Homeಕರ್ನಾಟಕನಾಳೆ ಕಾರ್ಯಕ್ರಮವಿದ್ದಾಗ ದೇವೇಗೌಡರಿಗೆ ಪತ್ರ ಬಂದಿದ್ದು ಮಧ್ಯರಾತ್ರಿ 12.30ಕ್ಕೆ: ಜೆಡಿಎಸ್‌ ಆಕ್ರೋಶ

ನಾಳೆ ಕಾರ್ಯಕ್ರಮವಿದ್ದಾಗ ದೇವೇಗೌಡರಿಗೆ ಪತ್ರ ಬಂದಿದ್ದು ಮಧ್ಯರಾತ್ರಿ 12.30ಕ್ಕೆ: ಜೆಡಿಎಸ್‌ ಆಕ್ರೋಶ

ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ದೇವೇಗೌಡರನ್ನು ಕರೆಯಲಾಗಿತ್ತು ಎಂದಿರುವ ಬಿಜೆಪಿಗೆ ಜೆಡಿಎಸ್‌ ತಿರುಗೇಟು ನೀಡಿದೆ.

- Advertisement -
- Advertisement -

“ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಎಚ್‌.ಡಿ.ದೇವೇಗೌಡ ಅವರನ್ನು ಅವರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ” ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸಿದೆ.

“ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಎಚ್‌.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ” ಎಂದು ಶುಕ್ರವಾರ ಜೆಡಿಎಸ್‌ ಸರಣಿ ಟ್ವೀಟ್ ಮಾಡಿತ್ತು. ಅದರ ಬೆನ್ನಲ್ಲೇ, ದೇವೇಗೌಡರಿಗೆ ಮುಖ್ಯಮಂತ್ರಿಯವರು ಬರೆದಿರುವ ಪತ್ರವನ್ನು ಬಿಜೆಪಿಯವರು ಪ್ರಸ್ತಾಪಿಸಿದ್ದರು. ಆದರೆ ಜೆಡಿಎಸ್‌- ಈ ವಾದವನ್ನು ನಿರಾಕರಿಸಿದೆ. ಕಾರ್ಯಕ್ರಮ ಒಂದು ದಿನ ಇರುವಾಗ ಮಾತ್ರ ಆಹ್ವಾನ ನೀಡಲಾಗಿತ್ತು ಎಂದು ಸ್ಪಷ್ಟಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ. ಸರಿ; ನವೆಂಬರ್‌ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ?” ಎಂದು ಪ್ರಶ್ನಿಸಿದೆ.

“ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಘನವೇತ್ತ ಮಾನ್ಯ ಮುಖ್ಯಮಂತ್ರಿಗಳು ಬರೆದ ʼಘನವೇತ್ತʼ ಪತ್ರವನ್ನೊಮ್ಮೆ ʼಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ?” ಎಂದು ಹರಿಹಾಯ್ದಿದೆ.

“ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ?” ಎಂದು ಕೇಳಿದೆ.

“ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ದಮ್ಮು, ತಾಕತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ” ಎಂದು ಪತ್ರವನ್ನು ಲಗತ್ತಿಸಿರುವ ಜೆಡಿಎಸ್‌, ಪತ್ರ ಬರೆಯಲಾಗಿರುವ ದಿನಾಂಕವನ್ನು ಗುರುತುಹಾಕಿ ಟ್ವೀಟ್ ಮಾಡಿದೆ.

“ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ,ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು?” ಎಂದು ಕೇಳಿದೆ.

ಇದನ್ನೂ ಓದಿರಿ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’; ಇದು ಭಾರತ ಕಂಡ ಪರಮ ಢೋಂಗೀ ಘೋಷಣೆ. ಇದಕ್ಕೆ ʼಸಬ್ ಕಾ ಸರ್ವನಾಶ್ʼ ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ ಎಂದು ಅಭಿಪ್ರಾಯಪಟ್ಟಿದೆ.

“ಕುಟುಂಬ ರಾಜಕಾರಣ ಅಂತೀರಾ? ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ? ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ?” ಎಂದು ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...