HomeUncategorizedಪೋಲಿ ಕಥೆಗೆ ಬಹುಮಾನ ಬಂದ ಕತೆ: ದೇವನೂರು ಮಹಾದೇವರ ಮಾತಲ್ಲಿ ಕೇಳಿ...

ಪೋಲಿ ಕಥೆಗೆ ಬಹುಮಾನ ಬಂದ ಕತೆ: ದೇವನೂರು ಮಹಾದೇವರ ಮಾತಲ್ಲಿ ಕೇಳಿ…

ಪ್ರಜಾವಾಣಿಯ ದೀಪಾವಳಿ ಕಥಾಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡುತ್ತ ಮೈಸೂರಿನಲ್ಲಿ ದೇವನೂರು ಆಡಿದ ಮಾತುಗಳು...

- Advertisement -
- Advertisement -

ಪ್ರಜಾವಾಣಿ ದೀಪಾವಳಿ ಸಂಚಿಕೆಯ ಕಥಾ ಕವನ ಸ್ಪರ್ಧಾ ವಿಜೇತರಿಗೆ ನಾನೀಗ ಬಹುಮಾನ ವಿತರಣೆ ಮಾಡಬೇಕಾಗಿ ಬಂದಿದೆ. ಇಲ್ಲೊಂದು ಗುಟ್ಟು ಹೇಳುವೆ. ಆದರೆ ಒಂದು ಕಂಡೀಷನ್ನು. ಕೇಳಿದ ಮೇಲೆ ಬಹುಮಾನಿತರಾದ ನೀವು- ಎಂಥವನ ಕೈಯಲ್ಲಿ ಪ್ರೈಜ್ ಪಡೆಯಬೇಕಾಗಿ ಬಂತು ಎಂದು ಪರಿತಪಿಸಬಾರದು! ಆ ಗುಟ್ಟು ಏನೆಂದರೆ- ನಾನೂ ಈ ಹಿಂದೆ ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆಗೆ ಎರಡು ಸಲ ಕತೆ ಕಳಿಸಿದ್ದೆ. ಪ್ರೈಜ್ ಇರಲಿ, ಮೆಚ್ಚಿಗೇನೂ ಬರಲಿಲ್ಲ. ಆದರೆ ಒಂದು ಕತೆ ಸ್ವಲ್ಪ ದಿನಗಳಾದ ಮೇಲೆ ವಾರದ ಪುರವಣಿಯಲ್ಲಿ ಪ್ರಕಟವಾಯ್ತು. ತಲೆಬರಹವೇನೋ- ‘ವೃತ್ತದಾಚೆ’ ಎಂದು ಇರಬೇಕು. ಆ ಕತೆ ಹೆಚ್ಚೂಕಮ್ಮಿ ದ್ಯಾವನೂರು ಸಂಕಲನದಲ್ಲಿನ ‘ಒಂದು ದಹನದ ಕತೆ’ ಇದೆಯಲ್ಲಾ, ಅಂಥದು.

ಅದಿರಲಿ, ಕನ್ನಡದ ಕಥಾ ಕ್ಷೇತ್ರದಲ್ಲಿನ ಸೂಕ್ಷ್ಮಜ್ಞತೆ ಮತ್ತು ಸಂವೇದನಾಶೀಲತೆಯ ಸ್ತರ ಹೆಚ್ಚಾಗುವಂತಾಗಲು ಪ್ರಜಾವಾಣಿಯ ಕಥಾಸ್ಪರ್ಧೆಯ ಪಾತ್ರ ದೊಡ್ಡದು ಎಂದೆನಿಸುತ್ತದೆ. ಇದಕ್ಕೊಂದು ಉದಾಹರಣೆ ನೀಡುವೆ- ಪ್ರಜಾವಾಣಿ ಕಥಾಸ್ಪರ್ಧೆಗೆ ಸಾಮಾನ್ಯವಾಗಿ ನೂರಾರು ಕತೆಗಳು ಬರುತ್ತವೆ. 1ನೇ ರೌಂಡ್‌ನಲ್ಲಿ ಉಪಸಂಪಾದಕರೊಬ್ಬರು, ಪರಿಗಣಿಸಬಹುದಾದ ಕಥೆಗಳನ್ನು ಆಯ್ಕೆ ಮಾಡಿ ಸಂಪಾದಕರಿಗೆ ನೀಡುವುದು ಮಾಮೂಲಿ. ಯಾವ ಕತೆಗಳನ್ನು ಪರಿಗಣಿಸುವುದಿಲ್ಲವೊ ಅದಕ್ಕೆ ಒಂದು ವಾಕ್ಯದ ನಿರಾಕರಣೆಗೆ ಕಾರಣ ನೀಡಿರುತ್ತಾರೆ. ಹೀಗೊಂದು ಸಲ, ಉಪಸಂಪಾದಕರು ‘ಪೋಲಿ ಕತೆ’ ಎಂದು ಕಾಮೆಂಟ್ ಮಾಡಿ ಕತೆಯೊಂದನ್ನು ರಿಜೆಕ್ಟ್ ಮಾಡಿರುವುದು ಸಂಪಾದಕರ ಕಣ್ಣಿಗೆ ಬೀಳುತ್ತದೆ. ಏನೋ ಪೋಲಿ ಕತೆ, ಓದೇ ಬಿಡುವ ಎಂಬ ಕುತೂಹಲಕ್ಕೋ ಏನೋ ಸಂಪಾದಕರು ಆ ಕತೆ ತರಿಸಿಕೊಂಡು ಓದುತ್ತಾರೆ. ಓದಿ ಬೆರಗಾಗುತ್ತಾರೆ. ಅದೊಂದು ಅತ್ಯುತ್ತಮ ಕತೆಯಾಗಿರುತ್ತದೆ. ಎಂಥಾ ಅನ್ಯಾಯವಾಗಿ ಬಿಡ್ತು ಎಂದು ಹಣೆ ಚಚ್ಚಿಕೊಳ್ಳುತ್ತಾರೆ. ಯಾಕೆಂದರೆ ಪರಿಗಣಿಸಲ್ಪಟ್ಟ ಕತೆಗಳನ್ನು ಆಯ್ಕೆ ಸಮಿತಿಗೆ ಆಗಲೇ ಕಳಿಸಿ ಆಗಿಬಿಟ್ಟಿರುತ್ತದೆ. ಆದರೂ ಆ ಕತೆಯನ್ನು ಆಯ್ಕೆ ಸಮಿತಿಯ ಗಮನಕ್ಕೆ ಕಳಿಸಿಕೊಡುತ್ತಾರೆ.

ಆ ‘ಪೋಲಿ’ ಕತೆಗೆ ಬಹುಮಾನ ಬರುತ್ತದೆ. ಕತೆ ಹೆಸರು- ಹಾಲು ಕುಡಿದ ಹುಡುಗಾ, ಬರೆದವರು- ಅಬ್ದುಲ್ ರಷೀದ್. ಈ ಕತೆ ಹೇಗಿದೆ ಅಂದರೆ- ಒಂದು ಬೆಂಕಿಪೊಟ್ಟಣದಲ್ಲಿ ಇಡಬಹುದಾಗಿದ್ದಂತಹ ಸೂಕ್ಷ್ಮ ನೇಯ್ಗೆಯ ಢಾಕಾದ ನವಿರು ಮಸ್ಲಿನ್ ಸೀರೆಯಂತೆ. ಮುಷ್ಟಿಗೆ ಸಿಗದ ಈ ಕತೆಯನ್ನು ಗುರುತಿಸುವುದು ಸಾಮಾನ್ಯ ವಿಷಯವಲ್ಲ. ಆದರೆ ಸೂಕ್ಷ್ಮಜ್ಞತೆ, ಸಂವೇದನಾಶೀಲತೆ ಇಲ್ಲದ ವಾತಾವರಣ? ಅದು ಕಣ್ಣು ಕಾಣದ ಕುರುಡು ಮತ್ತು ಸಂವೇದನಾಹೀನ ಕುಷ್ಠರೋಗದ ಆಳ್ವಿಕೆಯಲ್ಲಿ ಪ್ರಜೆಗಳೂ ಕಣ್ಣು ಕಾಣದ ಕುರುಡು ಮತ್ತು ಸಂವೇದನಾಹೀನ ಕುಷ್ಠರೋಗಿಗಳು ತುಂಬಿರುವಂತೆ. ಇದಕ್ಕೊಂದು ಉದಾಹರಣೆ ಬೇಕೆ? ನವೆಂಬರ್ 11 ರಂದು ವಾರ್ತಾಭಾರತಿ ಪತ್ರಿಕೆಯಲ್ಲಿ ಒಂದು ಸಣ್ಣ ಸುದ್ದಿ ಒಳಪುಟದಲ್ಲಾದರೂ ಪ್ರಕಟವಾಗಿದೆ. ಅದು ತುಷಾರ್ ಗಾಂಧಿ ಹೇಳಿಕೆ. ಅವರು ಹೇಳುತ್ತಾರೆ: “ಗಾಂಧಿ ಕೊಲೆ ಪ್ರಕರಣವನ್ನು ಇಂದು ಸರ್ವೋಚ್ಛ ನ್ಯಾಯಾಲಯವು ಮರು ವಿಚಾರಣೆ ನಡೆಸಿದ್ದರೆ `ಗೋಡ್ಸೆ ಕೊಲೆಗಾರ, ಆದರೆ ದೇಶಭಕ್ತ’ ಎಂದು ತೀರ್ಪು ಬರುತ್ತಿತ್ತು” ಎನ್ನುತ್ತಾರೆ. ಮುಂದೆ, “ಈ ತೀರ್ಪಿನಿಂದ ನ್ಯಾಯಾಂಗ ವ್ಯವಸ್ಥೆಗೆ ‘ನಂಬಿಕೆಯ ಅಪರಾಧ (crime of belief)’ ಎಂಬ ಹೊಸ ಕೆಟಗರಿ ಸೇರ್ಪಡೆಯಾದಂತಾಯಿತು” ಎನ್ನುತ್ತಾರೆ. ಜೊತೆಗೆ, “ತೀರ್ಪನ್ನು ಒಪ್ಪದಿದ್ದರೂ ಅದನ್ನು ಸ್ವೀಕರಿಸಬೇಕು ಹಾಗೂ ಅದಕ್ಕೆ ವಿಧೇಯರಾಗಿರಬೇಕು” ಎನ್ನುತ್ತಾರೆ. ಕನಿಷ್ಠ ನಮ್ಮ ಮಾಧ್ಯಮಗಳಾದರೂ ಸಂವೇದನಾಶೀಲತೆ ಉಳಿಸಿಕೊಂಡಿದ್ದಲ್ಲಿ ಇದು ಪತ್ರಿಕೆಗಳಲ್ಲಿ ಮುಖಪುಟದ ಸುದ್ದಿಯಾಗುತ್ತಿತ್ತು. ದೃಶ್ಯಮಾಧ್ಯಮಗಳಲ್ಲಿ ಗಂಭೀರ ಚರ್ಚೆ ವಿಷಯವಾಗುತ್ತಿತ್ತು.

ಇಂತಹ ವಿಷಮ ವಾತಾವರಣದಲ್ಲಿ ಒಂದು ಕುತೂಹಲ ನನಗೆ. ಆ ನವಿರು ಕತೆ ಬರೆದ ರಷೀದ್ ಈ ಕಾಲದ ಇಪ್ಪತ್ತು ವರ್ಷದ ಯುವಕನಾಗಿದ್ದರೆ, ಇಂದಿನ ವಾಟ್ಸಪ್, ಫೇಸ್‌ಬುಕ್ ಗೀಳಿನ ನಡುವೆ ಅಂಥ ಕತೆ ಬರೆಯುತ್ತಿದ್ದನೆ? ರಷೀದ್‌ನಂತಹ ಪ್ರತಿಭಾವಂತರು ಈ ಕಾಲದಲ್ಲಿ ವಾಟ್ಸಪ್, ಫೇಸ್‌ಬುಕ್‌ನಲ್ಲಿ ಮುಳುಗೇಳುತ್ತ ಕಳೆದು ಹೋಗುತ್ತಿರಬಹುದೆ? ನಾನು ಹೇಳುತ್ತಿರುವುದು ಇರಬಹುದು ಅಥವಾ ಇಲ್ಲದೇನೂ ಇರಬಹುದು. ಇಂದಿನ ವಾಟ್ಸಪ್, ಫೇಸ್‌ಬುಕ್‌ಗಳ ಕಡೆ ಕಣ್ಣಾಡಿಸಿದರೆ ಬಹುತೇಕ ಸ್ವಯ ಇಲ್ಲದ ಬಯಲು ಶೌಚಾಲಯದಂತೆ ಕಂಡುಬರುತ್ತದೆ. ಇದು ಸ್ನಾನಗೃಹವಾಗಿದ್ದರೆ ಚೆನ್ನಾಗಿತ್ತು ಅನಿಸುತ್ತದೆ. ಇದನ್ನು ಯಾಕೆ ಹೇಳಿದೆನೆಂದರೆ- ಸೂಕ್ಷ್ಮತೆ, ಸಂವೇದನಾಶೀಲತೆಯ ಅಭಿರುಚಿ ಉಂಟಾಗಲು ತನ್ನ ಕಾಣ್ಕೆ ನೀಡುತ್ತಿರುವ ಪ್ರಜಾವಾಣಿಗೆ ಒಂದು ಸಾಧ್ಯತೆಯ ಬಗ್ಗೆ ಗಮನ ಸೆಳೆಯುವುದಕ್ಕಾಗಿ. ಏನೆಂದರೆ, ಹೇಗೂ ವೆಬ್-ಪೋರ್ಟಲ್ ಇದೆ. ಅದರಲ್ಲಿ ವಾಟ್ಸಪ್, ಫೇಸ್‌ಬುಕ್‌ನಲ್ಲಿ ಪ್ರಕಟವಾಗುವ ಕಥೆ, ಕವನ, ಚುಟುಕು, ಚಿತ್ರ, ಪ್ರಬಂಧ, ವರದಿ, ಇತ್ಯಾದಿಗಳಲ್ಲಿ ಉತ್ತಮ ಗುಣಮಟ್ಟದವುಗಳನ್ನು ಆಯ್ಕೆ ಮಾಡಿ ಪ್ರಕಟಿಸುವುದಾದರೆ ಇದರಿಂದಾಗಿ ವಾಟ್ಸಪ್, ಫೇಸ್‌ಬುಕ್‌ಗಳ ಅಭಿರುಚಿ ಹೆಚ್ಚುವಂತಾಗಬಹುದೆ? ಈ ಆಸೆ ನನ್ನದು.

ಯಾಕೆಂದರೆ, ಇಂದು ನಮ್ಮ ಯುವಜನತೆ ಅಭಿವ್ಯಕ್ತಗೊಳ್ಳಬೇಕಾಗಿದೆ. ಸಮುದಾಯದ ಧ್ವನಿಯಾಗಬೇಕಾಗಿದೆ. ಭಾರತದಲ್ಲಿ ಸುಮಾರು 137 ಕೋಟಿ ಬಾಯಿಗಳಿವೆ. 137 ಕೋಟಿ ಹೊಟ್ಟೆಗಳು ಇವೆ. 274 ಕೋಟಿ ಕೈಗಳಿವೆ. ಈ ಕೈಗಳಿಗೆ ಕೆಲಸ ಸಿಗುವಂತಾಗಿ ಅವುಗಳ ಹೊಟ್ಟೆ ತುಂಬಿಸಬೇಕಾಗಿದೆ. ಇಂದು ಉದ್ಯೋಗ ಕುಸಿತವಾಗುತ್ತ ಜನರು ಉದುರಿ ಹೋಗುತ್ತಿದ್ದಾರೆ. ಇಂಥಲ್ಲಿ ಜೀವಗಳನ್ನು ಉಳಿಸುವ ಯೋಜನೆ ರೂಪಿಸಬೇಕಾಗಿದೆ. ಆದರೆ ಹೊಟ್ಟೆಗೆ ಹೊಡೆಯುವುದನ್ನೆ ಆಳ್ವಿಕೆಯು ಅಭಿವೃದ್ಧಿ ಎಂದುಕೊಂಡಿದೆ. ಇದಕ್ಕೆ ಉದಾಹರಣೆ- ಇಂದು ಇಲ್ಲಿ ಚರ್ಚಿತವಾಗುತ್ತಿರುವ ಮುಕ್ತ ವ್ಯಾಪಾರ ಒಪ್ಪಂದ- ಇಂಥವು. ಎಷ್ಟಂತ ಹೇಳುವುದು? ಭಾರತದಲ್ಲೀಗ ಆಳ್ವಿಕೆ ಮತ್ತು ಪೂತನಿ (crony) ಬಂಡವಾಳಶಾಹಿ ಜೊತೆಗೂಡಿಕೊಂಡು ಉದ್ಯೋಗನಾಶ ಯಜ್ಞ ಮಾಡುತ್ತಿವೆ. ಉದ್ಯೋಗದ ಸ್ಥಿತಿಗತಿ ಸ್ವ್ವಾತಂತ್ರ್ಯ ಪೂರ್ವ ಕಾಲದ ದಯಾನೀಯ ಸ್ಥಿತಿಗೆ ತಲುಪಲು ಧಾವಿಸುತ್ತಿದೆ. ಜನ ಸಮುದಾಯಕ್ಕೆ ಬೀದಿಗೆ ಬೀಳುವುದರ ಅರಿವು ಬಾರದಿರಲೆಂದು ಆ ಅಮಾಯಕರಿಗೆ ಭಾವನಾತ್ಮಕ ಅಫೀಮು ಕುಡಿಸಲಾಗುತ್ತಿದೆ. ಟಿಪ್ಪು ಅಂತಾರೆ, ಅಂಬೇಡ್ಕರ್ ಸಂವಿಧಾನ ಬರೆದಿಲ್ಲ ಅನ್ನುತ್ತಾರೆ, ಗೋಮಾತೆ ಅನ್ನುತ್ತಾರೆ, ಮೈಸೂರು ಪಾಕು ನಮ್ಮದು ಅನ್ನುತ್ತಾರೆ, ಪಾಕಿಸ್ತಾನದ ಭೀತಿ ತೋರಿಸುತ್ತಾರೆ, ದೇವರಿಗೆ ಹೆಡಮುರಿ ಕಟ್ಟಿ ಬೀದಿಗೆ ಎಸೆಯುತ್ತಾರೆ. ಹೀಗೆ ಹೀಗೆ ನೂರೆಂಟು ಭಾವಯಮಪಾಶಗಳನ್ನು ಎಸೆಯುತ್ತಾರೆ. ಮಾದಕಲೋಕ ಸೃಷ್ಟಿಸುತ್ತಾರೆ. ಇಂದು ವ್ಯಾಘ್ರನ ಗೋಮುಖವನ್ನು ಬಯಲಿಗೆ ಎಳೆಯಬೇಕಾಗಿದೆ. ಸರ್ಕಾರಕ್ಕೆ ನಾವು ಕೇಳಬೇಕಾಗಿದೆ- “ಒಂದು ಗ್ಯಾರಂಟಿ ಉದ್ಯೋಗ ನೀಡು, ಆಮೇಲೆ ಮಾತಾಡು” ಎಂದು ಮೊದಲು ಕೇಳಿ ಆಮೇಲೆ ಉಳಿದುದೆಲ್ಲ.

ಕೊನೆಗೊಂದು ಮಾತು. ಆಸೆಯೇ ದುಃಖಕ್ಕೆ ಕಾರಣ ಎಂಬ ಪ್ರಸಿದ್ಧ ಮಾತಿದೆ. ಇದು ಬುದ್ಧನ ನುಡಿಗಳು. ಪಾಳಿಯಲ್ಲಿ ಆಸೆ ಎನ್ನುವುದಕ್ಕೆ ‘ತನ್ಹಾ’ ಎಂದಿದೆ. ಸಂಸ್ಕೃತದಲ್ಲಿ ‘ತೃಷ್ಣೆ’ ಎಂದಿದೆ. ಇಂಗ್ಲೀಷ್‌ನಲ್ಲಿ craving ಎಂದಿದೆ. ಇದನ್ನು ನೋಡಿದಾಗ ‘ಆಸೆ’ ಪದ ಸಾಲದು ಅನ್ನಿಸುತ್ತದೆ. ಸಿಗರೇಟ್ ಇಲ್ಲದಿದ್ದಾಗ ನಾನು ತಹತಹಿಸುವುದು ಆಸೆ ಅಲ್ಲ, ಅದು craving. ಇದಕ್ಕೆ ಹತ್ತಿರದ ಪದ ಹುಡುಕುತ್ತ ಕಂಡದ್ದು- ‘ದಾಹ’. ‘ದಾಹ’ ಅಂದರೆ ‘ದಹಿಸುವುದು’ ಎಂದೂ ಅರ್ಥವಂತೆ. ಸದ್ಯಕ್ಕೆ ದಾಹವೇ ದುಃಖಕ್ಕೆ ಕಾರಣ- ಎಂದಿಟ್ಟುಕೊಳ್ಳಬಹುದೇನೊ.

ಇಂದು ಭೂಮಿಯೇ ಮನುಷ್ಯನ ದಾಹಕ್ಕೆ ಸಿಲುಕಿ ದಹಿಸುತ್ತಿದೆ. ಭೂಮಿ ಬಾಯಾರಿಕೆಯನ್ನು ನೀಗಿಸಬಹುದು, ದಾಹವನ್ನಲ್ಲ. ಇಂದಿನ ಮನುಷ್ಯನ ದಾಹದಿಂದಾಗಿ ತಾಪಮಾನ ಹೆಚ್ಚಾಗಿ- ಹಿಮಗಡ್ಡೆ ಕರಗುತ್ತಿವೆ. ಸಮುದ್ರದ ಮಟ್ಟ ಏರುತ್ತಿದೆ. ಸೈಕ್ಲೋನ್‌ಗಳು ಅಪ್ಪಳಿಸುತಿವೆ. ಹುಚ್ಚು ಮಳೆ ಬರುತ್ತಿದೆ. ಭೂಮಿ ಕುಸಿಯುತ್ತಿದೆ. ಎಲ್ಲವೂ ಕೊಚ್ಚಿಹೋಗುತ್ತಿದೆ. ವಿಪರ್ಯಾಸವೆಂದರೆ ಒಂದು ಕಡೆ ಪ್ರವಾಹ. ಅದರ ಪಕ್ಕದಲ್ಲೆ ನೀರಿಲ್ಲದ ಬರ. ಬದುಕುವುದೆಂತು?

ಪುಣ್ಯಕ್ಕೆ, ಭೂಮಿತಾಯಿಯೇ ಸ್ವೀಡನ್‌ನ ಹದಿನಾರು ವರ್ಷದ ಬಾಲೆ ಗ್ರೆಟಾ ಥನ್ಬರ್ಗ್‌ಳ ಮೈಮೇಲೆ ಬಂದು ನುಡಿಸಿದಂತೆ ಗ್ರೆಟಾ ನುಡಿಯುತ್ತಿದ್ದಾಳೆ. ಈ ಅನಾಹುತಗಳಿಗೆಲ್ಲಾ ಕಾರಣರಾದ ಜಗತ್ತಿನ ನಾಯಕರಿಗೆ “how dare you?” ಎಂದು ಕೇಳುತ್ತಿದ್ದಾಳೆ. ಹೀಗೆ ಕೇಳಬಹುದಾದ ಬಾಲಕ-ಬಾಲಕಿಯರು ಇಲ್ಲೂ ಇರಬಹುದು. ಎಲ್ಲೆಲ್ಲೂ ಇರಬಹುದು. ಅವರೀಗ ಮಾತಾಡಬೇಕಾಗಿದೆ. ಯಾಕೆಂದರೆ ಅವರು ಉಳಿಯಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...