Homeಕರ್ನಾಟಕ`ಫೀನಿಕ್ಸ್’ ಗೌಡರ `ಬ್ರಹ್ಮಾಸ್ತ್ರ’ ಶಾಶ್ವತವಾಗಿ ಮಂಕಾಯಿತೇ?

`ಫೀನಿಕ್ಸ್’ ಗೌಡರ `ಬ್ರಹ್ಮಾಸ್ತ್ರ’ ಶಾಶ್ವತವಾಗಿ ಮಂಕಾಯಿತೇ?

- Advertisement -
- Advertisement -

ಕರ್ನಾಟಕ ರಾಜಕಾರಣದ ಮಟ್ಟಿಗೆ `ಫೀನಿಕ್ಸ್ ಪೊಲಿಟಿಷಿಯನ್’ ಅಂತಲೇ ಹೆಸರಾದ ದೇವೇಗೌಡರು ಈ ಉಪಚುನಾವಣೆಯ ಫಲಿತಾಂಶದ ನಂತರ ಗಂಭೀರ ಆತ್ಮವಿಮರ್ಶೆ ಮಾಡಿಕೊಳ್ಳಲೇಬೇಕಾದ ಸಂದಿಗ್ಧತೆ ಎದುರಾಗಿದೆ. ಜೆಡಿಎಸ್‍ನ ಶೂನ್ಯ ಸಂಪಾದನೆ ತಳ್ಳಿಹಾಕುವಂತಹ ಸಂಗತಿಯಲ್ಲ. ಯಾರು ಏನೇ ಹೇಳಲಿ ದೇವೇಗೌಡರ ಪೊಲಿಟಿಕ್ಸ್ ನಿಂತಿರುವುದೇ ಜಾತಿರಾಜಕಾರಣದ ಬುನಾದಿಯ ಮೇಲೆ. ಪ್ರಧಾನಿ ಹುದ್ದೆಗೇರಿ `ರಾಷ್ಟ್ರೀಯ ನಾಯಕ’ನಾಗುವ ವೈಯಕ್ತಿಕ ಅವಕಾಶ ಒದಗಿಬಂದಾಗಲು ಅವರು ತಮ್ಮ ಪಕ್ಷವನ್ನು `ಜಾತಿ ಕಂಫರ್ಟ್ ಜೋನ್’ನಿಂದ ಆಚೆಗೆ ಹರಡುವ ಪ್ರಯತ್ನವನ್ನೇ ಮಾಡಲಿಲ್ಲ. ಇತ್ತ ಕುಮಾರಸ್ವಾಮಿ ಎರಡೆರಡು ಬಾರಿ ಮುಖ್ಯಮಂತ್ರಿಯಾದರು ಹಳೇ ಮೈಸೂರು ಪ್ರಾಂತ್ಯದಾಚೆಗೆ ಜೆಡಿಎಸ್ ತನ್ನ ಪ್ರಭಾವ ವಿಸ್ತರಿಸಲಿಲ್ಲ. ಕಾರಣ ಸ್ಪಷ್ಟ. ರಾಜ್ಯದ ರಾಜಕಾರಣವನ್ನು ನಿರ್ಧರಿಸಬಲ್ಲ ಎರಡು ಪ್ರಭಾವಿ ಜಾತಿಗಳಲ್ಲಿ ಒಂದಾದ ಒಕ್ಕಲಿಗ ವೋಟ್ ಬ್ಯಾಂಕ್ ದಾಟುವ ಯಾವ ರಿಸ್ಕೂ ದೇವೇಗೌಡರಿಗಾಗಲಿ, ಅವರ ಕುಟುಂಬಕ್ಕಾಗಿ ಬೇಕಾಗಿರಲಿಲ್ಲ. ಏನಿಲ್ಲವೆಂದರೂ 35 ರಿಂದ 40 ಸೀಟುಗಳನ್ನು ಗೆಲ್ಲಿಸಬಹುದಾದ ಆರೇಳು ಜಿಲ್ಲೆಗಳ ಪ್ರಭಾವಿ ಒಕ್ಕಲಿಗ ಸಮುದಾಯದ ಅಧಿಪತ್ಯವನ್ನು ಸಿದ್ಧಿಸಿಕೊಂಡರೆ ರಾಜಕಾರಣದಲ್ಲಿ ಚಲಾವಣೆಗೆ ಬರುವುದು ಕಷ್ಟವೇನಲ್ಲ. ಇದು ಜೆಡಿಎಸ್‍ನ ಲಾಜಿಕ್ಕು. ಇಷ್ಟು ದಿನ ಒಕ್ಕಲಿಗ ಸಮುದಾಯವು ಕೂಡಾ ದೇವೇಗೌಡರು ಮತ್ತು ಜೆಡಿಎಸ್ ಅನ್ನು ತಮ್ಮ ಜಾತಿ ಅಸ್ಮಿತೆಯ ಭಾಗವಾಗಿಯೇ ಕಂಡಿದ್ದರಿಂದ ಜೆಡಿಎಸ್, ಒಕ್ಕಲಿಗ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಎಂಥಾ ಪ್ರತಿರೋಧಗಳು ಎದುರಾದರೂ ಗೆಲುವಿನ ದಡ ಮುಟ್ಟುತ್ತಿತ್ತು. ಈ ಲೆಕ್ಕಾಚಾರದ ಅಡಿಯಲ್ಲೆ ದೊಡ್ಡದೊಡ್ಡ ಘಟಾನುಘಟಿ ನಾಯಕರುಗಳನ್ನೂ ಸೈಡ್‍ಲೈನ್ ಮಾಡಿ ತಮ್ಮ ಕುಟುಂಬ ರಾಜಕಾರಣವನ್ನು ವಿಸ್ತರಿಸುತ್ತಾ ಬಂದರು. ಆದರೆ ಫಲಿತಾಂಶ ಅವರ ಜಾತಿ ರಾಜಕಾರಣದ ಅಡಿಪಾಯಕ್ಕೇ ಭರ್ಜರಿ ಏಟು ಕೊಟ್ಟಿದೆ.

ಉಪ ಚುನಾವಣೆ ನಡೆದ ಕೆ.ಆರ್.ಪೇಟೆ, ಚಿಕ್ಕಬಳ್ಳಾಪುರ, ಹೊಸಕೋಟೆ ಮತ್ತು ಹುಣಸೂರು ಕ್ಷೇತ್ರಗಳು ಜೆಡಿಎಸ್‍ನ ಭದ್ರ ಬೇರುಗಳಿರುವ ಕ್ಷೇತ್ರಗಳು. ಇಲ್ಲಿ ಒಕ್ಕಲಿಗ ಮತದಾರರೇ ನಿರ್ಣಾಯಕ. ಆದರೆ ಈ ಎಲ್ಲಾ ಕ್ಷೇತ್ರಗಳಲ್ಲಿ ಜೆಡಿಎಸ್ ಸೋತಿದೆ. ಹೊಸಕೋಟೆಯಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡರನ್ನು ಬೆಂಬಲಿಸುವ ಮೂಲಕ ಜೆಡಿಎಸ್ ತನ್ನ ಮತದಾರರನ್ನು ಬೇರೆಯವರತ್ತ ಕೈಚೆಲ್ಲಿ ಕುಳಿತುಕೊಂಡಿದ್ದರೆ, ಹುಣಸೂರು ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಪಾರ್ಟಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಹೊಸಕೋಟೆ ಹೊರತುಪಡಿಸಿ ಇನ್ನುಳಿದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಇದೇ ಮೊದಲ ಬಾರಿ ಗೆಲುವಿನ ನಗೆ ಬೀರಿದೆ. ನಿರ್ದಿಷ್ಟವಾಗಿ ಕೆ.ಆರ್.ಪೇಟೆಯಲ್ಲಿ ಬಿಜೆಪಿಯ ನಾರಾಯಣ ಗೌಡ ಗೆದ್ದಿರೋದು ಜೆಡಿಎಸ್‍ಗೆ ದೊಡ್ಡ ಆಘಾತವೇ ಸರಿ. ಯಾಕೆಂದರೆ ದೇವೇಗೌಡರ ಕುಟುಂಬ ಈ ಕ್ಷೇತ್ರವನ್ನು ತಮ್ಮ ಪ್ರತಿಷ್ಠೆಯ ಕಣವಾಗಿ ಸ್ವೀಕರಿಸಿತ್ತು. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿಯ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸುವಷ್ಟರಮಟ್ಟಿಗೆ ಇಲ್ಲಿ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಒಕ್ಕಲಿಗರು ದೇವೇಗೌಡರ ಮೇಲಿನ ನಿಷ್ಠೆಯಿಂದ ವಿಮುಖರಾದ್ದರಿಂದ ಯಡ್ಯೂರಪ್ಪನವರ ತವರು ಕ್ಷೇತ್ರವಾದ ಇಲ್ಲಿ ಬಿಜೆಪಿ ಚೊಚ್ಚಲ ನಗೆ ಬೀರಿದೆ.

ಹಾಗೆ ನೋಡಿದರೆ, ಕಳೆದ ಲೋಕಸಭಾ ಚುನಾವಣೆಯಲ್ಲೆ ದೇವೇಗೌಡರ `ಜಾತಿ ಬ್ರಹ್ಮಾಸ್ತ್ರ’ ತನ್ನ ಮೊನಚು ಕಳೆದುಕೊಂಡಿದ್ದರ ಸೂಚನೆಗಳು ಲಭಿಸಿದ್ದವು. ಇಪ್ಪತ್ತೆಂಟು ಕ್ಷೇತ್ರಗಳ ಪೈಕಿ ಜೆಡಿಎಸ್ ಗೆಲ್ಲಲು ಸಾಧ್ಯವಾದದ್ದು ಕೇವಲ ಒಂದರಲ್ಲಿ ಮಾತ್ರ. ಸ್ವತಃ ದೇವೇಗೌಡರು ಮತ್ತವರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ, ಕ್ರಮವಾಗಿ ತುಮಕೂರು ಹಾಗೂ ಮಂಡ್ಯದಲ್ಲಿ ಸೋಲನುಭವಿಸಿದ್ದರು. ಇವೆರಡೂ ಒಕ್ಕಲಿಗ ಮತದಾರರ ಪ್ರಾಬಲ್ಯವಿರುವ ಕ್ಷೇತ್ರಗಳು ಅನ್ನೋದು ಇಲ್ಲಿ ಗಮನಾರ್ಹ. ಹಾಸನದಲ್ಲಿ ಎಚ್.ಡಿ.ರೇವಣ್ಣ ಮೈಚಳಿ ಬಿಟ್ಟು ತಮ್ಮ ಕಾಂಗ್ರೆಸ್ ವಿರೋಧಿಗಳ ಮನೆಗೂ ಹೋಗಿ ರಾಜಿಸಂಧಾನಕ್ಕೆ ಮುಂದಾಗದಿದ್ದರೆ ಜೆಡಿಎಸ್ ಒಂದೂ ಸ್ಥಾನವಿಲ್ಲದೆ ಭಾರೀ ಮುಖಭಂಗ ಅನುಭವಿಸಬೇಕಾಗುತ್ತಿತ್ತೇನೊ.
ಮಂಡ್ಯದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್‍ರ ಎದುರು ತಮ್ಮ ಕುಟುಂಬದ ನಿಖಿಲ್ ಕುಮಾರಸ್ವಾಮಿಯನ್ನು ಅಖಾಡಕ್ಕಿಳಿಸಿದ್ದು ದೇವೇಗೌಡರು ಮಾಡಿದ ದೊಡ್ಡ ಯಡವಟ್ಟು. ಒಕ್ಕಲಿಗರು ಮೊದಲ ಬಾರಿ ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧ ದನಿ ಬಿಚ್ಚಲು ಅದು ಅವಕಾಶ ಮಾಡಿಕೊಟ್ಟಿತು. ಅದರ ಪ್ರಭಾವವನ್ನು ಸ್ವತಃ ಗೌಡರು ತುಮಕೂರಿನಲ್ಲೂ ಅನುಭವಿಸಬೇಕಾಗಿ ಬಂದಿತು.

ಈ ಉಪಚುನಾವಣೆಯ ಫಲಿತಾಂಶ ಗೌಡರ ರಾಜಕಾರಣದಿಂದ ಒಕ್ಕಲಿಗರು ಮತ್ತಷ್ಟು ವಿಮುಖರಾಗಿರುವುದನ್ನು ಒತ್ತಿ ಹೇಳುತ್ತಿದೆ. ಅಧಿಕಾರಕ್ಕಾಗಿ ಯಾವ ಪಕ್ಷದ ಜೊತೆಗೆ ಬೇಕಾದರೂ ಮೈತ್ರಿಗೆ ಸಿದ್ಧ ಎಂಬ ದೇವೇಗೌಡರ ಪಾರ್ಟಿಯ ಚಂಚಲ ನಿಲುವುಗಳು ಕೂಡಾ ಒಕ್ಕಲಿಗರು ಜೆಡಿಎಸ್‍ನಿಂದ ದೂರ ಸರಿಯುವಂತೆ ಮಾಡಿರುವ ಸಾಧ್ಯತೆಯುಂಟು. ದೇವೇಗೌಡರು ತಮ್ಮನ್ನು ತಾವು ಒಕ್ಕಲಿಗ ನಾಯಕ ಎಂದು ಬಿಂಬಿಸಿಕೊಂಡಂತೆ, ಅವರ ಮಗ ಕುಮಾರಸ್ವಾಮಿಯವರು ತಮ್ಮನ್ನು ಪ್ರೊಜೆಕ್ಟ್ ಮಾಡಿಕೊಳ್ಳುವಲ್ಲಿ ಎಡವುತ್ತಾ ಬಂದದ್ದು ಕೂಡಾ ಜೆಡಿಎಸ್‍ನ ಈ ಪರಿಸ್ಥಿತಿಗೆ ಮತ್ತೊಂದು ಕಾರಣ.

ಕುಮಾರಸ್ವಾಮಿಯವರ ವೈಖರಿಗೆ ಪಕ್ಷದೊಳಗೇ ಆಂತರಿಕ ಬಂಡಾಯವೂ ಭುಗಿಲೆದ್ದಿದೆ. ಉಪಚುನಾವಣೆಗೆ ಕೆಲ ದಿನ ಮೊದಲು ಬಸವರಾಜ ಹೊರಟ್ಟಿ, ಟಿ.ಎ.ಶರವಣ ಮೊದಲಾದ ನಾಯಕರ ನಿಯೋಗವೊಂದು ದೇವೇಗೌಡರನ್ನು ಭೇಟಿಯಾಗಿ ಕುಮಾರಸ್ವಾಮಿ ವಿರುದ್ಧ ದೂರು ಹೇಳಿಕೊಂಡಿದ್ದರು. ಅವರೆಲ್ಲ ರೆಸಾರ್ಟ್ ಬಂಡಾಯಕ್ಕೂ ಅಣಿಯಾಗಿದ್ದರು. ಕೊನೇಕ್ಷಣದಲ್ಲಿ ಅದು ರದ್ದಾಯ್ತು. ಆದರೆ ಜಿ.ಟಿ.ದೇವೇಗೌಡ, ಸಿ.ಎಸ್.ಪುಟ್ಟರಾಜು ಥರದ ನಾಯಕರಿಗೆ ಇವತ್ತಿಗೂ ಬೇಗುದಿ ಶಮನವಾಗಿಲ್ಲ. ಬೈ ಎಲೆಕ್ಷನ್ ಹೊರಬಿದ್ದ ಬೆನ್ನಿಗೇ ಜೆಡಿಎಸ್‍ನ ವೈಎಸ್‍ವಿ ದತ್ತ, “ಪಕ್ಷವನ್ನು ಉಳಿಸೋದು ದಿನೇದಿನೆ ಕಷ್ಟವಾಗುತ್ತಿರೋದ್ರಿಂದ ಈಗ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಯ ಬಂದಿದೆ. ಈ ಕಠಿಣ ನಿರ್ಧಾರ ತಗೋಳದಿದ್ರೆ ಪಕ್ಷಕ್ಕೆ ಉಳಿಗಾಲವಿಲ್ಲ ಅಂತ ದೇವೇಗೌಡರಿಗೆ ನಾನೇ ಹೇಳ್ತೀನಿ” ಎಂದು ಹೇಳಿರುವುದು ಜೆಡಿಎಸ್ ಒಳಗಿನ ಬೇಗುದಿಯನ್ನು ಸೂಚಿಸುತ್ತದೆ. ಈ ಫಲಿತಾಂಶವು ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಟ್ಟು ಕೂತಿರುವ ನಾಯಕರ ಸಂಖ್ಯೆಯನ್ನು ಮತ್ತು ಅವರ ಧೈರ್ಯವನ್ನು ಹಿಗ್ಗಿಸಿದರೆ ಅಚ್ಚರಿಯಿಲ್ಲ.

ದೇವೇಗೌಡರಿಗೆ ಇಂತಹ ಆಂತರಿಕ ಬಂಡಾಯಗಳೇನು ಹೊಸದಲ್ಲ. ಆದರೆ ಒಕ್ಕಲಿಗ ಸಮುದಾಯವೇ ತಮ್ಮ ಕುಟುಂಬದಿಂದ ನಿಧಾನಕ್ಕೆ ಹಿಂದೆ ಸರಿಯುತ್ತಿರುವುದು ಮಾತ್ರ ಅವರ `ಫೀನಿಕ್ಸ್’ ಮನಸ್ಸನ್ನು ಕಂಗೆಡಿಸದೇ ಇರಲಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಬ್ಬ ವ್ಯಕ್ತಿ ಎಲ್ಲಾ ಕಾಲಕ್ಕೂ, ಎಲ್ಲಾ ಜನರನ್ನೂ ಮೂರ್ಖರನ್ನಾಗಿಸುವುದು ಸಾಧ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...