Homeಚಳವಳಿಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ...: ದೇವನೂರು ಮಹಾದೇವ ವಿಷಾಧ

ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ…: ದೇವನೂರು ಮಹಾದೇವ ವಿಷಾಧ

ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ?

- Advertisement -
- Advertisement -

ಮೈಸೂರು ಜಾಗೃತ ಪ್ರಜ್ಞೆ ನಿದ್ದೆ ಮಾಡುತ್ತಿಲ್ಲ ಎನ್ನುವುದಕ್ಕೆ ಸಾಕ್ಷಿ ಎನ್‌ಟಿಎಂ ಶಾಲೆ ಉಳಿವಿಗಾಗಿ ಸತತವಾಗಿ, ವೈವಿಧ್ಯಮಯವಾದ ಜನ ಸಮೂಹದಿಂದ ನಡೆಯುತ್ತಿರುವ ಈ ಆಂದೋಲನವೇ ಸಾಕ್ಷಿ. ಈ ಶಾಲೆಯ ನೆಲವನ್ನು ಮೈಸೂರು ಮಾತ್ರವಲ್ಲದೇ ಇಡೀ ಸಂವೇದನಾಶೀಲ ಭಾರತವೇ ಕಾಪಾಡಿಕೊಳ್ಳಬೇಕಾಗಿದೆ ಎಂದು ಹಿರಿಯ ಸಾಹಿತಿಗಳಾದ ದೇವನೂರು ಮಹಾದೇವರವರು ಅಭಿಪ್ರಾಯಪಟ್ಟಿದ್ದಾರೆ.

ನಗರದ ಎನ್‌ಟಿಎಂ ಶಾಲೆ ಉಳಿವಿಗಾಗಿ ಒಡನಾಡಿ ಸೇವಾ ಸಂಸ್ಥೆ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, “ಎನ್‌ಟಿಎಂ ಶಾಲೆಯ ಈ ನೆಲಕ್ಕೆ ಒಂದು ನೆನಪಿದೆ. ಒಂದು ಆಶಯವಿದೆ. ಒಂದು ಜೀವಚೈತನ್ಯವಿದೆ. ಇದಕ್ಕೆ ಬೆಲೆ ಕಟ್ಟಲಾಗದು. ಯಾಕೆಂದರೆ 140 ವರ್ಷಗಳ ಹಿಂದೆಯೇ ಭಾರತದ ಸಮಾಜದಲ್ಲಿ ಅಆಇಈ ಸೋಕದ ಹೆಣ್ಣು ಮಕ್ಕಳಿಗಾಗಿಯೇ ಒಂದು ಶಾಲೆ ಆರಂಭಿಸುವುದೆಂದರೆ, ಇದು ಸಾಮಾನ್ಯ ಸಂಗತಿಯಲ್ಲ, ನೆನಪಿಟ್ಟುಕೊಳ್ಳೋಣ- ಇದು ಭಾರತದಲ್ಲಿ ಪ್ರಪ್ರಥಮ. ಹಾಗಾಗಿಯೇ ಇದು ಮೈಸೂರಿನ ಹೆಮ್ಮೆ. ಈಗ ನಮ್ಮ ಮುಂದಿರುವ ಸವಾಲು – ಎನ್‌ಟಿಎಂ ಶಾಲೆಯ ನೆಲವನ್ನು, ಅದರ ಆಶಯವನ್ನು ಮೈಸೂರು ಮಾತ್ರವಲ್ಲ, ಇಡೀ ಕರ್ನಾಟಕ ಅಷ್ಟೇ ಏಕೆ ಸಮೃದ್ಧಶೀಲ ಭಾರತವೇ ಕಾಪಾಡಿಕೊಳ್ಳಬೇಕಿದೆ” ಎಂದರು.

ಇದನ್ನೂ ಓದಿ: ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

“ನನಗೆ ಇನ್ನೂ ಅರ್ಥವಾಗದೇ ಉಳಿದಿರುವುದು ಏನೆಂದರೆ ಅದೇ ರಾಮಕೃಷ್ಣ ಆಶ್ರಮದ ನಡವಳಿಕೆ. ಹೇಳಿಕೇಳಿ ಇವರು ವೈರಾಗ್ಯ ಮೂರ್ತಿಗಳು. ಇಂಥವರು ಇಂದು ಯಾವ ಒಂದು ರೂಢಿಯನ್ನು ಹುಟ್ಟು ಹಾಕುತ್ತಿದ್ದಾರೆ? ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ? ಯಾವ ಸ್ವಾಮಿಯನ್ನು, ಯಾವ ಯತಿಯನ್ನು, ಯಾವ ವಿರಕ್ತರನ್ನೂ, ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ. ನಾಳೆ ಆ ಸ್ಥಳಕ್ಕೆ ಬೆಲೆ ಬಂದಾಗ ಆ ಮಹಾತ್ಮರ ಅನುಯಾಯಿಗಳು ನಮ್ಮ ಸ್ವಾಮೀಜಿ ಈ ಸ್ಥಳಕ್ಕೆ ಬಂದಿದ್ರು, ಈ ಜಾಗ ಆಶ್ರಮಕ್ಕೆ ಬೇಕು ಎಂದು ಪಟ್ಟು ಹಿಡಿದರೆ? ನಾನು ಹೇಳುತ್ತಿರುವುದು ಅತಿ ಅನ್ನಿಸುತ್ತಿರಬಹುದು. ಆದರೆ ಈ ಭಾವನೆ ಜನಮಾನಸದಲ್ಲಿ ಒಂದು ಗಳಿಗೆಯಾದರೂ ಬಂದು ಹೋಗಬಾರದಲ್ಲವೆ? ವಿವೇಕಾನಂದರ ಬಗ್ಗೆಯಂತೂ ಬರದೇ ಕಾಡದು, ಆದರೆ ಇಂಥಹದೊಂದು ಶಂಕೆಯನ್ನು ರಾಮಕೃಷ್ಣಾಶ್ರಮದ ಹಾಲಿ ವೈರಾಗ್ಯ ಮೂರ್ತಿಗಳು ಹುಟ್ಟುಹಾಕಿಬಿಟ್ಟರು. ಇದಾಗಬಾರದಿತ್ತು. ತುಂಬಾ ನೊಂದು ಹೇಳುತ್ತಿರುವೆ” ಎಂದು ವಿಷಾಧ ವ್ಯಕ್ತಪಡಿಸಿದರು.

ಶಾಲೆ ಉಳಿಯಬೇಕೆಂಬ ಆಶಯದೊಂದಿಗೆ ಒಡನಾಡಿ ಮಕ್ಕಳು ಅಭಿನಯಿಸಿದ ಬೀದಿ ನಾಟಕ ಎಲ್ಲರ ಗಮನ ಸೆಳೆಯಿತು. ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರರಾದ ಪ.ಮಲ್ಲೇಶ್, ಪ್ರೊ.ಬಿ.ಕೆ ಸುಮಿತ್ರಾ ಬಾಯಿ, ಸ.ರ ಸುದರ್ಶನ್, ಅಭಿರುಚಿ ಗಣೇಶ್, ಡಿ.ಹೊಸಹಳ್ಳಿ ಶಿವು, ಸ್ಟ್ಯಾನ್ಲಿ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...