುದು ಒಬ್ಬರೆ! ಉಳಿದ ಸಚಿವರು ಪ್ರಧಾನಮಂತ್ರಿಗಳ ಪರಿಚಾರಕರು. ಬಿಜೆಪಿಯವರು ದೇಶ ಮೊದಲು, ಪಕ್ಷ ನಂತರ, ಕೊನೆಗೆ ವ್ಯಕ್ತಿ ಅಂತಾರಲ್ಲ ಅದನ್ನು ಮೋದಿಯವರು ತಲೆಕೆಳಗೆ ಮಾಡಿಬಿಟ್ಟರು. ಈ ಸಲದ ಚುನಾವಣಾ ಪ್ರಣಾಳಿಕೆ ನೋಡಿ- ಅಲ್ಲಿ ಮೋದಿಯವರೊಬ್ಬರ ಫೋಟೋ ಮಾತ್ರವಿದೆ.

• ಅಂದರೆ ಮೋದಿಯವರು ಏಕವ್ಯಕ್ತಿ ಅಧಿಕಾರ ಕೇಂದ್ರದತ್ತ ನಡೆಯುತ್ತಿದ್ದಾರೆ ಎನ್ನುವುದು ನಿಮ್ಮ ಆರೋಪವೇ?
ಶಾಸ್ತ್ರ ಕೇಳಲೇಬೇಕಾಗಿಲ್ಲ. ಮೋದಿಯವರದು ಏಕವ್ಯಕ್ತಿ ಕೇಂದ್ರಿತ ಅಧಿಕಾರ ಅನ್ನುವ ಮಾತು ಬಿಜೆಪಿ ಪಕ್ಷದ ನಾಯಕರ ಅಸಹಾಯಕ ಪಿಸುನುಡಿಗಳು.

• ಹಾಗಾದರೆ ಈ ಹಿಂದೆ ಇಂದಿರಾಗಾಂಧಿಯವರಿಗೂ ಏಕವ್ಯಕ್ತಿ ಅಧಿಕಾರ ಕೇಂದ್ರಿತ ಎಂಬ ಆರೋಪ ಇತ್ತಲ್ಲ?
ಹೌದು ಇತ್ತು. ಆದರೆ ಈ ಇಬ್ಬರ ನಡುವೆ ಒಂದು ವ್ಯತ್ಯಾಸವಿದೆ. ಇಂದಿರಾ ಅವರ ಆಡಳಿತದಲ್ಲಿ- ಬಡವರು, ಧ್ವನಿ ಇಲ್ಲದವರು, ಅಸಹಾಯಕರು ಉಸಿರಾಡುವಂತಹ ಸುಧಾರಣೆಗಳನ್ನು ತಂದರು. ಆದರೆ ಮೋದಿಯವರ ಆಡಳಿತದಲ್ಲಿ ಕೆಲವೇ ಕೆಲವು ಕಾರ್ಪೋರೇಟ್ ಕಂಪನಿಗಳ ಲಕ್ಷಾಂತರ ಕೋಟಿ ರೂಪಾಯಿಗಳ ಬಂಡವಾಳ ಬೆಳವಣಿಗೆಯಾಗುವುದಕ್ಕೆ ದೇಶದ ಪ್ರಧಾನಿ ಮೋದಿಯವರು ಒಬ್ಬ ವ್ಯವಸ್ಥಾಪಕನಂತೆ ಕಾರ್ಯ ನಿರ್ವಹಿಸಿಬಿಟ್ಟರು. ಅದಕ್ಕಾಗೇ, ಮೋದಿಯವರ ‘ಮನ್ ಕಿ ಬಾತ್‍ನಲ್ಲಿ ಅಂತ್ಯೋದಯ; ದಿಲ್ ಕಾ ಕಾಮ್‍ನಲ್ಲಿ ಉಳ್ಳವರ ಸೇವಕ’ ಎಂಬ ನಾಣ್ಣುಡಿ ಹುಟ್ಟಿಕೊಂಡಿದೆ.

• ನೀವು ವಿದ್ಯಾರ್ಥಿದೆಸೆಯಲ್ಲಿ ಲೋಹಿಯಾ ವಿಚಾರಧಾರೆಯ ಸಮಾಜವಾದಿ ಯುವಜನ ಸಭಾದಲ್ಲಿ ಇದ್ದವರು. ಲೋಹಿಯಾ ಅವರ ‘ಕಾಂಗ್ರೆಸ್ ವಿರೋಧಿ’ (Anti-Congress) ನಿಲುವಿಗೆ ಈಗ ನಿಮ್ಮ ಅಭಿಪ್ರಾಯ?
ಅಕ್ಷರ, ಪದಕ್ಕೆ ಅರ್ಥ ನೀಡಬಾರದು. ಅದರ ಆಂತರ್ಯ (Spirit) ನೋಡಬೇಕು. ಆ ಕಾಲಘಟ್ಟದಲ್ಲಿ ಲೋಹಿಯಾ ಹಾಗೂ ಅಂಬೇಡ್ಕರ್ ಅವರ ‘ಕಾಂಗ್ರೆಸ್ ವಿರೋಧಿ’ ಎಂದರೆ ಅದು ಆಂತರ್ಯದಲ್ಲಿ `ವ್ಯವಸ್ಥೆ ವಿರೋಧಿ’ (Anti- establishment) ಎಂದೇ ಅರ್ಥ. ಈ ಅರ್ಥದಲ್ಲಿ ಇಂದು ‘ವ್ಯವಸ್ಥೆ ವಿರೋಧಿ’ ನಿಲುವು ಎಂದರೆ ಏನು? ಇಂದು ಬಿಜೆಪಿ ದೇಶವನ್ನು ಆಳುತ್ತಿದೆ. ಈಗ ವ್ಯವಸ್ಥೆ ವಿರೋಧಿ ನಿಲುವು ಎಂದರೆ ಅದು ಬಿಜೆಪಿ ವಿರೋಧಿ ನಿಲುವು ಎಂದೇ ಆಗುತ್ತದೆ. ಸಮಾಜದ ಸಾಮರಸ್ಯ ಮತ್ತು ಸಮಾನತೆಗಾಗಿ ಅಂದರೆ ಮುಂಚಲನೆಗಾಗಿ ಬದಲಾವಣೆ ಬೇಕೆಂದಿದ್ದರೆ ಸಮುದಾಯ ಪ್ರಜ್ಞೆ ಯಾವಾಗಲೂ ವ್ಯವಸ್ಥೆ ವಿರೋಧಿ ನಿಲುವನ್ನು ಜಾಗೃತವಾಗಿರಿಸಿಕೊಂಡಿರಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...