Homeಅಂಕಣಗಳುದೊಡ್ಡ ಗೌಡರ ಜೊತೆ ಹೀಗೊಂದು ಕಾಲ್ಪನಿಕ ಸಂದರ್ಶನ

ದೊಡ್ಡ ಗೌಡರ ಜೊತೆ ಹೀಗೊಂದು ಕಾಲ್ಪನಿಕ ಸಂದರ್ಶನ

- Advertisement -
- Advertisement -

| ಥೂತ್ತೇರಿ |

ನಮ್ಮ ಮಾಜಿ ಪ್ರಧಾನಿಗಳಾದ ದೇವೇಗೌಡರು ಎಡೂರಪ್ಪನ ಸರಕಾರ ಬೀಳಲು ಬಿಡುವುದಿಲ್ಲ ಎಂಬಂತಹ ಮಾತನಾಡಿದಂದಿನಿಂದ ಸರಿಯಾಗಿ ನಿದ್ರೆಯೇ ಬಾರದಾಗಿದೆಯಲ್ಲಾ. ಗೌಡರ ಮಾತು ನಿಜವೋ, ಕನಸೋ ಇದರ ಮರ್ಮವೇನೆಂದು ತಿಳಿದುಕೊಳ್ಳಲು ಅವರಿಗೇ ಫೋನ್ ಮಾಡಿದರೆ ಹೇಗೆ ಎಂದು ಯೋಚಿಸಿ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್: ಸಿದ್ದಲಿಂಗೇಶಾ ಎಡೆಯೂರು ಸಿದ್ದಲಿಂಗೇಶಾ ಶ್ರೀ ಎಡೆಯೂರು ಸಿದ್ದಲಿಂ….. “ಹಲೋ….”
“ನಮಸ್ಕಾರ ಸಾರ್ ನಾನು ಯಾಹೂ.”
“ಏನ್ಹೇಳಿ ಯಾಹು ಅವುರೆ.”
“ಒಂದೆರಡು ಮಾತಿವೆ ಸಾರ್.”
“ಅದರಿಂದೇನು ಪ್ರಯೋಜನ.”
“ಪತ್ರಿಕೆಗೆ ಬರೀಬೇಕು ಸಾರ್.”
“ಗೌರಿ ಸಿಸ್ಟರ್ ಪತ್ರಿಕೆ ನಿಂತೋಗಲಿಲ್ಲವ.”
“ಇಲ್ಲ ಸಾರ್, ನ್ಯಾಯಪಥ ಅಂತ ಶುರುಮಾಡಿದ್ದೀವಿ.”
“ಹೌದಾ ಒಂದು ಕಳಿಸಿಕೊಡಿ.”
“ಆಯ್ತು ಸಾರ್, ಎಡೂರಪ್ಪನಿಗೆ ಬೆಂಬಲ ಘೋಷಣೆ ಮಾಡಿದ್ರಲ್ಲ ಸಾ.”
“ಯಾಕೆ ಅನ್ನೋ ವಿವರ ಹೇಳಿದ್ದೀನಿ.”
“ಅದು ಕೋಮುವಾದಿ ಪಾರ್ಟಿ ನೀವು ಜಾತ್ಯತೀತ ಜನತಾದಳ ಅಲ್ಲವ ಸಾರ್.”
“ಅದು ಸರಿ, ಈಗ ಚುನಾವಣೆ ಬಂದ್ರೇ ತಡಕಳೋ ಶಕ್ತಿಯಿಲ್ಲ.”
“ಹಾಗಿದ್ರೆ ಕಾಂಗ್ರೆಸ್‍ಗೆ ಸಪೋರ್ಟ್ ಮಾಡಿ ಮಲ್ಲಿಕಾರ್ಜುನ ಖರ್ಗೆನ ಮುಖ್ಯಮಂತ್ರಿ ಮಾಡಬಹುದಿತ್ತಲ್ಲ ಸಾರ್.”
“ಅಲ್ಲಿನ ಅಹಿಂದ ನಾಯಕರು ಅದಿಕ್ಕೆಲ್ಲ ಅವಕಾಶ ಕೊಡಲ್ಲ.”
“ಸಾರ್ ನಿಮ್ಮ ಮಾತಿನಿಂದ ಕರ್ನಾಟಕದ ಸಾಮಾನ್ಯ ಜನರ ಪ್ರಜ್ಞೆ ದಂಗುಬಡುದೋಗ್ಯದೆ ಸಾರ್.”
“ಯಾವ ಮಾತಿನಿಂದರೀ.”
“ಅದೇ ಎಡೂರಪ್ಪನ ಸರಕಾರಕ್ಕೆ ಸಪೋರ್ಟ್ ಮಾಡದ್ರ ಬಗ್ಗೆ.”
“ಅಯ್ಯೋ ರಾಮ ಆಗ್ಲೆ ಹೇಳಿದೆನಲ್ರೀ.”
“ಅದು ಸರಿ ಸರ್. ಕುಮಾರಣ್ಣ ಬಿಜೆಪಿ ಜೊತೆ ಸರಕಾರ ಮಾಡದೇ ಆದ್ರೆ ನನ್ನ ಹೆಣದ ಮೇಲೆ ಮಾಡಬೇಕು ಅಂದಿದ್ರಿ.”
“ಹೌದು ಹೇಳಿದ್ದೆ.”
“ನಾವೆಲ್ಲ ಹೆದರಿ ಪದ್ಮನಾಭನಗರದ ನಿಮ್ಮ ಮನೆ ಹತ್ರಕೆ ಓಡಿ ಬಂದಾಗ ನೀವು ದೆಹಲಿಯಿಂದ ಬಂದಿದ್ದ ಅಂಥೋನಿ, ಸಿಂಧ್ಯಾ, ಎಂ.ಪಿ.ಪ್ರಕಾಶ್, ಮಿರಾಜುದ್ದೀನ್, ಡಿ.ಮಂಜುನಾಥ ಇವರನ್ನ ಕೂರಿಸಿಕೊಂಡು ಅದೇ ಹೆಣದ ಮಾತೇಳತ ಇದ್ರಿ. ಅವುರು ನಿಜ ಅನ್ನಕಂಡು ಗಾಬರಿಯಾಗಿದ್ರು.”
“ನಿಜ ಅಲವೇನ್ರೀ.”
“ನಿಜ ಸಾರ್. ಆದ್ರು ಕುಮಾರಣ್ಣ ಎಡೂರಪ್ಪನ ಜೊತೆ ಸೇರಿಕೊಂಡು ಸರಕಾರ ಮಾಡೇಬುಟ್ರು.”
“ಎಲ್ಲವೂ ನಮ್ಮ ಕೈಮೀರಿ ಹೋಯ್ತಲ್ರೀ ಆಗ.”
“ಆದ್ರು ತಾವು ಕೆಲವೇ ದಿನದಲ್ಲಿ ಕುಮಾರಣ್ಣನ ಜೊತೆ ಸೇರಿಕಂಡ್ರಿ ಸಾರ್.”
“ಯಾಕೆ ಅಂದ್ರೆ, ಕುಮಾರಣ್ಣನ್ನ ಮುಗಸೋದಕ್ಕೆ ದುಷ್ಟ ಚತುಷ್ಟಯರುಗಳು ಕಾಯ್ತಾಯಿದ್ರು. ಅವರಿಂದ ಕುಮಾರಸ್ವಾಮಿನ ಉಳಿಸಿಕೊಬೇಕಾಗಿತ್ತು.”
“ಸರಿ ಸಾರ್, ತಂದೆಯಾದವನ ಕರ್ತವ್ಯ ಅದು. ಅದೇ ಟೈಮಲ್ಲಿ ಸಂಸತ್ತಲ್ಲಿ ನೀವು ಉತ್ತರ ಕೊಡ್ತ ನಾನಿಲ್ಲದ ಸಮಯದಲ್ಲಿ ನನ್ನ ಮಗನನ್ನ ಆರಿಸಿಕೊಂಡೋಗಿ ಸರಕಾರ ಮಾಡಿದ್ರು ಅಂದ್ರಿ ಸಂಸತ್ತು ಅದನ್ನ ನಂಬಿತ್ತು.”
“ಸಂಸತ್ತಲ್ಲಿ ಸುಳ್ಳು ಹೇಳಕ್ಕಾಗತ್ತೇನ್ರೀ.”
“ಹೇಳಬವುದು ಸಾರ್, ಈಗ ಇಡೀ ಬಿಜೆಪಿಗಳು ಸಂಸತ್ತಲ್ಲಿ ಬರೀ ಅದ್ನೇ ಹೇಳ್ತಾ ಅವುರೆ.”
“ಅವುರ ವಿಷಯ ಬಿಡಿ, ವಾಸ್ತವಾಂಶವನ್ನ ನಾನು ಹೇಳಿದೆ.”
“ಹೇಳಿದ್ರಿ, ಅದರಂಗೇ ನಡಕಂಡ್ರಿ ಸಾರ್, ಇಪ್ಪತ್ತು ತಿಂಗಳ ನಂತರ ಎಡೂರಪ್ಪನಿಗೆ ಅವಕಾಶ ಕೊಡಲಿಲ್ಲ. ಅಕಾಲಿಕ ಚುನಾವಣೆ ಬಂತು.”
“ಆ ಇತಿಹಾಸ ಎಲ್ಲ ಈಗೇಕೆ.”
“ಈಗೇಕೆ ಅಂದ್ರೇ, ಅಂದು ನೀವು ಬಿಜೆಪಿ ಜೊತೆ ಕುಮಾರಣ್ಣ ಸರಕಾರ ಮಾಡಕ್ಕೆ ಹೋದಾಗ ನಡಕೊಂಡ ಪ್ರಹಸನ ಡ್ರಾಮ ಅನ್ನದು, ಈಗಿನ ನಿಮ್ಮ ಹೇಳಿಕೆಯಿಂದ ಸಾಬೀತಾಗಿದೆಯಂತೆ.”
“ಯಾವ ಬೋಸುಡಿಮಗ ಅಂಗಂದೋನು.”
“ನಿಮ್ಮ ಪಾರ್ಟಿಯವರೆ ಅಂಗಂದ್ರು ಸಾ.”
“ಅದ್ಯಾವನು ಕರಕಂಡು ಬನ್ರಿ ಇಲ್ಲಿ.”
“ಬಿಜೆಪಿಗೆ ಸಪೋರ್ಟ್ ಅಂದ ನೀವು ಐದು ಕ್ಷೇತ್ರಕ್ಕೆ ಯಾಕೆ ಸಾರ್ ಕ್ಯಾಂಡೇಟಾಕ್ತಿರಿ.”
“ನಮ್ಮ ಶಕ್ತಿ ಇರ ಅಷ್ಟು.”
“ಐದರಲ್ಲಿ ಕಾಂಗ್ರೆಸ್ ಸೋಲಿಸಿ ಬಿಜೆಪಿಗೆ ಸಹಾಯ ಮಾಡದಕಿಂತ, 15 ಕ್ಷೇತ್ರಕ್ಕೂ ಅಭ್ಯರ್ಥಿ ನಿಲ್ಲಸದೇ ಇರದು ವಳ್ಳೆದಲವ.”
“ನಮ್ಮದು ಪ್ರಾದೇಶಿಕ ಪಾರ್ಟಿ, ನಮಗೆ ಕೆಲವು ಇತಿಮಿತಿಗಳಿರದರಿಂದ ಹಾಗೆ ಮಾಡಕ್ಕೆ ಬರಲ್ಲ.”
“ಐದು ಕ್ಷೇತ್ರದ ಚುನಾವಣೆ ಖರ್ಚು ಬಿಜೆಪಿ ಕೊಡ್ತದ ಸಾರ್.”
“ಅವುರ್ಯಾಕ್ ಕೊಡ್ತರ್ರೀ.”
“ಐದರಲ್ಲಿ ಕಾಂಗ್ರೆಸ್ ಸೋಲಸಬೇಕಲ್ಲವ ಅದಕ್ಕೆ.”
“ಅಷ್ಟು ಬಡತನ ನನ್ನ ಪಾರ್ಟಿಗೆ ಬಂದಿಲ್ಲ.”

ಥೂತ್ತೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...