Homeಅಂಕಣಗಳುದೊಡ್ಡ ಗೌಡರ ಜೊತೆ ಹೀಗೊಂದು ಕಾಲ್ಪನಿಕ ಸಂದರ್ಶನ

ದೊಡ್ಡ ಗೌಡರ ಜೊತೆ ಹೀಗೊಂದು ಕಾಲ್ಪನಿಕ ಸಂದರ್ಶನ

- Advertisement -
- Advertisement -

| ಥೂತ್ತೇರಿ |

ನಮ್ಮ ಮಾಜಿ ಪ್ರಧಾನಿಗಳಾದ ದೇವೇಗೌಡರು ಎಡೂರಪ್ಪನ ಸರಕಾರ ಬೀಳಲು ಬಿಡುವುದಿಲ್ಲ ಎಂಬಂತಹ ಮಾತನಾಡಿದಂದಿನಿಂದ ಸರಿಯಾಗಿ ನಿದ್ರೆಯೇ ಬಾರದಾಗಿದೆಯಲ್ಲಾ. ಗೌಡರ ಮಾತು ನಿಜವೋ, ಕನಸೋ ಇದರ ಮರ್ಮವೇನೆಂದು ತಿಳಿದುಕೊಳ್ಳಲು ಅವರಿಗೇ ಫೋನ್ ಮಾಡಿದರೆ ಹೇಗೆ ಎಂದು ಯೋಚಿಸಿ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್: ಸಿದ್ದಲಿಂಗೇಶಾ ಎಡೆಯೂರು ಸಿದ್ದಲಿಂಗೇಶಾ ಶ್ರೀ ಎಡೆಯೂರು ಸಿದ್ದಲಿಂ….. “ಹಲೋ….”
“ನಮಸ್ಕಾರ ಸಾರ್ ನಾನು ಯಾಹೂ.”
“ಏನ್ಹೇಳಿ ಯಾಹು ಅವುರೆ.”
“ಒಂದೆರಡು ಮಾತಿವೆ ಸಾರ್.”
“ಅದರಿಂದೇನು ಪ್ರಯೋಜನ.”
“ಪತ್ರಿಕೆಗೆ ಬರೀಬೇಕು ಸಾರ್.”
“ಗೌರಿ ಸಿಸ್ಟರ್ ಪತ್ರಿಕೆ ನಿಂತೋಗಲಿಲ್ಲವ.”
“ಇಲ್ಲ ಸಾರ್, ನ್ಯಾಯಪಥ ಅಂತ ಶುರುಮಾಡಿದ್ದೀವಿ.”
“ಹೌದಾ ಒಂದು ಕಳಿಸಿಕೊಡಿ.”
“ಆಯ್ತು ಸಾರ್, ಎಡೂರಪ್ಪನಿಗೆ ಬೆಂಬಲ ಘೋಷಣೆ ಮಾಡಿದ್ರಲ್ಲ ಸಾ.”
“ಯಾಕೆ ಅನ್ನೋ ವಿವರ ಹೇಳಿದ್ದೀನಿ.”
“ಅದು ಕೋಮುವಾದಿ ಪಾರ್ಟಿ ನೀವು ಜಾತ್ಯತೀತ ಜನತಾದಳ ಅಲ್ಲವ ಸಾರ್.”
“ಅದು ಸರಿ, ಈಗ ಚುನಾವಣೆ ಬಂದ್ರೇ ತಡಕಳೋ ಶಕ್ತಿಯಿಲ್ಲ.”
“ಹಾಗಿದ್ರೆ ಕಾಂಗ್ರೆಸ್‍ಗೆ ಸಪೋರ್ಟ್ ಮಾಡಿ ಮಲ್ಲಿಕಾರ್ಜುನ ಖರ್ಗೆನ ಮುಖ್ಯಮಂತ್ರಿ ಮಾಡಬಹುದಿತ್ತಲ್ಲ ಸಾರ್.”
“ಅಲ್ಲಿನ ಅಹಿಂದ ನಾಯಕರು ಅದಿಕ್ಕೆಲ್ಲ ಅವಕಾಶ ಕೊಡಲ್ಲ.”
“ಸಾರ್ ನಿಮ್ಮ ಮಾತಿನಿಂದ ಕರ್ನಾಟಕದ ಸಾಮಾನ್ಯ ಜನರ ಪ್ರಜ್ಞೆ ದಂಗುಬಡುದೋಗ್ಯದೆ ಸಾರ್.”
“ಯಾವ ಮಾತಿನಿಂದರೀ.”
“ಅದೇ ಎಡೂರಪ್ಪನ ಸರಕಾರಕ್ಕೆ ಸಪೋರ್ಟ್ ಮಾಡದ್ರ ಬಗ್ಗೆ.”
“ಅಯ್ಯೋ ರಾಮ ಆಗ್ಲೆ ಹೇಳಿದೆನಲ್ರೀ.”
“ಅದು ಸರಿ ಸರ್. ಕುಮಾರಣ್ಣ ಬಿಜೆಪಿ ಜೊತೆ ಸರಕಾರ ಮಾಡದೇ ಆದ್ರೆ ನನ್ನ ಹೆಣದ ಮೇಲೆ ಮಾಡಬೇಕು ಅಂದಿದ್ರಿ.”
“ಹೌದು ಹೇಳಿದ್ದೆ.”
“ನಾವೆಲ್ಲ ಹೆದರಿ ಪದ್ಮನಾಭನಗರದ ನಿಮ್ಮ ಮನೆ ಹತ್ರಕೆ ಓಡಿ ಬಂದಾಗ ನೀವು ದೆಹಲಿಯಿಂದ ಬಂದಿದ್ದ ಅಂಥೋನಿ, ಸಿಂಧ್ಯಾ, ಎಂ.ಪಿ.ಪ್ರಕಾಶ್, ಮಿರಾಜುದ್ದೀನ್, ಡಿ.ಮಂಜುನಾಥ ಇವರನ್ನ ಕೂರಿಸಿಕೊಂಡು ಅದೇ ಹೆಣದ ಮಾತೇಳತ ಇದ್ರಿ. ಅವುರು ನಿಜ ಅನ್ನಕಂಡು ಗಾಬರಿಯಾಗಿದ್ರು.”
“ನಿಜ ಅಲವೇನ್ರೀ.”
“ನಿಜ ಸಾರ್. ಆದ್ರು ಕುಮಾರಣ್ಣ ಎಡೂರಪ್ಪನ ಜೊತೆ ಸೇರಿಕೊಂಡು ಸರಕಾರ ಮಾಡೇಬುಟ್ರು.”
“ಎಲ್ಲವೂ ನಮ್ಮ ಕೈಮೀರಿ ಹೋಯ್ತಲ್ರೀ ಆಗ.”
“ಆದ್ರು ತಾವು ಕೆಲವೇ ದಿನದಲ್ಲಿ ಕುಮಾರಣ್ಣನ ಜೊತೆ ಸೇರಿಕಂಡ್ರಿ ಸಾರ್.”
“ಯಾಕೆ ಅಂದ್ರೆ, ಕುಮಾರಣ್ಣನ್ನ ಮುಗಸೋದಕ್ಕೆ ದುಷ್ಟ ಚತುಷ್ಟಯರುಗಳು ಕಾಯ್ತಾಯಿದ್ರು. ಅವರಿಂದ ಕುಮಾರಸ್ವಾಮಿನ ಉಳಿಸಿಕೊಬೇಕಾಗಿತ್ತು.”
“ಸರಿ ಸಾರ್, ತಂದೆಯಾದವನ ಕರ್ತವ್ಯ ಅದು. ಅದೇ ಟೈಮಲ್ಲಿ ಸಂಸತ್ತಲ್ಲಿ ನೀವು ಉತ್ತರ ಕೊಡ್ತ ನಾನಿಲ್ಲದ ಸಮಯದಲ್ಲಿ ನನ್ನ ಮಗನನ್ನ ಆರಿಸಿಕೊಂಡೋಗಿ ಸರಕಾರ ಮಾಡಿದ್ರು ಅಂದ್ರಿ ಸಂಸತ್ತು ಅದನ್ನ ನಂಬಿತ್ತು.”
“ಸಂಸತ್ತಲ್ಲಿ ಸುಳ್ಳು ಹೇಳಕ್ಕಾಗತ್ತೇನ್ರೀ.”
“ಹೇಳಬವುದು ಸಾರ್, ಈಗ ಇಡೀ ಬಿಜೆಪಿಗಳು ಸಂಸತ್ತಲ್ಲಿ ಬರೀ ಅದ್ನೇ ಹೇಳ್ತಾ ಅವುರೆ.”
“ಅವುರ ವಿಷಯ ಬಿಡಿ, ವಾಸ್ತವಾಂಶವನ್ನ ನಾನು ಹೇಳಿದೆ.”
“ಹೇಳಿದ್ರಿ, ಅದರಂಗೇ ನಡಕಂಡ್ರಿ ಸಾರ್, ಇಪ್ಪತ್ತು ತಿಂಗಳ ನಂತರ ಎಡೂರಪ್ಪನಿಗೆ ಅವಕಾಶ ಕೊಡಲಿಲ್ಲ. ಅಕಾಲಿಕ ಚುನಾವಣೆ ಬಂತು.”
“ಆ ಇತಿಹಾಸ ಎಲ್ಲ ಈಗೇಕೆ.”
“ಈಗೇಕೆ ಅಂದ್ರೇ, ಅಂದು ನೀವು ಬಿಜೆಪಿ ಜೊತೆ ಕುಮಾರಣ್ಣ ಸರಕಾರ ಮಾಡಕ್ಕೆ ಹೋದಾಗ ನಡಕೊಂಡ ಪ್ರಹಸನ ಡ್ರಾಮ ಅನ್ನದು, ಈಗಿನ ನಿಮ್ಮ ಹೇಳಿಕೆಯಿಂದ ಸಾಬೀತಾಗಿದೆಯಂತೆ.”
“ಯಾವ ಬೋಸುಡಿಮಗ ಅಂಗಂದೋನು.”
“ನಿಮ್ಮ ಪಾರ್ಟಿಯವರೆ ಅಂಗಂದ್ರು ಸಾ.”
“ಅದ್ಯಾವನು ಕರಕಂಡು ಬನ್ರಿ ಇಲ್ಲಿ.”
“ಬಿಜೆಪಿಗೆ ಸಪೋರ್ಟ್ ಅಂದ ನೀವು ಐದು ಕ್ಷೇತ್ರಕ್ಕೆ ಯಾಕೆ ಸಾರ್ ಕ್ಯಾಂಡೇಟಾಕ್ತಿರಿ.”
“ನಮ್ಮ ಶಕ್ತಿ ಇರ ಅಷ್ಟು.”
“ಐದರಲ್ಲಿ ಕಾಂಗ್ರೆಸ್ ಸೋಲಿಸಿ ಬಿಜೆಪಿಗೆ ಸಹಾಯ ಮಾಡದಕಿಂತ, 15 ಕ್ಷೇತ್ರಕ್ಕೂ ಅಭ್ಯರ್ಥಿ ನಿಲ್ಲಸದೇ ಇರದು ವಳ್ಳೆದಲವ.”
“ನಮ್ಮದು ಪ್ರಾದೇಶಿಕ ಪಾರ್ಟಿ, ನಮಗೆ ಕೆಲವು ಇತಿಮಿತಿಗಳಿರದರಿಂದ ಹಾಗೆ ಮಾಡಕ್ಕೆ ಬರಲ್ಲ.”
“ಐದು ಕ್ಷೇತ್ರದ ಚುನಾವಣೆ ಖರ್ಚು ಬಿಜೆಪಿ ಕೊಡ್ತದ ಸಾರ್.”
“ಅವುರ್ಯಾಕ್ ಕೊಡ್ತರ್ರೀ.”
“ಐದರಲ್ಲಿ ಕಾಂಗ್ರೆಸ್ ಸೋಲಸಬೇಕಲ್ಲವ ಅದಕ್ಕೆ.”
“ಅಷ್ಟು ಬಡತನ ನನ್ನ ಪಾರ್ಟಿಗೆ ಬಂದಿಲ್ಲ.”

ಥೂತ್ತೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...