Homeಮುಖಪುಟ'ವೈಕಂ ಪ್ರಶಸ್ತಿ' ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

- Advertisement -
- Advertisement -

ಕೇರಳದ ದೇವಸ್ಥಾನ ಪ್ರವೇಶದ ‘ವೈಕಂ’ ಹೋರಾಟದ ನೆನಪಿಗೆ ತಮಿಳುನಾಡು ಸರ್ಕಾರ ಕೊಡಮಾಡುವ 2024ನೇ ಸಾಲಿನ ಚೊಚ್ಚಲ ‘ವೈಕಂ ಪ್ರಶಸ್ತಿ’ಯನ್ನು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಇಂದು ಸ್ವೀಕರಿಸಿದರು.

ಕೇರಳದ ವೈಕಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಪೆರಿಯಾರ್ ಸ್ಮಾರಕ ಮತ್ತು ಗ್ರಂಥಾಲಯವನ್ನು’ ಉದ್ಘಾಟಿಸಿದ ಬಳಿಕ, ದೇವನೂರ ಮಹಾದೇವ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಶಸ್ತಿ ಪ್ರದಾನ ಮಾಡಿದರು.

ಪೆರಿಯಾರ್‌ ರಾಮಸ್ವಾಮಿ ಅವರ ನೇತೃತ್ವದಲ್ಲಿ ಕೇರಳದ ವೈಕಂನಲ್ಲಿ ನಡೆದಿದ್ದ ವೈಕಂ ಹೋರಾಟಕ್ಕೆ ಇದೀಗ ನೂರು ವರ್ಷ ತುಂಬಿದೆ. ಆದ್ದರಿಂದ, ಶತಮಾನ ಸಮಾರಂಭ ಮತ್ತು ಪೆರಿಯಾರ್‌ ಸ್ಮಾರಕ ಉದ್ಘಾಟನಾ ಕಾರ್ಯಕ್ರವನ್ನು ಕೇರಳದ ವೈಕಂದಲ್ಲಿ ತಮಿಳುನಾಡು ಸರ್ಕಾರದಿಂದ ಗುರುವಾರ ಹಮ್ಮಿಕೊಳ್ಳಲಾಗಿತ್ತು. ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌, ಕೇರಳ ಸಿಎಂ ಪಿಣರಾಯ್‌ ವಿಜಯನ್‌ ಪಾಲ್ಗೊಂಡಿದ್ದರು. ಇದೇ ವೇದಿಕೆ ಕಾರ್ಯಕ್ರಮದಲ್ಲಿ ದೇವನೂರ ಮಹದೇವ ಅವರಿಗೆ ವೈಕಂ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿಸಿದ ದೇವನೂರ ಮಹಾದೇವ, ತಾವು ಬರೆದಿರುವ ʻಆರ್‌ಎಸ್‌ಎಸ್‌ ಆಳ ಅಗಲʼ ಪುಸ್ತಕದ ಕನ್ನಡ, ಇಂಗ್ಲಿಷ್‌ ಮತ್ತು ಮಲೆಯಾಳಂ ಅವತರಣಿಯನ್ನು ಕೇರಳ ಸಿಎಂ ವಿಜಯನ್‌ ಅವರಿಗೆ, ಕನ್ನಡ, ಇಂಗ್ಲಿಷ್‌, ತಮಿಳು ಅವತರಣಿಯನ್ನು ತಮಿಳುನಾಡು ಸಿಎಂ ಸ್ಟಾಲಿನ್‌ ಅವರಿಗೆ ನೀಡಿದರು.

“ತಂಥೈ ಪೆರಿಯಾರ್ ಅವರ ವಿಚಾರವಾದಿ ತತ್ವಗಳ ಅನುಯಾಯಿಯಾಗಿ, ಖ್ಯಾತ ಸಾಹಿತಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ದಣಿವರಿಯದ ಪ್ರತಿಪಾದಕರಾದ ದೇವನೂರು ಮಹಾದೇವ ಅವರಿಗೆ ಚೊಚ್ಚಲ ‘ವೈಕಂ ಪ್ರಶಸ್ತಿ’ ಪ್ರದಾನ ಮಾಡಲು ನಾನು ಹೆಮ್ಮೆಪಡುತ್ತೇನೆ. ಅವರ ಕೃತಿಗಳು ಅಸಮಾನತೆಗಳನ್ನು ಎದುರಿಸಲು ಮತ್ತು ಸಮಾನ ಸಮಾಜವನ್ನು ಮುನ್ನಡೆಸಲು ಸಹಕಾರಿಯಾಗಿದೆ” ಎಂದು ಪ್ರಶಸ್ತಿ ಪ್ರದಾನದ ಬಳಿಕ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ವೈಕಮ್‌ನಲ್ಲಿ ಈ ಪ್ರಶಸ್ತಿಯನ್ನು ನೀಡುವುದು ಆಳವಾದ ಮಹತ್ವವನ್ನು ಹೊಂದಿದೆ. ಏಕೆಂದರೆ, ಇಲ್ಲಿಯೇ ಪೆರಿಯಾರ್ ಅಸ್ಪೃಶ್ಯತೆ ವಿರುದ್ಧ ಐತಿಹಾಸಿಕ ಚಳುವಳಿಯನ್ನು ಮುನ್ನಡೆಸಿದರು. ಸಾಮಾಜಿಕ ಸಮಾನತೆ ಮತ್ತು ನ್ಯಾಯದ ಅನ್ವೇಷಣೆಯಲ್ಲಿ ದೇವನೂರು ಮಹಾದೇವ ಅವರ ಕಾರ್ಯವು ನಮಗೆ ಮತ್ತು ಭವಿಷ್ಯದ ಪೀಳಿಗೆಗೆ ಸ್ಫೂರ್ತಿಯಾಗಲಿ” ಎಂದು ಸ್ಟಾಲಿನ್ ಹೇಳಿದ್ದಾರೆ.

ವೈಕಂ ಪ್ರಶಸ್ತಿಯು ₹5 ಲಕ್ಷ ನಗದು ಮತ್ತು ಸ್ವರ್ಣಲೇಪಿತ ಪದಕವನ್ನು ಒಳಗೊಂಡಿದೆ. ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ ಪ್ರಶಸ್ತಿ ನೀಡಲಾಗುತ್ತದೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.

ಇದನ್ನೂ ಓದಿ; ಗುಜರಾತ್‌ನಲ್ಲಿ ಲಾರಿ ಅಪಘಾತ; ಕೆಆರ್‌ಎಸ್‌ ಪಕ್ಷದ ಕಾರ್ಯಾಧ್ಯಕ್ಷ ಲಿಂಗೇಗೌಡ ಸೇರಿದಂತೆ ಇಬ್ಬರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...