Homeಕರ್ನಾಟಕ`ಫೀನಿಕ್ಸ್’ ಗೌಡರ `ಬ್ರಹ್ಮಾಸ್ತ್ರ’ ಶಾಶ್ವತವಾಗಿ ಮಂಕಾಯಿತೇ?

`ಫೀನಿಕ್ಸ್’ ಗೌಡರ `ಬ್ರಹ್ಮಾಸ್ತ್ರ’ ಶಾಶ್ವತವಾಗಿ ಮಂಕಾಯಿತೇ?

- Advertisement -
- Advertisement -

ಕರ್ನಾಟಕ ರಾಜಕಾರಣದ ಮಟ್ಟಿಗೆ `ಫೀನಿಕ್ಸ್ ಪೊಲಿಟಿಷಿಯನ್’ ಅಂತಲೇ ಹೆಸರಾದ ದೇವೇಗೌಡರು ಈ ಉಪಚುನಾವಣೆಯ ಫಲಿತಾಂಶದ ನಂತರ ಗಂಭೀರ ಆತ್ಮವಿಮರ್ಶೆ ಮಾಡಿಕೊಳ್ಳಲೇಬೇಕಾದ ಸಂದಿಗ್ಧತೆ ಎದುರಾಗಿದೆ. ಜೆಡಿಎಸ್‍ನ ಶೂನ್ಯ ಸಂಪಾದನೆ ತಳ್ಳಿಹಾಕುವಂತಹ ಸಂಗತಿಯಲ್ಲ. ಯಾರು ಏನೇ ಹೇಳಲಿ ದೇವೇಗೌಡರ ಪೊಲಿಟಿಕ್ಸ್ ನಿಂತಿರುವುದೇ ಜಾತಿರಾಜಕಾರಣದ ಬುನಾದಿಯ ಮೇಲೆ. ಪ್ರಧಾನಿ ಹುದ್ದೆಗೇರಿ `ರಾಷ್ಟ್ರೀಯ ನಾಯಕ’ನಾಗುವ ವೈಯಕ್ತಿಕ ಅವಕಾಶ ಒದಗಿಬಂದಾಗಲು ಅವರು ತಮ್ಮ ಪಕ್ಷವನ್ನು `ಜಾತಿ ಕಂಫರ್ಟ್ ಜೋನ್’ನಿಂದ ಆಚೆಗೆ ಹರಡುವ ಪ್ರಯತ್ನವನ್ನೇ ಮಾಡಲಿಲ್ಲ. ಇತ್ತ ಕುಮಾರಸ್ವಾಮಿ ಎರಡೆರಡು ಬಾರಿ ಮುಖ್ಯಮಂತ್ರಿಯಾದರು ಹಳೇ ಮೈಸೂರು ಪ್ರಾಂತ್ಯದಾಚೆಗೆ ಜೆಡಿಎಸ್ ತನ್ನ ಪ್ರಭಾವ ವಿಸ್ತರಿಸಲಿಲ್ಲ. ಕಾರಣ ಸ್ಪಷ್ಟ. ರಾಜ್ಯದ ರಾಜಕಾರಣವನ್ನು ನಿರ್ಧರಿಸಬಲ್ಲ ಎರಡು ಪ್ರಭಾವಿ ಜಾತಿಗಳಲ್ಲಿ ಒಂದಾದ ಒಕ್ಕಲಿಗ ವೋಟ್ ಬ್ಯಾಂಕ್ ದಾಟುವ ಯಾವ ರಿಸ್ಕೂ ದೇವೇಗೌಡರಿಗಾಗಲಿ, ಅವರ ಕುಟುಂಬಕ್ಕಾಗಿ ಬೇಕಾಗಿರಲಿಲ್ಲ. ಏನಿಲ್ಲವೆಂದರೂ 35 ರಿಂದ 40 ಸೀಟುಗಳನ್ನು ಗೆಲ್ಲಿಸಬಹುದಾದ ಆರೇಳು ಜಿಲ್ಲೆಗಳ ಪ್ರಭಾವಿ ಒಕ್ಕಲಿಗ ಸಮುದಾಯದ ಅಧಿಪತ್ಯವನ್ನು ಸಿದ್ಧಿಸಿಕೊಂಡರೆ ರಾಜಕಾರಣದಲ್ಲಿ ಚಲಾವಣೆಗೆ ಬರುವುದು ಕಷ್ಟವೇನಲ್ಲ. ಇದು ಜೆಡಿಎಸ್‍ನ ಲಾಜಿಕ್ಕು. ಇಷ್ಟು ದಿನ ಒಕ್ಕಲಿಗ ಸಮುದಾಯವು ಕೂಡಾ ದೇವೇಗೌಡರು ಮತ್ತು ಜೆಡಿಎಸ್ ಅನ್ನು ತಮ್ಮ ಜಾತಿ ಅಸ್ಮಿತೆಯ ಭಾಗವಾಗಿಯೇ ಕಂಡಿದ್ದರಿಂದ ಜೆಡಿಎಸ್, ಒಕ್ಕಲಿಗ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಎಂಥಾ ಪ್ರತಿರೋಧಗಳು ಎದುರಾದರೂ ಗೆಲುವಿನ ದಡ ಮುಟ್ಟುತ್ತಿತ್ತು. ಈ ಲೆಕ್ಕಾಚಾರದ ಅಡಿಯಲ್ಲೆ ದೊಡ್ಡದೊಡ್ಡ ಘಟಾನುಘಟಿ ನಾಯಕರುಗಳನ್ನೂ ಸೈಡ್‍ಲೈನ್ ಮಾಡಿ ತಮ್ಮ ಕುಟುಂಬ ರಾಜಕಾರಣವನ್ನು ವಿಸ್ತರಿಸುತ್ತಾ ಬಂದರು. ಆದರೆ ಫಲಿತಾಂಶ ಅವರ ಜಾತಿ ರಾಜಕಾರಣದ ಅಡಿಪಾಯಕ್ಕೇ ಭರ್ಜರಿ ಏಟು ಕೊಟ್ಟಿದೆ.

ಉಪ ಚುನಾವಣೆ ನಡೆದ ಕೆ.ಆರ್.ಪೇಟೆ, ಚಿಕ್ಕಬಳ್ಳಾಪುರ, ಹೊಸಕೋಟೆ ಮತ್ತು ಹುಣಸೂರು ಕ್ಷೇತ್ರಗಳು ಜೆಡಿಎಸ್‍ನ ಭದ್ರ ಬೇರುಗಳಿರುವ ಕ್ಷೇತ್ರಗಳು. ಇಲ್ಲಿ ಒಕ್ಕಲಿಗ ಮತದಾರರೇ ನಿರ್ಣಾಯಕ. ಆದರೆ ಈ ಎಲ್ಲಾ ಕ್ಷೇತ್ರಗಳಲ್ಲಿ ಜೆಡಿಎಸ್ ಸೋತಿದೆ. ಹೊಸಕೋಟೆಯಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡರನ್ನು ಬೆಂಬಲಿಸುವ ಮೂಲಕ ಜೆಡಿಎಸ್ ತನ್ನ ಮತದಾರರನ್ನು ಬೇರೆಯವರತ್ತ ಕೈಚೆಲ್ಲಿ ಕುಳಿತುಕೊಂಡಿದ್ದರೆ, ಹುಣಸೂರು ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಪಾರ್ಟಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಹೊಸಕೋಟೆ ಹೊರತುಪಡಿಸಿ ಇನ್ನುಳಿದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಇದೇ ಮೊದಲ ಬಾರಿ ಗೆಲುವಿನ ನಗೆ ಬೀರಿದೆ. ನಿರ್ದಿಷ್ಟವಾಗಿ ಕೆ.ಆರ್.ಪೇಟೆಯಲ್ಲಿ ಬಿಜೆಪಿಯ ನಾರಾಯಣ ಗೌಡ ಗೆದ್ದಿರೋದು ಜೆಡಿಎಸ್‍ಗೆ ದೊಡ್ಡ ಆಘಾತವೇ ಸರಿ. ಯಾಕೆಂದರೆ ದೇವೇಗೌಡರ ಕುಟುಂಬ ಈ ಕ್ಷೇತ್ರವನ್ನು ತಮ್ಮ ಪ್ರತಿಷ್ಠೆಯ ಕಣವಾಗಿ ಸ್ವೀಕರಿಸಿತ್ತು. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿಯ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸುವಷ್ಟರಮಟ್ಟಿಗೆ ಇಲ್ಲಿ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಒಕ್ಕಲಿಗರು ದೇವೇಗೌಡರ ಮೇಲಿನ ನಿಷ್ಠೆಯಿಂದ ವಿಮುಖರಾದ್ದರಿಂದ ಯಡ್ಯೂರಪ್ಪನವರ ತವರು ಕ್ಷೇತ್ರವಾದ ಇಲ್ಲಿ ಬಿಜೆಪಿ ಚೊಚ್ಚಲ ನಗೆ ಬೀರಿದೆ.

ಹಾಗೆ ನೋಡಿದರೆ, ಕಳೆದ ಲೋಕಸಭಾ ಚುನಾವಣೆಯಲ್ಲೆ ದೇವೇಗೌಡರ `ಜಾತಿ ಬ್ರಹ್ಮಾಸ್ತ್ರ’ ತನ್ನ ಮೊನಚು ಕಳೆದುಕೊಂಡಿದ್ದರ ಸೂಚನೆಗಳು ಲಭಿಸಿದ್ದವು. ಇಪ್ಪತ್ತೆಂಟು ಕ್ಷೇತ್ರಗಳ ಪೈಕಿ ಜೆಡಿಎಸ್ ಗೆಲ್ಲಲು ಸಾಧ್ಯವಾದದ್ದು ಕೇವಲ ಒಂದರಲ್ಲಿ ಮಾತ್ರ. ಸ್ವತಃ ದೇವೇಗೌಡರು ಮತ್ತವರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ, ಕ್ರಮವಾಗಿ ತುಮಕೂರು ಹಾಗೂ ಮಂಡ್ಯದಲ್ಲಿ ಸೋಲನುಭವಿಸಿದ್ದರು. ಇವೆರಡೂ ಒಕ್ಕಲಿಗ ಮತದಾರರ ಪ್ರಾಬಲ್ಯವಿರುವ ಕ್ಷೇತ್ರಗಳು ಅನ್ನೋದು ಇಲ್ಲಿ ಗಮನಾರ್ಹ. ಹಾಸನದಲ್ಲಿ ಎಚ್.ಡಿ.ರೇವಣ್ಣ ಮೈಚಳಿ ಬಿಟ್ಟು ತಮ್ಮ ಕಾಂಗ್ರೆಸ್ ವಿರೋಧಿಗಳ ಮನೆಗೂ ಹೋಗಿ ರಾಜಿಸಂಧಾನಕ್ಕೆ ಮುಂದಾಗದಿದ್ದರೆ ಜೆಡಿಎಸ್ ಒಂದೂ ಸ್ಥಾನವಿಲ್ಲದೆ ಭಾರೀ ಮುಖಭಂಗ ಅನುಭವಿಸಬೇಕಾಗುತ್ತಿತ್ತೇನೊ.
ಮಂಡ್ಯದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್‍ರ ಎದುರು ತಮ್ಮ ಕುಟುಂಬದ ನಿಖಿಲ್ ಕುಮಾರಸ್ವಾಮಿಯನ್ನು ಅಖಾಡಕ್ಕಿಳಿಸಿದ್ದು ದೇವೇಗೌಡರು ಮಾಡಿದ ದೊಡ್ಡ ಯಡವಟ್ಟು. ಒಕ್ಕಲಿಗರು ಮೊದಲ ಬಾರಿ ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧ ದನಿ ಬಿಚ್ಚಲು ಅದು ಅವಕಾಶ ಮಾಡಿಕೊಟ್ಟಿತು. ಅದರ ಪ್ರಭಾವವನ್ನು ಸ್ವತಃ ಗೌಡರು ತುಮಕೂರಿನಲ್ಲೂ ಅನುಭವಿಸಬೇಕಾಗಿ ಬಂದಿತು.

ಈ ಉಪಚುನಾವಣೆಯ ಫಲಿತಾಂಶ ಗೌಡರ ರಾಜಕಾರಣದಿಂದ ಒಕ್ಕಲಿಗರು ಮತ್ತಷ್ಟು ವಿಮುಖರಾಗಿರುವುದನ್ನು ಒತ್ತಿ ಹೇಳುತ್ತಿದೆ. ಅಧಿಕಾರಕ್ಕಾಗಿ ಯಾವ ಪಕ್ಷದ ಜೊತೆಗೆ ಬೇಕಾದರೂ ಮೈತ್ರಿಗೆ ಸಿದ್ಧ ಎಂಬ ದೇವೇಗೌಡರ ಪಾರ್ಟಿಯ ಚಂಚಲ ನಿಲುವುಗಳು ಕೂಡಾ ಒಕ್ಕಲಿಗರು ಜೆಡಿಎಸ್‍ನಿಂದ ದೂರ ಸರಿಯುವಂತೆ ಮಾಡಿರುವ ಸಾಧ್ಯತೆಯುಂಟು. ದೇವೇಗೌಡರು ತಮ್ಮನ್ನು ತಾವು ಒಕ್ಕಲಿಗ ನಾಯಕ ಎಂದು ಬಿಂಬಿಸಿಕೊಂಡಂತೆ, ಅವರ ಮಗ ಕುಮಾರಸ್ವಾಮಿಯವರು ತಮ್ಮನ್ನು ಪ್ರೊಜೆಕ್ಟ್ ಮಾಡಿಕೊಳ್ಳುವಲ್ಲಿ ಎಡವುತ್ತಾ ಬಂದದ್ದು ಕೂಡಾ ಜೆಡಿಎಸ್‍ನ ಈ ಪರಿಸ್ಥಿತಿಗೆ ಮತ್ತೊಂದು ಕಾರಣ.

ಕುಮಾರಸ್ವಾಮಿಯವರ ವೈಖರಿಗೆ ಪಕ್ಷದೊಳಗೇ ಆಂತರಿಕ ಬಂಡಾಯವೂ ಭುಗಿಲೆದ್ದಿದೆ. ಉಪಚುನಾವಣೆಗೆ ಕೆಲ ದಿನ ಮೊದಲು ಬಸವರಾಜ ಹೊರಟ್ಟಿ, ಟಿ.ಎ.ಶರವಣ ಮೊದಲಾದ ನಾಯಕರ ನಿಯೋಗವೊಂದು ದೇವೇಗೌಡರನ್ನು ಭೇಟಿಯಾಗಿ ಕುಮಾರಸ್ವಾಮಿ ವಿರುದ್ಧ ದೂರು ಹೇಳಿಕೊಂಡಿದ್ದರು. ಅವರೆಲ್ಲ ರೆಸಾರ್ಟ್ ಬಂಡಾಯಕ್ಕೂ ಅಣಿಯಾಗಿದ್ದರು. ಕೊನೇಕ್ಷಣದಲ್ಲಿ ಅದು ರದ್ದಾಯ್ತು. ಆದರೆ ಜಿ.ಟಿ.ದೇವೇಗೌಡ, ಸಿ.ಎಸ್.ಪುಟ್ಟರಾಜು ಥರದ ನಾಯಕರಿಗೆ ಇವತ್ತಿಗೂ ಬೇಗುದಿ ಶಮನವಾಗಿಲ್ಲ. ಬೈ ಎಲೆಕ್ಷನ್ ಹೊರಬಿದ್ದ ಬೆನ್ನಿಗೇ ಜೆಡಿಎಸ್‍ನ ವೈಎಸ್‍ವಿ ದತ್ತ, “ಪಕ್ಷವನ್ನು ಉಳಿಸೋದು ದಿನೇದಿನೆ ಕಷ್ಟವಾಗುತ್ತಿರೋದ್ರಿಂದ ಈಗ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಯ ಬಂದಿದೆ. ಈ ಕಠಿಣ ನಿರ್ಧಾರ ತಗೋಳದಿದ್ರೆ ಪಕ್ಷಕ್ಕೆ ಉಳಿಗಾಲವಿಲ್ಲ ಅಂತ ದೇವೇಗೌಡರಿಗೆ ನಾನೇ ಹೇಳ್ತೀನಿ” ಎಂದು ಹೇಳಿರುವುದು ಜೆಡಿಎಸ್ ಒಳಗಿನ ಬೇಗುದಿಯನ್ನು ಸೂಚಿಸುತ್ತದೆ. ಈ ಫಲಿತಾಂಶವು ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಟ್ಟು ಕೂತಿರುವ ನಾಯಕರ ಸಂಖ್ಯೆಯನ್ನು ಮತ್ತು ಅವರ ಧೈರ್ಯವನ್ನು ಹಿಗ್ಗಿಸಿದರೆ ಅಚ್ಚರಿಯಿಲ್ಲ.

ದೇವೇಗೌಡರಿಗೆ ಇಂತಹ ಆಂತರಿಕ ಬಂಡಾಯಗಳೇನು ಹೊಸದಲ್ಲ. ಆದರೆ ಒಕ್ಕಲಿಗ ಸಮುದಾಯವೇ ತಮ್ಮ ಕುಟುಂಬದಿಂದ ನಿಧಾನಕ್ಕೆ ಹಿಂದೆ ಸರಿಯುತ್ತಿರುವುದು ಮಾತ್ರ ಅವರ `ಫೀನಿಕ್ಸ್’ ಮನಸ್ಸನ್ನು ಕಂಗೆಡಿಸದೇ ಇರಲಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಬ್ಬ ವ್ಯಕ್ತಿ ಎಲ್ಲಾ ಕಾಲಕ್ಕೂ, ಎಲ್ಲಾ ಜನರನ್ನೂ ಮೂರ್ಖರನ್ನಾಗಿಸುವುದು ಸಾಧ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...