Homeಚಳವಳಿಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ...: ದೇವನೂರು ಮಹಾದೇವ ವಿಷಾಧ

ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ…: ದೇವನೂರು ಮಹಾದೇವ ವಿಷಾಧ

ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ?

- Advertisement -
- Advertisement -

ಮೈಸೂರು ಜಾಗೃತ ಪ್ರಜ್ಞೆ ನಿದ್ದೆ ಮಾಡುತ್ತಿಲ್ಲ ಎನ್ನುವುದಕ್ಕೆ ಸಾಕ್ಷಿ ಎನ್‌ಟಿಎಂ ಶಾಲೆ ಉಳಿವಿಗಾಗಿ ಸತತವಾಗಿ, ವೈವಿಧ್ಯಮಯವಾದ ಜನ ಸಮೂಹದಿಂದ ನಡೆಯುತ್ತಿರುವ ಈ ಆಂದೋಲನವೇ ಸಾಕ್ಷಿ. ಈ ಶಾಲೆಯ ನೆಲವನ್ನು ಮೈಸೂರು ಮಾತ್ರವಲ್ಲದೇ ಇಡೀ ಸಂವೇದನಾಶೀಲ ಭಾರತವೇ ಕಾಪಾಡಿಕೊಳ್ಳಬೇಕಾಗಿದೆ ಎಂದು ಹಿರಿಯ ಸಾಹಿತಿಗಳಾದ ದೇವನೂರು ಮಹಾದೇವರವರು ಅಭಿಪ್ರಾಯಪಟ್ಟಿದ್ದಾರೆ.

ನಗರದ ಎನ್‌ಟಿಎಂ ಶಾಲೆ ಉಳಿವಿಗಾಗಿ ಒಡನಾಡಿ ಸೇವಾ ಸಂಸ್ಥೆ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, “ಎನ್‌ಟಿಎಂ ಶಾಲೆಯ ಈ ನೆಲಕ್ಕೆ ಒಂದು ನೆನಪಿದೆ. ಒಂದು ಆಶಯವಿದೆ. ಒಂದು ಜೀವಚೈತನ್ಯವಿದೆ. ಇದಕ್ಕೆ ಬೆಲೆ ಕಟ್ಟಲಾಗದು. ಯಾಕೆಂದರೆ 140 ವರ್ಷಗಳ ಹಿಂದೆಯೇ ಭಾರತದ ಸಮಾಜದಲ್ಲಿ ಅಆಇಈ ಸೋಕದ ಹೆಣ್ಣು ಮಕ್ಕಳಿಗಾಗಿಯೇ ಒಂದು ಶಾಲೆ ಆರಂಭಿಸುವುದೆಂದರೆ, ಇದು ಸಾಮಾನ್ಯ ಸಂಗತಿಯಲ್ಲ, ನೆನಪಿಟ್ಟುಕೊಳ್ಳೋಣ- ಇದು ಭಾರತದಲ್ಲಿ ಪ್ರಪ್ರಥಮ. ಹಾಗಾಗಿಯೇ ಇದು ಮೈಸೂರಿನ ಹೆಮ್ಮೆ. ಈಗ ನಮ್ಮ ಮುಂದಿರುವ ಸವಾಲು – ಎನ್‌ಟಿಎಂ ಶಾಲೆಯ ನೆಲವನ್ನು, ಅದರ ಆಶಯವನ್ನು ಮೈಸೂರು ಮಾತ್ರವಲ್ಲ, ಇಡೀ ಕರ್ನಾಟಕ ಅಷ್ಟೇ ಏಕೆ ಸಮೃದ್ಧಶೀಲ ಭಾರತವೇ ಕಾಪಾಡಿಕೊಳ್ಳಬೇಕಿದೆ” ಎಂದರು.

ಇದನ್ನೂ ಓದಿ: ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

“ನನಗೆ ಇನ್ನೂ ಅರ್ಥವಾಗದೇ ಉಳಿದಿರುವುದು ಏನೆಂದರೆ ಅದೇ ರಾಮಕೃಷ್ಣ ಆಶ್ರಮದ ನಡವಳಿಕೆ. ಹೇಳಿಕೇಳಿ ಇವರು ವೈರಾಗ್ಯ ಮೂರ್ತಿಗಳು. ಇಂಥವರು ಇಂದು ಯಾವ ಒಂದು ರೂಢಿಯನ್ನು ಹುಟ್ಟು ಹಾಕುತ್ತಿದ್ದಾರೆ? ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ? ಯಾವ ಸ್ವಾಮಿಯನ್ನು, ಯಾವ ಯತಿಯನ್ನು, ಯಾವ ವಿರಕ್ತರನ್ನೂ, ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ. ನಾಳೆ ಆ ಸ್ಥಳಕ್ಕೆ ಬೆಲೆ ಬಂದಾಗ ಆ ಮಹಾತ್ಮರ ಅನುಯಾಯಿಗಳು ನಮ್ಮ ಸ್ವಾಮೀಜಿ ಈ ಸ್ಥಳಕ್ಕೆ ಬಂದಿದ್ರು, ಈ ಜಾಗ ಆಶ್ರಮಕ್ಕೆ ಬೇಕು ಎಂದು ಪಟ್ಟು ಹಿಡಿದರೆ? ನಾನು ಹೇಳುತ್ತಿರುವುದು ಅತಿ ಅನ್ನಿಸುತ್ತಿರಬಹುದು. ಆದರೆ ಈ ಭಾವನೆ ಜನಮಾನಸದಲ್ಲಿ ಒಂದು ಗಳಿಗೆಯಾದರೂ ಬಂದು ಹೋಗಬಾರದಲ್ಲವೆ? ವಿವೇಕಾನಂದರ ಬಗ್ಗೆಯಂತೂ ಬರದೇ ಕಾಡದು, ಆದರೆ ಇಂಥಹದೊಂದು ಶಂಕೆಯನ್ನು ರಾಮಕೃಷ್ಣಾಶ್ರಮದ ಹಾಲಿ ವೈರಾಗ್ಯ ಮೂರ್ತಿಗಳು ಹುಟ್ಟುಹಾಕಿಬಿಟ್ಟರು. ಇದಾಗಬಾರದಿತ್ತು. ತುಂಬಾ ನೊಂದು ಹೇಳುತ್ತಿರುವೆ” ಎಂದು ವಿಷಾಧ ವ್ಯಕ್ತಪಡಿಸಿದರು.

ಶಾಲೆ ಉಳಿಯಬೇಕೆಂಬ ಆಶಯದೊಂದಿಗೆ ಒಡನಾಡಿ ಮಕ್ಕಳು ಅಭಿನಯಿಸಿದ ಬೀದಿ ನಾಟಕ ಎಲ್ಲರ ಗಮನ ಸೆಳೆಯಿತು. ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರರಾದ ಪ.ಮಲ್ಲೇಶ್, ಪ್ರೊ.ಬಿ.ಕೆ ಸುಮಿತ್ರಾ ಬಾಯಿ, ಸ.ರ ಸುದರ್ಶನ್, ಅಭಿರುಚಿ ಗಣೇಶ್, ಡಿ.ಹೊಸಹಳ್ಳಿ ಶಿವು, ಸ್ಟ್ಯಾನ್ಲಿ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...