Homeಕರ್ನಾಟಕಪಠ್ಯಪುಸ್ತಕ ವಾಪಸಾತಿಗೆ ದೇವೇಗೌಡರ ಪಟ್ಟು; ಸಿಎಂಗೆ ಮಾಜಿ ಪ್ರಧಾನಿ ಪತ್ರ

ಪಠ್ಯಪುಸ್ತಕ ವಾಪಸಾತಿಗೆ ದೇವೇಗೌಡರ ಪಟ್ಟು; ಸಿಎಂಗೆ ಮಾಜಿ ಪ್ರಧಾನಿ ಪತ್ರ

- Advertisement -
- Advertisement -

ಮರು ಪರಿಷ್ಕರಣೆಗೊಂಡ ಪಠ್ಯಪುಸ್ತಕಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.

ಪಠ್ಯಪುಸ್ತಕಗಳ ಮರು ಪರಿಷ್ಕರಣೆಯಲ್ಲಿ ಆಗಿರುವ ಅನ್ಯಾಯಗಳ ವಿರುದ್ಧ ದಿನಾಂಕ 18.06.2022ರಂದು ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಮಾವೇಶದ ಮನವಿ ಪತ್ರವನ್ನೂ ದೇವೇಗೌಡರು ಲಗತ್ತಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಠ್ಯಪುಸ್ತಕಗಳ ಮರು ಪರಿಷ್ಕರಣೆಗೆ ನೇಮಿಸಿದ ಸಮಿತಿಯ ಅಧ್ಯಕ್ಷರು ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಅವಮಾನ ಮಾಡಿರುತ್ತಾರೆ. ನಾಡಗೀತೆಯನ್ನು ಅಸಭ್ಯವಾಗಿ ತಿರುಚಿದವರಿಗೆ ಬಹುಮಾನ ನೀಡುತ್ತೇನೆಂದು ಹೇಳಿದ್ದು ಕೂಡ ಅವರಿಗೆ ಮಾಡಿದ ದೊಡ್ಡ ಅವಮಾನವೇ ಆಗಿದೆ” ಎಂದು ತಿಳಿಸಿದ್ದಾರೆ.

“ನಾಡಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದೂ ನಾಡ ಅಸ್ಮಿತೆಗೆ ಮಾಡಿದ ಅವಮಾನವಾಗಿದೆ. ಜೊತೆಗೆ ಡಾ.ಅಂಬೇಡ್ಕರ್ ಅವರನ್ನೂ ಹಂಗಿಸಿದ್ದಾರೆ. ಇಂಥ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ಮೊದಲ ತಪ್ಪು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮರು ಪರಿಷ್ಕರಣೆಯಲ್ಲಿ ಮಾಡಿರುವ ತಪ್ಪುಗಳಂತೂ ಅಸಂಖ್ಯಾತ, ಸಮಾಜ ವಿಜ್ಞಾನ ಪಠ್ಯಪುಸ್ತಕದ ಏಕೀಕರಣ ಪಾಠದಿಂದ ಕುವೆಂಪು ಅವರ ಭಾವಚಿತ್ರವನ್ನು ತೆಗೆದು ಹಾಕಲಾಗಿದೆ. ಬಸವಣ್ಣನವರ ಚಳವಳಿಯ ಆಶಯವುಳ್ಳ ಭಾಗಗಳನ್ನು ಕೈಬಿಡಲಾಗಿದೆ. ಸಿದ್ಧಗಂಗೆ ಮತ್ತು ಆದಿಚುಂಚನಗಿರಿ ಶ್ರೀಗಳ ಸೇವೆಯ ವಿವರಗಳನ್ನು ತೆಗೆಯಲಾಗಿದೆ ಎಂದು ವಿಷಾದಿಸಿದ್ದಾರೆ.

ಅಂಬೇಡ್ಕರ್ ಅವರಿಗೆ ‘ಸಂವಿಧಾನ ಶಿಲ್ಪಿ’ ಎಂದಿದ್ದ ವಿಶೇಷಣವನ್ನು ತೆಗೆಯಲಾಗಿದೆ. ಅಕ್ಕ, ಕನಕ, ಪುರಂದರ, ಶರೀಫರಂತಹ ಮಹಾನ್ ದಾರ್ಶನಿಕ ಸಂತರ ಪಠ್ಯಗಳನ್ನೇ ತೆಗೆಯಲಾಗಿದೆ. ಕೆಂಪೇಗೌಡ, ಸುರಪುರ ನಾಯಕರ ವಿಷಯಗಳನ್ನು ಕಡಿತಗೊಳಿಸಲಾಗಿದೆ. ಡಾ.ಅಂಬೇಡ್ಕರ್ ಮತ್ತು ಕುವೆಂಪು ಅವರು ಸಾರಿದ ಸಾಮಾಜಿಕ ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ವಿಶ್ವಮಾನವತ್ವದ ಪರಿಕಲ್ಪನೆಗಳನ್ನು ಕಡೆಗಣಿಸಿರುವುದು ಪರಿಷ್ಕರಣೆಯಲ್ಲಿ ಎದ್ದು ಕಾಣುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಘೋಷಣೆ

ಪಠ್ಯಪುಸ್ತಕಗಳಲ್ಲಿನ ಅಸಂಖ್ಯಾತ ದೋಷ ಮತ್ತು ಅನ್ಯಾಯಗಳನ್ನು ಕೇವಲ ತಪ್ಪೋಲೆ ಅಥವಾ ಪ್ರತ್ಯೇಕ ಪುಟಗಳ ಮುದ್ರಣದಿಂದ ಸರಿಪಡಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪುನರ್ ಪರಿಷ್ಕರಣೆಯ ಪಠ್ಯಪುಸ್ತಕಗಳನ್ನು ವಾಪಸ್ ಪಡೆದು, ಹಿಂದೆ ಇದ್ದ ಬರಗೂರು ರಾಮಚಂದ್ರಪ್ಪರವರ ನೇತೃತ್ವದ 27, ಸಮಿತಿಗಳು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನೇ ಈ ವರ್ಷ ಮುಂದುವರೆಸುವುದು ಸೂಕ್ತವೆಂದು ನಾನು ಕೂಡ ಅಭಿಪ್ರಾಯ ಪಡುತ್ತೇನೆ ಎಂದಿದ್ದಾರೆ.

ಈಗ ತಮಗೆ ಕಳುಹಿಸುತ್ತಿರುವ ‘ವಿಶ್ವಮಾನವ ಕುವೆಂಪು ಹೋರಾಟ ಸಮಿತಿ’ಯ ಹಕ್ಕೊತ್ತಾಯ ಪತ್ರದ ಅಂಶಗಳನ್ನು ನಾನು ಕೂಡ ಬೆಂಬಲಿಸುತ್ತಾ, ಈ ವಿಷಯವಾಗಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಶಿಸುತ್ತೇನೆ ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...