Homeಕರ್ನಾಟಕಮೋದಿಯವರು ‘ಮನ್ ಕಿ ಬಾತ್‍ನಲ್ಲಿ ಅಂತ್ಯೋದಯ; ದಿಲ್ ಕಾ ಕಾಮ್‍ನಲ್ಲಿ ಉಳ್ಳವರ ಸೇವಕ’ - ದೇವನೂರು

ಮೋದಿಯವರು ‘ಮನ್ ಕಿ ಬಾತ್‍ನಲ್ಲಿ ಅಂತ್ಯೋದಯ; ದಿಲ್ ಕಾ ಕಾಮ್‍ನಲ್ಲಿ ಉಳ್ಳವರ ಸೇವಕ’ – ದೇವನೂರು

- Advertisement -
- Advertisement -

ಸಂದರ್ಶನ
| ಡಾ.ಎಸ್ ತುಕಾರಾಂ |

ಪರ್ಯಾಯ ರಾಜಕಾರಣದ ಪ್ರಯತ್ನಗಳನ್ನು ನಡೆಸುತ್ತಾ ಸಕ್ರಿಯವಾಗಿರುವ ಕನ್ನಡದ ಮಹತ್ವದ ಲೇಖಕ ದೇವನೂರ ಮಹಾದೇವ ಅವರನ್ನು ತುಕಾರಾಂ ಅವರು ಸಂಯುಕ್ತ ಕರ್ನಾಟಕಕ್ಕಾಗಿ ಸಂದರ್ಶಿಸಿದ್ದರು. ಆ ಸಂದರ್ಶನದ ಪೂರ್ಣಪಾಠ ಇಲ್ಲಿದೆ. ಇದನ್ನು ಪ್ರಕಟಿಸಲು ಅನುಮತಿ ಕೊಟ್ಟ ದೇವನೂರ ಮಹಾದೇವ, ತುಕಾರಾಂ ಮತ್ತು ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾದ ಹುಣಸವಾಡಿ ರಾಜನ್ ಅವರಿಗೆ ಧನ್ಯವಾದಗಳು ತಿಳಿಸಲು ಬಯಸುತ್ತೇವೆ.

ನಿಮ್ಮ ಸ್ವರಾಜ್ ಇಂಡಿಯಾ ಪಕ್ಷ ಲೋಕಸಭೆಗೆ ರಾಜ್ಯದಲ್ಲಿ ಯಾವ ಅಭ್ಯರ್ಥಿಯನ್ನು ಚುನಾವಣೆಗೆ ನಿಲ್ಲಿಸಿಲ್ಲವಲ್ಲ, ಯಾಕೆ?
ರೈತ ಮತ್ತು ದಲಿತ ಸಂಘಟನೆಗಳ ಕೂಡಿಕೆಯ ಸ್ವರಾಜ್ ಇಂಡಿಯಾದ ನೆಲೆ ಇರುವುದು ಜಿಲ್ಲಾ ಪಂಚಾಯ್ತ್, ತಾಲ್ಲೂಕು ಪಂಚಾಯ್ತ್ ಕ್ಷೇತ್ರಗಳಲ್ಲಿ. ಹಾಗಾಗಿ ನಿಲ್ಲಿಸಿಲ್ಲ. ಈ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರಾಜ್ ಅವರಿಗೆ ಬೆಂಬಲ ನೀಡಿದ್ದೇವೆ.

• ಹಾಗದರೆ ಉಳಿದೆಡೆ ಲೋಕಸಭಾ ಕ್ಷೇತ್ರಗಳಲ್ಲಿ ನಿಮ್ಮ ಕೆಲಸ ಏನು?
ಸ್ವರಾಜ್ ಇಂಡಿಯಾ “ದೇಶಕ್ಕಾಗಿ ನಾವು” ಎಂಬ ಜಾಗೃತಿಯ ಆಂದೋಲನದ ಭಾಗವಾಗಿದೆ. ದೇಶವನ್ನು ಕಿತ್ತು ತಿನ್ನುತ್ತಿರುವ ನಿರುದ್ಯೋಗ, ತತ್ತರಿಸುತ್ತಿರುವ ಕೃಷಿ ಇತ್ಯಾದಿ ವಿಷಯಗಳನ್ನು ಮುನ್ನೆಲೆಗೆ ತಂದು ಚುನಾವಣಾ ಸಂದರ್ಭದಲ್ಲಿ ಚರ್ಚೆಯಾಗುವಂತೆ ವಾತಾವರಣ ಉಂಟುಮಾಡಿದ್ದೇವೆ. ಇದೇನು ಕಮ್ಮಿ ರಾಜಕಾರಣವಲ್ಲ!

• ನೀವು “ದೇಶಕ್ಕಾಗಿ ನಾವು” ಅನ್ನುತ್ತಿದ್ದರೆ ಬಿಜೆಪಿಯವರು “ದೇಶಕ್ಕಾಗಿ ಮೋದಿ” ಅನ್ನುತ್ತಿದ್ದಾರಲ್ಲ!
ಅವರು ಭಾವನಾತ್ಮಕ ವಿಷಯಗಳನ್ನು ಚುನಾವಣಾ ವಿಷಯವಾಗಿ ಮಾಡಲು ಪ್ರಯತ್ನಿಸಿ ವಿಫಲರಾಗಿ ದಿಕ್ಕೆಟ್ಟು ‘ಮೋದಿ ಮೋದಿ’ ಎಂದು ಕಿರುಚುತ್ತಿದ್ದಾರೆ. ಹೀಗೆ ಕಿರುಚುತ್ತಿರುವವರು ಬಹುತೇಕ ನಿರುದ್ಯೋಗ ಯುವಕರು. ನಿರುದ್ಯೋಗ ಕಳೆದ ನಲವತ್ತೈದು ವರ್ಷಗಳಲ್ಲಿ ಇಷ್ಟೊಂದು ಕೆಳಮಟ್ಟಕ್ಕೆ ಇಳಿದಿರಲಿಲ್ಲ ಎಂದು ಅಂಕಿಅಂಶಗಳು ಹೇಳುತ್ತವೆ. ವರ್ಷಕ್ಕೆ ಕೋಟಿಗಟ್ಟಲೆ ಉದ್ಯೋಗ ನೀಡುತ್ತೇವೆ ಎಂದು ಜನತೆಗೆ ವಚನ ನೀಡಿ ಅಧಿಕಾರಕ್ಕೆ ಬಂದ ವ್ಯಕ್ತಿಯೊಬ್ಬ ನೀಡುವುದಿರಲಿ, ಯಥಾಸ್ಥಿತಿಯನ್ನು ಉಳಿಸಿಕೊಳ್ಳಲಿಲ್ಲ. ಬದಲಾಗಿ ಉದ್ಯೋಗ ನಷ್ಟ ಮಾಡಿಬಿಟ್ಟ. ವಚನಪಾಲಕ ರಾಮನನ್ನು ಈ ವಚನ ಭ್ರಷ್ಟರು ಹೇಗೆ ಉಚ್ಚಾರಣೆ ಮಾಡುತ್ತಾರೋ ನನಗೆ ಅರ್ಥವಾಗುತ್ತಿಲ್ಲ. ಬಹುಶಃ ಆತ್ಮಸಾಕ್ಷಿ ಅಳುಕು ಇಲ್ಲದವರಿಗೆ ಇದು ಸಾಧ್ಯವಾಗಬಹುದು. ಅದಕ್ಕೇ ಬಿಜೆಪಿ ಅಧ್ಯಕ್ಷ ಅಮಿತ್ ಷಾ ತಮ್ಮನ್ನು ಅಧಿಕಾರಕ್ಕೆ ತಂದ ತಮ್ಮ ಪ್ರಣಾಳಿಕೆಯ ಚುನಾವಣಾ ಭರವಸೆಗಳನ್ನು `ಚುನಾವಣಾ ಜುಮ್ಲಾ (ಸುಳ್ಳು)’ ಎಂದು ಹೇಳುತ್ತಾರೆ. ಇದು ನಿರ್ಲಜ್ಜತೆಯ ತುಟ್ಟತುದಿ.

• ಆದರೆ ಬಿಜೆಪಿಯವರು ‘ದೇಶ ಮೊದಲು, ಪಕ್ಷ ನಂತರ, ಕೊನೆಗೆ ವ್ಯಕ್ತಿ’ ಅನ್ನುತ್ತಾರಲ್ಲ?
ಅವರ ನುಡಿ ನೋಡಬೇಡಿ, ನಡೆ ನೋಡಿ. ದೇಶದ ಸಾರ್ವಜನಿಕ ಸಂಪತ್ತನ್ನು ಮಾರುತ್ತಿರುವವರು ಯಾವ ನಾಲಿಗೆಯಲ್ಲಿ ದೇಶ ಮೊದಲು ಅನ್ನುತ್ತಿದ್ದಾರೆ? ಇದು ದೇಶವನ್ನೇ ಮಾರಿದಂತಾಗುವುದಿಲ್ಲವೇ? ಜೊತೆಗೆ ಪ್ರಧಾನ ಮಂತ್ರಿ ಮೋದಿಯವರ ಮಾತುಗಾರಿಕೆಯ ಏರಿಳಿತ, ಹಾವಭಾವ ನೋಡಿದರೆ ಏನನ್ನಿಸುತ್ತದೆ? ಇದು ಹಾರಾಜು ಹಾಕುವವರ ಹಾವಭಾವ, ಮಾತುಗಾರಿಕೆಯಂತೆ ಕಾಣುವುದಿಲ್ಲವೆ? ಇನ್ನು ಪಕ್ಷಕ್ಕೆ ಬಂದರೆ ಬಿಜೆಪಿ ಪಕ್ಷ ಎಲ್ಲಿದೆ? ಅದೊಂದು ಕೂಗುಮಾರಿ ಗುಂಪುಮಂದೆಯಾಗಿದೆ. ಅಲ್ಲಿರುವುದು ಇಬ್ಬರೆ. ಮೂರನೆಯವರಿಗೆ ಸ್ಥಾನವಿಲ್ಲ. ಜೊತೆಗೆ ಕೇಂದ್ರ ಸಚಿವ ಸಂಪುಟವನ್ನೇ ನೋಡಿ- ಅಲ್ಲಿರುವುದು ಒಬ್ಬರೆ! ಉಳಿದ ಸಚಿವರು ಪ್ರಧಾನಮಂತ್ರಿಗಳ ಪರಿಚಾರಕರು. ಬಿಜೆಪಿಯವರು ದೇಶ ಮೊದಲು, ಪಕ್ಷ ನಂತರ, ಕೊನೆಗೆ ವ್ಯಕ್ತಿ ಅಂತಾರಲ್ಲ ಅದನ್ನು ಮೋದಿಯವರು ತಲೆಕೆಳಗೆ ಮಾಡಿಬಿಟ್ಟರು. ಈ ಸಲದ ಚುನಾವಣಾ ಪ್ರಣಾಳಿಕೆ ನೋಡಿ- ಅಲ್ಲಿ ಮೋದಿಯವರೊಬ್ಬರ ಫೋಟೋ ಮಾತ್ರವಿದೆ.

• ಅಂದರೆ ಮೋದಿಯವರು ಏಕವ್ಯಕ್ತಿ ಅಧಿಕಾರ ಕೇಂದ್ರದತ್ತ ನಡೆಯುತ್ತಿದ್ದಾರೆ ಎನ್ನುವುದು ನಿಮ್ಮ ಆರೋಪವೇ?
ಶಾಸ್ತ್ರ ಕೇಳಲೇಬೇಕಾಗಿಲ್ಲ. ಮೋದಿಯವರದು ಏಕವ್ಯಕ್ತಿ ಕೇಂದ್ರಿತ ಅಧಿಕಾರ ಅನ್ನುವ ಮಾತು ಬಿಜೆಪಿ ಪಕ್ಷದ ನಾಯಕರ ಅಸಹಾಯಕ ಪಿಸುನುಡಿಗಳು.

• ಹಾಗಾದರೆ ಈ ಹಿಂದೆ ಇಂದಿರಾಗಾಂಧಿಯವರಿಗೂ ಏಕವ್ಯಕ್ತಿ ಅಧಿಕಾರ ಕೇಂದ್ರಿತ ಎಂಬ ಆರೋಪ ಇತ್ತಲ್ಲ?
ಹೌದು ಇತ್ತು. ಆದರೆ ಈ ಇಬ್ಬರ ನಡುವೆ ಒಂದು ವ್ಯತ್ಯಾಸವಿದೆ. ಇಂದಿರಾ ಅವರ ಆಡಳಿತದಲ್ಲಿ- ಬಡವರು, ಧ್ವನಿ ಇಲ್ಲದವರು, ಅಸಹಾಯಕರು ಉಸಿರಾಡುವಂತಹ ಸುಧಾರಣೆಗಳನ್ನು ತಂದರು. ಆದರೆ ಮೋದಿಯವರ ಆಡಳಿತದಲ್ಲಿ ಕೆಲವೇ ಕೆಲವು ಕಾರ್ಪೋರೇಟ್ ಕಂಪನಿಗಳ ಲಕ್ಷಾಂತರ ಕೋಟಿ ರೂಪಾಯಿಗಳ ಬಂಡವಾಳ ಬೆಳವಣಿಗೆಯಾಗುವುದಕ್ಕೆ ದೇಶದ ಪ್ರಧಾನಿ ಮೋದಿಯವರು ಒಬ್ಬ ವ್ಯವಸ್ಥಾಪಕನಂತೆ ಕಾರ್ಯ ನಿರ್ವಹಿಸಿಬಿಟ್ಟರು. ಅದಕ್ಕಾಗೇ, ಮೋದಿಯವರ ‘ಮನ್ ಕಿ ಬಾತ್‍ನಲ್ಲಿ ಅಂತ್ಯೋದಯ; ದಿಲ್ ಕಾ ಕಾಮ್‍ನಲ್ಲಿ ಉಳ್ಳವರ ಸೇವಕ’ ಎಂಬ ನಾಣ್ಣುಡಿ ಹುಟ್ಟಿಕೊಂಡಿದೆ.

• ನೀವು ವಿದ್ಯಾರ್ಥಿದೆಸೆಯಲ್ಲಿ ಲೋಹಿಯಾ ವಿಚಾರಧಾರೆಯ ಸಮಾಜವಾದಿ ಯುವಜನ ಸಭಾದಲ್ಲಿ ಇದ್ದವರು. ಲೋಹಿಯಾ ಅವರ ‘ಕಾಂಗ್ರೆಸ್ ವಿರೋಧಿ’ (Anti-Congress) ನಿಲುವಿಗೆ ಈಗ ನಿಮ್ಮ ಅಭಿಪ್ರಾಯ?
ಅಕ್ಷರ, ಪದಕ್ಕೆ ಅರ್ಥ ನೀಡಬಾರದು. ಅದರ ಆಂತರ್ಯ (Spirit) ನೋಡಬೇಕು. ಆ ಕಾಲಘಟ್ಟದಲ್ಲಿ ಲೋಹಿಯಾ ಹಾಗೂ ಅಂಬೇಡ್ಕರ್ ಅವರ ‘ಕಾಂಗ್ರೆಸ್ ವಿರೋಧಿ’ ಎಂದರೆ ಅದು ಆಂತರ್ಯದಲ್ಲಿ `ವ್ಯವಸ್ಥೆ ವಿರೋಧಿ’ (Anti- establishment) ಎಂದೇ ಅರ್ಥ. ಈ ಅರ್ಥದಲ್ಲಿ ಇಂದು ‘ವ್ಯವಸ್ಥೆ ವಿರೋಧಿ’ ನಿಲುವು ಎಂದರೆ ಏನು? ಇಂದು ಬಿಜೆಪಿ ದೇಶವನ್ನು ಆಳುತ್ತಿದೆ. ಈಗ ವ್ಯವಸ್ಥೆ ವಿರೋಧಿ ನಿಲುವು ಎಂದರೆ ಅದು ಬಿಜೆಪಿ ವಿರೋಧಿ ನಿಲುವು ಎಂದೇ ಆಗುತ್ತದೆ. ಸಮಾಜದ ಸಾಮರಸ್ಯ ಮತ್ತು ಸಮಾನತೆಗಾಗಿ ಅಂದರೆ ಮುಂಚಲನೆಗಾಗಿ ಬದಲಾವಣೆ ಬೇಕೆಂದಿದ್ದರೆ ಸಮುದಾಯ ಪ್ರಜ್ಞೆ ಯಾವಾಗಲೂ ವ್ಯವಸ್ಥೆ ವಿರೋಧಿ ನಿಲುವನ್ನು ಜಾಗೃತವಾಗಿರಿಸಿಕೊಂಡಿರಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...