Homeಅಂಕಣಗಳುದೊಡ್ಡ ಗೌಡರ ಜೊತೆ ಹೀಗೊಂದು ಕಾಲ್ಪನಿಕ ಸಂದರ್ಶನ

ದೊಡ್ಡ ಗೌಡರ ಜೊತೆ ಹೀಗೊಂದು ಕಾಲ್ಪನಿಕ ಸಂದರ್ಶನ

- Advertisement -
- Advertisement -

| ಥೂತ್ತೇರಿ |

ನಮ್ಮ ಮಾಜಿ ಪ್ರಧಾನಿಗಳಾದ ದೇವೇಗೌಡರು ಎಡೂರಪ್ಪನ ಸರಕಾರ ಬೀಳಲು ಬಿಡುವುದಿಲ್ಲ ಎಂಬಂತಹ ಮಾತನಾಡಿದಂದಿನಿಂದ ಸರಿಯಾಗಿ ನಿದ್ರೆಯೇ ಬಾರದಾಗಿದೆಯಲ್ಲಾ. ಗೌಡರ ಮಾತು ನಿಜವೋ, ಕನಸೋ ಇದರ ಮರ್ಮವೇನೆಂದು ತಿಳಿದುಕೊಳ್ಳಲು ಅವರಿಗೇ ಫೋನ್ ಮಾಡಿದರೆ ಹೇಗೆ ಎಂದು ಯೋಚಿಸಿ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್: ಸಿದ್ದಲಿಂಗೇಶಾ ಎಡೆಯೂರು ಸಿದ್ದಲಿಂಗೇಶಾ ಶ್ರೀ ಎಡೆಯೂರು ಸಿದ್ದಲಿಂ….. “ಹಲೋ….”
“ನಮಸ್ಕಾರ ಸಾರ್ ನಾನು ಯಾಹೂ.”
“ಏನ್ಹೇಳಿ ಯಾಹು ಅವುರೆ.”
“ಒಂದೆರಡು ಮಾತಿವೆ ಸಾರ್.”
“ಅದರಿಂದೇನು ಪ್ರಯೋಜನ.”
“ಪತ್ರಿಕೆಗೆ ಬರೀಬೇಕು ಸಾರ್.”
“ಗೌರಿ ಸಿಸ್ಟರ್ ಪತ್ರಿಕೆ ನಿಂತೋಗಲಿಲ್ಲವ.”
“ಇಲ್ಲ ಸಾರ್, ನ್ಯಾಯಪಥ ಅಂತ ಶುರುಮಾಡಿದ್ದೀವಿ.”
“ಹೌದಾ ಒಂದು ಕಳಿಸಿಕೊಡಿ.”
“ಆಯ್ತು ಸಾರ್, ಎಡೂರಪ್ಪನಿಗೆ ಬೆಂಬಲ ಘೋಷಣೆ ಮಾಡಿದ್ರಲ್ಲ ಸಾ.”
“ಯಾಕೆ ಅನ್ನೋ ವಿವರ ಹೇಳಿದ್ದೀನಿ.”
“ಅದು ಕೋಮುವಾದಿ ಪಾರ್ಟಿ ನೀವು ಜಾತ್ಯತೀತ ಜನತಾದಳ ಅಲ್ಲವ ಸಾರ್.”
“ಅದು ಸರಿ, ಈಗ ಚುನಾವಣೆ ಬಂದ್ರೇ ತಡಕಳೋ ಶಕ್ತಿಯಿಲ್ಲ.”
“ಹಾಗಿದ್ರೆ ಕಾಂಗ್ರೆಸ್‍ಗೆ ಸಪೋರ್ಟ್ ಮಾಡಿ ಮಲ್ಲಿಕಾರ್ಜುನ ಖರ್ಗೆನ ಮುಖ್ಯಮಂತ್ರಿ ಮಾಡಬಹುದಿತ್ತಲ್ಲ ಸಾರ್.”
“ಅಲ್ಲಿನ ಅಹಿಂದ ನಾಯಕರು ಅದಿಕ್ಕೆಲ್ಲ ಅವಕಾಶ ಕೊಡಲ್ಲ.”
“ಸಾರ್ ನಿಮ್ಮ ಮಾತಿನಿಂದ ಕರ್ನಾಟಕದ ಸಾಮಾನ್ಯ ಜನರ ಪ್ರಜ್ಞೆ ದಂಗುಬಡುದೋಗ್ಯದೆ ಸಾರ್.”
“ಯಾವ ಮಾತಿನಿಂದರೀ.”
“ಅದೇ ಎಡೂರಪ್ಪನ ಸರಕಾರಕ್ಕೆ ಸಪೋರ್ಟ್ ಮಾಡದ್ರ ಬಗ್ಗೆ.”
“ಅಯ್ಯೋ ರಾಮ ಆಗ್ಲೆ ಹೇಳಿದೆನಲ್ರೀ.”
“ಅದು ಸರಿ ಸರ್. ಕುಮಾರಣ್ಣ ಬಿಜೆಪಿ ಜೊತೆ ಸರಕಾರ ಮಾಡದೇ ಆದ್ರೆ ನನ್ನ ಹೆಣದ ಮೇಲೆ ಮಾಡಬೇಕು ಅಂದಿದ್ರಿ.”
“ಹೌದು ಹೇಳಿದ್ದೆ.”
“ನಾವೆಲ್ಲ ಹೆದರಿ ಪದ್ಮನಾಭನಗರದ ನಿಮ್ಮ ಮನೆ ಹತ್ರಕೆ ಓಡಿ ಬಂದಾಗ ನೀವು ದೆಹಲಿಯಿಂದ ಬಂದಿದ್ದ ಅಂಥೋನಿ, ಸಿಂಧ್ಯಾ, ಎಂ.ಪಿ.ಪ್ರಕಾಶ್, ಮಿರಾಜುದ್ದೀನ್, ಡಿ.ಮಂಜುನಾಥ ಇವರನ್ನ ಕೂರಿಸಿಕೊಂಡು ಅದೇ ಹೆಣದ ಮಾತೇಳತ ಇದ್ರಿ. ಅವುರು ನಿಜ ಅನ್ನಕಂಡು ಗಾಬರಿಯಾಗಿದ್ರು.”
“ನಿಜ ಅಲವೇನ್ರೀ.”
“ನಿಜ ಸಾರ್. ಆದ್ರು ಕುಮಾರಣ್ಣ ಎಡೂರಪ್ಪನ ಜೊತೆ ಸೇರಿಕೊಂಡು ಸರಕಾರ ಮಾಡೇಬುಟ್ರು.”
“ಎಲ್ಲವೂ ನಮ್ಮ ಕೈಮೀರಿ ಹೋಯ್ತಲ್ರೀ ಆಗ.”
“ಆದ್ರು ತಾವು ಕೆಲವೇ ದಿನದಲ್ಲಿ ಕುಮಾರಣ್ಣನ ಜೊತೆ ಸೇರಿಕಂಡ್ರಿ ಸಾರ್.”
“ಯಾಕೆ ಅಂದ್ರೆ, ಕುಮಾರಣ್ಣನ್ನ ಮುಗಸೋದಕ್ಕೆ ದುಷ್ಟ ಚತುಷ್ಟಯರುಗಳು ಕಾಯ್ತಾಯಿದ್ರು. ಅವರಿಂದ ಕುಮಾರಸ್ವಾಮಿನ ಉಳಿಸಿಕೊಬೇಕಾಗಿತ್ತು.”
“ಸರಿ ಸಾರ್, ತಂದೆಯಾದವನ ಕರ್ತವ್ಯ ಅದು. ಅದೇ ಟೈಮಲ್ಲಿ ಸಂಸತ್ತಲ್ಲಿ ನೀವು ಉತ್ತರ ಕೊಡ್ತ ನಾನಿಲ್ಲದ ಸಮಯದಲ್ಲಿ ನನ್ನ ಮಗನನ್ನ ಆರಿಸಿಕೊಂಡೋಗಿ ಸರಕಾರ ಮಾಡಿದ್ರು ಅಂದ್ರಿ ಸಂಸತ್ತು ಅದನ್ನ ನಂಬಿತ್ತು.”
“ಸಂಸತ್ತಲ್ಲಿ ಸುಳ್ಳು ಹೇಳಕ್ಕಾಗತ್ತೇನ್ರೀ.”
“ಹೇಳಬವುದು ಸಾರ್, ಈಗ ಇಡೀ ಬಿಜೆಪಿಗಳು ಸಂಸತ್ತಲ್ಲಿ ಬರೀ ಅದ್ನೇ ಹೇಳ್ತಾ ಅವುರೆ.”
“ಅವುರ ವಿಷಯ ಬಿಡಿ, ವಾಸ್ತವಾಂಶವನ್ನ ನಾನು ಹೇಳಿದೆ.”
“ಹೇಳಿದ್ರಿ, ಅದರಂಗೇ ನಡಕಂಡ್ರಿ ಸಾರ್, ಇಪ್ಪತ್ತು ತಿಂಗಳ ನಂತರ ಎಡೂರಪ್ಪನಿಗೆ ಅವಕಾಶ ಕೊಡಲಿಲ್ಲ. ಅಕಾಲಿಕ ಚುನಾವಣೆ ಬಂತು.”
“ಆ ಇತಿಹಾಸ ಎಲ್ಲ ಈಗೇಕೆ.”
“ಈಗೇಕೆ ಅಂದ್ರೇ, ಅಂದು ನೀವು ಬಿಜೆಪಿ ಜೊತೆ ಕುಮಾರಣ್ಣ ಸರಕಾರ ಮಾಡಕ್ಕೆ ಹೋದಾಗ ನಡಕೊಂಡ ಪ್ರಹಸನ ಡ್ರಾಮ ಅನ್ನದು, ಈಗಿನ ನಿಮ್ಮ ಹೇಳಿಕೆಯಿಂದ ಸಾಬೀತಾಗಿದೆಯಂತೆ.”
“ಯಾವ ಬೋಸುಡಿಮಗ ಅಂಗಂದೋನು.”
“ನಿಮ್ಮ ಪಾರ್ಟಿಯವರೆ ಅಂಗಂದ್ರು ಸಾ.”
“ಅದ್ಯಾವನು ಕರಕಂಡು ಬನ್ರಿ ಇಲ್ಲಿ.”
“ಬಿಜೆಪಿಗೆ ಸಪೋರ್ಟ್ ಅಂದ ನೀವು ಐದು ಕ್ಷೇತ್ರಕ್ಕೆ ಯಾಕೆ ಸಾರ್ ಕ್ಯಾಂಡೇಟಾಕ್ತಿರಿ.”
“ನಮ್ಮ ಶಕ್ತಿ ಇರ ಅಷ್ಟು.”
“ಐದರಲ್ಲಿ ಕಾಂಗ್ರೆಸ್ ಸೋಲಿಸಿ ಬಿಜೆಪಿಗೆ ಸಹಾಯ ಮಾಡದಕಿಂತ, 15 ಕ್ಷೇತ್ರಕ್ಕೂ ಅಭ್ಯರ್ಥಿ ನಿಲ್ಲಸದೇ ಇರದು ವಳ್ಳೆದಲವ.”
“ನಮ್ಮದು ಪ್ರಾದೇಶಿಕ ಪಾರ್ಟಿ, ನಮಗೆ ಕೆಲವು ಇತಿಮಿತಿಗಳಿರದರಿಂದ ಹಾಗೆ ಮಾಡಕ್ಕೆ ಬರಲ್ಲ.”
“ಐದು ಕ್ಷೇತ್ರದ ಚುನಾವಣೆ ಖರ್ಚು ಬಿಜೆಪಿ ಕೊಡ್ತದ ಸಾರ್.”
“ಅವುರ್ಯಾಕ್ ಕೊಡ್ತರ್ರೀ.”
“ಐದರಲ್ಲಿ ಕಾಂಗ್ರೆಸ್ ಸೋಲಸಬೇಕಲ್ಲವ ಅದಕ್ಕೆ.”
“ಅಷ್ಟು ಬಡತನ ನನ್ನ ಪಾರ್ಟಿಗೆ ಬಂದಿಲ್ಲ.”

ಥೂತ್ತೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...