Homeಮುಖಪುಟ'ವೈಕಂ ಪ್ರಶಸ್ತಿ' ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

- Advertisement -
- Advertisement -

ಕೇರಳದ ದೇವಸ್ಥಾನ ಪ್ರವೇಶದ ‘ವೈಕಂ’ ಹೋರಾಟದ ನೆನಪಿಗೆ ತಮಿಳುನಾಡು ಸರ್ಕಾರ ಕೊಡಮಾಡುವ 2024ನೇ ಸಾಲಿನ ಚೊಚ್ಚಲ ‘ವೈಕಂ ಪ್ರಶಸ್ತಿ’ಯನ್ನು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಇಂದು ಸ್ವೀಕರಿಸಿದರು.

ಕೇರಳದ ವೈಕಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಪೆರಿಯಾರ್ ಸ್ಮಾರಕ ಮತ್ತು ಗ್ರಂಥಾಲಯವನ್ನು’ ಉದ್ಘಾಟಿಸಿದ ಬಳಿಕ, ದೇವನೂರ ಮಹಾದೇವ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಶಸ್ತಿ ಪ್ರದಾನ ಮಾಡಿದರು.

ಪೆರಿಯಾರ್‌ ರಾಮಸ್ವಾಮಿ ಅವರ ನೇತೃತ್ವದಲ್ಲಿ ಕೇರಳದ ವೈಕಂನಲ್ಲಿ ನಡೆದಿದ್ದ ವೈಕಂ ಹೋರಾಟಕ್ಕೆ ಇದೀಗ ನೂರು ವರ್ಷ ತುಂಬಿದೆ. ಆದ್ದರಿಂದ, ಶತಮಾನ ಸಮಾರಂಭ ಮತ್ತು ಪೆರಿಯಾರ್‌ ಸ್ಮಾರಕ ಉದ್ಘಾಟನಾ ಕಾರ್ಯಕ್ರವನ್ನು ಕೇರಳದ ವೈಕಂದಲ್ಲಿ ತಮಿಳುನಾಡು ಸರ್ಕಾರದಿಂದ ಗುರುವಾರ ಹಮ್ಮಿಕೊಳ್ಳಲಾಗಿತ್ತು. ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌, ಕೇರಳ ಸಿಎಂ ಪಿಣರಾಯ್‌ ವಿಜಯನ್‌ ಪಾಲ್ಗೊಂಡಿದ್ದರು. ಇದೇ ವೇದಿಕೆ ಕಾರ್ಯಕ್ರಮದಲ್ಲಿ ದೇವನೂರ ಮಹದೇವ ಅವರಿಗೆ ವೈಕಂ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿಸಿದ ದೇವನೂರ ಮಹಾದೇವ, ತಾವು ಬರೆದಿರುವ ʻಆರ್‌ಎಸ್‌ಎಸ್‌ ಆಳ ಅಗಲʼ ಪುಸ್ತಕದ ಕನ್ನಡ, ಇಂಗ್ಲಿಷ್‌ ಮತ್ತು ಮಲೆಯಾಳಂ ಅವತರಣಿಯನ್ನು ಕೇರಳ ಸಿಎಂ ವಿಜಯನ್‌ ಅವರಿಗೆ, ಕನ್ನಡ, ಇಂಗ್ಲಿಷ್‌, ತಮಿಳು ಅವತರಣಿಯನ್ನು ತಮಿಳುನಾಡು ಸಿಎಂ ಸ್ಟಾಲಿನ್‌ ಅವರಿಗೆ ನೀಡಿದರು.

“ತಂಥೈ ಪೆರಿಯಾರ್ ಅವರ ವಿಚಾರವಾದಿ ತತ್ವಗಳ ಅನುಯಾಯಿಯಾಗಿ, ಖ್ಯಾತ ಸಾಹಿತಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ದಣಿವರಿಯದ ಪ್ರತಿಪಾದಕರಾದ ದೇವನೂರು ಮಹಾದೇವ ಅವರಿಗೆ ಚೊಚ್ಚಲ ‘ವೈಕಂ ಪ್ರಶಸ್ತಿ’ ಪ್ರದಾನ ಮಾಡಲು ನಾನು ಹೆಮ್ಮೆಪಡುತ್ತೇನೆ. ಅವರ ಕೃತಿಗಳು ಅಸಮಾನತೆಗಳನ್ನು ಎದುರಿಸಲು ಮತ್ತು ಸಮಾನ ಸಮಾಜವನ್ನು ಮುನ್ನಡೆಸಲು ಸಹಕಾರಿಯಾಗಿದೆ” ಎಂದು ಪ್ರಶಸ್ತಿ ಪ್ರದಾನದ ಬಳಿಕ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ವೈಕಮ್‌ನಲ್ಲಿ ಈ ಪ್ರಶಸ್ತಿಯನ್ನು ನೀಡುವುದು ಆಳವಾದ ಮಹತ್ವವನ್ನು ಹೊಂದಿದೆ. ಏಕೆಂದರೆ, ಇಲ್ಲಿಯೇ ಪೆರಿಯಾರ್ ಅಸ್ಪೃಶ್ಯತೆ ವಿರುದ್ಧ ಐತಿಹಾಸಿಕ ಚಳುವಳಿಯನ್ನು ಮುನ್ನಡೆಸಿದರು. ಸಾಮಾಜಿಕ ಸಮಾನತೆ ಮತ್ತು ನ್ಯಾಯದ ಅನ್ವೇಷಣೆಯಲ್ಲಿ ದೇವನೂರು ಮಹಾದೇವ ಅವರ ಕಾರ್ಯವು ನಮಗೆ ಮತ್ತು ಭವಿಷ್ಯದ ಪೀಳಿಗೆಗೆ ಸ್ಫೂರ್ತಿಯಾಗಲಿ” ಎಂದು ಸ್ಟಾಲಿನ್ ಹೇಳಿದ್ದಾರೆ.

ವೈಕಂ ಪ್ರಶಸ್ತಿಯು ₹5 ಲಕ್ಷ ನಗದು ಮತ್ತು ಸ್ವರ್ಣಲೇಪಿತ ಪದಕವನ್ನು ಒಳಗೊಂಡಿದೆ. ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ ಪ್ರಶಸ್ತಿ ನೀಡಲಾಗುತ್ತದೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.

ಇದನ್ನೂ ಓದಿ; ಗುಜರಾತ್‌ನಲ್ಲಿ ಲಾರಿ ಅಪಘಾತ; ಕೆಆರ್‌ಎಸ್‌ ಪಕ್ಷದ ಕಾರ್ಯಾಧ್ಯಕ್ಷ ಲಿಂಗೇಗೌಡ ಸೇರಿದಂತೆ ಇಬ್ಬರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...