Homeಕರ್ನಾಟಕದ್ಯಾವೇಗೌಡ್ರು ಖರಗೆ ಭುಜ ಇಡಕಂಡು ಪಾರ್ಲಿಮೆಂಟಿಗೆ ಹೋಗದೆ ಚೆಂದ ಕಣ್ಳಾ..

ದ್ಯಾವೇಗೌಡ್ರು ಖರಗೆ ಭುಜ ಇಡಕಂಡು ಪಾರ್ಲಿಮೆಂಟಿಗೆ ಹೋಗದೆ ಚೆಂದ ಕಣ್ಳಾ..

- Advertisement -
- Advertisement -

‘ನನಿಗನ್ನುಸ್ತಾ ಅದೆ’ ಎಂದು ಗಡ್ಡ ಕೆರೆದ ವಾಟಿಸ್ಸೆ.
‘ಅದೇನನ್ನಸ್ತು ಹೇಳ್ಳ’ ಎಂದಳು ಜುಮ್ಮಿ.
‘ಈ ಕರೋನ ಅಷ್ಟು ಸುಲಬಾಗಿ ಹೋಗದಿಲ್ಲ ಕಣಕ್ಕ’.
‘ಯಾಕ್ಲ’.
‘ಯಾಕೆ ಅಂದ್ರೆ ಅದು ಅವರಿಸಿಗಳದ್ಕೂ ಮದ್ಲು ಇಡೀ ಇಂಡಿಯಾ ಲಾಕ್‍ಡವುನ್ ಅಂದ್ರು. ಅವುರೇಳಿದಂಗೆ ಕೇಳಿದೊ ಈಗ ಅದು ಜಾಸ್ತಿಯಾದ ಮ್ಯಾಲೆ ಲಾಕ್‍ಡವುನ್ ತಗದವುರೆ ಹಿಂಗಾದ್ರೆ ಯಂಗೋಯ್ತದೇ?’.
‘ಹೋಗದಿಲ್ಲ ಅಂತಿಯಾ’.
‘ಚಾನ್ಸೆಯಿಲ್ಲ ದಿನೇ ದಿನೇ ಜಾಸ್ತಿಯಾಯ್ತದೆ’.
‘ಸದ್ಯ ನಮ್ಮೂರಿಗೆ ಬರಲಿಲವಲ್ಲ ಹೇಳು’.
‘ಅಂಗೇಳಂಗೇಯಿಲ್ಲ ಕಣೆ. ಬೊಂಬಾಯಿಲಿರೋರು ಬಂದ್ರೇ ಅದು ಬತ್ತದೆ’.
‘ಮದ್ಲು ಬಂಬಾಯಿಲಿರೋರು ಬಂದಾಗ ಯೇಡಸ ತಂದ್ರು, ಈಗಿವುರು ಬಂದು ಕರೋನ ತತ್ತರಲ್ಲ ಹೇಳು’.
‘ಹೆದರುಬ್ಯಾಡ ಕಣಕ್ಕ ಕರೋನ ಕ್ಯೂರಬಲ್ಲು ಅದೇ ಏಡಸು ನಾನ್ ಕ್ಯೂರಬಲ್’.
‘ಅಂಗದ್ರೆ ಕರೋನ ಬಂದೋರು ಉಸಾರಾಗಿ ಮನಿಗೆದ್ದೊಯ್ತರೆ. ಅದೇ ಏಡಸಾದ್ರೆ ಚಟ್ಟಕಟ್ಟದೆಯ’.
‘ಮತ್ಯಾಕೆ ಹೆದ್ರಿಕಳದು ಬುಡ್ಳ’
‘ನಾನಂತೂ ಯಾವತ್ತು ಹೆದರಿಲ್ಲ ಕಣಕ್ಕ ಈ ಉಗ್ರಿನೆ ಹೆದರಿ ನಡಗ್ತನಂಗೆಯ’.
‘ಅದ್ಯಾಕ್ಲ ಹೆದರತಿ ಉಗ್ರಿ’.
‘ಕ್ವಾರಂಟೈನು ಮಾಡಿ ನಾಯಿ ನೋಡಿದಂಗೆ ನೋಡಿಕತ್ತರಂತೆ. ದೂರ ನಿಂತಗಂಡು ಬಿಸ್ಕತ್ತ ಯಸಿತರಂತೆ. ಅದ್ಕೆ ಕಣೆ’.
‘ಇನ್ನೆನು ನಿನಗೆ ತ್ವಡೆಮ್ಯಾಲೆ ಕುಂಡ್ರಿಸಿಗಂಡು ಉಣ್ಣುಸ್ತರ್ಲ. ಕಾಯಿಲೆ ಬಂದಾಗ ಯಲ್ಲಾನು ಅನುಬವುಸಬೇಕು’.
‘ಯಾವ ಕಾಯಿಲೆ ಬಂದ್ರು ಹೆದರಸೋ ಧೈರ್ಯ ಬರಬೇಕಾದ್ರೆ ವಳ್ಳೆ ಸರಕಾರ ಇರಬೇಕು ಕಣೆ. ಈ ಹಾಳು ಸರಕಾರ ಯಂಗದೆ ಅಂತೀ. ಇದಿಲ್ದೆಯಿದ್ರೆ ಯಂಗೋ ಚನ್ನಾಗಿರತಿದ್ದೊ’.
‘ಮಿಸ್ಟರ್ ಉಗ್ರಿ ಬಿಜೆಪಿ ಸರಕಾರ ಇರದೇ ಹಿಂಗಲವೇನೋ ಅದು ಗೊತ್ತಿಲವೆ ನಿನಗೆ’.
‘ಇರದೆ ಹಿಂಗೆ ಅಂದ್ರೆ’.
‘ಅಂದ್ರೆ ಈ ಸರಕಾರ ನಡೆಸೋರು ಪರಂಪರೆ ಜನ. ಪರಕೀಯರು ದಾಳಿ ಮಾಡಿ ಇಂಡಿಯಾ ದೇಸವ ಆಳತಾಯಿದ್ರೆ ಅವುರು ದೇವಸ್ಥಾನದಲ್ಲಿ ಭಜನೆ ಮಾಡಿಕೊಂಡು ಪ್ರಸಾದ ತಿಂತಾಯಿದ್ರಂತೆ. ಈಗ್ಲು ಅಂಗೇ ಅವುರೆ. ಕೊರೋನಾ ಬಂದ್ರೇನು, ಜನ ಸತ್ತರೆ ಅವುರಿಗೇನೂ. ಯಾವುದ್ಕು ಕೇರ್ ಮಾಡದಂಗೆ ತಾವು ಒಂದು ವರುಸದಲ್ಲಿ ಏನೇನು ಮಾಡಿದೊ ಅಂತ ಪುಸ್ತಕ ಬರದು ಹಂಚತಾಕುಂತವುರೆ ಇದಕೇನೇಳ್ತೀ’.
‘ಹೇಳದಿನ್ನೇನು ನೀನು ಮದ್ಲೆ ಹೇಳಿದಲ್ಲ ಅಂಗೆ ಆಗ್ಯಾದೆ’.
‘ಈಗ್ಯಾವುದೊ ಯಲಕ್ಸನ್ನ ಬಂದು ದ್ಯಾವೇಗೌಡ್ರು ನಿಂತವುರಂತಲ್ಲಾ ಯಾವುದ್ಲ’ ಎಂದಳು ಜುಮ್ಮಿ.
‘ಅದು ಧಾರುಣವಾದ ಯಲಕ್ಸನ್ನು ಕಣಕ್ಕ’.
‘ಅದ್ಯಾಕ್ಲ’.
‘ಪಾಪ ಆ ಉಮೇಸ್ ಕತ್ತಿ ಬಂಡಾಯದ ನಾಟಕ ಎಬ್ಬಿಸಿ ತನ್ನ ತಮ್ಮನಿಗೇ ಟಿಕೇಟು ಗ್ಯಾರಂಟಿ ಅಂತ ಕಾಯ್ತಾಯಿದ್ದ. ಇನ್ನು ಎಜುಕೇಷನ್ ಮಾರ್ವಾಡಿಯಂತಿರೊ ಕೋರೆ, ಈಗಾಗ್ಲೇ ಎಲ್ಡು ಸಲ ಆಗಿದ್ದು ಸಾಲ್ದು ಅಂತ ಮೂರ್ನೇ ಸಲಕ್ಕೂ ಯಡ್ಯೂರಪ್ಪನ ಜಪ ಮಾಡಿಕ್ಯಂಡು ಕುಂತಿದ್ದ. ಅಂತೋರಿಗೆಲ್ಲ ರಾಜ್ಯಸಭೆ ಸಿಗಲಿಲ್ಲ. ಅಂಗಾಗಿ ಅವುರ ಪಾಲಿಗೆ ಇದು ಧಾರುಣವಾದ ವಿಷಯ’.
‘ಮತ್ಯಾರಿಗೆ ಕೊಟ್ರು’.
‘ಬಿಜೆಪೀಲಿ ಯಾವುದೇ ಬೆನಿಫಿಟ್ ಕೊಡಬೇಕಾದ್ರು ಸಣ್ಣುಡಗರಿಂದ ಲಾಟಿ ಬೀಸಿರಬೇಕು. ಅಂಗಾಗಿ ಬೆಳಗಾವಿ ಈರಣ್ಣ, ರಾಯಚೂರು ಅಶೋಕ ಅನ್ನೊರ್ನ ಕ್ಯಾಂಡಿಡೇಟ್ ಮಾಡಿದ್ರು ಕಣಕ್ಕ. ಅವುರು ಹುಟ್ಟಿದಾಗಿಂದ ಲಾಟಿ ಬೀಸಿದ್ರಂತೆ’.
‘ಕಾಂಗ್ರೆಸ್ಸಿಂದ ಯಾರ್ಲ’.
‘ಕಾಂಗ್ರೆಸ್ಸಿಂದ ಖರಗೆ, ದ್ಯಾವೇಗೌಡ್ರು ಕಣಕ್ಕ. ಕಾಂಗ್ರೆಸ್ಸಲ್ಲಿ ಜಾಸ್ತಿ ಓಟಿದ್ದವಂತೆ ಅದ ದ್ಯಾವೇಗೌಡ್ರಿಗೆ ಕೊಡ್ತರೆ ಅಂಗಾಗಿ ದ್ಯಾವೇಗೌಡ್ರು ಅರ್ಧ ಕಾಂಗ್ರೆಸ್ಸು, ಅರ್ಧ ದಳದ ಕ್ಯಾಂಡೇಟು’.
‘ಈ ಯಂಬತ್ತೇಳನೇ ವಯಸಲ್ಲಿ ಅವುರಿಗೆ ಬೇಕಿತ್ತೆ’ ಎಂದ ಉಗ್ರಿ.
‘ಯಂಬತ್ತೇಳು ಅವರ ಶರೀರಕ್ಕಾಗ್ಯದೆ ಮನಸಿಗಲ್ಲ ಕಣೊ, ನೋಡಿವಿರು ಗೆದ್ದು ಪಾರ್ಲಿಮೆಂಟಿಗೆ ಯಂಗೆ ಇಬ್ಬರು ಭುಜ ಹಿಡಕಂಡೋಯ್ತರೆ ಅದ ನೋಡಕ್ಕೆ ಚಂದ’.


ಇದನ್ನು ಓದಿ: ನಮ್ಮೂರ ಡಾ.ಎಚ್ಚೆನ್‍ಗೆ ನೂರು: ವೈಯಕ್ತಿಕ ನೆನಪುಗಳ ಹಿನ್ನೆಲೆಯಲ್ಲೊಂದು ಸಾಮಾಜಿಕ ನೋಟ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...