Homeಚಳವಳಿಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ...: ದೇವನೂರು ಮಹಾದೇವ ವಿಷಾಧ

ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ…: ದೇವನೂರು ಮಹಾದೇವ ವಿಷಾಧ

ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ?

- Advertisement -
- Advertisement -

ಮೈಸೂರು ಜಾಗೃತ ಪ್ರಜ್ಞೆ ನಿದ್ದೆ ಮಾಡುತ್ತಿಲ್ಲ ಎನ್ನುವುದಕ್ಕೆ ಸಾಕ್ಷಿ ಎನ್‌ಟಿಎಂ ಶಾಲೆ ಉಳಿವಿಗಾಗಿ ಸತತವಾಗಿ, ವೈವಿಧ್ಯಮಯವಾದ ಜನ ಸಮೂಹದಿಂದ ನಡೆಯುತ್ತಿರುವ ಈ ಆಂದೋಲನವೇ ಸಾಕ್ಷಿ. ಈ ಶಾಲೆಯ ನೆಲವನ್ನು ಮೈಸೂರು ಮಾತ್ರವಲ್ಲದೇ ಇಡೀ ಸಂವೇದನಾಶೀಲ ಭಾರತವೇ ಕಾಪಾಡಿಕೊಳ್ಳಬೇಕಾಗಿದೆ ಎಂದು ಹಿರಿಯ ಸಾಹಿತಿಗಳಾದ ದೇವನೂರು ಮಹಾದೇವರವರು ಅಭಿಪ್ರಾಯಪಟ್ಟಿದ್ದಾರೆ.

ನಗರದ ಎನ್‌ಟಿಎಂ ಶಾಲೆ ಉಳಿವಿಗಾಗಿ ಒಡನಾಡಿ ಸೇವಾ ಸಂಸ್ಥೆ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, “ಎನ್‌ಟಿಎಂ ಶಾಲೆಯ ಈ ನೆಲಕ್ಕೆ ಒಂದು ನೆನಪಿದೆ. ಒಂದು ಆಶಯವಿದೆ. ಒಂದು ಜೀವಚೈತನ್ಯವಿದೆ. ಇದಕ್ಕೆ ಬೆಲೆ ಕಟ್ಟಲಾಗದು. ಯಾಕೆಂದರೆ 140 ವರ್ಷಗಳ ಹಿಂದೆಯೇ ಭಾರತದ ಸಮಾಜದಲ್ಲಿ ಅಆಇಈ ಸೋಕದ ಹೆಣ್ಣು ಮಕ್ಕಳಿಗಾಗಿಯೇ ಒಂದು ಶಾಲೆ ಆರಂಭಿಸುವುದೆಂದರೆ, ಇದು ಸಾಮಾನ್ಯ ಸಂಗತಿಯಲ್ಲ, ನೆನಪಿಟ್ಟುಕೊಳ್ಳೋಣ- ಇದು ಭಾರತದಲ್ಲಿ ಪ್ರಪ್ರಥಮ. ಹಾಗಾಗಿಯೇ ಇದು ಮೈಸೂರಿನ ಹೆಮ್ಮೆ. ಈಗ ನಮ್ಮ ಮುಂದಿರುವ ಸವಾಲು – ಎನ್‌ಟಿಎಂ ಶಾಲೆಯ ನೆಲವನ್ನು, ಅದರ ಆಶಯವನ್ನು ಮೈಸೂರು ಮಾತ್ರವಲ್ಲ, ಇಡೀ ಕರ್ನಾಟಕ ಅಷ್ಟೇ ಏಕೆ ಸಮೃದ್ಧಶೀಲ ಭಾರತವೇ ಕಾಪಾಡಿಕೊಳ್ಳಬೇಕಿದೆ” ಎಂದರು.

ಇದನ್ನೂ ಓದಿ: ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

“ನನಗೆ ಇನ್ನೂ ಅರ್ಥವಾಗದೇ ಉಳಿದಿರುವುದು ಏನೆಂದರೆ ಅದೇ ರಾಮಕೃಷ್ಣ ಆಶ್ರಮದ ನಡವಳಿಕೆ. ಹೇಳಿಕೇಳಿ ಇವರು ವೈರಾಗ್ಯ ಮೂರ್ತಿಗಳು. ಇಂಥವರು ಇಂದು ಯಾವ ಒಂದು ರೂಢಿಯನ್ನು ಹುಟ್ಟು ಹಾಕುತ್ತಿದ್ದಾರೆ? ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ? ಯಾವ ಸ್ವಾಮಿಯನ್ನು, ಯಾವ ಯತಿಯನ್ನು, ಯಾವ ವಿರಕ್ತರನ್ನೂ, ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ. ನಾಳೆ ಆ ಸ್ಥಳಕ್ಕೆ ಬೆಲೆ ಬಂದಾಗ ಆ ಮಹಾತ್ಮರ ಅನುಯಾಯಿಗಳು ನಮ್ಮ ಸ್ವಾಮೀಜಿ ಈ ಸ್ಥಳಕ್ಕೆ ಬಂದಿದ್ರು, ಈ ಜಾಗ ಆಶ್ರಮಕ್ಕೆ ಬೇಕು ಎಂದು ಪಟ್ಟು ಹಿಡಿದರೆ? ನಾನು ಹೇಳುತ್ತಿರುವುದು ಅತಿ ಅನ್ನಿಸುತ್ತಿರಬಹುದು. ಆದರೆ ಈ ಭಾವನೆ ಜನಮಾನಸದಲ್ಲಿ ಒಂದು ಗಳಿಗೆಯಾದರೂ ಬಂದು ಹೋಗಬಾರದಲ್ಲವೆ? ವಿವೇಕಾನಂದರ ಬಗ್ಗೆಯಂತೂ ಬರದೇ ಕಾಡದು, ಆದರೆ ಇಂಥಹದೊಂದು ಶಂಕೆಯನ್ನು ರಾಮಕೃಷ್ಣಾಶ್ರಮದ ಹಾಲಿ ವೈರಾಗ್ಯ ಮೂರ್ತಿಗಳು ಹುಟ್ಟುಹಾಕಿಬಿಟ್ಟರು. ಇದಾಗಬಾರದಿತ್ತು. ತುಂಬಾ ನೊಂದು ಹೇಳುತ್ತಿರುವೆ” ಎಂದು ವಿಷಾಧ ವ್ಯಕ್ತಪಡಿಸಿದರು.

ಶಾಲೆ ಉಳಿಯಬೇಕೆಂಬ ಆಶಯದೊಂದಿಗೆ ಒಡನಾಡಿ ಮಕ್ಕಳು ಅಭಿನಯಿಸಿದ ಬೀದಿ ನಾಟಕ ಎಲ್ಲರ ಗಮನ ಸೆಳೆಯಿತು. ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರರಾದ ಪ.ಮಲ್ಲೇಶ್, ಪ್ರೊ.ಬಿ.ಕೆ ಸುಮಿತ್ರಾ ಬಾಯಿ, ಸ.ರ ಸುದರ್ಶನ್, ಅಭಿರುಚಿ ಗಣೇಶ್, ಡಿ.ಹೊಸಹಳ್ಳಿ ಶಿವು, ಸ್ಟ್ಯಾನ್ಲಿ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...