Homeಕರ್ನಾಟಕ`ಫೀನಿಕ್ಸ್’ ಗೌಡರ `ಬ್ರಹ್ಮಾಸ್ತ್ರ’ ಶಾಶ್ವತವಾಗಿ ಮಂಕಾಯಿತೇ?

`ಫೀನಿಕ್ಸ್’ ಗೌಡರ `ಬ್ರಹ್ಮಾಸ್ತ್ರ’ ಶಾಶ್ವತವಾಗಿ ಮಂಕಾಯಿತೇ?

- Advertisement -
- Advertisement -

ಕರ್ನಾಟಕ ರಾಜಕಾರಣದ ಮಟ್ಟಿಗೆ `ಫೀನಿಕ್ಸ್ ಪೊಲಿಟಿಷಿಯನ್’ ಅಂತಲೇ ಹೆಸರಾದ ದೇವೇಗೌಡರು ಈ ಉಪಚುನಾವಣೆಯ ಫಲಿತಾಂಶದ ನಂತರ ಗಂಭೀರ ಆತ್ಮವಿಮರ್ಶೆ ಮಾಡಿಕೊಳ್ಳಲೇಬೇಕಾದ ಸಂದಿಗ್ಧತೆ ಎದುರಾಗಿದೆ. ಜೆಡಿಎಸ್‍ನ ಶೂನ್ಯ ಸಂಪಾದನೆ ತಳ್ಳಿಹಾಕುವಂತಹ ಸಂಗತಿಯಲ್ಲ. ಯಾರು ಏನೇ ಹೇಳಲಿ ದೇವೇಗೌಡರ ಪೊಲಿಟಿಕ್ಸ್ ನಿಂತಿರುವುದೇ ಜಾತಿರಾಜಕಾರಣದ ಬುನಾದಿಯ ಮೇಲೆ. ಪ್ರಧಾನಿ ಹುದ್ದೆಗೇರಿ `ರಾಷ್ಟ್ರೀಯ ನಾಯಕ’ನಾಗುವ ವೈಯಕ್ತಿಕ ಅವಕಾಶ ಒದಗಿಬಂದಾಗಲು ಅವರು ತಮ್ಮ ಪಕ್ಷವನ್ನು `ಜಾತಿ ಕಂಫರ್ಟ್ ಜೋನ್’ನಿಂದ ಆಚೆಗೆ ಹರಡುವ ಪ್ರಯತ್ನವನ್ನೇ ಮಾಡಲಿಲ್ಲ. ಇತ್ತ ಕುಮಾರಸ್ವಾಮಿ ಎರಡೆರಡು ಬಾರಿ ಮುಖ್ಯಮಂತ್ರಿಯಾದರು ಹಳೇ ಮೈಸೂರು ಪ್ರಾಂತ್ಯದಾಚೆಗೆ ಜೆಡಿಎಸ್ ತನ್ನ ಪ್ರಭಾವ ವಿಸ್ತರಿಸಲಿಲ್ಲ. ಕಾರಣ ಸ್ಪಷ್ಟ. ರಾಜ್ಯದ ರಾಜಕಾರಣವನ್ನು ನಿರ್ಧರಿಸಬಲ್ಲ ಎರಡು ಪ್ರಭಾವಿ ಜಾತಿಗಳಲ್ಲಿ ಒಂದಾದ ಒಕ್ಕಲಿಗ ವೋಟ್ ಬ್ಯಾಂಕ್ ದಾಟುವ ಯಾವ ರಿಸ್ಕೂ ದೇವೇಗೌಡರಿಗಾಗಲಿ, ಅವರ ಕುಟುಂಬಕ್ಕಾಗಿ ಬೇಕಾಗಿರಲಿಲ್ಲ. ಏನಿಲ್ಲವೆಂದರೂ 35 ರಿಂದ 40 ಸೀಟುಗಳನ್ನು ಗೆಲ್ಲಿಸಬಹುದಾದ ಆರೇಳು ಜಿಲ್ಲೆಗಳ ಪ್ರಭಾವಿ ಒಕ್ಕಲಿಗ ಸಮುದಾಯದ ಅಧಿಪತ್ಯವನ್ನು ಸಿದ್ಧಿಸಿಕೊಂಡರೆ ರಾಜಕಾರಣದಲ್ಲಿ ಚಲಾವಣೆಗೆ ಬರುವುದು ಕಷ್ಟವೇನಲ್ಲ. ಇದು ಜೆಡಿಎಸ್‍ನ ಲಾಜಿಕ್ಕು. ಇಷ್ಟು ದಿನ ಒಕ್ಕಲಿಗ ಸಮುದಾಯವು ಕೂಡಾ ದೇವೇಗೌಡರು ಮತ್ತು ಜೆಡಿಎಸ್ ಅನ್ನು ತಮ್ಮ ಜಾತಿ ಅಸ್ಮಿತೆಯ ಭಾಗವಾಗಿಯೇ ಕಂಡಿದ್ದರಿಂದ ಜೆಡಿಎಸ್, ಒಕ್ಕಲಿಗ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಎಂಥಾ ಪ್ರತಿರೋಧಗಳು ಎದುರಾದರೂ ಗೆಲುವಿನ ದಡ ಮುಟ್ಟುತ್ತಿತ್ತು. ಈ ಲೆಕ್ಕಾಚಾರದ ಅಡಿಯಲ್ಲೆ ದೊಡ್ಡದೊಡ್ಡ ಘಟಾನುಘಟಿ ನಾಯಕರುಗಳನ್ನೂ ಸೈಡ್‍ಲೈನ್ ಮಾಡಿ ತಮ್ಮ ಕುಟುಂಬ ರಾಜಕಾರಣವನ್ನು ವಿಸ್ತರಿಸುತ್ತಾ ಬಂದರು. ಆದರೆ ಫಲಿತಾಂಶ ಅವರ ಜಾತಿ ರಾಜಕಾರಣದ ಅಡಿಪಾಯಕ್ಕೇ ಭರ್ಜರಿ ಏಟು ಕೊಟ್ಟಿದೆ.

ಉಪ ಚುನಾವಣೆ ನಡೆದ ಕೆ.ಆರ್.ಪೇಟೆ, ಚಿಕ್ಕಬಳ್ಳಾಪುರ, ಹೊಸಕೋಟೆ ಮತ್ತು ಹುಣಸೂರು ಕ್ಷೇತ್ರಗಳು ಜೆಡಿಎಸ್‍ನ ಭದ್ರ ಬೇರುಗಳಿರುವ ಕ್ಷೇತ್ರಗಳು. ಇಲ್ಲಿ ಒಕ್ಕಲಿಗ ಮತದಾರರೇ ನಿರ್ಣಾಯಕ. ಆದರೆ ಈ ಎಲ್ಲಾ ಕ್ಷೇತ್ರಗಳಲ್ಲಿ ಜೆಡಿಎಸ್ ಸೋತಿದೆ. ಹೊಸಕೋಟೆಯಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡರನ್ನು ಬೆಂಬಲಿಸುವ ಮೂಲಕ ಜೆಡಿಎಸ್ ತನ್ನ ಮತದಾರರನ್ನು ಬೇರೆಯವರತ್ತ ಕೈಚೆಲ್ಲಿ ಕುಳಿತುಕೊಂಡಿದ್ದರೆ, ಹುಣಸೂರು ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಪಾರ್ಟಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಹೊಸಕೋಟೆ ಹೊರತುಪಡಿಸಿ ಇನ್ನುಳಿದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಇದೇ ಮೊದಲ ಬಾರಿ ಗೆಲುವಿನ ನಗೆ ಬೀರಿದೆ. ನಿರ್ದಿಷ್ಟವಾಗಿ ಕೆ.ಆರ್.ಪೇಟೆಯಲ್ಲಿ ಬಿಜೆಪಿಯ ನಾರಾಯಣ ಗೌಡ ಗೆದ್ದಿರೋದು ಜೆಡಿಎಸ್‍ಗೆ ದೊಡ್ಡ ಆಘಾತವೇ ಸರಿ. ಯಾಕೆಂದರೆ ದೇವೇಗೌಡರ ಕುಟುಂಬ ಈ ಕ್ಷೇತ್ರವನ್ನು ತಮ್ಮ ಪ್ರತಿಷ್ಠೆಯ ಕಣವಾಗಿ ಸ್ವೀಕರಿಸಿತ್ತು. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿಯ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸುವಷ್ಟರಮಟ್ಟಿಗೆ ಇಲ್ಲಿ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಒಕ್ಕಲಿಗರು ದೇವೇಗೌಡರ ಮೇಲಿನ ನಿಷ್ಠೆಯಿಂದ ವಿಮುಖರಾದ್ದರಿಂದ ಯಡ್ಯೂರಪ್ಪನವರ ತವರು ಕ್ಷೇತ್ರವಾದ ಇಲ್ಲಿ ಬಿಜೆಪಿ ಚೊಚ್ಚಲ ನಗೆ ಬೀರಿದೆ.

ಹಾಗೆ ನೋಡಿದರೆ, ಕಳೆದ ಲೋಕಸಭಾ ಚುನಾವಣೆಯಲ್ಲೆ ದೇವೇಗೌಡರ `ಜಾತಿ ಬ್ರಹ್ಮಾಸ್ತ್ರ’ ತನ್ನ ಮೊನಚು ಕಳೆದುಕೊಂಡಿದ್ದರ ಸೂಚನೆಗಳು ಲಭಿಸಿದ್ದವು. ಇಪ್ಪತ್ತೆಂಟು ಕ್ಷೇತ್ರಗಳ ಪೈಕಿ ಜೆಡಿಎಸ್ ಗೆಲ್ಲಲು ಸಾಧ್ಯವಾದದ್ದು ಕೇವಲ ಒಂದರಲ್ಲಿ ಮಾತ್ರ. ಸ್ವತಃ ದೇವೇಗೌಡರು ಮತ್ತವರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ, ಕ್ರಮವಾಗಿ ತುಮಕೂರು ಹಾಗೂ ಮಂಡ್ಯದಲ್ಲಿ ಸೋಲನುಭವಿಸಿದ್ದರು. ಇವೆರಡೂ ಒಕ್ಕಲಿಗ ಮತದಾರರ ಪ್ರಾಬಲ್ಯವಿರುವ ಕ್ಷೇತ್ರಗಳು ಅನ್ನೋದು ಇಲ್ಲಿ ಗಮನಾರ್ಹ. ಹಾಸನದಲ್ಲಿ ಎಚ್.ಡಿ.ರೇವಣ್ಣ ಮೈಚಳಿ ಬಿಟ್ಟು ತಮ್ಮ ಕಾಂಗ್ರೆಸ್ ವಿರೋಧಿಗಳ ಮನೆಗೂ ಹೋಗಿ ರಾಜಿಸಂಧಾನಕ್ಕೆ ಮುಂದಾಗದಿದ್ದರೆ ಜೆಡಿಎಸ್ ಒಂದೂ ಸ್ಥಾನವಿಲ್ಲದೆ ಭಾರೀ ಮುಖಭಂಗ ಅನುಭವಿಸಬೇಕಾಗುತ್ತಿತ್ತೇನೊ.
ಮಂಡ್ಯದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್‍ರ ಎದುರು ತಮ್ಮ ಕುಟುಂಬದ ನಿಖಿಲ್ ಕುಮಾರಸ್ವಾಮಿಯನ್ನು ಅಖಾಡಕ್ಕಿಳಿಸಿದ್ದು ದೇವೇಗೌಡರು ಮಾಡಿದ ದೊಡ್ಡ ಯಡವಟ್ಟು. ಒಕ್ಕಲಿಗರು ಮೊದಲ ಬಾರಿ ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧ ದನಿ ಬಿಚ್ಚಲು ಅದು ಅವಕಾಶ ಮಾಡಿಕೊಟ್ಟಿತು. ಅದರ ಪ್ರಭಾವವನ್ನು ಸ್ವತಃ ಗೌಡರು ತುಮಕೂರಿನಲ್ಲೂ ಅನುಭವಿಸಬೇಕಾಗಿ ಬಂದಿತು.

ಈ ಉಪಚುನಾವಣೆಯ ಫಲಿತಾಂಶ ಗೌಡರ ರಾಜಕಾರಣದಿಂದ ಒಕ್ಕಲಿಗರು ಮತ್ತಷ್ಟು ವಿಮುಖರಾಗಿರುವುದನ್ನು ಒತ್ತಿ ಹೇಳುತ್ತಿದೆ. ಅಧಿಕಾರಕ್ಕಾಗಿ ಯಾವ ಪಕ್ಷದ ಜೊತೆಗೆ ಬೇಕಾದರೂ ಮೈತ್ರಿಗೆ ಸಿದ್ಧ ಎಂಬ ದೇವೇಗೌಡರ ಪಾರ್ಟಿಯ ಚಂಚಲ ನಿಲುವುಗಳು ಕೂಡಾ ಒಕ್ಕಲಿಗರು ಜೆಡಿಎಸ್‍ನಿಂದ ದೂರ ಸರಿಯುವಂತೆ ಮಾಡಿರುವ ಸಾಧ್ಯತೆಯುಂಟು. ದೇವೇಗೌಡರು ತಮ್ಮನ್ನು ತಾವು ಒಕ್ಕಲಿಗ ನಾಯಕ ಎಂದು ಬಿಂಬಿಸಿಕೊಂಡಂತೆ, ಅವರ ಮಗ ಕುಮಾರಸ್ವಾಮಿಯವರು ತಮ್ಮನ್ನು ಪ್ರೊಜೆಕ್ಟ್ ಮಾಡಿಕೊಳ್ಳುವಲ್ಲಿ ಎಡವುತ್ತಾ ಬಂದದ್ದು ಕೂಡಾ ಜೆಡಿಎಸ್‍ನ ಈ ಪರಿಸ್ಥಿತಿಗೆ ಮತ್ತೊಂದು ಕಾರಣ.

ಕುಮಾರಸ್ವಾಮಿಯವರ ವೈಖರಿಗೆ ಪಕ್ಷದೊಳಗೇ ಆಂತರಿಕ ಬಂಡಾಯವೂ ಭುಗಿಲೆದ್ದಿದೆ. ಉಪಚುನಾವಣೆಗೆ ಕೆಲ ದಿನ ಮೊದಲು ಬಸವರಾಜ ಹೊರಟ್ಟಿ, ಟಿ.ಎ.ಶರವಣ ಮೊದಲಾದ ನಾಯಕರ ನಿಯೋಗವೊಂದು ದೇವೇಗೌಡರನ್ನು ಭೇಟಿಯಾಗಿ ಕುಮಾರಸ್ವಾಮಿ ವಿರುದ್ಧ ದೂರು ಹೇಳಿಕೊಂಡಿದ್ದರು. ಅವರೆಲ್ಲ ರೆಸಾರ್ಟ್ ಬಂಡಾಯಕ್ಕೂ ಅಣಿಯಾಗಿದ್ದರು. ಕೊನೇಕ್ಷಣದಲ್ಲಿ ಅದು ರದ್ದಾಯ್ತು. ಆದರೆ ಜಿ.ಟಿ.ದೇವೇಗೌಡ, ಸಿ.ಎಸ್.ಪುಟ್ಟರಾಜು ಥರದ ನಾಯಕರಿಗೆ ಇವತ್ತಿಗೂ ಬೇಗುದಿ ಶಮನವಾಗಿಲ್ಲ. ಬೈ ಎಲೆಕ್ಷನ್ ಹೊರಬಿದ್ದ ಬೆನ್ನಿಗೇ ಜೆಡಿಎಸ್‍ನ ವೈಎಸ್‍ವಿ ದತ್ತ, “ಪಕ್ಷವನ್ನು ಉಳಿಸೋದು ದಿನೇದಿನೆ ಕಷ್ಟವಾಗುತ್ತಿರೋದ್ರಿಂದ ಈಗ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಯ ಬಂದಿದೆ. ಈ ಕಠಿಣ ನಿರ್ಧಾರ ತಗೋಳದಿದ್ರೆ ಪಕ್ಷಕ್ಕೆ ಉಳಿಗಾಲವಿಲ್ಲ ಅಂತ ದೇವೇಗೌಡರಿಗೆ ನಾನೇ ಹೇಳ್ತೀನಿ” ಎಂದು ಹೇಳಿರುವುದು ಜೆಡಿಎಸ್ ಒಳಗಿನ ಬೇಗುದಿಯನ್ನು ಸೂಚಿಸುತ್ತದೆ. ಈ ಫಲಿತಾಂಶವು ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಟ್ಟು ಕೂತಿರುವ ನಾಯಕರ ಸಂಖ್ಯೆಯನ್ನು ಮತ್ತು ಅವರ ಧೈರ್ಯವನ್ನು ಹಿಗ್ಗಿಸಿದರೆ ಅಚ್ಚರಿಯಿಲ್ಲ.

ದೇವೇಗೌಡರಿಗೆ ಇಂತಹ ಆಂತರಿಕ ಬಂಡಾಯಗಳೇನು ಹೊಸದಲ್ಲ. ಆದರೆ ಒಕ್ಕಲಿಗ ಸಮುದಾಯವೇ ತಮ್ಮ ಕುಟುಂಬದಿಂದ ನಿಧಾನಕ್ಕೆ ಹಿಂದೆ ಸರಿಯುತ್ತಿರುವುದು ಮಾತ್ರ ಅವರ `ಫೀನಿಕ್ಸ್’ ಮನಸ್ಸನ್ನು ಕಂಗೆಡಿಸದೇ ಇರಲಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಬ್ಬ ವ್ಯಕ್ತಿ ಎಲ್ಲಾ ಕಾಲಕ್ಕೂ, ಎಲ್ಲಾ ಜನರನ್ನೂ ಮೂರ್ಖರನ್ನಾಗಿಸುವುದು ಸಾಧ್ಯವಿಲ್ಲ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...