HomeUncategorizedಪೋಲಿ ಕಥೆಗೆ ಬಹುಮಾನ ಬಂದ ಕತೆ: ದೇವನೂರು ಮಹಾದೇವರ ಮಾತಲ್ಲಿ ಕೇಳಿ...

ಪೋಲಿ ಕಥೆಗೆ ಬಹುಮಾನ ಬಂದ ಕತೆ: ದೇವನೂರು ಮಹಾದೇವರ ಮಾತಲ್ಲಿ ಕೇಳಿ…

ಪ್ರಜಾವಾಣಿಯ ದೀಪಾವಳಿ ಕಥಾಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡುತ್ತ ಮೈಸೂರಿನಲ್ಲಿ ದೇವನೂರು ಆಡಿದ ಮಾತುಗಳು...

- Advertisement -
- Advertisement -

ಪ್ರಜಾವಾಣಿ ದೀಪಾವಳಿ ಸಂಚಿಕೆಯ ಕಥಾ ಕವನ ಸ್ಪರ್ಧಾ ವಿಜೇತರಿಗೆ ನಾನೀಗ ಬಹುಮಾನ ವಿತರಣೆ ಮಾಡಬೇಕಾಗಿ ಬಂದಿದೆ. ಇಲ್ಲೊಂದು ಗುಟ್ಟು ಹೇಳುವೆ. ಆದರೆ ಒಂದು ಕಂಡೀಷನ್ನು. ಕೇಳಿದ ಮೇಲೆ ಬಹುಮಾನಿತರಾದ ನೀವು- ಎಂಥವನ ಕೈಯಲ್ಲಿ ಪ್ರೈಜ್ ಪಡೆಯಬೇಕಾಗಿ ಬಂತು ಎಂದು ಪರಿತಪಿಸಬಾರದು! ಆ ಗುಟ್ಟು ಏನೆಂದರೆ- ನಾನೂ ಈ ಹಿಂದೆ ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆಗೆ ಎರಡು ಸಲ ಕತೆ ಕಳಿಸಿದ್ದೆ. ಪ್ರೈಜ್ ಇರಲಿ, ಮೆಚ್ಚಿಗೇನೂ ಬರಲಿಲ್ಲ. ಆದರೆ ಒಂದು ಕತೆ ಸ್ವಲ್ಪ ದಿನಗಳಾದ ಮೇಲೆ ವಾರದ ಪುರವಣಿಯಲ್ಲಿ ಪ್ರಕಟವಾಯ್ತು. ತಲೆಬರಹವೇನೋ- ‘ವೃತ್ತದಾಚೆ’ ಎಂದು ಇರಬೇಕು. ಆ ಕತೆ ಹೆಚ್ಚೂಕಮ್ಮಿ ದ್ಯಾವನೂರು ಸಂಕಲನದಲ್ಲಿನ ‘ಒಂದು ದಹನದ ಕತೆ’ ಇದೆಯಲ್ಲಾ, ಅಂಥದು.

ಅದಿರಲಿ, ಕನ್ನಡದ ಕಥಾ ಕ್ಷೇತ್ರದಲ್ಲಿನ ಸೂಕ್ಷ್ಮಜ್ಞತೆ ಮತ್ತು ಸಂವೇದನಾಶೀಲತೆಯ ಸ್ತರ ಹೆಚ್ಚಾಗುವಂತಾಗಲು ಪ್ರಜಾವಾಣಿಯ ಕಥಾಸ್ಪರ್ಧೆಯ ಪಾತ್ರ ದೊಡ್ಡದು ಎಂದೆನಿಸುತ್ತದೆ. ಇದಕ್ಕೊಂದು ಉದಾಹರಣೆ ನೀಡುವೆ- ಪ್ರಜಾವಾಣಿ ಕಥಾಸ್ಪರ್ಧೆಗೆ ಸಾಮಾನ್ಯವಾಗಿ ನೂರಾರು ಕತೆಗಳು ಬರುತ್ತವೆ. 1ನೇ ರೌಂಡ್‌ನಲ್ಲಿ ಉಪಸಂಪಾದಕರೊಬ್ಬರು, ಪರಿಗಣಿಸಬಹುದಾದ ಕಥೆಗಳನ್ನು ಆಯ್ಕೆ ಮಾಡಿ ಸಂಪಾದಕರಿಗೆ ನೀಡುವುದು ಮಾಮೂಲಿ. ಯಾವ ಕತೆಗಳನ್ನು ಪರಿಗಣಿಸುವುದಿಲ್ಲವೊ ಅದಕ್ಕೆ ಒಂದು ವಾಕ್ಯದ ನಿರಾಕರಣೆಗೆ ಕಾರಣ ನೀಡಿರುತ್ತಾರೆ. ಹೀಗೊಂದು ಸಲ, ಉಪಸಂಪಾದಕರು ‘ಪೋಲಿ ಕತೆ’ ಎಂದು ಕಾಮೆಂಟ್ ಮಾಡಿ ಕತೆಯೊಂದನ್ನು ರಿಜೆಕ್ಟ್ ಮಾಡಿರುವುದು ಸಂಪಾದಕರ ಕಣ್ಣಿಗೆ ಬೀಳುತ್ತದೆ. ಏನೋ ಪೋಲಿ ಕತೆ, ಓದೇ ಬಿಡುವ ಎಂಬ ಕುತೂಹಲಕ್ಕೋ ಏನೋ ಸಂಪಾದಕರು ಆ ಕತೆ ತರಿಸಿಕೊಂಡು ಓದುತ್ತಾರೆ. ಓದಿ ಬೆರಗಾಗುತ್ತಾರೆ. ಅದೊಂದು ಅತ್ಯುತ್ತಮ ಕತೆಯಾಗಿರುತ್ತದೆ. ಎಂಥಾ ಅನ್ಯಾಯವಾಗಿ ಬಿಡ್ತು ಎಂದು ಹಣೆ ಚಚ್ಚಿಕೊಳ್ಳುತ್ತಾರೆ. ಯಾಕೆಂದರೆ ಪರಿಗಣಿಸಲ್ಪಟ್ಟ ಕತೆಗಳನ್ನು ಆಯ್ಕೆ ಸಮಿತಿಗೆ ಆಗಲೇ ಕಳಿಸಿ ಆಗಿಬಿಟ್ಟಿರುತ್ತದೆ. ಆದರೂ ಆ ಕತೆಯನ್ನು ಆಯ್ಕೆ ಸಮಿತಿಯ ಗಮನಕ್ಕೆ ಕಳಿಸಿಕೊಡುತ್ತಾರೆ.

ಆ ‘ಪೋಲಿ’ ಕತೆಗೆ ಬಹುಮಾನ ಬರುತ್ತದೆ. ಕತೆ ಹೆಸರು- ಹಾಲು ಕುಡಿದ ಹುಡುಗಾ, ಬರೆದವರು- ಅಬ್ದುಲ್ ರಷೀದ್. ಈ ಕತೆ ಹೇಗಿದೆ ಅಂದರೆ- ಒಂದು ಬೆಂಕಿಪೊಟ್ಟಣದಲ್ಲಿ ಇಡಬಹುದಾಗಿದ್ದಂತಹ ಸೂಕ್ಷ್ಮ ನೇಯ್ಗೆಯ ಢಾಕಾದ ನವಿರು ಮಸ್ಲಿನ್ ಸೀರೆಯಂತೆ. ಮುಷ್ಟಿಗೆ ಸಿಗದ ಈ ಕತೆಯನ್ನು ಗುರುತಿಸುವುದು ಸಾಮಾನ್ಯ ವಿಷಯವಲ್ಲ. ಆದರೆ ಸೂಕ್ಷ್ಮಜ್ಞತೆ, ಸಂವೇದನಾಶೀಲತೆ ಇಲ್ಲದ ವಾತಾವರಣ? ಅದು ಕಣ್ಣು ಕಾಣದ ಕುರುಡು ಮತ್ತು ಸಂವೇದನಾಹೀನ ಕುಷ್ಠರೋಗದ ಆಳ್ವಿಕೆಯಲ್ಲಿ ಪ್ರಜೆಗಳೂ ಕಣ್ಣು ಕಾಣದ ಕುರುಡು ಮತ್ತು ಸಂವೇದನಾಹೀನ ಕುಷ್ಠರೋಗಿಗಳು ತುಂಬಿರುವಂತೆ. ಇದಕ್ಕೊಂದು ಉದಾಹರಣೆ ಬೇಕೆ? ನವೆಂಬರ್ 11 ರಂದು ವಾರ್ತಾಭಾರತಿ ಪತ್ರಿಕೆಯಲ್ಲಿ ಒಂದು ಸಣ್ಣ ಸುದ್ದಿ ಒಳಪುಟದಲ್ಲಾದರೂ ಪ್ರಕಟವಾಗಿದೆ. ಅದು ತುಷಾರ್ ಗಾಂಧಿ ಹೇಳಿಕೆ. ಅವರು ಹೇಳುತ್ತಾರೆ: “ಗಾಂಧಿ ಕೊಲೆ ಪ್ರಕರಣವನ್ನು ಇಂದು ಸರ್ವೋಚ್ಛ ನ್ಯಾಯಾಲಯವು ಮರು ವಿಚಾರಣೆ ನಡೆಸಿದ್ದರೆ `ಗೋಡ್ಸೆ ಕೊಲೆಗಾರ, ಆದರೆ ದೇಶಭಕ್ತ’ ಎಂದು ತೀರ್ಪು ಬರುತ್ತಿತ್ತು” ಎನ್ನುತ್ತಾರೆ. ಮುಂದೆ, “ಈ ತೀರ್ಪಿನಿಂದ ನ್ಯಾಯಾಂಗ ವ್ಯವಸ್ಥೆಗೆ ‘ನಂಬಿಕೆಯ ಅಪರಾಧ (crime of belief)’ ಎಂಬ ಹೊಸ ಕೆಟಗರಿ ಸೇರ್ಪಡೆಯಾದಂತಾಯಿತು” ಎನ್ನುತ್ತಾರೆ. ಜೊತೆಗೆ, “ತೀರ್ಪನ್ನು ಒಪ್ಪದಿದ್ದರೂ ಅದನ್ನು ಸ್ವೀಕರಿಸಬೇಕು ಹಾಗೂ ಅದಕ್ಕೆ ವಿಧೇಯರಾಗಿರಬೇಕು” ಎನ್ನುತ್ತಾರೆ. ಕನಿಷ್ಠ ನಮ್ಮ ಮಾಧ್ಯಮಗಳಾದರೂ ಸಂವೇದನಾಶೀಲತೆ ಉಳಿಸಿಕೊಂಡಿದ್ದಲ್ಲಿ ಇದು ಪತ್ರಿಕೆಗಳಲ್ಲಿ ಮುಖಪುಟದ ಸುದ್ದಿಯಾಗುತ್ತಿತ್ತು. ದೃಶ್ಯಮಾಧ್ಯಮಗಳಲ್ಲಿ ಗಂಭೀರ ಚರ್ಚೆ ವಿಷಯವಾಗುತ್ತಿತ್ತು.

ಇಂತಹ ವಿಷಮ ವಾತಾವರಣದಲ್ಲಿ ಒಂದು ಕುತೂಹಲ ನನಗೆ. ಆ ನವಿರು ಕತೆ ಬರೆದ ರಷೀದ್ ಈ ಕಾಲದ ಇಪ್ಪತ್ತು ವರ್ಷದ ಯುವಕನಾಗಿದ್ದರೆ, ಇಂದಿನ ವಾಟ್ಸಪ್, ಫೇಸ್‌ಬುಕ್ ಗೀಳಿನ ನಡುವೆ ಅಂಥ ಕತೆ ಬರೆಯುತ್ತಿದ್ದನೆ? ರಷೀದ್‌ನಂತಹ ಪ್ರತಿಭಾವಂತರು ಈ ಕಾಲದಲ್ಲಿ ವಾಟ್ಸಪ್, ಫೇಸ್‌ಬುಕ್‌ನಲ್ಲಿ ಮುಳುಗೇಳುತ್ತ ಕಳೆದು ಹೋಗುತ್ತಿರಬಹುದೆ? ನಾನು ಹೇಳುತ್ತಿರುವುದು ಇರಬಹುದು ಅಥವಾ ಇಲ್ಲದೇನೂ ಇರಬಹುದು. ಇಂದಿನ ವಾಟ್ಸಪ್, ಫೇಸ್‌ಬುಕ್‌ಗಳ ಕಡೆ ಕಣ್ಣಾಡಿಸಿದರೆ ಬಹುತೇಕ ಸ್ವಯ ಇಲ್ಲದ ಬಯಲು ಶೌಚಾಲಯದಂತೆ ಕಂಡುಬರುತ್ತದೆ. ಇದು ಸ್ನಾನಗೃಹವಾಗಿದ್ದರೆ ಚೆನ್ನಾಗಿತ್ತು ಅನಿಸುತ್ತದೆ. ಇದನ್ನು ಯಾಕೆ ಹೇಳಿದೆನೆಂದರೆ- ಸೂಕ್ಷ್ಮತೆ, ಸಂವೇದನಾಶೀಲತೆಯ ಅಭಿರುಚಿ ಉಂಟಾಗಲು ತನ್ನ ಕಾಣ್ಕೆ ನೀಡುತ್ತಿರುವ ಪ್ರಜಾವಾಣಿಗೆ ಒಂದು ಸಾಧ್ಯತೆಯ ಬಗ್ಗೆ ಗಮನ ಸೆಳೆಯುವುದಕ್ಕಾಗಿ. ಏನೆಂದರೆ, ಹೇಗೂ ವೆಬ್-ಪೋರ್ಟಲ್ ಇದೆ. ಅದರಲ್ಲಿ ವಾಟ್ಸಪ್, ಫೇಸ್‌ಬುಕ್‌ನಲ್ಲಿ ಪ್ರಕಟವಾಗುವ ಕಥೆ, ಕವನ, ಚುಟುಕು, ಚಿತ್ರ, ಪ್ರಬಂಧ, ವರದಿ, ಇತ್ಯಾದಿಗಳಲ್ಲಿ ಉತ್ತಮ ಗುಣಮಟ್ಟದವುಗಳನ್ನು ಆಯ್ಕೆ ಮಾಡಿ ಪ್ರಕಟಿಸುವುದಾದರೆ ಇದರಿಂದಾಗಿ ವಾಟ್ಸಪ್, ಫೇಸ್‌ಬುಕ್‌ಗಳ ಅಭಿರುಚಿ ಹೆಚ್ಚುವಂತಾಗಬಹುದೆ? ಈ ಆಸೆ ನನ್ನದು.

ಯಾಕೆಂದರೆ, ಇಂದು ನಮ್ಮ ಯುವಜನತೆ ಅಭಿವ್ಯಕ್ತಗೊಳ್ಳಬೇಕಾಗಿದೆ. ಸಮುದಾಯದ ಧ್ವನಿಯಾಗಬೇಕಾಗಿದೆ. ಭಾರತದಲ್ಲಿ ಸುಮಾರು 137 ಕೋಟಿ ಬಾಯಿಗಳಿವೆ. 137 ಕೋಟಿ ಹೊಟ್ಟೆಗಳು ಇವೆ. 274 ಕೋಟಿ ಕೈಗಳಿವೆ. ಈ ಕೈಗಳಿಗೆ ಕೆಲಸ ಸಿಗುವಂತಾಗಿ ಅವುಗಳ ಹೊಟ್ಟೆ ತುಂಬಿಸಬೇಕಾಗಿದೆ. ಇಂದು ಉದ್ಯೋಗ ಕುಸಿತವಾಗುತ್ತ ಜನರು ಉದುರಿ ಹೋಗುತ್ತಿದ್ದಾರೆ. ಇಂಥಲ್ಲಿ ಜೀವಗಳನ್ನು ಉಳಿಸುವ ಯೋಜನೆ ರೂಪಿಸಬೇಕಾಗಿದೆ. ಆದರೆ ಹೊಟ್ಟೆಗೆ ಹೊಡೆಯುವುದನ್ನೆ ಆಳ್ವಿಕೆಯು ಅಭಿವೃದ್ಧಿ ಎಂದುಕೊಂಡಿದೆ. ಇದಕ್ಕೆ ಉದಾಹರಣೆ- ಇಂದು ಇಲ್ಲಿ ಚರ್ಚಿತವಾಗುತ್ತಿರುವ ಮುಕ್ತ ವ್ಯಾಪಾರ ಒಪ್ಪಂದ- ಇಂಥವು. ಎಷ್ಟಂತ ಹೇಳುವುದು? ಭಾರತದಲ್ಲೀಗ ಆಳ್ವಿಕೆ ಮತ್ತು ಪೂತನಿ (crony) ಬಂಡವಾಳಶಾಹಿ ಜೊತೆಗೂಡಿಕೊಂಡು ಉದ್ಯೋಗನಾಶ ಯಜ್ಞ ಮಾಡುತ್ತಿವೆ. ಉದ್ಯೋಗದ ಸ್ಥಿತಿಗತಿ ಸ್ವ್ವಾತಂತ್ರ್ಯ ಪೂರ್ವ ಕಾಲದ ದಯಾನೀಯ ಸ್ಥಿತಿಗೆ ತಲುಪಲು ಧಾವಿಸುತ್ತಿದೆ. ಜನ ಸಮುದಾಯಕ್ಕೆ ಬೀದಿಗೆ ಬೀಳುವುದರ ಅರಿವು ಬಾರದಿರಲೆಂದು ಆ ಅಮಾಯಕರಿಗೆ ಭಾವನಾತ್ಮಕ ಅಫೀಮು ಕುಡಿಸಲಾಗುತ್ತಿದೆ. ಟಿಪ್ಪು ಅಂತಾರೆ, ಅಂಬೇಡ್ಕರ್ ಸಂವಿಧಾನ ಬರೆದಿಲ್ಲ ಅನ್ನುತ್ತಾರೆ, ಗೋಮಾತೆ ಅನ್ನುತ್ತಾರೆ, ಮೈಸೂರು ಪಾಕು ನಮ್ಮದು ಅನ್ನುತ್ತಾರೆ, ಪಾಕಿಸ್ತಾನದ ಭೀತಿ ತೋರಿಸುತ್ತಾರೆ, ದೇವರಿಗೆ ಹೆಡಮುರಿ ಕಟ್ಟಿ ಬೀದಿಗೆ ಎಸೆಯುತ್ತಾರೆ. ಹೀಗೆ ಹೀಗೆ ನೂರೆಂಟು ಭಾವಯಮಪಾಶಗಳನ್ನು ಎಸೆಯುತ್ತಾರೆ. ಮಾದಕಲೋಕ ಸೃಷ್ಟಿಸುತ್ತಾರೆ. ಇಂದು ವ್ಯಾಘ್ರನ ಗೋಮುಖವನ್ನು ಬಯಲಿಗೆ ಎಳೆಯಬೇಕಾಗಿದೆ. ಸರ್ಕಾರಕ್ಕೆ ನಾವು ಕೇಳಬೇಕಾಗಿದೆ- “ಒಂದು ಗ್ಯಾರಂಟಿ ಉದ್ಯೋಗ ನೀಡು, ಆಮೇಲೆ ಮಾತಾಡು” ಎಂದು ಮೊದಲು ಕೇಳಿ ಆಮೇಲೆ ಉಳಿದುದೆಲ್ಲ.

ಕೊನೆಗೊಂದು ಮಾತು. ಆಸೆಯೇ ದುಃಖಕ್ಕೆ ಕಾರಣ ಎಂಬ ಪ್ರಸಿದ್ಧ ಮಾತಿದೆ. ಇದು ಬುದ್ಧನ ನುಡಿಗಳು. ಪಾಳಿಯಲ್ಲಿ ಆಸೆ ಎನ್ನುವುದಕ್ಕೆ ‘ತನ್ಹಾ’ ಎಂದಿದೆ. ಸಂಸ್ಕೃತದಲ್ಲಿ ‘ತೃಷ್ಣೆ’ ಎಂದಿದೆ. ಇಂಗ್ಲೀಷ್‌ನಲ್ಲಿ craving ಎಂದಿದೆ. ಇದನ್ನು ನೋಡಿದಾಗ ‘ಆಸೆ’ ಪದ ಸಾಲದು ಅನ್ನಿಸುತ್ತದೆ. ಸಿಗರೇಟ್ ಇಲ್ಲದಿದ್ದಾಗ ನಾನು ತಹತಹಿಸುವುದು ಆಸೆ ಅಲ್ಲ, ಅದು craving. ಇದಕ್ಕೆ ಹತ್ತಿರದ ಪದ ಹುಡುಕುತ್ತ ಕಂಡದ್ದು- ‘ದಾಹ’. ‘ದಾಹ’ ಅಂದರೆ ‘ದಹಿಸುವುದು’ ಎಂದೂ ಅರ್ಥವಂತೆ. ಸದ್ಯಕ್ಕೆ ದಾಹವೇ ದುಃಖಕ್ಕೆ ಕಾರಣ- ಎಂದಿಟ್ಟುಕೊಳ್ಳಬಹುದೇನೊ.

ಇಂದು ಭೂಮಿಯೇ ಮನುಷ್ಯನ ದಾಹಕ್ಕೆ ಸಿಲುಕಿ ದಹಿಸುತ್ತಿದೆ. ಭೂಮಿ ಬಾಯಾರಿಕೆಯನ್ನು ನೀಗಿಸಬಹುದು, ದಾಹವನ್ನಲ್ಲ. ಇಂದಿನ ಮನುಷ್ಯನ ದಾಹದಿಂದಾಗಿ ತಾಪಮಾನ ಹೆಚ್ಚಾಗಿ- ಹಿಮಗಡ್ಡೆ ಕರಗುತ್ತಿವೆ. ಸಮುದ್ರದ ಮಟ್ಟ ಏರುತ್ತಿದೆ. ಸೈಕ್ಲೋನ್‌ಗಳು ಅಪ್ಪಳಿಸುತಿವೆ. ಹುಚ್ಚು ಮಳೆ ಬರುತ್ತಿದೆ. ಭೂಮಿ ಕುಸಿಯುತ್ತಿದೆ. ಎಲ್ಲವೂ ಕೊಚ್ಚಿಹೋಗುತ್ತಿದೆ. ವಿಪರ್ಯಾಸವೆಂದರೆ ಒಂದು ಕಡೆ ಪ್ರವಾಹ. ಅದರ ಪಕ್ಕದಲ್ಲೆ ನೀರಿಲ್ಲದ ಬರ. ಬದುಕುವುದೆಂತು?

ಪುಣ್ಯಕ್ಕೆ, ಭೂಮಿತಾಯಿಯೇ ಸ್ವೀಡನ್‌ನ ಹದಿನಾರು ವರ್ಷದ ಬಾಲೆ ಗ್ರೆಟಾ ಥನ್ಬರ್ಗ್‌ಳ ಮೈಮೇಲೆ ಬಂದು ನುಡಿಸಿದಂತೆ ಗ್ರೆಟಾ ನುಡಿಯುತ್ತಿದ್ದಾಳೆ. ಈ ಅನಾಹುತಗಳಿಗೆಲ್ಲಾ ಕಾರಣರಾದ ಜಗತ್ತಿನ ನಾಯಕರಿಗೆ “how dare you?” ಎಂದು ಕೇಳುತ್ತಿದ್ದಾಳೆ. ಹೀಗೆ ಕೇಳಬಹುದಾದ ಬಾಲಕ-ಬಾಲಕಿಯರು ಇಲ್ಲೂ ಇರಬಹುದು. ಎಲ್ಲೆಲ್ಲೂ ಇರಬಹುದು. ಅವರೀಗ ಮಾತಾಡಬೇಕಾಗಿದೆ. ಯಾಕೆಂದರೆ ಅವರು ಉಳಿಯಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...