Homeಕರ್ನಾಟಕನಾಳೆ ಕಾರ್ಯಕ್ರಮವಿದ್ದಾಗ ದೇವೇಗೌಡರಿಗೆ ಪತ್ರ ಬಂದಿದ್ದು ಮಧ್ಯರಾತ್ರಿ 12.30ಕ್ಕೆ: ಜೆಡಿಎಸ್‌ ಆಕ್ರೋಶ

ನಾಳೆ ಕಾರ್ಯಕ್ರಮವಿದ್ದಾಗ ದೇವೇಗೌಡರಿಗೆ ಪತ್ರ ಬಂದಿದ್ದು ಮಧ್ಯರಾತ್ರಿ 12.30ಕ್ಕೆ: ಜೆಡಿಎಸ್‌ ಆಕ್ರೋಶ

ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ದೇವೇಗೌಡರನ್ನು ಕರೆಯಲಾಗಿತ್ತು ಎಂದಿರುವ ಬಿಜೆಪಿಗೆ ಜೆಡಿಎಸ್‌ ತಿರುಗೇಟು ನೀಡಿದೆ.

- Advertisement -
- Advertisement -

“ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಎಚ್‌.ಡಿ.ದೇವೇಗೌಡ ಅವರನ್ನು ಅವರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ” ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸಿದೆ.

“ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಎಚ್‌.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ” ಎಂದು ಶುಕ್ರವಾರ ಜೆಡಿಎಸ್‌ ಸರಣಿ ಟ್ವೀಟ್ ಮಾಡಿತ್ತು. ಅದರ ಬೆನ್ನಲ್ಲೇ, ದೇವೇಗೌಡರಿಗೆ ಮುಖ್ಯಮಂತ್ರಿಯವರು ಬರೆದಿರುವ ಪತ್ರವನ್ನು ಬಿಜೆಪಿಯವರು ಪ್ರಸ್ತಾಪಿಸಿದ್ದರು. ಆದರೆ ಜೆಡಿಎಸ್‌- ಈ ವಾದವನ್ನು ನಿರಾಕರಿಸಿದೆ. ಕಾರ್ಯಕ್ರಮ ಒಂದು ದಿನ ಇರುವಾಗ ಮಾತ್ರ ಆಹ್ವಾನ ನೀಡಲಾಗಿತ್ತು ಎಂದು ಸ್ಪಷ್ಟಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ. ಸರಿ; ನವೆಂಬರ್‌ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ?” ಎಂದು ಪ್ರಶ್ನಿಸಿದೆ.

“ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಘನವೇತ್ತ ಮಾನ್ಯ ಮುಖ್ಯಮಂತ್ರಿಗಳು ಬರೆದ ʼಘನವೇತ್ತʼ ಪತ್ರವನ್ನೊಮ್ಮೆ ʼಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ?” ಎಂದು ಹರಿಹಾಯ್ದಿದೆ.

“ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ?” ಎಂದು ಕೇಳಿದೆ.

“ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ದಮ್ಮು, ತಾಕತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ” ಎಂದು ಪತ್ರವನ್ನು ಲಗತ್ತಿಸಿರುವ ಜೆಡಿಎಸ್‌, ಪತ್ರ ಬರೆಯಲಾಗಿರುವ ದಿನಾಂಕವನ್ನು ಗುರುತುಹಾಕಿ ಟ್ವೀಟ್ ಮಾಡಿದೆ.

“ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ,ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು?” ಎಂದು ಕೇಳಿದೆ.

ಇದನ್ನೂ ಓದಿರಿ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’; ಇದು ಭಾರತ ಕಂಡ ಪರಮ ಢೋಂಗೀ ಘೋಷಣೆ. ಇದಕ್ಕೆ ʼಸಬ್ ಕಾ ಸರ್ವನಾಶ್ʼ ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ ಎಂದು ಅಭಿಪ್ರಾಯಪಟ್ಟಿದೆ.

“ಕುಟುಂಬ ರಾಜಕಾರಣ ಅಂತೀರಾ? ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ? ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ?” ಎಂದು ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...