Homeಕರ್ನಾಟಕ`ಫೀನಿಕ್ಸ್’ ಗೌಡರ `ಬ್ರಹ್ಮಾಸ್ತ್ರ’ ಶಾಶ್ವತವಾಗಿ ಮಂಕಾಯಿತೇ?

`ಫೀನಿಕ್ಸ್’ ಗೌಡರ `ಬ್ರಹ್ಮಾಸ್ತ್ರ’ ಶಾಶ್ವತವಾಗಿ ಮಂಕಾಯಿತೇ?

- Advertisement -
- Advertisement -

ಕರ್ನಾಟಕ ರಾಜಕಾರಣದ ಮಟ್ಟಿಗೆ `ಫೀನಿಕ್ಸ್ ಪೊಲಿಟಿಷಿಯನ್’ ಅಂತಲೇ ಹೆಸರಾದ ದೇವೇಗೌಡರು ಈ ಉಪಚುನಾವಣೆಯ ಫಲಿತಾಂಶದ ನಂತರ ಗಂಭೀರ ಆತ್ಮವಿಮರ್ಶೆ ಮಾಡಿಕೊಳ್ಳಲೇಬೇಕಾದ ಸಂದಿಗ್ಧತೆ ಎದುರಾಗಿದೆ. ಜೆಡಿಎಸ್‍ನ ಶೂನ್ಯ ಸಂಪಾದನೆ ತಳ್ಳಿಹಾಕುವಂತಹ ಸಂಗತಿಯಲ್ಲ. ಯಾರು ಏನೇ ಹೇಳಲಿ ದೇವೇಗೌಡರ ಪೊಲಿಟಿಕ್ಸ್ ನಿಂತಿರುವುದೇ ಜಾತಿರಾಜಕಾರಣದ ಬುನಾದಿಯ ಮೇಲೆ. ಪ್ರಧಾನಿ ಹುದ್ದೆಗೇರಿ `ರಾಷ್ಟ್ರೀಯ ನಾಯಕ’ನಾಗುವ ವೈಯಕ್ತಿಕ ಅವಕಾಶ ಒದಗಿಬಂದಾಗಲು ಅವರು ತಮ್ಮ ಪಕ್ಷವನ್ನು `ಜಾತಿ ಕಂಫರ್ಟ್ ಜೋನ್’ನಿಂದ ಆಚೆಗೆ ಹರಡುವ ಪ್ರಯತ್ನವನ್ನೇ ಮಾಡಲಿಲ್ಲ. ಇತ್ತ ಕುಮಾರಸ್ವಾಮಿ ಎರಡೆರಡು ಬಾರಿ ಮುಖ್ಯಮಂತ್ರಿಯಾದರು ಹಳೇ ಮೈಸೂರು ಪ್ರಾಂತ್ಯದಾಚೆಗೆ ಜೆಡಿಎಸ್ ತನ್ನ ಪ್ರಭಾವ ವಿಸ್ತರಿಸಲಿಲ್ಲ. ಕಾರಣ ಸ್ಪಷ್ಟ. ರಾಜ್ಯದ ರಾಜಕಾರಣವನ್ನು ನಿರ್ಧರಿಸಬಲ್ಲ ಎರಡು ಪ್ರಭಾವಿ ಜಾತಿಗಳಲ್ಲಿ ಒಂದಾದ ಒಕ್ಕಲಿಗ ವೋಟ್ ಬ್ಯಾಂಕ್ ದಾಟುವ ಯಾವ ರಿಸ್ಕೂ ದೇವೇಗೌಡರಿಗಾಗಲಿ, ಅವರ ಕುಟುಂಬಕ್ಕಾಗಿ ಬೇಕಾಗಿರಲಿಲ್ಲ. ಏನಿಲ್ಲವೆಂದರೂ 35 ರಿಂದ 40 ಸೀಟುಗಳನ್ನು ಗೆಲ್ಲಿಸಬಹುದಾದ ಆರೇಳು ಜಿಲ್ಲೆಗಳ ಪ್ರಭಾವಿ ಒಕ್ಕಲಿಗ ಸಮುದಾಯದ ಅಧಿಪತ್ಯವನ್ನು ಸಿದ್ಧಿಸಿಕೊಂಡರೆ ರಾಜಕಾರಣದಲ್ಲಿ ಚಲಾವಣೆಗೆ ಬರುವುದು ಕಷ್ಟವೇನಲ್ಲ. ಇದು ಜೆಡಿಎಸ್‍ನ ಲಾಜಿಕ್ಕು. ಇಷ್ಟು ದಿನ ಒಕ್ಕಲಿಗ ಸಮುದಾಯವು ಕೂಡಾ ದೇವೇಗೌಡರು ಮತ್ತು ಜೆಡಿಎಸ್ ಅನ್ನು ತಮ್ಮ ಜಾತಿ ಅಸ್ಮಿತೆಯ ಭಾಗವಾಗಿಯೇ ಕಂಡಿದ್ದರಿಂದ ಜೆಡಿಎಸ್, ಒಕ್ಕಲಿಗ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಎಂಥಾ ಪ್ರತಿರೋಧಗಳು ಎದುರಾದರೂ ಗೆಲುವಿನ ದಡ ಮುಟ್ಟುತ್ತಿತ್ತು. ಈ ಲೆಕ್ಕಾಚಾರದ ಅಡಿಯಲ್ಲೆ ದೊಡ್ಡದೊಡ್ಡ ಘಟಾನುಘಟಿ ನಾಯಕರುಗಳನ್ನೂ ಸೈಡ್‍ಲೈನ್ ಮಾಡಿ ತಮ್ಮ ಕುಟುಂಬ ರಾಜಕಾರಣವನ್ನು ವಿಸ್ತರಿಸುತ್ತಾ ಬಂದರು. ಆದರೆ ಫಲಿತಾಂಶ ಅವರ ಜಾತಿ ರಾಜಕಾರಣದ ಅಡಿಪಾಯಕ್ಕೇ ಭರ್ಜರಿ ಏಟು ಕೊಟ್ಟಿದೆ.

ಉಪ ಚುನಾವಣೆ ನಡೆದ ಕೆ.ಆರ್.ಪೇಟೆ, ಚಿಕ್ಕಬಳ್ಳಾಪುರ, ಹೊಸಕೋಟೆ ಮತ್ತು ಹುಣಸೂರು ಕ್ಷೇತ್ರಗಳು ಜೆಡಿಎಸ್‍ನ ಭದ್ರ ಬೇರುಗಳಿರುವ ಕ್ಷೇತ್ರಗಳು. ಇಲ್ಲಿ ಒಕ್ಕಲಿಗ ಮತದಾರರೇ ನಿರ್ಣಾಯಕ. ಆದರೆ ಈ ಎಲ್ಲಾ ಕ್ಷೇತ್ರಗಳಲ್ಲಿ ಜೆಡಿಎಸ್ ಸೋತಿದೆ. ಹೊಸಕೋಟೆಯಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡರನ್ನು ಬೆಂಬಲಿಸುವ ಮೂಲಕ ಜೆಡಿಎಸ್ ತನ್ನ ಮತದಾರರನ್ನು ಬೇರೆಯವರತ್ತ ಕೈಚೆಲ್ಲಿ ಕುಳಿತುಕೊಂಡಿದ್ದರೆ, ಹುಣಸೂರು ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಪಾರ್ಟಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಹೊಸಕೋಟೆ ಹೊರತುಪಡಿಸಿ ಇನ್ನುಳಿದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಇದೇ ಮೊದಲ ಬಾರಿ ಗೆಲುವಿನ ನಗೆ ಬೀರಿದೆ. ನಿರ್ದಿಷ್ಟವಾಗಿ ಕೆ.ಆರ್.ಪೇಟೆಯಲ್ಲಿ ಬಿಜೆಪಿಯ ನಾರಾಯಣ ಗೌಡ ಗೆದ್ದಿರೋದು ಜೆಡಿಎಸ್‍ಗೆ ದೊಡ್ಡ ಆಘಾತವೇ ಸರಿ. ಯಾಕೆಂದರೆ ದೇವೇಗೌಡರ ಕುಟುಂಬ ಈ ಕ್ಷೇತ್ರವನ್ನು ತಮ್ಮ ಪ್ರತಿಷ್ಠೆಯ ಕಣವಾಗಿ ಸ್ವೀಕರಿಸಿತ್ತು. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿಯ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸುವಷ್ಟರಮಟ್ಟಿಗೆ ಇಲ್ಲಿ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಒಕ್ಕಲಿಗರು ದೇವೇಗೌಡರ ಮೇಲಿನ ನಿಷ್ಠೆಯಿಂದ ವಿಮುಖರಾದ್ದರಿಂದ ಯಡ್ಯೂರಪ್ಪನವರ ತವರು ಕ್ಷೇತ್ರವಾದ ಇಲ್ಲಿ ಬಿಜೆಪಿ ಚೊಚ್ಚಲ ನಗೆ ಬೀರಿದೆ.

ಹಾಗೆ ನೋಡಿದರೆ, ಕಳೆದ ಲೋಕಸಭಾ ಚುನಾವಣೆಯಲ್ಲೆ ದೇವೇಗೌಡರ `ಜಾತಿ ಬ್ರಹ್ಮಾಸ್ತ್ರ’ ತನ್ನ ಮೊನಚು ಕಳೆದುಕೊಂಡಿದ್ದರ ಸೂಚನೆಗಳು ಲಭಿಸಿದ್ದವು. ಇಪ್ಪತ್ತೆಂಟು ಕ್ಷೇತ್ರಗಳ ಪೈಕಿ ಜೆಡಿಎಸ್ ಗೆಲ್ಲಲು ಸಾಧ್ಯವಾದದ್ದು ಕೇವಲ ಒಂದರಲ್ಲಿ ಮಾತ್ರ. ಸ್ವತಃ ದೇವೇಗೌಡರು ಮತ್ತವರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ, ಕ್ರಮವಾಗಿ ತುಮಕೂರು ಹಾಗೂ ಮಂಡ್ಯದಲ್ಲಿ ಸೋಲನುಭವಿಸಿದ್ದರು. ಇವೆರಡೂ ಒಕ್ಕಲಿಗ ಮತದಾರರ ಪ್ರಾಬಲ್ಯವಿರುವ ಕ್ಷೇತ್ರಗಳು ಅನ್ನೋದು ಇಲ್ಲಿ ಗಮನಾರ್ಹ. ಹಾಸನದಲ್ಲಿ ಎಚ್.ಡಿ.ರೇವಣ್ಣ ಮೈಚಳಿ ಬಿಟ್ಟು ತಮ್ಮ ಕಾಂಗ್ರೆಸ್ ವಿರೋಧಿಗಳ ಮನೆಗೂ ಹೋಗಿ ರಾಜಿಸಂಧಾನಕ್ಕೆ ಮುಂದಾಗದಿದ್ದರೆ ಜೆಡಿಎಸ್ ಒಂದೂ ಸ್ಥಾನವಿಲ್ಲದೆ ಭಾರೀ ಮುಖಭಂಗ ಅನುಭವಿಸಬೇಕಾಗುತ್ತಿತ್ತೇನೊ.
ಮಂಡ್ಯದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್‍ರ ಎದುರು ತಮ್ಮ ಕುಟುಂಬದ ನಿಖಿಲ್ ಕುಮಾರಸ್ವಾಮಿಯನ್ನು ಅಖಾಡಕ್ಕಿಳಿಸಿದ್ದು ದೇವೇಗೌಡರು ಮಾಡಿದ ದೊಡ್ಡ ಯಡವಟ್ಟು. ಒಕ್ಕಲಿಗರು ಮೊದಲ ಬಾರಿ ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧ ದನಿ ಬಿಚ್ಚಲು ಅದು ಅವಕಾಶ ಮಾಡಿಕೊಟ್ಟಿತು. ಅದರ ಪ್ರಭಾವವನ್ನು ಸ್ವತಃ ಗೌಡರು ತುಮಕೂರಿನಲ್ಲೂ ಅನುಭವಿಸಬೇಕಾಗಿ ಬಂದಿತು.

ಈ ಉಪಚುನಾವಣೆಯ ಫಲಿತಾಂಶ ಗೌಡರ ರಾಜಕಾರಣದಿಂದ ಒಕ್ಕಲಿಗರು ಮತ್ತಷ್ಟು ವಿಮುಖರಾಗಿರುವುದನ್ನು ಒತ್ತಿ ಹೇಳುತ್ತಿದೆ. ಅಧಿಕಾರಕ್ಕಾಗಿ ಯಾವ ಪಕ್ಷದ ಜೊತೆಗೆ ಬೇಕಾದರೂ ಮೈತ್ರಿಗೆ ಸಿದ್ಧ ಎಂಬ ದೇವೇಗೌಡರ ಪಾರ್ಟಿಯ ಚಂಚಲ ನಿಲುವುಗಳು ಕೂಡಾ ಒಕ್ಕಲಿಗರು ಜೆಡಿಎಸ್‍ನಿಂದ ದೂರ ಸರಿಯುವಂತೆ ಮಾಡಿರುವ ಸಾಧ್ಯತೆಯುಂಟು. ದೇವೇಗೌಡರು ತಮ್ಮನ್ನು ತಾವು ಒಕ್ಕಲಿಗ ನಾಯಕ ಎಂದು ಬಿಂಬಿಸಿಕೊಂಡಂತೆ, ಅವರ ಮಗ ಕುಮಾರಸ್ವಾಮಿಯವರು ತಮ್ಮನ್ನು ಪ್ರೊಜೆಕ್ಟ್ ಮಾಡಿಕೊಳ್ಳುವಲ್ಲಿ ಎಡವುತ್ತಾ ಬಂದದ್ದು ಕೂಡಾ ಜೆಡಿಎಸ್‍ನ ಈ ಪರಿಸ್ಥಿತಿಗೆ ಮತ್ತೊಂದು ಕಾರಣ.

ಕುಮಾರಸ್ವಾಮಿಯವರ ವೈಖರಿಗೆ ಪಕ್ಷದೊಳಗೇ ಆಂತರಿಕ ಬಂಡಾಯವೂ ಭುಗಿಲೆದ್ದಿದೆ. ಉಪಚುನಾವಣೆಗೆ ಕೆಲ ದಿನ ಮೊದಲು ಬಸವರಾಜ ಹೊರಟ್ಟಿ, ಟಿ.ಎ.ಶರವಣ ಮೊದಲಾದ ನಾಯಕರ ನಿಯೋಗವೊಂದು ದೇವೇಗೌಡರನ್ನು ಭೇಟಿಯಾಗಿ ಕುಮಾರಸ್ವಾಮಿ ವಿರುದ್ಧ ದೂರು ಹೇಳಿಕೊಂಡಿದ್ದರು. ಅವರೆಲ್ಲ ರೆಸಾರ್ಟ್ ಬಂಡಾಯಕ್ಕೂ ಅಣಿಯಾಗಿದ್ದರು. ಕೊನೇಕ್ಷಣದಲ್ಲಿ ಅದು ರದ್ದಾಯ್ತು. ಆದರೆ ಜಿ.ಟಿ.ದೇವೇಗೌಡ, ಸಿ.ಎಸ್.ಪುಟ್ಟರಾಜು ಥರದ ನಾಯಕರಿಗೆ ಇವತ್ತಿಗೂ ಬೇಗುದಿ ಶಮನವಾಗಿಲ್ಲ. ಬೈ ಎಲೆಕ್ಷನ್ ಹೊರಬಿದ್ದ ಬೆನ್ನಿಗೇ ಜೆಡಿಎಸ್‍ನ ವೈಎಸ್‍ವಿ ದತ್ತ, “ಪಕ್ಷವನ್ನು ಉಳಿಸೋದು ದಿನೇದಿನೆ ಕಷ್ಟವಾಗುತ್ತಿರೋದ್ರಿಂದ ಈಗ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಯ ಬಂದಿದೆ. ಈ ಕಠಿಣ ನಿರ್ಧಾರ ತಗೋಳದಿದ್ರೆ ಪಕ್ಷಕ್ಕೆ ಉಳಿಗಾಲವಿಲ್ಲ ಅಂತ ದೇವೇಗೌಡರಿಗೆ ನಾನೇ ಹೇಳ್ತೀನಿ” ಎಂದು ಹೇಳಿರುವುದು ಜೆಡಿಎಸ್ ಒಳಗಿನ ಬೇಗುದಿಯನ್ನು ಸೂಚಿಸುತ್ತದೆ. ಈ ಫಲಿತಾಂಶವು ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಟ್ಟು ಕೂತಿರುವ ನಾಯಕರ ಸಂಖ್ಯೆಯನ್ನು ಮತ್ತು ಅವರ ಧೈರ್ಯವನ್ನು ಹಿಗ್ಗಿಸಿದರೆ ಅಚ್ಚರಿಯಿಲ್ಲ.

ದೇವೇಗೌಡರಿಗೆ ಇಂತಹ ಆಂತರಿಕ ಬಂಡಾಯಗಳೇನು ಹೊಸದಲ್ಲ. ಆದರೆ ಒಕ್ಕಲಿಗ ಸಮುದಾಯವೇ ತಮ್ಮ ಕುಟುಂಬದಿಂದ ನಿಧಾನಕ್ಕೆ ಹಿಂದೆ ಸರಿಯುತ್ತಿರುವುದು ಮಾತ್ರ ಅವರ `ಫೀನಿಕ್ಸ್’ ಮನಸ್ಸನ್ನು ಕಂಗೆಡಿಸದೇ ಇರಲಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಬ್ಬ ವ್ಯಕ್ತಿ ಎಲ್ಲಾ ಕಾಲಕ್ಕೂ, ಎಲ್ಲಾ ಜನರನ್ನೂ ಮೂರ್ಖರನ್ನಾಗಿಸುವುದು ಸಾಧ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...