Homeಚಳವಳಿಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ...: ದೇವನೂರು ಮಹಾದೇವ ವಿಷಾಧ

ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ…: ದೇವನೂರು ಮಹಾದೇವ ವಿಷಾಧ

ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ?

- Advertisement -
- Advertisement -

ಮೈಸೂರು ಜಾಗೃತ ಪ್ರಜ್ಞೆ ನಿದ್ದೆ ಮಾಡುತ್ತಿಲ್ಲ ಎನ್ನುವುದಕ್ಕೆ ಸಾಕ್ಷಿ ಎನ್‌ಟಿಎಂ ಶಾಲೆ ಉಳಿವಿಗಾಗಿ ಸತತವಾಗಿ, ವೈವಿಧ್ಯಮಯವಾದ ಜನ ಸಮೂಹದಿಂದ ನಡೆಯುತ್ತಿರುವ ಈ ಆಂದೋಲನವೇ ಸಾಕ್ಷಿ. ಈ ಶಾಲೆಯ ನೆಲವನ್ನು ಮೈಸೂರು ಮಾತ್ರವಲ್ಲದೇ ಇಡೀ ಸಂವೇದನಾಶೀಲ ಭಾರತವೇ ಕಾಪಾಡಿಕೊಳ್ಳಬೇಕಾಗಿದೆ ಎಂದು ಹಿರಿಯ ಸಾಹಿತಿಗಳಾದ ದೇವನೂರು ಮಹಾದೇವರವರು ಅಭಿಪ್ರಾಯಪಟ್ಟಿದ್ದಾರೆ.

ನಗರದ ಎನ್‌ಟಿಎಂ ಶಾಲೆ ಉಳಿವಿಗಾಗಿ ಒಡನಾಡಿ ಸೇವಾ ಸಂಸ್ಥೆ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, “ಎನ್‌ಟಿಎಂ ಶಾಲೆಯ ಈ ನೆಲಕ್ಕೆ ಒಂದು ನೆನಪಿದೆ. ಒಂದು ಆಶಯವಿದೆ. ಒಂದು ಜೀವಚೈತನ್ಯವಿದೆ. ಇದಕ್ಕೆ ಬೆಲೆ ಕಟ್ಟಲಾಗದು. ಯಾಕೆಂದರೆ 140 ವರ್ಷಗಳ ಹಿಂದೆಯೇ ಭಾರತದ ಸಮಾಜದಲ್ಲಿ ಅಆಇಈ ಸೋಕದ ಹೆಣ್ಣು ಮಕ್ಕಳಿಗಾಗಿಯೇ ಒಂದು ಶಾಲೆ ಆರಂಭಿಸುವುದೆಂದರೆ, ಇದು ಸಾಮಾನ್ಯ ಸಂಗತಿಯಲ್ಲ, ನೆನಪಿಟ್ಟುಕೊಳ್ಳೋಣ- ಇದು ಭಾರತದಲ್ಲಿ ಪ್ರಪ್ರಥಮ. ಹಾಗಾಗಿಯೇ ಇದು ಮೈಸೂರಿನ ಹೆಮ್ಮೆ. ಈಗ ನಮ್ಮ ಮುಂದಿರುವ ಸವಾಲು – ಎನ್‌ಟಿಎಂ ಶಾಲೆಯ ನೆಲವನ್ನು, ಅದರ ಆಶಯವನ್ನು ಮೈಸೂರು ಮಾತ್ರವಲ್ಲ, ಇಡೀ ಕರ್ನಾಟಕ ಅಷ್ಟೇ ಏಕೆ ಸಮೃದ್ಧಶೀಲ ಭಾರತವೇ ಕಾಪಾಡಿಕೊಳ್ಳಬೇಕಿದೆ” ಎಂದರು.

ಇದನ್ನೂ ಓದಿ: ಕನ್ನಡ ಶಾಲೆ ಕೆಡವಿ ಸ್ಮಾರಕ ನಿರ್ಮಾಣ: ತೀವ್ರಗೊಂಡ ಮೈಸೂರು NTM ಶಾಲೆ ಉಳಿಸಿ ಹೋರಾಟ

“ನನಗೆ ಇನ್ನೂ ಅರ್ಥವಾಗದೇ ಉಳಿದಿರುವುದು ಏನೆಂದರೆ ಅದೇ ರಾಮಕೃಷ್ಣ ಆಶ್ರಮದ ನಡವಳಿಕೆ. ಹೇಳಿಕೇಳಿ ಇವರು ವೈರಾಗ್ಯ ಮೂರ್ತಿಗಳು. ಇಂಥವರು ಇಂದು ಯಾವ ಒಂದು ರೂಢಿಯನ್ನು ಹುಟ್ಟು ಹಾಕುತ್ತಿದ್ದಾರೆ? ಎನ್‌ಟಿಎಂ ಶಾಲಾ ಆವರಣಕ್ಕೆ ವಿವೇಕಾನಂದರು ಬಂದಿದ್ದರು, ಹಾಗಾಗಿ ಆ ಜಾಗ ಆಶ್ರಮಕ್ಕೆ ಬೇಕು ಎಂದು ವಾದ ಮಾಡುವುದಾದರೆ, ಇದು ಎಂಥಹ ಸಂದೇಶ ನೀಡುತ್ತದೆ? ಯಾವ ಸ್ವಾಮಿಯನ್ನು, ಯಾವ ಯತಿಯನ್ನು, ಯಾವ ವಿರಕ್ತರನ್ನೂ, ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ. ನಾಳೆ ಆ ಸ್ಥಳಕ್ಕೆ ಬೆಲೆ ಬಂದಾಗ ಆ ಮಹಾತ್ಮರ ಅನುಯಾಯಿಗಳು ನಮ್ಮ ಸ್ವಾಮೀಜಿ ಈ ಸ್ಥಳಕ್ಕೆ ಬಂದಿದ್ರು, ಈ ಜಾಗ ಆಶ್ರಮಕ್ಕೆ ಬೇಕು ಎಂದು ಪಟ್ಟು ಹಿಡಿದರೆ? ನಾನು ಹೇಳುತ್ತಿರುವುದು ಅತಿ ಅನ್ನಿಸುತ್ತಿರಬಹುದು. ಆದರೆ ಈ ಭಾವನೆ ಜನಮಾನಸದಲ್ಲಿ ಒಂದು ಗಳಿಗೆಯಾದರೂ ಬಂದು ಹೋಗಬಾರದಲ್ಲವೆ? ವಿವೇಕಾನಂದರ ಬಗ್ಗೆಯಂತೂ ಬರದೇ ಕಾಡದು, ಆದರೆ ಇಂಥಹದೊಂದು ಶಂಕೆಯನ್ನು ರಾಮಕೃಷ್ಣಾಶ್ರಮದ ಹಾಲಿ ವೈರಾಗ್ಯ ಮೂರ್ತಿಗಳು ಹುಟ್ಟುಹಾಕಿಬಿಟ್ಟರು. ಇದಾಗಬಾರದಿತ್ತು. ತುಂಬಾ ನೊಂದು ಹೇಳುತ್ತಿರುವೆ” ಎಂದು ವಿಷಾಧ ವ್ಯಕ್ತಪಡಿಸಿದರು.

ಶಾಲೆ ಉಳಿಯಬೇಕೆಂಬ ಆಶಯದೊಂದಿಗೆ ಒಡನಾಡಿ ಮಕ್ಕಳು ಅಭಿನಯಿಸಿದ ಬೀದಿ ನಾಟಕ ಎಲ್ಲರ ಗಮನ ಸೆಳೆಯಿತು. ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರರಾದ ಪ.ಮಲ್ಲೇಶ್, ಪ್ರೊ.ಬಿ.ಕೆ ಸುಮಿತ್ರಾ ಬಾಯಿ, ಸ.ರ ಸುದರ್ಶನ್, ಅಭಿರುಚಿ ಗಣೇಶ್, ಡಿ.ಹೊಸಹಳ್ಳಿ ಶಿವು, ಸ್ಟ್ಯಾನ್ಲಿ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...