Homeಕರ್ನಾಟಕದ್ಯಾವೇಗೌಡ್ರು ಖರಗೆ ಭುಜ ಇಡಕಂಡು ಪಾರ್ಲಿಮೆಂಟಿಗೆ ಹೋಗದೆ ಚೆಂದ ಕಣ್ಳಾ..

ದ್ಯಾವೇಗೌಡ್ರು ಖರಗೆ ಭುಜ ಇಡಕಂಡು ಪಾರ್ಲಿಮೆಂಟಿಗೆ ಹೋಗದೆ ಚೆಂದ ಕಣ್ಳಾ..

- Advertisement -
- Advertisement -

‘ನನಿಗನ್ನುಸ್ತಾ ಅದೆ’ ಎಂದು ಗಡ್ಡ ಕೆರೆದ ವಾಟಿಸ್ಸೆ.
‘ಅದೇನನ್ನಸ್ತು ಹೇಳ್ಳ’ ಎಂದಳು ಜುಮ್ಮಿ.
‘ಈ ಕರೋನ ಅಷ್ಟು ಸುಲಬಾಗಿ ಹೋಗದಿಲ್ಲ ಕಣಕ್ಕ’.
‘ಯಾಕ್ಲ’.
‘ಯಾಕೆ ಅಂದ್ರೆ ಅದು ಅವರಿಸಿಗಳದ್ಕೂ ಮದ್ಲು ಇಡೀ ಇಂಡಿಯಾ ಲಾಕ್‍ಡವುನ್ ಅಂದ್ರು. ಅವುರೇಳಿದಂಗೆ ಕೇಳಿದೊ ಈಗ ಅದು ಜಾಸ್ತಿಯಾದ ಮ್ಯಾಲೆ ಲಾಕ್‍ಡವುನ್ ತಗದವುರೆ ಹಿಂಗಾದ್ರೆ ಯಂಗೋಯ್ತದೇ?’.
‘ಹೋಗದಿಲ್ಲ ಅಂತಿಯಾ’.
‘ಚಾನ್ಸೆಯಿಲ್ಲ ದಿನೇ ದಿನೇ ಜಾಸ್ತಿಯಾಯ್ತದೆ’.
‘ಸದ್ಯ ನಮ್ಮೂರಿಗೆ ಬರಲಿಲವಲ್ಲ ಹೇಳು’.
‘ಅಂಗೇಳಂಗೇಯಿಲ್ಲ ಕಣೆ. ಬೊಂಬಾಯಿಲಿರೋರು ಬಂದ್ರೇ ಅದು ಬತ್ತದೆ’.
‘ಮದ್ಲು ಬಂಬಾಯಿಲಿರೋರು ಬಂದಾಗ ಯೇಡಸ ತಂದ್ರು, ಈಗಿವುರು ಬಂದು ಕರೋನ ತತ್ತರಲ್ಲ ಹೇಳು’.
‘ಹೆದರುಬ್ಯಾಡ ಕಣಕ್ಕ ಕರೋನ ಕ್ಯೂರಬಲ್ಲು ಅದೇ ಏಡಸು ನಾನ್ ಕ್ಯೂರಬಲ್’.
‘ಅಂಗದ್ರೆ ಕರೋನ ಬಂದೋರು ಉಸಾರಾಗಿ ಮನಿಗೆದ್ದೊಯ್ತರೆ. ಅದೇ ಏಡಸಾದ್ರೆ ಚಟ್ಟಕಟ್ಟದೆಯ’.
‘ಮತ್ಯಾಕೆ ಹೆದ್ರಿಕಳದು ಬುಡ್ಳ’
‘ನಾನಂತೂ ಯಾವತ್ತು ಹೆದರಿಲ್ಲ ಕಣಕ್ಕ ಈ ಉಗ್ರಿನೆ ಹೆದರಿ ನಡಗ್ತನಂಗೆಯ’.
‘ಅದ್ಯಾಕ್ಲ ಹೆದರತಿ ಉಗ್ರಿ’.
‘ಕ್ವಾರಂಟೈನು ಮಾಡಿ ನಾಯಿ ನೋಡಿದಂಗೆ ನೋಡಿಕತ್ತರಂತೆ. ದೂರ ನಿಂತಗಂಡು ಬಿಸ್ಕತ್ತ ಯಸಿತರಂತೆ. ಅದ್ಕೆ ಕಣೆ’.
‘ಇನ್ನೆನು ನಿನಗೆ ತ್ವಡೆಮ್ಯಾಲೆ ಕುಂಡ್ರಿಸಿಗಂಡು ಉಣ್ಣುಸ್ತರ್ಲ. ಕಾಯಿಲೆ ಬಂದಾಗ ಯಲ್ಲಾನು ಅನುಬವುಸಬೇಕು’.
‘ಯಾವ ಕಾಯಿಲೆ ಬಂದ್ರು ಹೆದರಸೋ ಧೈರ್ಯ ಬರಬೇಕಾದ್ರೆ ವಳ್ಳೆ ಸರಕಾರ ಇರಬೇಕು ಕಣೆ. ಈ ಹಾಳು ಸರಕಾರ ಯಂಗದೆ ಅಂತೀ. ಇದಿಲ್ದೆಯಿದ್ರೆ ಯಂಗೋ ಚನ್ನಾಗಿರತಿದ್ದೊ’.
‘ಮಿಸ್ಟರ್ ಉಗ್ರಿ ಬಿಜೆಪಿ ಸರಕಾರ ಇರದೇ ಹಿಂಗಲವೇನೋ ಅದು ಗೊತ್ತಿಲವೆ ನಿನಗೆ’.
‘ಇರದೆ ಹಿಂಗೆ ಅಂದ್ರೆ’.
‘ಅಂದ್ರೆ ಈ ಸರಕಾರ ನಡೆಸೋರು ಪರಂಪರೆ ಜನ. ಪರಕೀಯರು ದಾಳಿ ಮಾಡಿ ಇಂಡಿಯಾ ದೇಸವ ಆಳತಾಯಿದ್ರೆ ಅವುರು ದೇವಸ್ಥಾನದಲ್ಲಿ ಭಜನೆ ಮಾಡಿಕೊಂಡು ಪ್ರಸಾದ ತಿಂತಾಯಿದ್ರಂತೆ. ಈಗ್ಲು ಅಂಗೇ ಅವುರೆ. ಕೊರೋನಾ ಬಂದ್ರೇನು, ಜನ ಸತ್ತರೆ ಅವುರಿಗೇನೂ. ಯಾವುದ್ಕು ಕೇರ್ ಮಾಡದಂಗೆ ತಾವು ಒಂದು ವರುಸದಲ್ಲಿ ಏನೇನು ಮಾಡಿದೊ ಅಂತ ಪುಸ್ತಕ ಬರದು ಹಂಚತಾಕುಂತವುರೆ ಇದಕೇನೇಳ್ತೀ’.
‘ಹೇಳದಿನ್ನೇನು ನೀನು ಮದ್ಲೆ ಹೇಳಿದಲ್ಲ ಅಂಗೆ ಆಗ್ಯಾದೆ’.
‘ಈಗ್ಯಾವುದೊ ಯಲಕ್ಸನ್ನ ಬಂದು ದ್ಯಾವೇಗೌಡ್ರು ನಿಂತವುರಂತಲ್ಲಾ ಯಾವುದ್ಲ’ ಎಂದಳು ಜುಮ್ಮಿ.
‘ಅದು ಧಾರುಣವಾದ ಯಲಕ್ಸನ್ನು ಕಣಕ್ಕ’.
‘ಅದ್ಯಾಕ್ಲ’.
‘ಪಾಪ ಆ ಉಮೇಸ್ ಕತ್ತಿ ಬಂಡಾಯದ ನಾಟಕ ಎಬ್ಬಿಸಿ ತನ್ನ ತಮ್ಮನಿಗೇ ಟಿಕೇಟು ಗ್ಯಾರಂಟಿ ಅಂತ ಕಾಯ್ತಾಯಿದ್ದ. ಇನ್ನು ಎಜುಕೇಷನ್ ಮಾರ್ವಾಡಿಯಂತಿರೊ ಕೋರೆ, ಈಗಾಗ್ಲೇ ಎಲ್ಡು ಸಲ ಆಗಿದ್ದು ಸಾಲ್ದು ಅಂತ ಮೂರ್ನೇ ಸಲಕ್ಕೂ ಯಡ್ಯೂರಪ್ಪನ ಜಪ ಮಾಡಿಕ್ಯಂಡು ಕುಂತಿದ್ದ. ಅಂತೋರಿಗೆಲ್ಲ ರಾಜ್ಯಸಭೆ ಸಿಗಲಿಲ್ಲ. ಅಂಗಾಗಿ ಅವುರ ಪಾಲಿಗೆ ಇದು ಧಾರುಣವಾದ ವಿಷಯ’.
‘ಮತ್ಯಾರಿಗೆ ಕೊಟ್ರು’.
‘ಬಿಜೆಪೀಲಿ ಯಾವುದೇ ಬೆನಿಫಿಟ್ ಕೊಡಬೇಕಾದ್ರು ಸಣ್ಣುಡಗರಿಂದ ಲಾಟಿ ಬೀಸಿರಬೇಕು. ಅಂಗಾಗಿ ಬೆಳಗಾವಿ ಈರಣ್ಣ, ರಾಯಚೂರು ಅಶೋಕ ಅನ್ನೊರ್ನ ಕ್ಯಾಂಡಿಡೇಟ್ ಮಾಡಿದ್ರು ಕಣಕ್ಕ. ಅವುರು ಹುಟ್ಟಿದಾಗಿಂದ ಲಾಟಿ ಬೀಸಿದ್ರಂತೆ’.
‘ಕಾಂಗ್ರೆಸ್ಸಿಂದ ಯಾರ್ಲ’.
‘ಕಾಂಗ್ರೆಸ್ಸಿಂದ ಖರಗೆ, ದ್ಯಾವೇಗೌಡ್ರು ಕಣಕ್ಕ. ಕಾಂಗ್ರೆಸ್ಸಲ್ಲಿ ಜಾಸ್ತಿ ಓಟಿದ್ದವಂತೆ ಅದ ದ್ಯಾವೇಗೌಡ್ರಿಗೆ ಕೊಡ್ತರೆ ಅಂಗಾಗಿ ದ್ಯಾವೇಗೌಡ್ರು ಅರ್ಧ ಕಾಂಗ್ರೆಸ್ಸು, ಅರ್ಧ ದಳದ ಕ್ಯಾಂಡೇಟು’.
‘ಈ ಯಂಬತ್ತೇಳನೇ ವಯಸಲ್ಲಿ ಅವುರಿಗೆ ಬೇಕಿತ್ತೆ’ ಎಂದ ಉಗ್ರಿ.
‘ಯಂಬತ್ತೇಳು ಅವರ ಶರೀರಕ್ಕಾಗ್ಯದೆ ಮನಸಿಗಲ್ಲ ಕಣೊ, ನೋಡಿವಿರು ಗೆದ್ದು ಪಾರ್ಲಿಮೆಂಟಿಗೆ ಯಂಗೆ ಇಬ್ಬರು ಭುಜ ಹಿಡಕಂಡೋಯ್ತರೆ ಅದ ನೋಡಕ್ಕೆ ಚಂದ’.


ಇದನ್ನು ಓದಿ: ನಮ್ಮೂರ ಡಾ.ಎಚ್ಚೆನ್‍ಗೆ ನೂರು: ವೈಯಕ್ತಿಕ ನೆನಪುಗಳ ಹಿನ್ನೆಲೆಯಲ್ಲೊಂದು ಸಾಮಾಜಿಕ ನೋಟ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...