Homeಕರ್ನಾಟಕ`ಫೀನಿಕ್ಸ್’ ಗೌಡರ `ಬ್ರಹ್ಮಾಸ್ತ್ರ’ ಶಾಶ್ವತವಾಗಿ ಮಂಕಾಯಿತೇ?

`ಫೀನಿಕ್ಸ್’ ಗೌಡರ `ಬ್ರಹ್ಮಾಸ್ತ್ರ’ ಶಾಶ್ವತವಾಗಿ ಮಂಕಾಯಿತೇ?

- Advertisement -
- Advertisement -

ಕರ್ನಾಟಕ ರಾಜಕಾರಣದ ಮಟ್ಟಿಗೆ `ಫೀನಿಕ್ಸ್ ಪೊಲಿಟಿಷಿಯನ್’ ಅಂತಲೇ ಹೆಸರಾದ ದೇವೇಗೌಡರು ಈ ಉಪಚುನಾವಣೆಯ ಫಲಿತಾಂಶದ ನಂತರ ಗಂಭೀರ ಆತ್ಮವಿಮರ್ಶೆ ಮಾಡಿಕೊಳ್ಳಲೇಬೇಕಾದ ಸಂದಿಗ್ಧತೆ ಎದುರಾಗಿದೆ. ಜೆಡಿಎಸ್‍ನ ಶೂನ್ಯ ಸಂಪಾದನೆ ತಳ್ಳಿಹಾಕುವಂತಹ ಸಂಗತಿಯಲ್ಲ. ಯಾರು ಏನೇ ಹೇಳಲಿ ದೇವೇಗೌಡರ ಪೊಲಿಟಿಕ್ಸ್ ನಿಂತಿರುವುದೇ ಜಾತಿರಾಜಕಾರಣದ ಬುನಾದಿಯ ಮೇಲೆ. ಪ್ರಧಾನಿ ಹುದ್ದೆಗೇರಿ `ರಾಷ್ಟ್ರೀಯ ನಾಯಕ’ನಾಗುವ ವೈಯಕ್ತಿಕ ಅವಕಾಶ ಒದಗಿಬಂದಾಗಲು ಅವರು ತಮ್ಮ ಪಕ್ಷವನ್ನು `ಜಾತಿ ಕಂಫರ್ಟ್ ಜೋನ್’ನಿಂದ ಆಚೆಗೆ ಹರಡುವ ಪ್ರಯತ್ನವನ್ನೇ ಮಾಡಲಿಲ್ಲ. ಇತ್ತ ಕುಮಾರಸ್ವಾಮಿ ಎರಡೆರಡು ಬಾರಿ ಮುಖ್ಯಮಂತ್ರಿಯಾದರು ಹಳೇ ಮೈಸೂರು ಪ್ರಾಂತ್ಯದಾಚೆಗೆ ಜೆಡಿಎಸ್ ತನ್ನ ಪ್ರಭಾವ ವಿಸ್ತರಿಸಲಿಲ್ಲ. ಕಾರಣ ಸ್ಪಷ್ಟ. ರಾಜ್ಯದ ರಾಜಕಾರಣವನ್ನು ನಿರ್ಧರಿಸಬಲ್ಲ ಎರಡು ಪ್ರಭಾವಿ ಜಾತಿಗಳಲ್ಲಿ ಒಂದಾದ ಒಕ್ಕಲಿಗ ವೋಟ್ ಬ್ಯಾಂಕ್ ದಾಟುವ ಯಾವ ರಿಸ್ಕೂ ದೇವೇಗೌಡರಿಗಾಗಲಿ, ಅವರ ಕುಟುಂಬಕ್ಕಾಗಿ ಬೇಕಾಗಿರಲಿಲ್ಲ. ಏನಿಲ್ಲವೆಂದರೂ 35 ರಿಂದ 40 ಸೀಟುಗಳನ್ನು ಗೆಲ್ಲಿಸಬಹುದಾದ ಆರೇಳು ಜಿಲ್ಲೆಗಳ ಪ್ರಭಾವಿ ಒಕ್ಕಲಿಗ ಸಮುದಾಯದ ಅಧಿಪತ್ಯವನ್ನು ಸಿದ್ಧಿಸಿಕೊಂಡರೆ ರಾಜಕಾರಣದಲ್ಲಿ ಚಲಾವಣೆಗೆ ಬರುವುದು ಕಷ್ಟವೇನಲ್ಲ. ಇದು ಜೆಡಿಎಸ್‍ನ ಲಾಜಿಕ್ಕು. ಇಷ್ಟು ದಿನ ಒಕ್ಕಲಿಗ ಸಮುದಾಯವು ಕೂಡಾ ದೇವೇಗೌಡರು ಮತ್ತು ಜೆಡಿಎಸ್ ಅನ್ನು ತಮ್ಮ ಜಾತಿ ಅಸ್ಮಿತೆಯ ಭಾಗವಾಗಿಯೇ ಕಂಡಿದ್ದರಿಂದ ಜೆಡಿಎಸ್, ಒಕ್ಕಲಿಗ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಎಂಥಾ ಪ್ರತಿರೋಧಗಳು ಎದುರಾದರೂ ಗೆಲುವಿನ ದಡ ಮುಟ್ಟುತ್ತಿತ್ತು. ಈ ಲೆಕ್ಕಾಚಾರದ ಅಡಿಯಲ್ಲೆ ದೊಡ್ಡದೊಡ್ಡ ಘಟಾನುಘಟಿ ನಾಯಕರುಗಳನ್ನೂ ಸೈಡ್‍ಲೈನ್ ಮಾಡಿ ತಮ್ಮ ಕುಟುಂಬ ರಾಜಕಾರಣವನ್ನು ವಿಸ್ತರಿಸುತ್ತಾ ಬಂದರು. ಆದರೆ ಫಲಿತಾಂಶ ಅವರ ಜಾತಿ ರಾಜಕಾರಣದ ಅಡಿಪಾಯಕ್ಕೇ ಭರ್ಜರಿ ಏಟು ಕೊಟ್ಟಿದೆ.

ಉಪ ಚುನಾವಣೆ ನಡೆದ ಕೆ.ಆರ್.ಪೇಟೆ, ಚಿಕ್ಕಬಳ್ಳಾಪುರ, ಹೊಸಕೋಟೆ ಮತ್ತು ಹುಣಸೂರು ಕ್ಷೇತ್ರಗಳು ಜೆಡಿಎಸ್‍ನ ಭದ್ರ ಬೇರುಗಳಿರುವ ಕ್ಷೇತ್ರಗಳು. ಇಲ್ಲಿ ಒಕ್ಕಲಿಗ ಮತದಾರರೇ ನಿರ್ಣಾಯಕ. ಆದರೆ ಈ ಎಲ್ಲಾ ಕ್ಷೇತ್ರಗಳಲ್ಲಿ ಜೆಡಿಎಸ್ ಸೋತಿದೆ. ಹೊಸಕೋಟೆಯಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡರನ್ನು ಬೆಂಬಲಿಸುವ ಮೂಲಕ ಜೆಡಿಎಸ್ ತನ್ನ ಮತದಾರರನ್ನು ಬೇರೆಯವರತ್ತ ಕೈಚೆಲ್ಲಿ ಕುಳಿತುಕೊಂಡಿದ್ದರೆ, ಹುಣಸೂರು ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಪಾರ್ಟಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಹೊಸಕೋಟೆ ಹೊರತುಪಡಿಸಿ ಇನ್ನುಳಿದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಇದೇ ಮೊದಲ ಬಾರಿ ಗೆಲುವಿನ ನಗೆ ಬೀರಿದೆ. ನಿರ್ದಿಷ್ಟವಾಗಿ ಕೆ.ಆರ್.ಪೇಟೆಯಲ್ಲಿ ಬಿಜೆಪಿಯ ನಾರಾಯಣ ಗೌಡ ಗೆದ್ದಿರೋದು ಜೆಡಿಎಸ್‍ಗೆ ದೊಡ್ಡ ಆಘಾತವೇ ಸರಿ. ಯಾಕೆಂದರೆ ದೇವೇಗೌಡರ ಕುಟುಂಬ ಈ ಕ್ಷೇತ್ರವನ್ನು ತಮ್ಮ ಪ್ರತಿಷ್ಠೆಯ ಕಣವಾಗಿ ಸ್ವೀಕರಿಸಿತ್ತು. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿಯ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸುವಷ್ಟರಮಟ್ಟಿಗೆ ಇಲ್ಲಿ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಒಕ್ಕಲಿಗರು ದೇವೇಗೌಡರ ಮೇಲಿನ ನಿಷ್ಠೆಯಿಂದ ವಿಮುಖರಾದ್ದರಿಂದ ಯಡ್ಯೂರಪ್ಪನವರ ತವರು ಕ್ಷೇತ್ರವಾದ ಇಲ್ಲಿ ಬಿಜೆಪಿ ಚೊಚ್ಚಲ ನಗೆ ಬೀರಿದೆ.

ಹಾಗೆ ನೋಡಿದರೆ, ಕಳೆದ ಲೋಕಸಭಾ ಚುನಾವಣೆಯಲ್ಲೆ ದೇವೇಗೌಡರ `ಜಾತಿ ಬ್ರಹ್ಮಾಸ್ತ್ರ’ ತನ್ನ ಮೊನಚು ಕಳೆದುಕೊಂಡಿದ್ದರ ಸೂಚನೆಗಳು ಲಭಿಸಿದ್ದವು. ಇಪ್ಪತ್ತೆಂಟು ಕ್ಷೇತ್ರಗಳ ಪೈಕಿ ಜೆಡಿಎಸ್ ಗೆಲ್ಲಲು ಸಾಧ್ಯವಾದದ್ದು ಕೇವಲ ಒಂದರಲ್ಲಿ ಮಾತ್ರ. ಸ್ವತಃ ದೇವೇಗೌಡರು ಮತ್ತವರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ, ಕ್ರಮವಾಗಿ ತುಮಕೂರು ಹಾಗೂ ಮಂಡ್ಯದಲ್ಲಿ ಸೋಲನುಭವಿಸಿದ್ದರು. ಇವೆರಡೂ ಒಕ್ಕಲಿಗ ಮತದಾರರ ಪ್ರಾಬಲ್ಯವಿರುವ ಕ್ಷೇತ್ರಗಳು ಅನ್ನೋದು ಇಲ್ಲಿ ಗಮನಾರ್ಹ. ಹಾಸನದಲ್ಲಿ ಎಚ್.ಡಿ.ರೇವಣ್ಣ ಮೈಚಳಿ ಬಿಟ್ಟು ತಮ್ಮ ಕಾಂಗ್ರೆಸ್ ವಿರೋಧಿಗಳ ಮನೆಗೂ ಹೋಗಿ ರಾಜಿಸಂಧಾನಕ್ಕೆ ಮುಂದಾಗದಿದ್ದರೆ ಜೆಡಿಎಸ್ ಒಂದೂ ಸ್ಥಾನವಿಲ್ಲದೆ ಭಾರೀ ಮುಖಭಂಗ ಅನುಭವಿಸಬೇಕಾಗುತ್ತಿತ್ತೇನೊ.
ಮಂಡ್ಯದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್‍ರ ಎದುರು ತಮ್ಮ ಕುಟುಂಬದ ನಿಖಿಲ್ ಕುಮಾರಸ್ವಾಮಿಯನ್ನು ಅಖಾಡಕ್ಕಿಳಿಸಿದ್ದು ದೇವೇಗೌಡರು ಮಾಡಿದ ದೊಡ್ಡ ಯಡವಟ್ಟು. ಒಕ್ಕಲಿಗರು ಮೊದಲ ಬಾರಿ ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧ ದನಿ ಬಿಚ್ಚಲು ಅದು ಅವಕಾಶ ಮಾಡಿಕೊಟ್ಟಿತು. ಅದರ ಪ್ರಭಾವವನ್ನು ಸ್ವತಃ ಗೌಡರು ತುಮಕೂರಿನಲ್ಲೂ ಅನುಭವಿಸಬೇಕಾಗಿ ಬಂದಿತು.

ಈ ಉಪಚುನಾವಣೆಯ ಫಲಿತಾಂಶ ಗೌಡರ ರಾಜಕಾರಣದಿಂದ ಒಕ್ಕಲಿಗರು ಮತ್ತಷ್ಟು ವಿಮುಖರಾಗಿರುವುದನ್ನು ಒತ್ತಿ ಹೇಳುತ್ತಿದೆ. ಅಧಿಕಾರಕ್ಕಾಗಿ ಯಾವ ಪಕ್ಷದ ಜೊತೆಗೆ ಬೇಕಾದರೂ ಮೈತ್ರಿಗೆ ಸಿದ್ಧ ಎಂಬ ದೇವೇಗೌಡರ ಪಾರ್ಟಿಯ ಚಂಚಲ ನಿಲುವುಗಳು ಕೂಡಾ ಒಕ್ಕಲಿಗರು ಜೆಡಿಎಸ್‍ನಿಂದ ದೂರ ಸರಿಯುವಂತೆ ಮಾಡಿರುವ ಸಾಧ್ಯತೆಯುಂಟು. ದೇವೇಗೌಡರು ತಮ್ಮನ್ನು ತಾವು ಒಕ್ಕಲಿಗ ನಾಯಕ ಎಂದು ಬಿಂಬಿಸಿಕೊಂಡಂತೆ, ಅವರ ಮಗ ಕುಮಾರಸ್ವಾಮಿಯವರು ತಮ್ಮನ್ನು ಪ್ರೊಜೆಕ್ಟ್ ಮಾಡಿಕೊಳ್ಳುವಲ್ಲಿ ಎಡವುತ್ತಾ ಬಂದದ್ದು ಕೂಡಾ ಜೆಡಿಎಸ್‍ನ ಈ ಪರಿಸ್ಥಿತಿಗೆ ಮತ್ತೊಂದು ಕಾರಣ.

ಕುಮಾರಸ್ವಾಮಿಯವರ ವೈಖರಿಗೆ ಪಕ್ಷದೊಳಗೇ ಆಂತರಿಕ ಬಂಡಾಯವೂ ಭುಗಿಲೆದ್ದಿದೆ. ಉಪಚುನಾವಣೆಗೆ ಕೆಲ ದಿನ ಮೊದಲು ಬಸವರಾಜ ಹೊರಟ್ಟಿ, ಟಿ.ಎ.ಶರವಣ ಮೊದಲಾದ ನಾಯಕರ ನಿಯೋಗವೊಂದು ದೇವೇಗೌಡರನ್ನು ಭೇಟಿಯಾಗಿ ಕುಮಾರಸ್ವಾಮಿ ವಿರುದ್ಧ ದೂರು ಹೇಳಿಕೊಂಡಿದ್ದರು. ಅವರೆಲ್ಲ ರೆಸಾರ್ಟ್ ಬಂಡಾಯಕ್ಕೂ ಅಣಿಯಾಗಿದ್ದರು. ಕೊನೇಕ್ಷಣದಲ್ಲಿ ಅದು ರದ್ದಾಯ್ತು. ಆದರೆ ಜಿ.ಟಿ.ದೇವೇಗೌಡ, ಸಿ.ಎಸ್.ಪುಟ್ಟರಾಜು ಥರದ ನಾಯಕರಿಗೆ ಇವತ್ತಿಗೂ ಬೇಗುದಿ ಶಮನವಾಗಿಲ್ಲ. ಬೈ ಎಲೆಕ್ಷನ್ ಹೊರಬಿದ್ದ ಬೆನ್ನಿಗೇ ಜೆಡಿಎಸ್‍ನ ವೈಎಸ್‍ವಿ ದತ್ತ, “ಪಕ್ಷವನ್ನು ಉಳಿಸೋದು ದಿನೇದಿನೆ ಕಷ್ಟವಾಗುತ್ತಿರೋದ್ರಿಂದ ಈಗ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಯ ಬಂದಿದೆ. ಈ ಕಠಿಣ ನಿರ್ಧಾರ ತಗೋಳದಿದ್ರೆ ಪಕ್ಷಕ್ಕೆ ಉಳಿಗಾಲವಿಲ್ಲ ಅಂತ ದೇವೇಗೌಡರಿಗೆ ನಾನೇ ಹೇಳ್ತೀನಿ” ಎಂದು ಹೇಳಿರುವುದು ಜೆಡಿಎಸ್ ಒಳಗಿನ ಬೇಗುದಿಯನ್ನು ಸೂಚಿಸುತ್ತದೆ. ಈ ಫಲಿತಾಂಶವು ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಟ್ಟು ಕೂತಿರುವ ನಾಯಕರ ಸಂಖ್ಯೆಯನ್ನು ಮತ್ತು ಅವರ ಧೈರ್ಯವನ್ನು ಹಿಗ್ಗಿಸಿದರೆ ಅಚ್ಚರಿಯಿಲ್ಲ.

ದೇವೇಗೌಡರಿಗೆ ಇಂತಹ ಆಂತರಿಕ ಬಂಡಾಯಗಳೇನು ಹೊಸದಲ್ಲ. ಆದರೆ ಒಕ್ಕಲಿಗ ಸಮುದಾಯವೇ ತಮ್ಮ ಕುಟುಂಬದಿಂದ ನಿಧಾನಕ್ಕೆ ಹಿಂದೆ ಸರಿಯುತ್ತಿರುವುದು ಮಾತ್ರ ಅವರ `ಫೀನಿಕ್ಸ್’ ಮನಸ್ಸನ್ನು ಕಂಗೆಡಿಸದೇ ಇರಲಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಬ್ಬ ವ್ಯಕ್ತಿ ಎಲ್ಲಾ ಕಾಲಕ್ಕೂ, ಎಲ್ಲಾ ಜನರನ್ನೂ ಮೂರ್ಖರನ್ನಾಗಿಸುವುದು ಸಾಧ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...