Homeಚಳವಳಿಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ...: ದೇವನೂರು ಮಹಾದೇವ ವಿಷಾಧ

ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ…: ದೇವನೂರು ಮಹಾದೇವ ವಿಷಾಧ

ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ?

- Advertisement -
- Advertisement -

ಮೈಸೂರು ಜಾಗೃತ ಪ್ರಜ್ಞೆ ನಿದ್ದೆ ಮಾಡುತ್ತಿಲ್ಲ ಎನ್ನುವುದಕ್ಕೆ ಸಾಕ್ಷಿ ಎನ್‌ಟಿಎಂ ಶಾಲೆ ಉಳಿವಿಗಾಗಿ ಸತತವಾಗಿ, ವೈವಿಧ್ಯಮಯವಾದ ಜನ ಸಮೂಹದಿಂದ ನಡೆಯುತ್ತಿರುವ ಈ ಆಂದೋಲನವೇ ಸಾಕ್ಷಿ. ಈ ಶಾಲೆಯ ನೆಲವನ್ನು ಮೈಸೂರು ಮಾತ್ರವಲ್ಲದೇ ಇಡೀ ಸಂವೇದನಾಶೀಲ ಭಾರತವೇ ಕಾಪಾಡಿಕೊಳ್ಳಬೇಕಾಗಿದೆ ಎಂದು ಹಿರಿಯ ಸಾಹಿತಿಗಳಾದ ದೇವನೂರು ಮಹಾದೇವರವರು ಅಭಿಪ್ರಾಯಪಟ್ಟಿದ್ದಾರೆ.

ನಗರದ ಎನ್‌ಟಿಎಂ ಶಾಲೆ ಉಳಿವಿಗಾಗಿ ಒಡನಾಡಿ ಸೇವಾ ಸಂಸ್ಥೆ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, “ಎನ್‌ಟಿಎಂ ಶಾಲೆಯ ಈ ನೆಲಕ್ಕೆ ಒಂದು ನೆನಪಿದೆ. ಒಂದು ಆಶಯವಿದೆ. ಒಂದು ಜೀವಚೈತನ್ಯವಿದೆ. ಇದಕ್ಕೆ ಬೆಲೆ ಕಟ್ಟಲಾಗದು. ಯಾಕೆಂದರೆ 140 ವರ್ಷಗಳ ಹಿಂದೆಯೇ ಭಾರತದ ಸಮಾಜದಲ್ಲಿ ಅಆಇಈ ಸೋಕದ ಹೆಣ್ಣು ಮಕ್ಕಳಿಗಾಗಿಯೇ ಒಂದು ಶಾಲೆ ಆರಂಭಿಸುವುದೆಂದರೆ, ಇದು ಸಾಮಾನ್ಯ ಸಂಗತಿಯಲ್ಲ, ನೆನಪಿಟ್ಟುಕೊಳ್ಳೋಣ- ಇದು ಭಾರತದಲ್ಲಿ ಪ್ರಪ್ರಥಮ. ಹಾಗಾಗಿಯೇ ಇದು ಮೈಸೂರಿನ ಹೆಮ್ಮೆ. ಈಗ ನಮ್ಮ ಮುಂದಿರುವ ಸವಾಲು – ಎನ್‌ಟಿಎಂ ಶಾಲೆಯ ನೆಲವನ್ನು, ಅದರ ಆಶಯವನ್ನು ಮೈಸೂರು ಮಾತ್ರವಲ್ಲ, ಇಡೀ ಕರ್ನಾಟಕ ಅಷ್ಟೇ ಏಕೆ ಸಮೃದ್ಧಶೀಲ ಭಾರತವೇ ಕಾಪಾಡಿಕೊಳ್ಳಬೇಕಿದೆ” ಎಂದರು.

ಇದನ್ನೂ ಓದಿ: ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

“ನನಗೆ ಇನ್ನೂ ಅರ್ಥವಾಗದೇ ಉಳಿದಿರುವುದು ಏನೆಂದರೆ ಅದೇ ರಾಮಕೃಷ್ಣ ಆಶ್ರಮದ ನಡವಳಿಕೆ. ಹೇಳಿಕೇಳಿ ಇವರು ವೈರಾಗ್ಯ ಮೂರ್ತಿಗಳು. ಇಂಥವರು ಇಂದು ಯಾವ ಒಂದು ರೂಢಿಯನ್ನು ಹುಟ್ಟು ಹಾಕುತ್ತಿದ್ದಾರೆ? ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ? ಯಾವ ಸ್ವಾಮಿಯನ್ನು, ಯಾವ ಯತಿಯನ್ನು, ಯಾವ ವಿರಕ್ತರನ್ನೂ, ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ. ನಾಳೆ ಆ ಸ್ಥಳಕ್ಕೆ ಬೆಲೆ ಬಂದಾಗ ಆ ಮಹಾತ್ಮರ ಅನುಯಾಯಿಗಳು ನಮ್ಮ ಸ್ವಾಮೀಜಿ ಈ ಸ್ಥಳಕ್ಕೆ ಬಂದಿದ್ರು, ಈ ಜಾಗ ಆಶ್ರಮಕ್ಕೆ ಬೇಕು ಎಂದು ಪಟ್ಟು ಹಿಡಿದರೆ? ನಾನು ಹೇಳುತ್ತಿರುವುದು ಅತಿ ಅನ್ನಿಸುತ್ತಿರಬಹುದು. ಆದರೆ ಈ ಭಾವನೆ ಜನಮಾನಸದಲ್ಲಿ ಒಂದು ಗಳಿಗೆಯಾದರೂ ಬಂದು ಹೋಗಬಾರದಲ್ಲವೆ? ವಿವೇಕಾನಂದರ ಬಗ್ಗೆಯಂತೂ ಬರದೇ ಕಾಡದು, ಆದರೆ ಇಂಥಹದೊಂದು ಶಂಕೆಯನ್ನು ರಾಮಕೃಷ್ಣಾಶ್ರಮದ ಹಾಲಿ ವೈರಾಗ್ಯ ಮೂರ್ತಿಗಳು ಹುಟ್ಟುಹಾಕಿಬಿಟ್ಟರು. ಇದಾಗಬಾರದಿತ್ತು. ತುಂಬಾ ನೊಂದು ಹೇಳುತ್ತಿರುವೆ” ಎಂದು ವಿಷಾಧ ವ್ಯಕ್ತಪಡಿಸಿದರು.

ಶಾಲೆ ಉಳಿಯಬೇಕೆಂಬ ಆಶಯದೊಂದಿಗೆ ಒಡನಾಡಿ ಮಕ್ಕಳು ಅಭಿನಯಿಸಿದ ಬೀದಿ ನಾಟಕ ಎಲ್ಲರ ಗಮನ ಸೆಳೆಯಿತು. ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರರಾದ ಪ.ಮಲ್ಲೇಶ್, ಪ್ರೊ.ಬಿ.ಕೆ ಸುಮಿತ್ರಾ ಬಾಯಿ, ಸ.ರ ಸುದರ್ಶನ್, ಅಭಿರುಚಿ ಗಣೇಶ್, ಡಿ.ಹೊಸಹಳ್ಳಿ ಶಿವು, ಸ್ಟ್ಯಾನ್ಲಿ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...