Homeಚಳವಳಿಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ...: ದೇವನೂರು ಮಹಾದೇವ ವಿಷಾಧ

ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ…: ದೇವನೂರು ಮಹಾದೇವ ವಿಷಾಧ

ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ?

- Advertisement -
- Advertisement -

ಮೈಸೂರು ಜಾಗೃತ ಪ್ರಜ್ಞೆ ನಿದ್ದೆ ಮಾಡುತ್ತಿಲ್ಲ ಎನ್ನುವುದಕ್ಕೆ ಸಾಕ್ಷಿ ಎನ್‌ಟಿಎಂ ಶಾಲೆ ಉಳಿವಿಗಾಗಿ ಸತತವಾಗಿ, ವೈವಿಧ್ಯಮಯವಾದ ಜನ ಸಮೂಹದಿಂದ ನಡೆಯುತ್ತಿರುವ ಈ ಆಂದೋಲನವೇ ಸಾಕ್ಷಿ. ಈ ಶಾಲೆಯ ನೆಲವನ್ನು ಮೈಸೂರು ಮಾತ್ರವಲ್ಲದೇ ಇಡೀ ಸಂವೇದನಾಶೀಲ ಭಾರತವೇ ಕಾಪಾಡಿಕೊಳ್ಳಬೇಕಾಗಿದೆ ಎಂದು ಹಿರಿಯ ಸಾಹಿತಿಗಳಾದ ದೇವನೂರು ಮಹಾದೇವರವರು ಅಭಿಪ್ರಾಯಪಟ್ಟಿದ್ದಾರೆ.

ನಗರದ ಎನ್‌ಟಿಎಂ ಶಾಲೆ ಉಳಿವಿಗಾಗಿ ಒಡನಾಡಿ ಸೇವಾ ಸಂಸ್ಥೆ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, “ಎನ್‌ಟಿಎಂ ಶಾಲೆಯ ಈ ನೆಲಕ್ಕೆ ಒಂದು ನೆನಪಿದೆ. ಒಂದು ಆಶಯವಿದೆ. ಒಂದು ಜೀವಚೈತನ್ಯವಿದೆ. ಇದಕ್ಕೆ ಬೆಲೆ ಕಟ್ಟಲಾಗದು. ಯಾಕೆಂದರೆ 140 ವರ್ಷಗಳ ಹಿಂದೆಯೇ ಭಾರತದ ಸಮಾಜದಲ್ಲಿ ಅಆಇಈ ಸೋಕದ ಹೆಣ್ಣು ಮಕ್ಕಳಿಗಾಗಿಯೇ ಒಂದು ಶಾಲೆ ಆರಂಭಿಸುವುದೆಂದರೆ, ಇದು ಸಾಮಾನ್ಯ ಸಂಗತಿಯಲ್ಲ, ನೆನಪಿಟ್ಟುಕೊಳ್ಳೋಣ- ಇದು ಭಾರತದಲ್ಲಿ ಪ್ರಪ್ರಥಮ. ಹಾಗಾಗಿಯೇ ಇದು ಮೈಸೂರಿನ ಹೆಮ್ಮೆ. ಈಗ ನಮ್ಮ ಮುಂದಿರುವ ಸವಾಲು – ಎನ್‌ಟಿಎಂ ಶಾಲೆಯ ನೆಲವನ್ನು, ಅದರ ಆಶಯವನ್ನು ಮೈಸೂರು ಮಾತ್ರವಲ್ಲ, ಇಡೀ ಕರ್ನಾಟಕ ಅಷ್ಟೇ ಏಕೆ ಸಮೃದ್ಧಶೀಲ ಭಾರತವೇ ಕಾಪಾಡಿಕೊಳ್ಳಬೇಕಿದೆ” ಎಂದರು.

ಇದನ್ನೂ ಓದಿ: ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

“ನನಗೆ ಇನ್ನೂ ಅರ್ಥವಾಗದೇ ಉಳಿದಿರುವುದು ಏನೆಂದರೆ ಅದೇ ರಾಮಕೃಷ್ಣ ಆಶ್ರಮದ ನಡವಳಿಕೆ. ಹೇಳಿಕೇಳಿ ಇವರು ವೈರಾಗ್ಯ ಮೂರ್ತಿಗಳು. ಇಂಥವರು ಇಂದು ಯಾವ ಒಂದು ರೂಢಿಯನ್ನು ಹುಟ್ಟು ಹಾಕುತ್ತಿದ್ದಾರೆ? ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ? ಯಾವ ಸ್ವಾಮಿಯನ್ನು, ಯಾವ ಯತಿಯನ್ನು, ಯಾವ ವಿರಕ್ತರನ್ನೂ, ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ. ನಾಳೆ ಆ ಸ್ಥಳಕ್ಕೆ ಬೆಲೆ ಬಂದಾಗ ಆ ಮಹಾತ್ಮರ ಅನುಯಾಯಿಗಳು ನಮ್ಮ ಸ್ವಾಮೀಜಿ ಈ ಸ್ಥಳಕ್ಕೆ ಬಂದಿದ್ರು, ಈ ಜಾಗ ಆಶ್ರಮಕ್ಕೆ ಬೇಕು ಎಂದು ಪಟ್ಟು ಹಿಡಿದರೆ? ನಾನು ಹೇಳುತ್ತಿರುವುದು ಅತಿ ಅನ್ನಿಸುತ್ತಿರಬಹುದು. ಆದರೆ ಈ ಭಾವನೆ ಜನಮಾನಸದಲ್ಲಿ ಒಂದು ಗಳಿಗೆಯಾದರೂ ಬಂದು ಹೋಗಬಾರದಲ್ಲವೆ? ವಿವೇಕಾನಂದರ ಬಗ್ಗೆಯಂತೂ ಬರದೇ ಕಾಡದು, ಆದರೆ ಇಂಥಹದೊಂದು ಶಂಕೆಯನ್ನು ರಾಮಕೃಷ್ಣಾಶ್ರಮದ ಹಾಲಿ ವೈರಾಗ್ಯ ಮೂರ್ತಿಗಳು ಹುಟ್ಟುಹಾಕಿಬಿಟ್ಟರು. ಇದಾಗಬಾರದಿತ್ತು. ತುಂಬಾ ನೊಂದು ಹೇಳುತ್ತಿರುವೆ” ಎಂದು ವಿಷಾಧ ವ್ಯಕ್ತಪಡಿಸಿದರು.

ಶಾಲೆ ಉಳಿಯಬೇಕೆಂಬ ಆಶಯದೊಂದಿಗೆ ಒಡನಾಡಿ ಮಕ್ಕಳು ಅಭಿನಯಿಸಿದ ಬೀದಿ ನಾಟಕ ಎಲ್ಲರ ಗಮನ ಸೆಳೆಯಿತು. ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರರಾದ ಪ.ಮಲ್ಲೇಶ್, ಪ್ರೊ.ಬಿ.ಕೆ ಸುಮಿತ್ರಾ ಬಾಯಿ, ಸ.ರ ಸುದರ್ಶನ್, ಅಭಿರುಚಿ ಗಣೇಶ್, ಡಿ.ಹೊಸಹಳ್ಳಿ ಶಿವು, ಸ್ಟ್ಯಾನ್ಲಿ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...