Homeಅಂಕಣಗಳುದೊಡ್ಡ ಗೌಡರ ಜೊತೆ ಹೀಗೊಂದು ಕಾಲ್ಪನಿಕ ಸಂದರ್ಶನ

ದೊಡ್ಡ ಗೌಡರ ಜೊತೆ ಹೀಗೊಂದು ಕಾಲ್ಪನಿಕ ಸಂದರ್ಶನ

- Advertisement -
- Advertisement -

| ಥೂತ್ತೇರಿ |

ನಮ್ಮ ಮಾಜಿ ಪ್ರಧಾನಿಗಳಾದ ದೇವೇಗೌಡರು ಎಡೂರಪ್ಪನ ಸರಕಾರ ಬೀಳಲು ಬಿಡುವುದಿಲ್ಲ ಎಂಬಂತಹ ಮಾತನಾಡಿದಂದಿನಿಂದ ಸರಿಯಾಗಿ ನಿದ್ರೆಯೇ ಬಾರದಾಗಿದೆಯಲ್ಲಾ. ಗೌಡರ ಮಾತು ನಿಜವೋ, ಕನಸೋ ಇದರ ಮರ್ಮವೇನೆಂದು ತಿಳಿದುಕೊಳ್ಳಲು ಅವರಿಗೇ ಫೋನ್ ಮಾಡಿದರೆ ಹೇಗೆ ಎಂದು ಯೋಚಿಸಿ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್: ಸಿದ್ದಲಿಂಗೇಶಾ ಎಡೆಯೂರು ಸಿದ್ದಲಿಂಗೇಶಾ ಶ್ರೀ ಎಡೆಯೂರು ಸಿದ್ದಲಿಂ….. “ಹಲೋ….”
“ನಮಸ್ಕಾರ ಸಾರ್ ನಾನು ಯಾಹೂ.”
“ಏನ್ಹೇಳಿ ಯಾಹು ಅವುರೆ.”
“ಒಂದೆರಡು ಮಾತಿವೆ ಸಾರ್.”
“ಅದರಿಂದೇನು ಪ್ರಯೋಜನ.”
“ಪತ್ರಿಕೆಗೆ ಬರೀಬೇಕು ಸಾರ್.”
“ಗೌರಿ ಸಿಸ್ಟರ್ ಪತ್ರಿಕೆ ನಿಂತೋಗಲಿಲ್ಲವ.”
“ಇಲ್ಲ ಸಾರ್, ನ್ಯಾಯಪಥ ಅಂತ ಶುರುಮಾಡಿದ್ದೀವಿ.”
“ಹೌದಾ ಒಂದು ಕಳಿಸಿಕೊಡಿ.”
“ಆಯ್ತು ಸಾರ್, ಎಡೂರಪ್ಪನಿಗೆ ಬೆಂಬಲ ಘೋಷಣೆ ಮಾಡಿದ್ರಲ್ಲ ಸಾ.”
“ಯಾಕೆ ಅನ್ನೋ ವಿವರ ಹೇಳಿದ್ದೀನಿ.”
“ಅದು ಕೋಮುವಾದಿ ಪಾರ್ಟಿ ನೀವು ಜಾತ್ಯತೀತ ಜನತಾದಳ ಅಲ್ಲವ ಸಾರ್.”
“ಅದು ಸರಿ, ಈಗ ಚುನಾವಣೆ ಬಂದ್ರೇ ತಡಕಳೋ ಶಕ್ತಿಯಿಲ್ಲ.”
“ಹಾಗಿದ್ರೆ ಕಾಂಗ್ರೆಸ್‍ಗೆ ಸಪೋರ್ಟ್ ಮಾಡಿ ಮಲ್ಲಿಕಾರ್ಜುನ ಖರ್ಗೆನ ಮುಖ್ಯಮಂತ್ರಿ ಮಾಡಬಹುದಿತ್ತಲ್ಲ ಸಾರ್.”
“ಅಲ್ಲಿನ ಅಹಿಂದ ನಾಯಕರು ಅದಿಕ್ಕೆಲ್ಲ ಅವಕಾಶ ಕೊಡಲ್ಲ.”
“ಸಾರ್ ನಿಮ್ಮ ಮಾತಿನಿಂದ ಕರ್ನಾಟಕದ ಸಾಮಾನ್ಯ ಜನರ ಪ್ರಜ್ಞೆ ದಂಗುಬಡುದೋಗ್ಯದೆ ಸಾರ್.”
“ಯಾವ ಮಾತಿನಿಂದರೀ.”
“ಅದೇ ಎಡೂರಪ್ಪನ ಸರಕಾರಕ್ಕೆ ಸಪೋರ್ಟ್ ಮಾಡದ್ರ ಬಗ್ಗೆ.”
“ಅಯ್ಯೋ ರಾಮ ಆಗ್ಲೆ ಹೇಳಿದೆನಲ್ರೀ.”
“ಅದು ಸರಿ ಸರ್. ಕುಮಾರಣ್ಣ ಬಿಜೆಪಿ ಜೊತೆ ಸರಕಾರ ಮಾಡದೇ ಆದ್ರೆ ನನ್ನ ಹೆಣದ ಮೇಲೆ ಮಾಡಬೇಕು ಅಂದಿದ್ರಿ.”
“ಹೌದು ಹೇಳಿದ್ದೆ.”
“ನಾವೆಲ್ಲ ಹೆದರಿ ಪದ್ಮನಾಭನಗರದ ನಿಮ್ಮ ಮನೆ ಹತ್ರಕೆ ಓಡಿ ಬಂದಾಗ ನೀವು ದೆಹಲಿಯಿಂದ ಬಂದಿದ್ದ ಅಂಥೋನಿ, ಸಿಂಧ್ಯಾ, ಎಂ.ಪಿ.ಪ್ರಕಾಶ್, ಮಿರಾಜುದ್ದೀನ್, ಡಿ.ಮಂಜುನಾಥ ಇವರನ್ನ ಕೂರಿಸಿಕೊಂಡು ಅದೇ ಹೆಣದ ಮಾತೇಳತ ಇದ್ರಿ. ಅವುರು ನಿಜ ಅನ್ನಕಂಡು ಗಾಬರಿಯಾಗಿದ್ರು.”
“ನಿಜ ಅಲವೇನ್ರೀ.”
“ನಿಜ ಸಾರ್. ಆದ್ರು ಕುಮಾರಣ್ಣ ಎಡೂರಪ್ಪನ ಜೊತೆ ಸೇರಿಕೊಂಡು ಸರಕಾರ ಮಾಡೇಬುಟ್ರು.”
“ಎಲ್ಲವೂ ನಮ್ಮ ಕೈಮೀರಿ ಹೋಯ್ತಲ್ರೀ ಆಗ.”
“ಆದ್ರು ತಾವು ಕೆಲವೇ ದಿನದಲ್ಲಿ ಕುಮಾರಣ್ಣನ ಜೊತೆ ಸೇರಿಕಂಡ್ರಿ ಸಾರ್.”
“ಯಾಕೆ ಅಂದ್ರೆ, ಕುಮಾರಣ್ಣನ್ನ ಮುಗಸೋದಕ್ಕೆ ದುಷ್ಟ ಚತುಷ್ಟಯರುಗಳು ಕಾಯ್ತಾಯಿದ್ರು. ಅವರಿಂದ ಕುಮಾರಸ್ವಾಮಿನ ಉಳಿಸಿಕೊಬೇಕಾಗಿತ್ತು.”
“ಸರಿ ಸಾರ್, ತಂದೆಯಾದವನ ಕರ್ತವ್ಯ ಅದು. ಅದೇ ಟೈಮಲ್ಲಿ ಸಂಸತ್ತಲ್ಲಿ ನೀವು ಉತ್ತರ ಕೊಡ್ತ ನಾನಿಲ್ಲದ ಸಮಯದಲ್ಲಿ ನನ್ನ ಮಗನನ್ನ ಆರಿಸಿಕೊಂಡೋಗಿ ಸರಕಾರ ಮಾಡಿದ್ರು ಅಂದ್ರಿ ಸಂಸತ್ತು ಅದನ್ನ ನಂಬಿತ್ತು.”
“ಸಂಸತ್ತಲ್ಲಿ ಸುಳ್ಳು ಹೇಳಕ್ಕಾಗತ್ತೇನ್ರೀ.”
“ಹೇಳಬವುದು ಸಾರ್, ಈಗ ಇಡೀ ಬಿಜೆಪಿಗಳು ಸಂಸತ್ತಲ್ಲಿ ಬರೀ ಅದ್ನೇ ಹೇಳ್ತಾ ಅವುರೆ.”
“ಅವುರ ವಿಷಯ ಬಿಡಿ, ವಾಸ್ತವಾಂಶವನ್ನ ನಾನು ಹೇಳಿದೆ.”
“ಹೇಳಿದ್ರಿ, ಅದರಂಗೇ ನಡಕಂಡ್ರಿ ಸಾರ್, ಇಪ್ಪತ್ತು ತಿಂಗಳ ನಂತರ ಎಡೂರಪ್ಪನಿಗೆ ಅವಕಾಶ ಕೊಡಲಿಲ್ಲ. ಅಕಾಲಿಕ ಚುನಾವಣೆ ಬಂತು.”
“ಆ ಇತಿಹಾಸ ಎಲ್ಲ ಈಗೇಕೆ.”
“ಈಗೇಕೆ ಅಂದ್ರೇ, ಅಂದು ನೀವು ಬಿಜೆಪಿ ಜೊತೆ ಕುಮಾರಣ್ಣ ಸರಕಾರ ಮಾಡಕ್ಕೆ ಹೋದಾಗ ನಡಕೊಂಡ ಪ್ರಹಸನ ಡ್ರಾಮ ಅನ್ನದು, ಈಗಿನ ನಿಮ್ಮ ಹೇಳಿಕೆಯಿಂದ ಸಾಬೀತಾಗಿದೆಯಂತೆ.”
“ಯಾವ ಬೋಸುಡಿಮಗ ಅಂಗಂದೋನು.”
“ನಿಮ್ಮ ಪಾರ್ಟಿಯವರೆ ಅಂಗಂದ್ರು ಸಾ.”
“ಅದ್ಯಾವನು ಕರಕಂಡು ಬನ್ರಿ ಇಲ್ಲಿ.”
“ಬಿಜೆಪಿಗೆ ಸಪೋರ್ಟ್ ಅಂದ ನೀವು ಐದು ಕ್ಷೇತ್ರಕ್ಕೆ ಯಾಕೆ ಸಾರ್ ಕ್ಯಾಂಡೇಟಾಕ್ತಿರಿ.”
“ನಮ್ಮ ಶಕ್ತಿ ಇರ ಅಷ್ಟು.”
“ಐದರಲ್ಲಿ ಕಾಂಗ್ರೆಸ್ ಸೋಲಿಸಿ ಬಿಜೆಪಿಗೆ ಸಹಾಯ ಮಾಡದಕಿಂತ, 15 ಕ್ಷೇತ್ರಕ್ಕೂ ಅಭ್ಯರ್ಥಿ ನಿಲ್ಲಸದೇ ಇರದು ವಳ್ಳೆದಲವ.”
“ನಮ್ಮದು ಪ್ರಾದೇಶಿಕ ಪಾರ್ಟಿ, ನಮಗೆ ಕೆಲವು ಇತಿಮಿತಿಗಳಿರದರಿಂದ ಹಾಗೆ ಮಾಡಕ್ಕೆ ಬರಲ್ಲ.”
“ಐದು ಕ್ಷೇತ್ರದ ಚುನಾವಣೆ ಖರ್ಚು ಬಿಜೆಪಿ ಕೊಡ್ತದ ಸಾರ್.”
“ಅವುರ್ಯಾಕ್ ಕೊಡ್ತರ್ರೀ.”
“ಐದರಲ್ಲಿ ಕಾಂಗ್ರೆಸ್ ಸೋಲಸಬೇಕಲ್ಲವ ಅದಕ್ಕೆ.”
“ಅಷ್ಟು ಬಡತನ ನನ್ನ ಪಾರ್ಟಿಗೆ ಬಂದಿಲ್ಲ.”

ಥೂತ್ತೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...