Homeಚಳವಳಿಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ...: ದೇವನೂರು ಮಹಾದೇವ ವಿಷಾಧ

ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ…: ದೇವನೂರು ಮಹಾದೇವ ವಿಷಾಧ

ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ?

- Advertisement -
- Advertisement -

ಮೈಸೂರು ಜಾಗೃತ ಪ್ರಜ್ಞೆ ನಿದ್ದೆ ಮಾಡುತ್ತಿಲ್ಲ ಎನ್ನುವುದಕ್ಕೆ ಸಾಕ್ಷಿ ಎನ್‌ಟಿಎಂ ಶಾಲೆ ಉಳಿವಿಗಾಗಿ ಸತತವಾಗಿ, ವೈವಿಧ್ಯಮಯವಾದ ಜನ ಸಮೂಹದಿಂದ ನಡೆಯುತ್ತಿರುವ ಈ ಆಂದೋಲನವೇ ಸಾಕ್ಷಿ. ಈ ಶಾಲೆಯ ನೆಲವನ್ನು ಮೈಸೂರು ಮಾತ್ರವಲ್ಲದೇ ಇಡೀ ಸಂವೇದನಾಶೀಲ ಭಾರತವೇ ಕಾಪಾಡಿಕೊಳ್ಳಬೇಕಾಗಿದೆ ಎಂದು ಹಿರಿಯ ಸಾಹಿತಿಗಳಾದ ದೇವನೂರು ಮಹಾದೇವರವರು ಅಭಿಪ್ರಾಯಪಟ್ಟಿದ್ದಾರೆ.

ನಗರದ ಎನ್‌ಟಿಎಂ ಶಾಲೆ ಉಳಿವಿಗಾಗಿ ಒಡನಾಡಿ ಸೇವಾ ಸಂಸ್ಥೆ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, “ಎನ್‌ಟಿಎಂ ಶಾಲೆಯ ಈ ನೆಲಕ್ಕೆ ಒಂದು ನೆನಪಿದೆ. ಒಂದು ಆಶಯವಿದೆ. ಒಂದು ಜೀವಚೈತನ್ಯವಿದೆ. ಇದಕ್ಕೆ ಬೆಲೆ ಕಟ್ಟಲಾಗದು. ಯಾಕೆಂದರೆ 140 ವರ್ಷಗಳ ಹಿಂದೆಯೇ ಭಾರತದ ಸಮಾಜದಲ್ಲಿ ಅಆಇಈ ಸೋಕದ ಹೆಣ್ಣು ಮಕ್ಕಳಿಗಾಗಿಯೇ ಒಂದು ಶಾಲೆ ಆರಂಭಿಸುವುದೆಂದರೆ, ಇದು ಸಾಮಾನ್ಯ ಸಂಗತಿಯಲ್ಲ, ನೆನಪಿಟ್ಟುಕೊಳ್ಳೋಣ- ಇದು ಭಾರತದಲ್ಲಿ ಪ್ರಪ್ರಥಮ. ಹಾಗಾಗಿಯೇ ಇದು ಮೈಸೂರಿನ ಹೆಮ್ಮೆ. ಈಗ ನಮ್ಮ ಮುಂದಿರುವ ಸವಾಲು – ಎನ್‌ಟಿಎಂ ಶಾಲೆಯ ನೆಲವನ್ನು, ಅದರ ಆಶಯವನ್ನು ಮೈಸೂರು ಮಾತ್ರವಲ್ಲ, ಇಡೀ ಕರ್ನಾಟಕ ಅಷ್ಟೇ ಏಕೆ ಸಮೃದ್ಧಶೀಲ ಭಾರತವೇ ಕಾಪಾಡಿಕೊಳ್ಳಬೇಕಿದೆ” ಎಂದರು.

ಇದನ್ನೂ ಓದಿ: ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

“ನನಗೆ ಇನ್ನೂ ಅರ್ಥವಾಗದೇ ಉಳಿದಿರುವುದು ಏನೆಂದರೆ ಅದೇ ರಾಮಕೃಷ್ಣ ಆಶ್ರಮದ ನಡವಳಿಕೆ. ಹೇಳಿಕೇಳಿ ಇವರು ವೈರಾಗ್ಯ ಮೂರ್ತಿಗಳು. ಇಂಥವರು ಇಂದು ಯಾವ ಒಂದು ರೂಢಿಯನ್ನು ಹುಟ್ಟು ಹಾಕುತ್ತಿದ್ದಾರೆ? ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ? ಯಾವ ಸ್ವಾಮಿಯನ್ನು, ಯಾವ ಯತಿಯನ್ನು, ಯಾವ ವಿರಕ್ತರನ್ನೂ, ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ. ನಾಳೆ ಆ ಸ್ಥಳಕ್ಕೆ ಬೆಲೆ ಬಂದಾಗ ಆ ಮಹಾತ್ಮರ ಅನುಯಾಯಿಗಳು ನಮ್ಮ ಸ್ವಾಮೀಜಿ ಈ ಸ್ಥಳಕ್ಕೆ ಬಂದಿದ್ರು, ಈ ಜಾಗ ಆಶ್ರಮಕ್ಕೆ ಬೇಕು ಎಂದು ಪಟ್ಟು ಹಿಡಿದರೆ? ನಾನು ಹೇಳುತ್ತಿರುವುದು ಅತಿ ಅನ್ನಿಸುತ್ತಿರಬಹುದು. ಆದರೆ ಈ ಭಾವನೆ ಜನಮಾನಸದಲ್ಲಿ ಒಂದು ಗಳಿಗೆಯಾದರೂ ಬಂದು ಹೋಗಬಾರದಲ್ಲವೆ? ವಿವೇಕಾನಂದರ ಬಗ್ಗೆಯಂತೂ ಬರದೇ ಕಾಡದು, ಆದರೆ ಇಂಥಹದೊಂದು ಶಂಕೆಯನ್ನು ರಾಮಕೃಷ್ಣಾಶ್ರಮದ ಹಾಲಿ ವೈರಾಗ್ಯ ಮೂರ್ತಿಗಳು ಹುಟ್ಟುಹಾಕಿಬಿಟ್ಟರು. ಇದಾಗಬಾರದಿತ್ತು. ತುಂಬಾ ನೊಂದು ಹೇಳುತ್ತಿರುವೆ” ಎಂದು ವಿಷಾಧ ವ್ಯಕ್ತಪಡಿಸಿದರು.

ಶಾಲೆ ಉಳಿಯಬೇಕೆಂಬ ಆಶಯದೊಂದಿಗೆ ಒಡನಾಡಿ ಮಕ್ಕಳು ಅಭಿನಯಿಸಿದ ಬೀದಿ ನಾಟಕ ಎಲ್ಲರ ಗಮನ ಸೆಳೆಯಿತು. ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರರಾದ ಪ.ಮಲ್ಲೇಶ್, ಪ್ರೊ.ಬಿ.ಕೆ ಸುಮಿತ್ರಾ ಬಾಯಿ, ಸ.ರ ಸುದರ್ಶನ್, ಅಭಿರುಚಿ ಗಣೇಶ್, ಡಿ.ಹೊಸಹಳ್ಳಿ ಶಿವು, ಸ್ಟ್ಯಾನ್ಲಿ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...