Homeಕರ್ನಾಟಕ`ಫೀನಿಕ್ಸ್’ ಗೌಡರ `ಬ್ರಹ್ಮಾಸ್ತ್ರ’ ಶಾಶ್ವತವಾಗಿ ಮಂಕಾಯಿತೇ?

`ಫೀನಿಕ್ಸ್’ ಗೌಡರ `ಬ್ರಹ್ಮಾಸ್ತ್ರ’ ಶಾಶ್ವತವಾಗಿ ಮಂಕಾಯಿತೇ?

- Advertisement -
- Advertisement -

ಕರ್ನಾಟಕ ರಾಜಕಾರಣದ ಮಟ್ಟಿಗೆ `ಫೀನಿಕ್ಸ್ ಪೊಲಿಟಿಷಿಯನ್’ ಅಂತಲೇ ಹೆಸರಾದ ದೇವೇಗೌಡರು ಈ ಉಪಚುನಾವಣೆಯ ಫಲಿತಾಂಶದ ನಂತರ ಗಂಭೀರ ಆತ್ಮವಿಮರ್ಶೆ ಮಾಡಿಕೊಳ್ಳಲೇಬೇಕಾದ ಸಂದಿಗ್ಧತೆ ಎದುರಾಗಿದೆ. ಜೆಡಿಎಸ್‍ನ ಶೂನ್ಯ ಸಂಪಾದನೆ ತಳ್ಳಿಹಾಕುವಂತಹ ಸಂಗತಿಯಲ್ಲ. ಯಾರು ಏನೇ ಹೇಳಲಿ ದೇವೇಗೌಡರ ಪೊಲಿಟಿಕ್ಸ್ ನಿಂತಿರುವುದೇ ಜಾತಿರಾಜಕಾರಣದ ಬುನಾದಿಯ ಮೇಲೆ. ಪ್ರಧಾನಿ ಹುದ್ದೆಗೇರಿ `ರಾಷ್ಟ್ರೀಯ ನಾಯಕ’ನಾಗುವ ವೈಯಕ್ತಿಕ ಅವಕಾಶ ಒದಗಿಬಂದಾಗಲು ಅವರು ತಮ್ಮ ಪಕ್ಷವನ್ನು `ಜಾತಿ ಕಂಫರ್ಟ್ ಜೋನ್’ನಿಂದ ಆಚೆಗೆ ಹರಡುವ ಪ್ರಯತ್ನವನ್ನೇ ಮಾಡಲಿಲ್ಲ. ಇತ್ತ ಕುಮಾರಸ್ವಾಮಿ ಎರಡೆರಡು ಬಾರಿ ಮುಖ್ಯಮಂತ್ರಿಯಾದರು ಹಳೇ ಮೈಸೂರು ಪ್ರಾಂತ್ಯದಾಚೆಗೆ ಜೆಡಿಎಸ್ ತನ್ನ ಪ್ರಭಾವ ವಿಸ್ತರಿಸಲಿಲ್ಲ. ಕಾರಣ ಸ್ಪಷ್ಟ. ರಾಜ್ಯದ ರಾಜಕಾರಣವನ್ನು ನಿರ್ಧರಿಸಬಲ್ಲ ಎರಡು ಪ್ರಭಾವಿ ಜಾತಿಗಳಲ್ಲಿ ಒಂದಾದ ಒಕ್ಕಲಿಗ ವೋಟ್ ಬ್ಯಾಂಕ್ ದಾಟುವ ಯಾವ ರಿಸ್ಕೂ ದೇವೇಗೌಡರಿಗಾಗಲಿ, ಅವರ ಕುಟುಂಬಕ್ಕಾಗಿ ಬೇಕಾಗಿರಲಿಲ್ಲ. ಏನಿಲ್ಲವೆಂದರೂ 35 ರಿಂದ 40 ಸೀಟುಗಳನ್ನು ಗೆಲ್ಲಿಸಬಹುದಾದ ಆರೇಳು ಜಿಲ್ಲೆಗಳ ಪ್ರಭಾವಿ ಒಕ್ಕಲಿಗ ಸಮುದಾಯದ ಅಧಿಪತ್ಯವನ್ನು ಸಿದ್ಧಿಸಿಕೊಂಡರೆ ರಾಜಕಾರಣದಲ್ಲಿ ಚಲಾವಣೆಗೆ ಬರುವುದು ಕಷ್ಟವೇನಲ್ಲ. ಇದು ಜೆಡಿಎಸ್‍ನ ಲಾಜಿಕ್ಕು. ಇಷ್ಟು ದಿನ ಒಕ್ಕಲಿಗ ಸಮುದಾಯವು ಕೂಡಾ ದೇವೇಗೌಡರು ಮತ್ತು ಜೆಡಿಎಸ್ ಅನ್ನು ತಮ್ಮ ಜಾತಿ ಅಸ್ಮಿತೆಯ ಭಾಗವಾಗಿಯೇ ಕಂಡಿದ್ದರಿಂದ ಜೆಡಿಎಸ್, ಒಕ್ಕಲಿಗ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಎಂಥಾ ಪ್ರತಿರೋಧಗಳು ಎದುರಾದರೂ ಗೆಲುವಿನ ದಡ ಮುಟ್ಟುತ್ತಿತ್ತು. ಈ ಲೆಕ್ಕಾಚಾರದ ಅಡಿಯಲ್ಲೆ ದೊಡ್ಡದೊಡ್ಡ ಘಟಾನುಘಟಿ ನಾಯಕರುಗಳನ್ನೂ ಸೈಡ್‍ಲೈನ್ ಮಾಡಿ ತಮ್ಮ ಕುಟುಂಬ ರಾಜಕಾರಣವನ್ನು ವಿಸ್ತರಿಸುತ್ತಾ ಬಂದರು. ಆದರೆ ಫಲಿತಾಂಶ ಅವರ ಜಾತಿ ರಾಜಕಾರಣದ ಅಡಿಪಾಯಕ್ಕೇ ಭರ್ಜರಿ ಏಟು ಕೊಟ್ಟಿದೆ.

ಉಪ ಚುನಾವಣೆ ನಡೆದ ಕೆ.ಆರ್.ಪೇಟೆ, ಚಿಕ್ಕಬಳ್ಳಾಪುರ, ಹೊಸಕೋಟೆ ಮತ್ತು ಹುಣಸೂರು ಕ್ಷೇತ್ರಗಳು ಜೆಡಿಎಸ್‍ನ ಭದ್ರ ಬೇರುಗಳಿರುವ ಕ್ಷೇತ್ರಗಳು. ಇಲ್ಲಿ ಒಕ್ಕಲಿಗ ಮತದಾರರೇ ನಿರ್ಣಾಯಕ. ಆದರೆ ಈ ಎಲ್ಲಾ ಕ್ಷೇತ್ರಗಳಲ್ಲಿ ಜೆಡಿಎಸ್ ಸೋತಿದೆ. ಹೊಸಕೋಟೆಯಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡರನ್ನು ಬೆಂಬಲಿಸುವ ಮೂಲಕ ಜೆಡಿಎಸ್ ತನ್ನ ಮತದಾರರನ್ನು ಬೇರೆಯವರತ್ತ ಕೈಚೆಲ್ಲಿ ಕುಳಿತುಕೊಂಡಿದ್ದರೆ, ಹುಣಸೂರು ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಪಾರ್ಟಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಹೊಸಕೋಟೆ ಹೊರತುಪಡಿಸಿ ಇನ್ನುಳಿದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಇದೇ ಮೊದಲ ಬಾರಿ ಗೆಲುವಿನ ನಗೆ ಬೀರಿದೆ. ನಿರ್ದಿಷ್ಟವಾಗಿ ಕೆ.ಆರ್.ಪೇಟೆಯಲ್ಲಿ ಬಿಜೆಪಿಯ ನಾರಾಯಣ ಗೌಡ ಗೆದ್ದಿರೋದು ಜೆಡಿಎಸ್‍ಗೆ ದೊಡ್ಡ ಆಘಾತವೇ ಸರಿ. ಯಾಕೆಂದರೆ ದೇವೇಗೌಡರ ಕುಟುಂಬ ಈ ಕ್ಷೇತ್ರವನ್ನು ತಮ್ಮ ಪ್ರತಿಷ್ಠೆಯ ಕಣವಾಗಿ ಸ್ವೀಕರಿಸಿತ್ತು. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿಯ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸುವಷ್ಟರಮಟ್ಟಿಗೆ ಇಲ್ಲಿ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಒಕ್ಕಲಿಗರು ದೇವೇಗೌಡರ ಮೇಲಿನ ನಿಷ್ಠೆಯಿಂದ ವಿಮುಖರಾದ್ದರಿಂದ ಯಡ್ಯೂರಪ್ಪನವರ ತವರು ಕ್ಷೇತ್ರವಾದ ಇಲ್ಲಿ ಬಿಜೆಪಿ ಚೊಚ್ಚಲ ನಗೆ ಬೀರಿದೆ.

ಹಾಗೆ ನೋಡಿದರೆ, ಕಳೆದ ಲೋಕಸಭಾ ಚುನಾವಣೆಯಲ್ಲೆ ದೇವೇಗೌಡರ `ಜಾತಿ ಬ್ರಹ್ಮಾಸ್ತ್ರ’ ತನ್ನ ಮೊನಚು ಕಳೆದುಕೊಂಡಿದ್ದರ ಸೂಚನೆಗಳು ಲಭಿಸಿದ್ದವು. ಇಪ್ಪತ್ತೆಂಟು ಕ್ಷೇತ್ರಗಳ ಪೈಕಿ ಜೆಡಿಎಸ್ ಗೆಲ್ಲಲು ಸಾಧ್ಯವಾದದ್ದು ಕೇವಲ ಒಂದರಲ್ಲಿ ಮಾತ್ರ. ಸ್ವತಃ ದೇವೇಗೌಡರು ಮತ್ತವರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ, ಕ್ರಮವಾಗಿ ತುಮಕೂರು ಹಾಗೂ ಮಂಡ್ಯದಲ್ಲಿ ಸೋಲನುಭವಿಸಿದ್ದರು. ಇವೆರಡೂ ಒಕ್ಕಲಿಗ ಮತದಾರರ ಪ್ರಾಬಲ್ಯವಿರುವ ಕ್ಷೇತ್ರಗಳು ಅನ್ನೋದು ಇಲ್ಲಿ ಗಮನಾರ್ಹ. ಹಾಸನದಲ್ಲಿ ಎಚ್.ಡಿ.ರೇವಣ್ಣ ಮೈಚಳಿ ಬಿಟ್ಟು ತಮ್ಮ ಕಾಂಗ್ರೆಸ್ ವಿರೋಧಿಗಳ ಮನೆಗೂ ಹೋಗಿ ರಾಜಿಸಂಧಾನಕ್ಕೆ ಮುಂದಾಗದಿದ್ದರೆ ಜೆಡಿಎಸ್ ಒಂದೂ ಸ್ಥಾನವಿಲ್ಲದೆ ಭಾರೀ ಮುಖಭಂಗ ಅನುಭವಿಸಬೇಕಾಗುತ್ತಿತ್ತೇನೊ.
ಮಂಡ್ಯದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್‍ರ ಎದುರು ತಮ್ಮ ಕುಟುಂಬದ ನಿಖಿಲ್ ಕುಮಾರಸ್ವಾಮಿಯನ್ನು ಅಖಾಡಕ್ಕಿಳಿಸಿದ್ದು ದೇವೇಗೌಡರು ಮಾಡಿದ ದೊಡ್ಡ ಯಡವಟ್ಟು. ಒಕ್ಕಲಿಗರು ಮೊದಲ ಬಾರಿ ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧ ದನಿ ಬಿಚ್ಚಲು ಅದು ಅವಕಾಶ ಮಾಡಿಕೊಟ್ಟಿತು. ಅದರ ಪ್ರಭಾವವನ್ನು ಸ್ವತಃ ಗೌಡರು ತುಮಕೂರಿನಲ್ಲೂ ಅನುಭವಿಸಬೇಕಾಗಿ ಬಂದಿತು.

ಈ ಉಪಚುನಾವಣೆಯ ಫಲಿತಾಂಶ ಗೌಡರ ರಾಜಕಾರಣದಿಂದ ಒಕ್ಕಲಿಗರು ಮತ್ತಷ್ಟು ವಿಮುಖರಾಗಿರುವುದನ್ನು ಒತ್ತಿ ಹೇಳುತ್ತಿದೆ. ಅಧಿಕಾರಕ್ಕಾಗಿ ಯಾವ ಪಕ್ಷದ ಜೊತೆಗೆ ಬೇಕಾದರೂ ಮೈತ್ರಿಗೆ ಸಿದ್ಧ ಎಂಬ ದೇವೇಗೌಡರ ಪಾರ್ಟಿಯ ಚಂಚಲ ನಿಲುವುಗಳು ಕೂಡಾ ಒಕ್ಕಲಿಗರು ಜೆಡಿಎಸ್‍ನಿಂದ ದೂರ ಸರಿಯುವಂತೆ ಮಾಡಿರುವ ಸಾಧ್ಯತೆಯುಂಟು. ದೇವೇಗೌಡರು ತಮ್ಮನ್ನು ತಾವು ಒಕ್ಕಲಿಗ ನಾಯಕ ಎಂದು ಬಿಂಬಿಸಿಕೊಂಡಂತೆ, ಅವರ ಮಗ ಕುಮಾರಸ್ವಾಮಿಯವರು ತಮ್ಮನ್ನು ಪ್ರೊಜೆಕ್ಟ್ ಮಾಡಿಕೊಳ್ಳುವಲ್ಲಿ ಎಡವುತ್ತಾ ಬಂದದ್ದು ಕೂಡಾ ಜೆಡಿಎಸ್‍ನ ಈ ಪರಿಸ್ಥಿತಿಗೆ ಮತ್ತೊಂದು ಕಾರಣ.

ಕುಮಾರಸ್ವಾಮಿಯವರ ವೈಖರಿಗೆ ಪಕ್ಷದೊಳಗೇ ಆಂತರಿಕ ಬಂಡಾಯವೂ ಭುಗಿಲೆದ್ದಿದೆ. ಉಪಚುನಾವಣೆಗೆ ಕೆಲ ದಿನ ಮೊದಲು ಬಸವರಾಜ ಹೊರಟ್ಟಿ, ಟಿ.ಎ.ಶರವಣ ಮೊದಲಾದ ನಾಯಕರ ನಿಯೋಗವೊಂದು ದೇವೇಗೌಡರನ್ನು ಭೇಟಿಯಾಗಿ ಕುಮಾರಸ್ವಾಮಿ ವಿರುದ್ಧ ದೂರು ಹೇಳಿಕೊಂಡಿದ್ದರು. ಅವರೆಲ್ಲ ರೆಸಾರ್ಟ್ ಬಂಡಾಯಕ್ಕೂ ಅಣಿಯಾಗಿದ್ದರು. ಕೊನೇಕ್ಷಣದಲ್ಲಿ ಅದು ರದ್ದಾಯ್ತು. ಆದರೆ ಜಿ.ಟಿ.ದೇವೇಗೌಡ, ಸಿ.ಎಸ್.ಪುಟ್ಟರಾಜು ಥರದ ನಾಯಕರಿಗೆ ಇವತ್ತಿಗೂ ಬೇಗುದಿ ಶಮನವಾಗಿಲ್ಲ. ಬೈ ಎಲೆಕ್ಷನ್ ಹೊರಬಿದ್ದ ಬೆನ್ನಿಗೇ ಜೆಡಿಎಸ್‍ನ ವೈಎಸ್‍ವಿ ದತ್ತ, “ಪಕ್ಷವನ್ನು ಉಳಿಸೋದು ದಿನೇದಿನೆ ಕಷ್ಟವಾಗುತ್ತಿರೋದ್ರಿಂದ ಈಗ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಯ ಬಂದಿದೆ. ಈ ಕಠಿಣ ನಿರ್ಧಾರ ತಗೋಳದಿದ್ರೆ ಪಕ್ಷಕ್ಕೆ ಉಳಿಗಾಲವಿಲ್ಲ ಅಂತ ದೇವೇಗೌಡರಿಗೆ ನಾನೇ ಹೇಳ್ತೀನಿ” ಎಂದು ಹೇಳಿರುವುದು ಜೆಡಿಎಸ್ ಒಳಗಿನ ಬೇಗುದಿಯನ್ನು ಸೂಚಿಸುತ್ತದೆ. ಈ ಫಲಿತಾಂಶವು ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಟ್ಟು ಕೂತಿರುವ ನಾಯಕರ ಸಂಖ್ಯೆಯನ್ನು ಮತ್ತು ಅವರ ಧೈರ್ಯವನ್ನು ಹಿಗ್ಗಿಸಿದರೆ ಅಚ್ಚರಿಯಿಲ್ಲ.

ದೇವೇಗೌಡರಿಗೆ ಇಂತಹ ಆಂತರಿಕ ಬಂಡಾಯಗಳೇನು ಹೊಸದಲ್ಲ. ಆದರೆ ಒಕ್ಕಲಿಗ ಸಮುದಾಯವೇ ತಮ್ಮ ಕುಟುಂಬದಿಂದ ನಿಧಾನಕ್ಕೆ ಹಿಂದೆ ಸರಿಯುತ್ತಿರುವುದು ಮಾತ್ರ ಅವರ `ಫೀನಿಕ್ಸ್’ ಮನಸ್ಸನ್ನು ಕಂಗೆಡಿಸದೇ ಇರಲಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಬ್ಬ ವ್ಯಕ್ತಿ ಎಲ್ಲಾ ಕಾಲಕ್ಕೂ, ಎಲ್ಲಾ ಜನರನ್ನೂ ಮೂರ್ಖರನ್ನಾಗಿಸುವುದು ಸಾಧ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...