Homeಚಳವಳಿಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ...: ದೇವನೂರು ಮಹಾದೇವ ವಿಷಾಧ

ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ…: ದೇವನೂರು ಮಹಾದೇವ ವಿಷಾಧ

ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ?

- Advertisement -
- Advertisement -

ಮೈಸೂರು ಜಾಗೃತ ಪ್ರಜ್ಞೆ ನಿದ್ದೆ ಮಾಡುತ್ತಿಲ್ಲ ಎನ್ನುವುದಕ್ಕೆ ಸಾಕ್ಷಿ ಎನ್‌ಟಿಎಂ ಶಾಲೆ ಉಳಿವಿಗಾಗಿ ಸತತವಾಗಿ, ವೈವಿಧ್ಯಮಯವಾದ ಜನ ಸಮೂಹದಿಂದ ನಡೆಯುತ್ತಿರುವ ಈ ಆಂದೋಲನವೇ ಸಾಕ್ಷಿ. ಈ ಶಾಲೆಯ ನೆಲವನ್ನು ಮೈಸೂರು ಮಾತ್ರವಲ್ಲದೇ ಇಡೀ ಸಂವೇದನಾಶೀಲ ಭಾರತವೇ ಕಾಪಾಡಿಕೊಳ್ಳಬೇಕಾಗಿದೆ ಎಂದು ಹಿರಿಯ ಸಾಹಿತಿಗಳಾದ ದೇವನೂರು ಮಹಾದೇವರವರು ಅಭಿಪ್ರಾಯಪಟ್ಟಿದ್ದಾರೆ.

ನಗರದ ಎನ್‌ಟಿಎಂ ಶಾಲೆ ಉಳಿವಿಗಾಗಿ ಒಡನಾಡಿ ಸೇವಾ ಸಂಸ್ಥೆ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, “ಎನ್‌ಟಿಎಂ ಶಾಲೆಯ ಈ ನೆಲಕ್ಕೆ ಒಂದು ನೆನಪಿದೆ. ಒಂದು ಆಶಯವಿದೆ. ಒಂದು ಜೀವಚೈತನ್ಯವಿದೆ. ಇದಕ್ಕೆ ಬೆಲೆ ಕಟ್ಟಲಾಗದು. ಯಾಕೆಂದರೆ 140 ವರ್ಷಗಳ ಹಿಂದೆಯೇ ಭಾರತದ ಸಮಾಜದಲ್ಲಿ ಅಆಇಈ ಸೋಕದ ಹೆಣ್ಣು ಮಕ್ಕಳಿಗಾಗಿಯೇ ಒಂದು ಶಾಲೆ ಆರಂಭಿಸುವುದೆಂದರೆ, ಇದು ಸಾಮಾನ್ಯ ಸಂಗತಿಯಲ್ಲ, ನೆನಪಿಟ್ಟುಕೊಳ್ಳೋಣ- ಇದು ಭಾರತದಲ್ಲಿ ಪ್ರಪ್ರಥಮ. ಹಾಗಾಗಿಯೇ ಇದು ಮೈಸೂರಿನ ಹೆಮ್ಮೆ. ಈಗ ನಮ್ಮ ಮುಂದಿರುವ ಸವಾಲು – ಎನ್‌ಟಿಎಂ ಶಾಲೆಯ ನೆಲವನ್ನು, ಅದರ ಆಶಯವನ್ನು ಮೈಸೂರು ಮಾತ್ರವಲ್ಲ, ಇಡೀ ಕರ್ನಾಟಕ ಅಷ್ಟೇ ಏಕೆ ಸಮೃದ್ಧಶೀಲ ಭಾರತವೇ ಕಾಪಾಡಿಕೊಳ್ಳಬೇಕಿದೆ” ಎಂದರು.

ಇದನ್ನೂ ಓದಿ: ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

“ನನಗೆ ಇನ್ನೂ ಅರ್ಥವಾಗದೇ ಉಳಿದಿರುವುದು ಏನೆಂದರೆ ಅದೇ ರಾಮಕೃಷ್ಣ ಆಶ್ರಮದ ನಡವಳಿಕೆ. ಹೇಳಿಕೇಳಿ ಇವರು ವೈರಾಗ್ಯ ಮೂರ್ತಿಗಳು. ಇಂಥವರು ಇಂದು ಯಾವ ಒಂದು ರೂಢಿಯನ್ನು ಹುಟ್ಟು ಹಾಕುತ್ತಿದ್ದಾರೆ? ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ? ಯಾವ ಸ್ವಾಮಿಯನ್ನು, ಯಾವ ಯತಿಯನ್ನು, ಯಾವ ವಿರಕ್ತರನ್ನೂ, ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ. ನಾಳೆ ಆ ಸ್ಥಳಕ್ಕೆ ಬೆಲೆ ಬಂದಾಗ ಆ ಮಹಾತ್ಮರ ಅನುಯಾಯಿಗಳು ನಮ್ಮ ಸ್ವಾಮೀಜಿ ಈ ಸ್ಥಳಕ್ಕೆ ಬಂದಿದ್ರು, ಈ ಜಾಗ ಆಶ್ರಮಕ್ಕೆ ಬೇಕು ಎಂದು ಪಟ್ಟು ಹಿಡಿದರೆ? ನಾನು ಹೇಳುತ್ತಿರುವುದು ಅತಿ ಅನ್ನಿಸುತ್ತಿರಬಹುದು. ಆದರೆ ಈ ಭಾವನೆ ಜನಮಾನಸದಲ್ಲಿ ಒಂದು ಗಳಿಗೆಯಾದರೂ ಬಂದು ಹೋಗಬಾರದಲ್ಲವೆ? ವಿವೇಕಾನಂದರ ಬಗ್ಗೆಯಂತೂ ಬರದೇ ಕಾಡದು, ಆದರೆ ಇಂಥಹದೊಂದು ಶಂಕೆಯನ್ನು ರಾಮಕೃಷ್ಣಾಶ್ರಮದ ಹಾಲಿ ವೈರಾಗ್ಯ ಮೂರ್ತಿಗಳು ಹುಟ್ಟುಹಾಕಿಬಿಟ್ಟರು. ಇದಾಗಬಾರದಿತ್ತು. ತುಂಬಾ ನೊಂದು ಹೇಳುತ್ತಿರುವೆ” ಎಂದು ವಿಷಾಧ ವ್ಯಕ್ತಪಡಿಸಿದರು.

ಶಾಲೆ ಉಳಿಯಬೇಕೆಂಬ ಆಶಯದೊಂದಿಗೆ ಒಡನಾಡಿ ಮಕ್ಕಳು ಅಭಿನಯಿಸಿದ ಬೀದಿ ನಾಟಕ ಎಲ್ಲರ ಗಮನ ಸೆಳೆಯಿತು. ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರರಾದ ಪ.ಮಲ್ಲೇಶ್, ಪ್ರೊ.ಬಿ.ಕೆ ಸುಮಿತ್ರಾ ಬಾಯಿ, ಸ.ರ ಸುದರ್ಶನ್, ಅಭಿರುಚಿ ಗಣೇಶ್, ಡಿ.ಹೊಸಹಳ್ಳಿ ಶಿವು, ಸ್ಟ್ಯಾನ್ಲಿ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...