Homeಕರ್ನಾಟಕನಾಳೆ ಕಾರ್ಯಕ್ರಮವಿದ್ದಾಗ ದೇವೇಗೌಡರಿಗೆ ಪತ್ರ ಬಂದಿದ್ದು ಮಧ್ಯರಾತ್ರಿ 12.30ಕ್ಕೆ: ಜೆಡಿಎಸ್‌ ಆಕ್ರೋಶ

ನಾಳೆ ಕಾರ್ಯಕ್ರಮವಿದ್ದಾಗ ದೇವೇಗೌಡರಿಗೆ ಪತ್ರ ಬಂದಿದ್ದು ಮಧ್ಯರಾತ್ರಿ 12.30ಕ್ಕೆ: ಜೆಡಿಎಸ್‌ ಆಕ್ರೋಶ

ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ದೇವೇಗೌಡರನ್ನು ಕರೆಯಲಾಗಿತ್ತು ಎಂದಿರುವ ಬಿಜೆಪಿಗೆ ಜೆಡಿಎಸ್‌ ತಿರುಗೇಟು ನೀಡಿದೆ.

- Advertisement -
- Advertisement -

“ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಎಚ್‌.ಡಿ.ದೇವೇಗೌಡ ಅವರನ್ನು ಅವರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ” ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸಿದೆ.

“ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಎಚ್‌.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ” ಎಂದು ಶುಕ್ರವಾರ ಜೆಡಿಎಸ್‌ ಸರಣಿ ಟ್ವೀಟ್ ಮಾಡಿತ್ತು. ಅದರ ಬೆನ್ನಲ್ಲೇ, ದೇವೇಗೌಡರಿಗೆ ಮುಖ್ಯಮಂತ್ರಿಯವರು ಬರೆದಿರುವ ಪತ್ರವನ್ನು ಬಿಜೆಪಿಯವರು ಪ್ರಸ್ತಾಪಿಸಿದ್ದರು. ಆದರೆ ಜೆಡಿಎಸ್‌- ಈ ವಾದವನ್ನು ನಿರಾಕರಿಸಿದೆ. ಕಾರ್ಯಕ್ರಮ ಒಂದು ದಿನ ಇರುವಾಗ ಮಾತ್ರ ಆಹ್ವಾನ ನೀಡಲಾಗಿತ್ತು ಎಂದು ಸ್ಪಷ್ಟಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ. ಸರಿ; ನವೆಂಬರ್‌ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ?” ಎಂದು ಪ್ರಶ್ನಿಸಿದೆ.

“ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಘನವೇತ್ತ ಮಾನ್ಯ ಮುಖ್ಯಮಂತ್ರಿಗಳು ಬರೆದ ʼಘನವೇತ್ತʼ ಪತ್ರವನ್ನೊಮ್ಮೆ ʼಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ?” ಎಂದು ಹರಿಹಾಯ್ದಿದೆ.

“ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ?” ಎಂದು ಕೇಳಿದೆ.

“ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ದಮ್ಮು, ತಾಕತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ” ಎಂದು ಪತ್ರವನ್ನು ಲಗತ್ತಿಸಿರುವ ಜೆಡಿಎಸ್‌, ಪತ್ರ ಬರೆಯಲಾಗಿರುವ ದಿನಾಂಕವನ್ನು ಗುರುತುಹಾಕಿ ಟ್ವೀಟ್ ಮಾಡಿದೆ.

“ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ,ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು?” ಎಂದು ಕೇಳಿದೆ.

ಇದನ್ನೂ ಓದಿರಿ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’; ಇದು ಭಾರತ ಕಂಡ ಪರಮ ಢೋಂಗೀ ಘೋಷಣೆ. ಇದಕ್ಕೆ ʼಸಬ್ ಕಾ ಸರ್ವನಾಶ್ʼ ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ ಎಂದು ಅಭಿಪ್ರಾಯಪಟ್ಟಿದೆ.

“ಕುಟುಂಬ ರಾಜಕಾರಣ ಅಂತೀರಾ? ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ? ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ?” ಎಂದು ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...