Homeಅಂಕಣಗಳುದೊಡ್ಡ ಗೌಡರ ಜೊತೆ ಹೀಗೊಂದು ಕಾಲ್ಪನಿಕ ಸಂದರ್ಶನ

ದೊಡ್ಡ ಗೌಡರ ಜೊತೆ ಹೀಗೊಂದು ಕಾಲ್ಪನಿಕ ಸಂದರ್ಶನ

- Advertisement -
- Advertisement -

| ಥೂತ್ತೇರಿ |

ನಮ್ಮ ಮಾಜಿ ಪ್ರಧಾನಿಗಳಾದ ದೇವೇಗೌಡರು ಎಡೂರಪ್ಪನ ಸರಕಾರ ಬೀಳಲು ಬಿಡುವುದಿಲ್ಲ ಎಂಬಂತಹ ಮಾತನಾಡಿದಂದಿನಿಂದ ಸರಿಯಾಗಿ ನಿದ್ರೆಯೇ ಬಾರದಾಗಿದೆಯಲ್ಲಾ. ಗೌಡರ ಮಾತು ನಿಜವೋ, ಕನಸೋ ಇದರ ಮರ್ಮವೇನೆಂದು ತಿಳಿದುಕೊಳ್ಳಲು ಅವರಿಗೇ ಫೋನ್ ಮಾಡಿದರೆ ಹೇಗೆ ಎಂದು ಯೋಚಿಸಿ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್: ಸಿದ್ದಲಿಂಗೇಶಾ ಎಡೆಯೂರು ಸಿದ್ದಲಿಂಗೇಶಾ ಶ್ರೀ ಎಡೆಯೂರು ಸಿದ್ದಲಿಂ….. “ಹಲೋ….”
“ನಮಸ್ಕಾರ ಸಾರ್ ನಾನು ಯಾಹೂ.”
“ಏನ್ಹೇಳಿ ಯಾಹು ಅವುರೆ.”
“ಒಂದೆರಡು ಮಾತಿವೆ ಸಾರ್.”
“ಅದರಿಂದೇನು ಪ್ರಯೋಜನ.”
“ಪತ್ರಿಕೆಗೆ ಬರೀಬೇಕು ಸಾರ್.”
“ಗೌರಿ ಸಿಸ್ಟರ್ ಪತ್ರಿಕೆ ನಿಂತೋಗಲಿಲ್ಲವ.”
“ಇಲ್ಲ ಸಾರ್, ನ್ಯಾಯಪಥ ಅಂತ ಶುರುಮಾಡಿದ್ದೀವಿ.”
“ಹೌದಾ ಒಂದು ಕಳಿಸಿಕೊಡಿ.”
“ಆಯ್ತು ಸಾರ್, ಎಡೂರಪ್ಪನಿಗೆ ಬೆಂಬಲ ಘೋಷಣೆ ಮಾಡಿದ್ರಲ್ಲ ಸಾ.”
“ಯಾಕೆ ಅನ್ನೋ ವಿವರ ಹೇಳಿದ್ದೀನಿ.”
“ಅದು ಕೋಮುವಾದಿ ಪಾರ್ಟಿ ನೀವು ಜಾತ್ಯತೀತ ಜನತಾದಳ ಅಲ್ಲವ ಸಾರ್.”
“ಅದು ಸರಿ, ಈಗ ಚುನಾವಣೆ ಬಂದ್ರೇ ತಡಕಳೋ ಶಕ್ತಿಯಿಲ್ಲ.”
“ಹಾಗಿದ್ರೆ ಕಾಂಗ್ರೆಸ್‍ಗೆ ಸಪೋರ್ಟ್ ಮಾಡಿ ಮಲ್ಲಿಕಾರ್ಜುನ ಖರ್ಗೆನ ಮುಖ್ಯಮಂತ್ರಿ ಮಾಡಬಹುದಿತ್ತಲ್ಲ ಸಾರ್.”
“ಅಲ್ಲಿನ ಅಹಿಂದ ನಾಯಕರು ಅದಿಕ್ಕೆಲ್ಲ ಅವಕಾಶ ಕೊಡಲ್ಲ.”
“ಸಾರ್ ನಿಮ್ಮ ಮಾತಿನಿಂದ ಕರ್ನಾಟಕದ ಸಾಮಾನ್ಯ ಜನರ ಪ್ರಜ್ಞೆ ದಂಗುಬಡುದೋಗ್ಯದೆ ಸಾರ್.”
“ಯಾವ ಮಾತಿನಿಂದರೀ.”
“ಅದೇ ಎಡೂರಪ್ಪನ ಸರಕಾರಕ್ಕೆ ಸಪೋರ್ಟ್ ಮಾಡದ್ರ ಬಗ್ಗೆ.”
“ಅಯ್ಯೋ ರಾಮ ಆಗ್ಲೆ ಹೇಳಿದೆನಲ್ರೀ.”
“ಅದು ಸರಿ ಸರ್. ಕುಮಾರಣ್ಣ ಬಿಜೆಪಿ ಜೊತೆ ಸರಕಾರ ಮಾಡದೇ ಆದ್ರೆ ನನ್ನ ಹೆಣದ ಮೇಲೆ ಮಾಡಬೇಕು ಅಂದಿದ್ರಿ.”
“ಹೌದು ಹೇಳಿದ್ದೆ.”
“ನಾವೆಲ್ಲ ಹೆದರಿ ಪದ್ಮನಾಭನಗರದ ನಿಮ್ಮ ಮನೆ ಹತ್ರಕೆ ಓಡಿ ಬಂದಾಗ ನೀವು ದೆಹಲಿಯಿಂದ ಬಂದಿದ್ದ ಅಂಥೋನಿ, ಸಿಂಧ್ಯಾ, ಎಂ.ಪಿ.ಪ್ರಕಾಶ್, ಮಿರಾಜುದ್ದೀನ್, ಡಿ.ಮಂಜುನಾಥ ಇವರನ್ನ ಕೂರಿಸಿಕೊಂಡು ಅದೇ ಹೆಣದ ಮಾತೇಳತ ಇದ್ರಿ. ಅವುರು ನಿಜ ಅನ್ನಕಂಡು ಗಾಬರಿಯಾಗಿದ್ರು.”
“ನಿಜ ಅಲವೇನ್ರೀ.”
“ನಿಜ ಸಾರ್. ಆದ್ರು ಕುಮಾರಣ್ಣ ಎಡೂರಪ್ಪನ ಜೊತೆ ಸೇರಿಕೊಂಡು ಸರಕಾರ ಮಾಡೇಬುಟ್ರು.”
“ಎಲ್ಲವೂ ನಮ್ಮ ಕೈಮೀರಿ ಹೋಯ್ತಲ್ರೀ ಆಗ.”
“ಆದ್ರು ತಾವು ಕೆಲವೇ ದಿನದಲ್ಲಿ ಕುಮಾರಣ್ಣನ ಜೊತೆ ಸೇರಿಕಂಡ್ರಿ ಸಾರ್.”
“ಯಾಕೆ ಅಂದ್ರೆ, ಕುಮಾರಣ್ಣನ್ನ ಮುಗಸೋದಕ್ಕೆ ದುಷ್ಟ ಚತುಷ್ಟಯರುಗಳು ಕಾಯ್ತಾಯಿದ್ರು. ಅವರಿಂದ ಕುಮಾರಸ್ವಾಮಿನ ಉಳಿಸಿಕೊಬೇಕಾಗಿತ್ತು.”
“ಸರಿ ಸಾರ್, ತಂದೆಯಾದವನ ಕರ್ತವ್ಯ ಅದು. ಅದೇ ಟೈಮಲ್ಲಿ ಸಂಸತ್ತಲ್ಲಿ ನೀವು ಉತ್ತರ ಕೊಡ್ತ ನಾನಿಲ್ಲದ ಸಮಯದಲ್ಲಿ ನನ್ನ ಮಗನನ್ನ ಆರಿಸಿಕೊಂಡೋಗಿ ಸರಕಾರ ಮಾಡಿದ್ರು ಅಂದ್ರಿ ಸಂಸತ್ತು ಅದನ್ನ ನಂಬಿತ್ತು.”
“ಸಂಸತ್ತಲ್ಲಿ ಸುಳ್ಳು ಹೇಳಕ್ಕಾಗತ್ತೇನ್ರೀ.”
“ಹೇಳಬವುದು ಸಾರ್, ಈಗ ಇಡೀ ಬಿಜೆಪಿಗಳು ಸಂಸತ್ತಲ್ಲಿ ಬರೀ ಅದ್ನೇ ಹೇಳ್ತಾ ಅವುರೆ.”
“ಅವುರ ವಿಷಯ ಬಿಡಿ, ವಾಸ್ತವಾಂಶವನ್ನ ನಾನು ಹೇಳಿದೆ.”
“ಹೇಳಿದ್ರಿ, ಅದರಂಗೇ ನಡಕಂಡ್ರಿ ಸಾರ್, ಇಪ್ಪತ್ತು ತಿಂಗಳ ನಂತರ ಎಡೂರಪ್ಪನಿಗೆ ಅವಕಾಶ ಕೊಡಲಿಲ್ಲ. ಅಕಾಲಿಕ ಚುನಾವಣೆ ಬಂತು.”
“ಆ ಇತಿಹಾಸ ಎಲ್ಲ ಈಗೇಕೆ.”
“ಈಗೇಕೆ ಅಂದ್ರೇ, ಅಂದು ನೀವು ಬಿಜೆಪಿ ಜೊತೆ ಕುಮಾರಣ್ಣ ಸರಕಾರ ಮಾಡಕ್ಕೆ ಹೋದಾಗ ನಡಕೊಂಡ ಪ್ರಹಸನ ಡ್ರಾಮ ಅನ್ನದು, ಈಗಿನ ನಿಮ್ಮ ಹೇಳಿಕೆಯಿಂದ ಸಾಬೀತಾಗಿದೆಯಂತೆ.”
“ಯಾವ ಬೋಸುಡಿಮಗ ಅಂಗಂದೋನು.”
“ನಿಮ್ಮ ಪಾರ್ಟಿಯವರೆ ಅಂಗಂದ್ರು ಸಾ.”
“ಅದ್ಯಾವನು ಕರಕಂಡು ಬನ್ರಿ ಇಲ್ಲಿ.”
“ಬಿಜೆಪಿಗೆ ಸಪೋರ್ಟ್ ಅಂದ ನೀವು ಐದು ಕ್ಷೇತ್ರಕ್ಕೆ ಯಾಕೆ ಸಾರ್ ಕ್ಯಾಂಡೇಟಾಕ್ತಿರಿ.”
“ನಮ್ಮ ಶಕ್ತಿ ಇರ ಅಷ್ಟು.”
“ಐದರಲ್ಲಿ ಕಾಂಗ್ರೆಸ್ ಸೋಲಿಸಿ ಬಿಜೆಪಿಗೆ ಸಹಾಯ ಮಾಡದಕಿಂತ, 15 ಕ್ಷೇತ್ರಕ್ಕೂ ಅಭ್ಯರ್ಥಿ ನಿಲ್ಲಸದೇ ಇರದು ವಳ್ಳೆದಲವ.”
“ನಮ್ಮದು ಪ್ರಾದೇಶಿಕ ಪಾರ್ಟಿ, ನಮಗೆ ಕೆಲವು ಇತಿಮಿತಿಗಳಿರದರಿಂದ ಹಾಗೆ ಮಾಡಕ್ಕೆ ಬರಲ್ಲ.”
“ಐದು ಕ್ಷೇತ್ರದ ಚುನಾವಣೆ ಖರ್ಚು ಬಿಜೆಪಿ ಕೊಡ್ತದ ಸಾರ್.”
“ಅವುರ್ಯಾಕ್ ಕೊಡ್ತರ್ರೀ.”
“ಐದರಲ್ಲಿ ಕಾಂಗ್ರೆಸ್ ಸೋಲಸಬೇಕಲ್ಲವ ಅದಕ್ಕೆ.”
“ಅಷ್ಟು ಬಡತನ ನನ್ನ ಪಾರ್ಟಿಗೆ ಬಂದಿಲ್ಲ.”

ಥೂತ್ತೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...