Homeಅಂಕಣಗಳುದೊಡ್ಡ ಗೌಡರ ಜೊತೆ ಹೀಗೊಂದು ಕಾಲ್ಪನಿಕ ಸಂದರ್ಶನ

ದೊಡ್ಡ ಗೌಡರ ಜೊತೆ ಹೀಗೊಂದು ಕಾಲ್ಪನಿಕ ಸಂದರ್ಶನ

- Advertisement -
- Advertisement -

| ಥೂತ್ತೇರಿ |

ನಮ್ಮ ಮಾಜಿ ಪ್ರಧಾನಿಗಳಾದ ದೇವೇಗೌಡರು ಎಡೂರಪ್ಪನ ಸರಕಾರ ಬೀಳಲು ಬಿಡುವುದಿಲ್ಲ ಎಂಬಂತಹ ಮಾತನಾಡಿದಂದಿನಿಂದ ಸರಿಯಾಗಿ ನಿದ್ರೆಯೇ ಬಾರದಾಗಿದೆಯಲ್ಲಾ. ಗೌಡರ ಮಾತು ನಿಜವೋ, ಕನಸೋ ಇದರ ಮರ್ಮವೇನೆಂದು ತಿಳಿದುಕೊಳ್ಳಲು ಅವರಿಗೇ ಫೋನ್ ಮಾಡಿದರೆ ಹೇಗೆ ಎಂದು ಯೋಚಿಸಿ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್: ಸಿದ್ದಲಿಂಗೇಶಾ ಎಡೆಯೂರು ಸಿದ್ದಲಿಂಗೇಶಾ ಶ್ರೀ ಎಡೆಯೂರು ಸಿದ್ದಲಿಂ….. “ಹಲೋ….”
“ನಮಸ್ಕಾರ ಸಾರ್ ನಾನು ಯಾಹೂ.”
“ಏನ್ಹೇಳಿ ಯಾಹು ಅವುರೆ.”
“ಒಂದೆರಡು ಮಾತಿವೆ ಸಾರ್.”
“ಅದರಿಂದೇನು ಪ್ರಯೋಜನ.”
“ಪತ್ರಿಕೆಗೆ ಬರೀಬೇಕು ಸಾರ್.”
“ಗೌರಿ ಸಿಸ್ಟರ್ ಪತ್ರಿಕೆ ನಿಂತೋಗಲಿಲ್ಲವ.”
“ಇಲ್ಲ ಸಾರ್, ನ್ಯಾಯಪಥ ಅಂತ ಶುರುಮಾಡಿದ್ದೀವಿ.”
“ಹೌದಾ ಒಂದು ಕಳಿಸಿಕೊಡಿ.”
“ಆಯ್ತು ಸಾರ್, ಎಡೂರಪ್ಪನಿಗೆ ಬೆಂಬಲ ಘೋಷಣೆ ಮಾಡಿದ್ರಲ್ಲ ಸಾ.”
“ಯಾಕೆ ಅನ್ನೋ ವಿವರ ಹೇಳಿದ್ದೀನಿ.”
“ಅದು ಕೋಮುವಾದಿ ಪಾರ್ಟಿ ನೀವು ಜಾತ್ಯತೀತ ಜನತಾದಳ ಅಲ್ಲವ ಸಾರ್.”
“ಅದು ಸರಿ, ಈಗ ಚುನಾವಣೆ ಬಂದ್ರೇ ತಡಕಳೋ ಶಕ್ತಿಯಿಲ್ಲ.”
“ಹಾಗಿದ್ರೆ ಕಾಂಗ್ರೆಸ್‍ಗೆ ಸಪೋರ್ಟ್ ಮಾಡಿ ಮಲ್ಲಿಕಾರ್ಜುನ ಖರ್ಗೆನ ಮುಖ್ಯಮಂತ್ರಿ ಮಾಡಬಹುದಿತ್ತಲ್ಲ ಸಾರ್.”
“ಅಲ್ಲಿನ ಅಹಿಂದ ನಾಯಕರು ಅದಿಕ್ಕೆಲ್ಲ ಅವಕಾಶ ಕೊಡಲ್ಲ.”
“ಸಾರ್ ನಿಮ್ಮ ಮಾತಿನಿಂದ ಕರ್ನಾಟಕದ ಸಾಮಾನ್ಯ ಜನರ ಪ್ರಜ್ಞೆ ದಂಗುಬಡುದೋಗ್ಯದೆ ಸಾರ್.”
“ಯಾವ ಮಾತಿನಿಂದರೀ.”
“ಅದೇ ಎಡೂರಪ್ಪನ ಸರಕಾರಕ್ಕೆ ಸಪೋರ್ಟ್ ಮಾಡದ್ರ ಬಗ್ಗೆ.”
“ಅಯ್ಯೋ ರಾಮ ಆಗ್ಲೆ ಹೇಳಿದೆನಲ್ರೀ.”
“ಅದು ಸರಿ ಸರ್. ಕುಮಾರಣ್ಣ ಬಿಜೆಪಿ ಜೊತೆ ಸರಕಾರ ಮಾಡದೇ ಆದ್ರೆ ನನ್ನ ಹೆಣದ ಮೇಲೆ ಮಾಡಬೇಕು ಅಂದಿದ್ರಿ.”
“ಹೌದು ಹೇಳಿದ್ದೆ.”
“ನಾವೆಲ್ಲ ಹೆದರಿ ಪದ್ಮನಾಭನಗರದ ನಿಮ್ಮ ಮನೆ ಹತ್ರಕೆ ಓಡಿ ಬಂದಾಗ ನೀವು ದೆಹಲಿಯಿಂದ ಬಂದಿದ್ದ ಅಂಥೋನಿ, ಸಿಂಧ್ಯಾ, ಎಂ.ಪಿ.ಪ್ರಕಾಶ್, ಮಿರಾಜುದ್ದೀನ್, ಡಿ.ಮಂಜುನಾಥ ಇವರನ್ನ ಕೂರಿಸಿಕೊಂಡು ಅದೇ ಹೆಣದ ಮಾತೇಳತ ಇದ್ರಿ. ಅವುರು ನಿಜ ಅನ್ನಕಂಡು ಗಾಬರಿಯಾಗಿದ್ರು.”
“ನಿಜ ಅಲವೇನ್ರೀ.”
“ನಿಜ ಸಾರ್. ಆದ್ರು ಕುಮಾರಣ್ಣ ಎಡೂರಪ್ಪನ ಜೊತೆ ಸೇರಿಕೊಂಡು ಸರಕಾರ ಮಾಡೇಬುಟ್ರು.”
“ಎಲ್ಲವೂ ನಮ್ಮ ಕೈಮೀರಿ ಹೋಯ್ತಲ್ರೀ ಆಗ.”
“ಆದ್ರು ತಾವು ಕೆಲವೇ ದಿನದಲ್ಲಿ ಕುಮಾರಣ್ಣನ ಜೊತೆ ಸೇರಿಕಂಡ್ರಿ ಸಾರ್.”
“ಯಾಕೆ ಅಂದ್ರೆ, ಕುಮಾರಣ್ಣನ್ನ ಮುಗಸೋದಕ್ಕೆ ದುಷ್ಟ ಚತುಷ್ಟಯರುಗಳು ಕಾಯ್ತಾಯಿದ್ರು. ಅವರಿಂದ ಕುಮಾರಸ್ವಾಮಿನ ಉಳಿಸಿಕೊಬೇಕಾಗಿತ್ತು.”
“ಸರಿ ಸಾರ್, ತಂದೆಯಾದವನ ಕರ್ತವ್ಯ ಅದು. ಅದೇ ಟೈಮಲ್ಲಿ ಸಂಸತ್ತಲ್ಲಿ ನೀವು ಉತ್ತರ ಕೊಡ್ತ ನಾನಿಲ್ಲದ ಸಮಯದಲ್ಲಿ ನನ್ನ ಮಗನನ್ನ ಆರಿಸಿಕೊಂಡೋಗಿ ಸರಕಾರ ಮಾಡಿದ್ರು ಅಂದ್ರಿ ಸಂಸತ್ತು ಅದನ್ನ ನಂಬಿತ್ತು.”
“ಸಂಸತ್ತಲ್ಲಿ ಸುಳ್ಳು ಹೇಳಕ್ಕಾಗತ್ತೇನ್ರೀ.”
“ಹೇಳಬವುದು ಸಾರ್, ಈಗ ಇಡೀ ಬಿಜೆಪಿಗಳು ಸಂಸತ್ತಲ್ಲಿ ಬರೀ ಅದ್ನೇ ಹೇಳ್ತಾ ಅವುರೆ.”
“ಅವುರ ವಿಷಯ ಬಿಡಿ, ವಾಸ್ತವಾಂಶವನ್ನ ನಾನು ಹೇಳಿದೆ.”
“ಹೇಳಿದ್ರಿ, ಅದರಂಗೇ ನಡಕಂಡ್ರಿ ಸಾರ್, ಇಪ್ಪತ್ತು ತಿಂಗಳ ನಂತರ ಎಡೂರಪ್ಪನಿಗೆ ಅವಕಾಶ ಕೊಡಲಿಲ್ಲ. ಅಕಾಲಿಕ ಚುನಾವಣೆ ಬಂತು.”
“ಆ ಇತಿಹಾಸ ಎಲ್ಲ ಈಗೇಕೆ.”
“ಈಗೇಕೆ ಅಂದ್ರೇ, ಅಂದು ನೀವು ಬಿಜೆಪಿ ಜೊತೆ ಕುಮಾರಣ್ಣ ಸರಕಾರ ಮಾಡಕ್ಕೆ ಹೋದಾಗ ನಡಕೊಂಡ ಪ್ರಹಸನ ಡ್ರಾಮ ಅನ್ನದು, ಈಗಿನ ನಿಮ್ಮ ಹೇಳಿಕೆಯಿಂದ ಸಾಬೀತಾಗಿದೆಯಂತೆ.”
“ಯಾವ ಬೋಸುಡಿಮಗ ಅಂಗಂದೋನು.”
“ನಿಮ್ಮ ಪಾರ್ಟಿಯವರೆ ಅಂಗಂದ್ರು ಸಾ.”
“ಅದ್ಯಾವನು ಕರಕಂಡು ಬನ್ರಿ ಇಲ್ಲಿ.”
“ಬಿಜೆಪಿಗೆ ಸಪೋರ್ಟ್ ಅಂದ ನೀವು ಐದು ಕ್ಷೇತ್ರಕ್ಕೆ ಯಾಕೆ ಸಾರ್ ಕ್ಯಾಂಡೇಟಾಕ್ತಿರಿ.”
“ನಮ್ಮ ಶಕ್ತಿ ಇರ ಅಷ್ಟು.”
“ಐದರಲ್ಲಿ ಕಾಂಗ್ರೆಸ್ ಸೋಲಿಸಿ ಬಿಜೆಪಿಗೆ ಸಹಾಯ ಮಾಡದಕಿಂತ, 15 ಕ್ಷೇತ್ರಕ್ಕೂ ಅಭ್ಯರ್ಥಿ ನಿಲ್ಲಸದೇ ಇರದು ವಳ್ಳೆದಲವ.”
“ನಮ್ಮದು ಪ್ರಾದೇಶಿಕ ಪಾರ್ಟಿ, ನಮಗೆ ಕೆಲವು ಇತಿಮಿತಿಗಳಿರದರಿಂದ ಹಾಗೆ ಮಾಡಕ್ಕೆ ಬರಲ್ಲ.”
“ಐದು ಕ್ಷೇತ್ರದ ಚುನಾವಣೆ ಖರ್ಚು ಬಿಜೆಪಿ ಕೊಡ್ತದ ಸಾರ್.”
“ಅವುರ್ಯಾಕ್ ಕೊಡ್ತರ್ರೀ.”
“ಐದರಲ್ಲಿ ಕಾಂಗ್ರೆಸ್ ಸೋಲಸಬೇಕಲ್ಲವ ಅದಕ್ಕೆ.”
“ಅಷ್ಟು ಬಡತನ ನನ್ನ ಪಾರ್ಟಿಗೆ ಬಂದಿಲ್ಲ.”

ಥೂತ್ತೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...