Homeಕರ್ನಾಟಕಪಠ್ಯಪುಸ್ತಕ ವಾಪಸಾತಿಗೆ ದೇವೇಗೌಡರ ಪಟ್ಟು; ಸಿಎಂಗೆ ಮಾಜಿ ಪ್ರಧಾನಿ ಪತ್ರ

ಪಠ್ಯಪುಸ್ತಕ ವಾಪಸಾತಿಗೆ ದೇವೇಗೌಡರ ಪಟ್ಟು; ಸಿಎಂಗೆ ಮಾಜಿ ಪ್ರಧಾನಿ ಪತ್ರ

- Advertisement -
- Advertisement -

ಮರು ಪರಿಷ್ಕರಣೆಗೊಂಡ ಪಠ್ಯಪುಸ್ತಕಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.

ಪಠ್ಯಪುಸ್ತಕಗಳ ಮರು ಪರಿಷ್ಕರಣೆಯಲ್ಲಿ ಆಗಿರುವ ಅನ್ಯಾಯಗಳ ವಿರುದ್ಧ ದಿನಾಂಕ 18.06.2022ರಂದು ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಮಾವೇಶದ ಮನವಿ ಪತ್ರವನ್ನೂ ದೇವೇಗೌಡರು ಲಗತ್ತಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಠ್ಯಪುಸ್ತಕಗಳ ಮರು ಪರಿಷ್ಕರಣೆಗೆ ನೇಮಿಸಿದ ಸಮಿತಿಯ ಅಧ್ಯಕ್ಷರು ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಅವಮಾನ ಮಾಡಿರುತ್ತಾರೆ. ನಾಡಗೀತೆಯನ್ನು ಅಸಭ್ಯವಾಗಿ ತಿರುಚಿದವರಿಗೆ ಬಹುಮಾನ ನೀಡುತ್ತೇನೆಂದು ಹೇಳಿದ್ದು ಕೂಡ ಅವರಿಗೆ ಮಾಡಿದ ದೊಡ್ಡ ಅವಮಾನವೇ ಆಗಿದೆ” ಎಂದು ತಿಳಿಸಿದ್ದಾರೆ.

“ನಾಡಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದೂ ನಾಡ ಅಸ್ಮಿತೆಗೆ ಮಾಡಿದ ಅವಮಾನವಾಗಿದೆ. ಜೊತೆಗೆ ಡಾ.ಅಂಬೇಡ್ಕರ್ ಅವರನ್ನೂ ಹಂಗಿಸಿದ್ದಾರೆ. ಇಂಥ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ಮೊದಲ ತಪ್ಪು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮರು ಪರಿಷ್ಕರಣೆಯಲ್ಲಿ ಮಾಡಿರುವ ತಪ್ಪುಗಳಂತೂ ಅಸಂಖ್ಯಾತ, ಸಮಾಜ ವಿಜ್ಞಾನ ಪಠ್ಯಪುಸ್ತಕದ ಏಕೀಕರಣ ಪಾಠದಿಂದ ಕುವೆಂಪು ಅವರ ಭಾವಚಿತ್ರವನ್ನು ತೆಗೆದು ಹಾಕಲಾಗಿದೆ. ಬಸವಣ್ಣನವರ ಚಳವಳಿಯ ಆಶಯವುಳ್ಳ ಭಾಗಗಳನ್ನು ಕೈಬಿಡಲಾಗಿದೆ. ಸಿದ್ಧಗಂಗೆ ಮತ್ತು ಆದಿಚುಂಚನಗಿರಿ ಶ್ರೀಗಳ ಸೇವೆಯ ವಿವರಗಳನ್ನು ತೆಗೆಯಲಾಗಿದೆ ಎಂದು ವಿಷಾದಿಸಿದ್ದಾರೆ.

ಅಂಬೇಡ್ಕರ್ ಅವರಿಗೆ ‘ಸಂವಿಧಾನ ಶಿಲ್ಪಿ’ ಎಂದಿದ್ದ ವಿಶೇಷಣವನ್ನು ತೆಗೆಯಲಾಗಿದೆ. ಅಕ್ಕ, ಕನಕ, ಪುರಂದರ, ಶರೀಫರಂತಹ ಮಹಾನ್ ದಾರ್ಶನಿಕ ಸಂತರ ಪಠ್ಯಗಳನ್ನೇ ತೆಗೆಯಲಾಗಿದೆ. ಕೆಂಪೇಗೌಡ, ಸುರಪುರ ನಾಯಕರ ವಿಷಯಗಳನ್ನು ಕಡಿತಗೊಳಿಸಲಾಗಿದೆ. ಡಾ.ಅಂಬೇಡ್ಕರ್ ಮತ್ತು ಕುವೆಂಪು ಅವರು ಸಾರಿದ ಸಾಮಾಜಿಕ ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ವಿಶ್ವಮಾನವತ್ವದ ಪರಿಕಲ್ಪನೆಗಳನ್ನು ಕಡೆಗಣಿಸಿರುವುದು ಪರಿಷ್ಕರಣೆಯಲ್ಲಿ ಎದ್ದು ಕಾಣುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಘೋಷಣೆ

ಪಠ್ಯಪುಸ್ತಕಗಳಲ್ಲಿನ ಅಸಂಖ್ಯಾತ ದೋಷ ಮತ್ತು ಅನ್ಯಾಯಗಳನ್ನು ಕೇವಲ ತಪ್ಪೋಲೆ ಅಥವಾ ಪ್ರತ್ಯೇಕ ಪುಟಗಳ ಮುದ್ರಣದಿಂದ ಸರಿಪಡಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪುನರ್ ಪರಿಷ್ಕರಣೆಯ ಪಠ್ಯಪುಸ್ತಕಗಳನ್ನು ವಾಪಸ್ ಪಡೆದು, ಹಿಂದೆ ಇದ್ದ ಬರಗೂರು ರಾಮಚಂದ್ರಪ್ಪರವರ ನೇತೃತ್ವದ 27, ಸಮಿತಿಗಳು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನೇ ಈ ವರ್ಷ ಮುಂದುವರೆಸುವುದು ಸೂಕ್ತವೆಂದು ನಾನು ಕೂಡ ಅಭಿಪ್ರಾಯ ಪಡುತ್ತೇನೆ ಎಂದಿದ್ದಾರೆ.

ಈಗ ತಮಗೆ ಕಳುಹಿಸುತ್ತಿರುವ ‘ವಿಶ್ವಮಾನವ ಕುವೆಂಪು ಹೋರಾಟ ಸಮಿತಿ’ಯ ಹಕ್ಕೊತ್ತಾಯ ಪತ್ರದ ಅಂಶಗಳನ್ನು ನಾನು ಕೂಡ ಬೆಂಬಲಿಸುತ್ತಾ, ಈ ವಿಷಯವಾಗಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಶಿಸುತ್ತೇನೆ ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...