Homeಕರ್ನಾಟಕದ್ಯಾವೇಗೌಡ್ರು ಖರಗೆ ಭುಜ ಇಡಕಂಡು ಪಾರ್ಲಿಮೆಂಟಿಗೆ ಹೋಗದೆ ಚೆಂದ ಕಣ್ಳಾ..

ದ್ಯಾವೇಗೌಡ್ರು ಖರಗೆ ಭುಜ ಇಡಕಂಡು ಪಾರ್ಲಿಮೆಂಟಿಗೆ ಹೋಗದೆ ಚೆಂದ ಕಣ್ಳಾ..

- Advertisement -
- Advertisement -

‘ನನಿಗನ್ನುಸ್ತಾ ಅದೆ’ ಎಂದು ಗಡ್ಡ ಕೆರೆದ ವಾಟಿಸ್ಸೆ.
‘ಅದೇನನ್ನಸ್ತು ಹೇಳ್ಳ’ ಎಂದಳು ಜುಮ್ಮಿ.
‘ಈ ಕರೋನ ಅಷ್ಟು ಸುಲಬಾಗಿ ಹೋಗದಿಲ್ಲ ಕಣಕ್ಕ’.
‘ಯಾಕ್ಲ’.
‘ಯಾಕೆ ಅಂದ್ರೆ ಅದು ಅವರಿಸಿಗಳದ್ಕೂ ಮದ್ಲು ಇಡೀ ಇಂಡಿಯಾ ಲಾಕ್‍ಡವುನ್ ಅಂದ್ರು. ಅವುರೇಳಿದಂಗೆ ಕೇಳಿದೊ ಈಗ ಅದು ಜಾಸ್ತಿಯಾದ ಮ್ಯಾಲೆ ಲಾಕ್‍ಡವುನ್ ತಗದವುರೆ ಹಿಂಗಾದ್ರೆ ಯಂಗೋಯ್ತದೇ?’.
‘ಹೋಗದಿಲ್ಲ ಅಂತಿಯಾ’.
‘ಚಾನ್ಸೆಯಿಲ್ಲ ದಿನೇ ದಿನೇ ಜಾಸ್ತಿಯಾಯ್ತದೆ’.
‘ಸದ್ಯ ನಮ್ಮೂರಿಗೆ ಬರಲಿಲವಲ್ಲ ಹೇಳು’.
‘ಅಂಗೇಳಂಗೇಯಿಲ್ಲ ಕಣೆ. ಬೊಂಬಾಯಿಲಿರೋರು ಬಂದ್ರೇ ಅದು ಬತ್ತದೆ’.
‘ಮದ್ಲು ಬಂಬಾಯಿಲಿರೋರು ಬಂದಾಗ ಯೇಡಸ ತಂದ್ರು, ಈಗಿವುರು ಬಂದು ಕರೋನ ತತ್ತರಲ್ಲ ಹೇಳು’.
‘ಹೆದರುಬ್ಯಾಡ ಕಣಕ್ಕ ಕರೋನ ಕ್ಯೂರಬಲ್ಲು ಅದೇ ಏಡಸು ನಾನ್ ಕ್ಯೂರಬಲ್’.
‘ಅಂಗದ್ರೆ ಕರೋನ ಬಂದೋರು ಉಸಾರಾಗಿ ಮನಿಗೆದ್ದೊಯ್ತರೆ. ಅದೇ ಏಡಸಾದ್ರೆ ಚಟ್ಟಕಟ್ಟದೆಯ’.
‘ಮತ್ಯಾಕೆ ಹೆದ್ರಿಕಳದು ಬುಡ್ಳ’
‘ನಾನಂತೂ ಯಾವತ್ತು ಹೆದರಿಲ್ಲ ಕಣಕ್ಕ ಈ ಉಗ್ರಿನೆ ಹೆದರಿ ನಡಗ್ತನಂಗೆಯ’.
‘ಅದ್ಯಾಕ್ಲ ಹೆದರತಿ ಉಗ್ರಿ’.
‘ಕ್ವಾರಂಟೈನು ಮಾಡಿ ನಾಯಿ ನೋಡಿದಂಗೆ ನೋಡಿಕತ್ತರಂತೆ. ದೂರ ನಿಂತಗಂಡು ಬಿಸ್ಕತ್ತ ಯಸಿತರಂತೆ. ಅದ್ಕೆ ಕಣೆ’.
‘ಇನ್ನೆನು ನಿನಗೆ ತ್ವಡೆಮ್ಯಾಲೆ ಕುಂಡ್ರಿಸಿಗಂಡು ಉಣ್ಣುಸ್ತರ್ಲ. ಕಾಯಿಲೆ ಬಂದಾಗ ಯಲ್ಲಾನು ಅನುಬವುಸಬೇಕು’.
‘ಯಾವ ಕಾಯಿಲೆ ಬಂದ್ರು ಹೆದರಸೋ ಧೈರ್ಯ ಬರಬೇಕಾದ್ರೆ ವಳ್ಳೆ ಸರಕಾರ ಇರಬೇಕು ಕಣೆ. ಈ ಹಾಳು ಸರಕಾರ ಯಂಗದೆ ಅಂತೀ. ಇದಿಲ್ದೆಯಿದ್ರೆ ಯಂಗೋ ಚನ್ನಾಗಿರತಿದ್ದೊ’.
‘ಮಿಸ್ಟರ್ ಉಗ್ರಿ ಬಿಜೆಪಿ ಸರಕಾರ ಇರದೇ ಹಿಂಗಲವೇನೋ ಅದು ಗೊತ್ತಿಲವೆ ನಿನಗೆ’.
‘ಇರದೆ ಹಿಂಗೆ ಅಂದ್ರೆ’.
‘ಅಂದ್ರೆ ಈ ಸರಕಾರ ನಡೆಸೋರು ಪರಂಪರೆ ಜನ. ಪರಕೀಯರು ದಾಳಿ ಮಾಡಿ ಇಂಡಿಯಾ ದೇಸವ ಆಳತಾಯಿದ್ರೆ ಅವುರು ದೇವಸ್ಥಾನದಲ್ಲಿ ಭಜನೆ ಮಾಡಿಕೊಂಡು ಪ್ರಸಾದ ತಿಂತಾಯಿದ್ರಂತೆ. ಈಗ್ಲು ಅಂಗೇ ಅವುರೆ. ಕೊರೋನಾ ಬಂದ್ರೇನು, ಜನ ಸತ್ತರೆ ಅವುರಿಗೇನೂ. ಯಾವುದ್ಕು ಕೇರ್ ಮಾಡದಂಗೆ ತಾವು ಒಂದು ವರುಸದಲ್ಲಿ ಏನೇನು ಮಾಡಿದೊ ಅಂತ ಪುಸ್ತಕ ಬರದು ಹಂಚತಾಕುಂತವುರೆ ಇದಕೇನೇಳ್ತೀ’.
‘ಹೇಳದಿನ್ನೇನು ನೀನು ಮದ್ಲೆ ಹೇಳಿದಲ್ಲ ಅಂಗೆ ಆಗ್ಯಾದೆ’.
‘ಈಗ್ಯಾವುದೊ ಯಲಕ್ಸನ್ನ ಬಂದು ದ್ಯಾವೇಗೌಡ್ರು ನಿಂತವುರಂತಲ್ಲಾ ಯಾವುದ್ಲ’ ಎಂದಳು ಜುಮ್ಮಿ.
‘ಅದು ಧಾರುಣವಾದ ಯಲಕ್ಸನ್ನು ಕಣಕ್ಕ’.
‘ಅದ್ಯಾಕ್ಲ’.
‘ಪಾಪ ಆ ಉಮೇಸ್ ಕತ್ತಿ ಬಂಡಾಯದ ನಾಟಕ ಎಬ್ಬಿಸಿ ತನ್ನ ತಮ್ಮನಿಗೇ ಟಿಕೇಟು ಗ್ಯಾರಂಟಿ ಅಂತ ಕಾಯ್ತಾಯಿದ್ದ. ಇನ್ನು ಎಜುಕೇಷನ್ ಮಾರ್ವಾಡಿಯಂತಿರೊ ಕೋರೆ, ಈಗಾಗ್ಲೇ ಎಲ್ಡು ಸಲ ಆಗಿದ್ದು ಸಾಲ್ದು ಅಂತ ಮೂರ್ನೇ ಸಲಕ್ಕೂ ಯಡ್ಯೂರಪ್ಪನ ಜಪ ಮಾಡಿಕ್ಯಂಡು ಕುಂತಿದ್ದ. ಅಂತೋರಿಗೆಲ್ಲ ರಾಜ್ಯಸಭೆ ಸಿಗಲಿಲ್ಲ. ಅಂಗಾಗಿ ಅವುರ ಪಾಲಿಗೆ ಇದು ಧಾರುಣವಾದ ವಿಷಯ’.
‘ಮತ್ಯಾರಿಗೆ ಕೊಟ್ರು’.
‘ಬಿಜೆಪೀಲಿ ಯಾವುದೇ ಬೆನಿಫಿಟ್ ಕೊಡಬೇಕಾದ್ರು ಸಣ್ಣುಡಗರಿಂದ ಲಾಟಿ ಬೀಸಿರಬೇಕು. ಅಂಗಾಗಿ ಬೆಳಗಾವಿ ಈರಣ್ಣ, ರಾಯಚೂರು ಅಶೋಕ ಅನ್ನೊರ್ನ ಕ್ಯಾಂಡಿಡೇಟ್ ಮಾಡಿದ್ರು ಕಣಕ್ಕ. ಅವುರು ಹುಟ್ಟಿದಾಗಿಂದ ಲಾಟಿ ಬೀಸಿದ್ರಂತೆ’.
‘ಕಾಂಗ್ರೆಸ್ಸಿಂದ ಯಾರ್ಲ’.
‘ಕಾಂಗ್ರೆಸ್ಸಿಂದ ಖರಗೆ, ದ್ಯಾವೇಗೌಡ್ರು ಕಣಕ್ಕ. ಕಾಂಗ್ರೆಸ್ಸಲ್ಲಿ ಜಾಸ್ತಿ ಓಟಿದ್ದವಂತೆ ಅದ ದ್ಯಾವೇಗೌಡ್ರಿಗೆ ಕೊಡ್ತರೆ ಅಂಗಾಗಿ ದ್ಯಾವೇಗೌಡ್ರು ಅರ್ಧ ಕಾಂಗ್ರೆಸ್ಸು, ಅರ್ಧ ದಳದ ಕ್ಯಾಂಡೇಟು’.
‘ಈ ಯಂಬತ್ತೇಳನೇ ವಯಸಲ್ಲಿ ಅವುರಿಗೆ ಬೇಕಿತ್ತೆ’ ಎಂದ ಉಗ್ರಿ.
‘ಯಂಬತ್ತೇಳು ಅವರ ಶರೀರಕ್ಕಾಗ್ಯದೆ ಮನಸಿಗಲ್ಲ ಕಣೊ, ನೋಡಿವಿರು ಗೆದ್ದು ಪಾರ್ಲಿಮೆಂಟಿಗೆ ಯಂಗೆ ಇಬ್ಬರು ಭುಜ ಹಿಡಕಂಡೋಯ್ತರೆ ಅದ ನೋಡಕ್ಕೆ ಚಂದ’.


ಇದನ್ನು ಓದಿ: ನಮ್ಮೂರ ಡಾ.ಎಚ್ಚೆನ್‍ಗೆ ನೂರು: ವೈಯಕ್ತಿಕ ನೆನಪುಗಳ ಹಿನ್ನೆಲೆಯಲ್ಲೊಂದು ಸಾಮಾಜಿಕ ನೋಟ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...