Homeಕರ್ನಾಟಕದ್ಯಾವೇಗೌಡ್ರು ಖರಗೆ ಭುಜ ಇಡಕಂಡು ಪಾರ್ಲಿಮೆಂಟಿಗೆ ಹೋಗದೆ ಚೆಂದ ಕಣ್ಳಾ..

ದ್ಯಾವೇಗೌಡ್ರು ಖರಗೆ ಭುಜ ಇಡಕಂಡು ಪಾರ್ಲಿಮೆಂಟಿಗೆ ಹೋಗದೆ ಚೆಂದ ಕಣ್ಳಾ..

- Advertisement -
- Advertisement -

‘ನನಿಗನ್ನುಸ್ತಾ ಅದೆ’ ಎಂದು ಗಡ್ಡ ಕೆರೆದ ವಾಟಿಸ್ಸೆ.
‘ಅದೇನನ್ನಸ್ತು ಹೇಳ್ಳ’ ಎಂದಳು ಜುಮ್ಮಿ.
‘ಈ ಕರೋನ ಅಷ್ಟು ಸುಲಬಾಗಿ ಹೋಗದಿಲ್ಲ ಕಣಕ್ಕ’.
‘ಯಾಕ್ಲ’.
‘ಯಾಕೆ ಅಂದ್ರೆ ಅದು ಅವರಿಸಿಗಳದ್ಕೂ ಮದ್ಲು ಇಡೀ ಇಂಡಿಯಾ ಲಾಕ್‍ಡವುನ್ ಅಂದ್ರು. ಅವುರೇಳಿದಂಗೆ ಕೇಳಿದೊ ಈಗ ಅದು ಜಾಸ್ತಿಯಾದ ಮ್ಯಾಲೆ ಲಾಕ್‍ಡವುನ್ ತಗದವುರೆ ಹಿಂಗಾದ್ರೆ ಯಂಗೋಯ್ತದೇ?’.
‘ಹೋಗದಿಲ್ಲ ಅಂತಿಯಾ’.
‘ಚಾನ್ಸೆಯಿಲ್ಲ ದಿನೇ ದಿನೇ ಜಾಸ್ತಿಯಾಯ್ತದೆ’.
‘ಸದ್ಯ ನಮ್ಮೂರಿಗೆ ಬರಲಿಲವಲ್ಲ ಹೇಳು’.
‘ಅಂಗೇಳಂಗೇಯಿಲ್ಲ ಕಣೆ. ಬೊಂಬಾಯಿಲಿರೋರು ಬಂದ್ರೇ ಅದು ಬತ್ತದೆ’.
‘ಮದ್ಲು ಬಂಬಾಯಿಲಿರೋರು ಬಂದಾಗ ಯೇಡಸ ತಂದ್ರು, ಈಗಿವುರು ಬಂದು ಕರೋನ ತತ್ತರಲ್ಲ ಹೇಳು’.
‘ಹೆದರುಬ್ಯಾಡ ಕಣಕ್ಕ ಕರೋನ ಕ್ಯೂರಬಲ್ಲು ಅದೇ ಏಡಸು ನಾನ್ ಕ್ಯೂರಬಲ್’.
‘ಅಂಗದ್ರೆ ಕರೋನ ಬಂದೋರು ಉಸಾರಾಗಿ ಮನಿಗೆದ್ದೊಯ್ತರೆ. ಅದೇ ಏಡಸಾದ್ರೆ ಚಟ್ಟಕಟ್ಟದೆಯ’.
‘ಮತ್ಯಾಕೆ ಹೆದ್ರಿಕಳದು ಬುಡ್ಳ’
‘ನಾನಂತೂ ಯಾವತ್ತು ಹೆದರಿಲ್ಲ ಕಣಕ್ಕ ಈ ಉಗ್ರಿನೆ ಹೆದರಿ ನಡಗ್ತನಂಗೆಯ’.
‘ಅದ್ಯಾಕ್ಲ ಹೆದರತಿ ಉಗ್ರಿ’.
‘ಕ್ವಾರಂಟೈನು ಮಾಡಿ ನಾಯಿ ನೋಡಿದಂಗೆ ನೋಡಿಕತ್ತರಂತೆ. ದೂರ ನಿಂತಗಂಡು ಬಿಸ್ಕತ್ತ ಯಸಿತರಂತೆ. ಅದ್ಕೆ ಕಣೆ’.
‘ಇನ್ನೆನು ನಿನಗೆ ತ್ವಡೆಮ್ಯಾಲೆ ಕುಂಡ್ರಿಸಿಗಂಡು ಉಣ್ಣುಸ್ತರ್ಲ. ಕಾಯಿಲೆ ಬಂದಾಗ ಯಲ್ಲಾನು ಅನುಬವುಸಬೇಕು’.
‘ಯಾವ ಕಾಯಿಲೆ ಬಂದ್ರು ಹೆದರಸೋ ಧೈರ್ಯ ಬರಬೇಕಾದ್ರೆ ವಳ್ಳೆ ಸರಕಾರ ಇರಬೇಕು ಕಣೆ. ಈ ಹಾಳು ಸರಕಾರ ಯಂಗದೆ ಅಂತೀ. ಇದಿಲ್ದೆಯಿದ್ರೆ ಯಂಗೋ ಚನ್ನಾಗಿರತಿದ್ದೊ’.
‘ಮಿಸ್ಟರ್ ಉಗ್ರಿ ಬಿಜೆಪಿ ಸರಕಾರ ಇರದೇ ಹಿಂಗಲವೇನೋ ಅದು ಗೊತ್ತಿಲವೆ ನಿನಗೆ’.
‘ಇರದೆ ಹಿಂಗೆ ಅಂದ್ರೆ’.
‘ಅಂದ್ರೆ ಈ ಸರಕಾರ ನಡೆಸೋರು ಪರಂಪರೆ ಜನ. ಪರಕೀಯರು ದಾಳಿ ಮಾಡಿ ಇಂಡಿಯಾ ದೇಸವ ಆಳತಾಯಿದ್ರೆ ಅವುರು ದೇವಸ್ಥಾನದಲ್ಲಿ ಭಜನೆ ಮಾಡಿಕೊಂಡು ಪ್ರಸಾದ ತಿಂತಾಯಿದ್ರಂತೆ. ಈಗ್ಲು ಅಂಗೇ ಅವುರೆ. ಕೊರೋನಾ ಬಂದ್ರೇನು, ಜನ ಸತ್ತರೆ ಅವುರಿಗೇನೂ. ಯಾವುದ್ಕು ಕೇರ್ ಮಾಡದಂಗೆ ತಾವು ಒಂದು ವರುಸದಲ್ಲಿ ಏನೇನು ಮಾಡಿದೊ ಅಂತ ಪುಸ್ತಕ ಬರದು ಹಂಚತಾಕುಂತವುರೆ ಇದಕೇನೇಳ್ತೀ’.
‘ಹೇಳದಿನ್ನೇನು ನೀನು ಮದ್ಲೆ ಹೇಳಿದಲ್ಲ ಅಂಗೆ ಆಗ್ಯಾದೆ’.
‘ಈಗ್ಯಾವುದೊ ಯಲಕ್ಸನ್ನ ಬಂದು ದ್ಯಾವೇಗೌಡ್ರು ನಿಂತವುರಂತಲ್ಲಾ ಯಾವುದ್ಲ’ ಎಂದಳು ಜುಮ್ಮಿ.
‘ಅದು ಧಾರುಣವಾದ ಯಲಕ್ಸನ್ನು ಕಣಕ್ಕ’.
‘ಅದ್ಯಾಕ್ಲ’.
‘ಪಾಪ ಆ ಉಮೇಸ್ ಕತ್ತಿ ಬಂಡಾಯದ ನಾಟಕ ಎಬ್ಬಿಸಿ ತನ್ನ ತಮ್ಮನಿಗೇ ಟಿಕೇಟು ಗ್ಯಾರಂಟಿ ಅಂತ ಕಾಯ್ತಾಯಿದ್ದ. ಇನ್ನು ಎಜುಕೇಷನ್ ಮಾರ್ವಾಡಿಯಂತಿರೊ ಕೋರೆ, ಈಗಾಗ್ಲೇ ಎಲ್ಡು ಸಲ ಆಗಿದ್ದು ಸಾಲ್ದು ಅಂತ ಮೂರ್ನೇ ಸಲಕ್ಕೂ ಯಡ್ಯೂರಪ್ಪನ ಜಪ ಮಾಡಿಕ್ಯಂಡು ಕುಂತಿದ್ದ. ಅಂತೋರಿಗೆಲ್ಲ ರಾಜ್ಯಸಭೆ ಸಿಗಲಿಲ್ಲ. ಅಂಗಾಗಿ ಅವುರ ಪಾಲಿಗೆ ಇದು ಧಾರುಣವಾದ ವಿಷಯ’.
‘ಮತ್ಯಾರಿಗೆ ಕೊಟ್ರು’.
‘ಬಿಜೆಪೀಲಿ ಯಾವುದೇ ಬೆನಿಫಿಟ್ ಕೊಡಬೇಕಾದ್ರು ಸಣ್ಣುಡಗರಿಂದ ಲಾಟಿ ಬೀಸಿರಬೇಕು. ಅಂಗಾಗಿ ಬೆಳಗಾವಿ ಈರಣ್ಣ, ರಾಯಚೂರು ಅಶೋಕ ಅನ್ನೊರ್ನ ಕ್ಯಾಂಡಿಡೇಟ್ ಮಾಡಿದ್ರು ಕಣಕ್ಕ. ಅವುರು ಹುಟ್ಟಿದಾಗಿಂದ ಲಾಟಿ ಬೀಸಿದ್ರಂತೆ’.
‘ಕಾಂಗ್ರೆಸ್ಸಿಂದ ಯಾರ್ಲ’.
‘ಕಾಂಗ್ರೆಸ್ಸಿಂದ ಖರಗೆ, ದ್ಯಾವೇಗೌಡ್ರು ಕಣಕ್ಕ. ಕಾಂಗ್ರೆಸ್ಸಲ್ಲಿ ಜಾಸ್ತಿ ಓಟಿದ್ದವಂತೆ ಅದ ದ್ಯಾವೇಗೌಡ್ರಿಗೆ ಕೊಡ್ತರೆ ಅಂಗಾಗಿ ದ್ಯಾವೇಗೌಡ್ರು ಅರ್ಧ ಕಾಂಗ್ರೆಸ್ಸು, ಅರ್ಧ ದಳದ ಕ್ಯಾಂಡೇಟು’.
‘ಈ ಯಂಬತ್ತೇಳನೇ ವಯಸಲ್ಲಿ ಅವುರಿಗೆ ಬೇಕಿತ್ತೆ’ ಎಂದ ಉಗ್ರಿ.
‘ಯಂಬತ್ತೇಳು ಅವರ ಶರೀರಕ್ಕಾಗ್ಯದೆ ಮನಸಿಗಲ್ಲ ಕಣೊ, ನೋಡಿವಿರು ಗೆದ್ದು ಪಾರ್ಲಿಮೆಂಟಿಗೆ ಯಂಗೆ ಇಬ್ಬರು ಭುಜ ಹಿಡಕಂಡೋಯ್ತರೆ ಅದ ನೋಡಕ್ಕೆ ಚಂದ’.


ಇದನ್ನು ಓದಿ: ನಮ್ಮೂರ ಡಾ.ಎಚ್ಚೆನ್‍ಗೆ ನೂರು: ವೈಯಕ್ತಿಕ ನೆನಪುಗಳ ಹಿನ್ನೆಲೆಯಲ್ಲೊಂದು ಸಾಮಾಜಿಕ ನೋಟ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...