Homeಕರ್ನಾಟಕದ್ಯಾವೇಗೌಡ್ರು ಖರಗೆ ಭುಜ ಇಡಕಂಡು ಪಾರ್ಲಿಮೆಂಟಿಗೆ ಹೋಗದೆ ಚೆಂದ ಕಣ್ಳಾ..

ದ್ಯಾವೇಗೌಡ್ರು ಖರಗೆ ಭುಜ ಇಡಕಂಡು ಪಾರ್ಲಿಮೆಂಟಿಗೆ ಹೋಗದೆ ಚೆಂದ ಕಣ್ಳಾ..

- Advertisement -
- Advertisement -

‘ನನಿಗನ್ನುಸ್ತಾ ಅದೆ’ ಎಂದು ಗಡ್ಡ ಕೆರೆದ ವಾಟಿಸ್ಸೆ.
‘ಅದೇನನ್ನಸ್ತು ಹೇಳ್ಳ’ ಎಂದಳು ಜುಮ್ಮಿ.
‘ಈ ಕರೋನ ಅಷ್ಟು ಸುಲಬಾಗಿ ಹೋಗದಿಲ್ಲ ಕಣಕ್ಕ’.
‘ಯಾಕ್ಲ’.
‘ಯಾಕೆ ಅಂದ್ರೆ ಅದು ಅವರಿಸಿಗಳದ್ಕೂ ಮದ್ಲು ಇಡೀ ಇಂಡಿಯಾ ಲಾಕ್‍ಡವುನ್ ಅಂದ್ರು. ಅವುರೇಳಿದಂಗೆ ಕೇಳಿದೊ ಈಗ ಅದು ಜಾಸ್ತಿಯಾದ ಮ್ಯಾಲೆ ಲಾಕ್‍ಡವುನ್ ತಗದವುರೆ ಹಿಂಗಾದ್ರೆ ಯಂಗೋಯ್ತದೇ?’.
‘ಹೋಗದಿಲ್ಲ ಅಂತಿಯಾ’.
‘ಚಾನ್ಸೆಯಿಲ್ಲ ದಿನೇ ದಿನೇ ಜಾಸ್ತಿಯಾಯ್ತದೆ’.
‘ಸದ್ಯ ನಮ್ಮೂರಿಗೆ ಬರಲಿಲವಲ್ಲ ಹೇಳು’.
‘ಅಂಗೇಳಂಗೇಯಿಲ್ಲ ಕಣೆ. ಬೊಂಬಾಯಿಲಿರೋರು ಬಂದ್ರೇ ಅದು ಬತ್ತದೆ’.
‘ಮದ್ಲು ಬಂಬಾಯಿಲಿರೋರು ಬಂದಾಗ ಯೇಡಸ ತಂದ್ರು, ಈಗಿವುರು ಬಂದು ಕರೋನ ತತ್ತರಲ್ಲ ಹೇಳು’.
‘ಹೆದರುಬ್ಯಾಡ ಕಣಕ್ಕ ಕರೋನ ಕ್ಯೂರಬಲ್ಲು ಅದೇ ಏಡಸು ನಾನ್ ಕ್ಯೂರಬಲ್’.
‘ಅಂಗದ್ರೆ ಕರೋನ ಬಂದೋರು ಉಸಾರಾಗಿ ಮನಿಗೆದ್ದೊಯ್ತರೆ. ಅದೇ ಏಡಸಾದ್ರೆ ಚಟ್ಟಕಟ್ಟದೆಯ’.
‘ಮತ್ಯಾಕೆ ಹೆದ್ರಿಕಳದು ಬುಡ್ಳ’
‘ನಾನಂತೂ ಯಾವತ್ತು ಹೆದರಿಲ್ಲ ಕಣಕ್ಕ ಈ ಉಗ್ರಿನೆ ಹೆದರಿ ನಡಗ್ತನಂಗೆಯ’.
‘ಅದ್ಯಾಕ್ಲ ಹೆದರತಿ ಉಗ್ರಿ’.
‘ಕ್ವಾರಂಟೈನು ಮಾಡಿ ನಾಯಿ ನೋಡಿದಂಗೆ ನೋಡಿಕತ್ತರಂತೆ. ದೂರ ನಿಂತಗಂಡು ಬಿಸ್ಕತ್ತ ಯಸಿತರಂತೆ. ಅದ್ಕೆ ಕಣೆ’.
‘ಇನ್ನೆನು ನಿನಗೆ ತ್ವಡೆಮ್ಯಾಲೆ ಕುಂಡ್ರಿಸಿಗಂಡು ಉಣ್ಣುಸ್ತರ್ಲ. ಕಾಯಿಲೆ ಬಂದಾಗ ಯಲ್ಲಾನು ಅನುಬವುಸಬೇಕು’.
‘ಯಾವ ಕಾಯಿಲೆ ಬಂದ್ರು ಹೆದರಸೋ ಧೈರ್ಯ ಬರಬೇಕಾದ್ರೆ ವಳ್ಳೆ ಸರಕಾರ ಇರಬೇಕು ಕಣೆ. ಈ ಹಾಳು ಸರಕಾರ ಯಂಗದೆ ಅಂತೀ. ಇದಿಲ್ದೆಯಿದ್ರೆ ಯಂಗೋ ಚನ್ನಾಗಿರತಿದ್ದೊ’.
‘ಮಿಸ್ಟರ್ ಉಗ್ರಿ ಬಿಜೆಪಿ ಸರಕಾರ ಇರದೇ ಹಿಂಗಲವೇನೋ ಅದು ಗೊತ್ತಿಲವೆ ನಿನಗೆ’.
‘ಇರದೆ ಹಿಂಗೆ ಅಂದ್ರೆ’.
‘ಅಂದ್ರೆ ಈ ಸರಕಾರ ನಡೆಸೋರು ಪರಂಪರೆ ಜನ. ಪರಕೀಯರು ದಾಳಿ ಮಾಡಿ ಇಂಡಿಯಾ ದೇಸವ ಆಳತಾಯಿದ್ರೆ ಅವುರು ದೇವಸ್ಥಾನದಲ್ಲಿ ಭಜನೆ ಮಾಡಿಕೊಂಡು ಪ್ರಸಾದ ತಿಂತಾಯಿದ್ರಂತೆ. ಈಗ್ಲು ಅಂಗೇ ಅವುರೆ. ಕೊರೋನಾ ಬಂದ್ರೇನು, ಜನ ಸತ್ತರೆ ಅವುರಿಗೇನೂ. ಯಾವುದ್ಕು ಕೇರ್ ಮಾಡದಂಗೆ ತಾವು ಒಂದು ವರುಸದಲ್ಲಿ ಏನೇನು ಮಾಡಿದೊ ಅಂತ ಪುಸ್ತಕ ಬರದು ಹಂಚತಾಕುಂತವುರೆ ಇದಕೇನೇಳ್ತೀ’.
‘ಹೇಳದಿನ್ನೇನು ನೀನು ಮದ್ಲೆ ಹೇಳಿದಲ್ಲ ಅಂಗೆ ಆಗ್ಯಾದೆ’.
‘ಈಗ್ಯಾವುದೊ ಯಲಕ್ಸನ್ನ ಬಂದು ದ್ಯಾವೇಗೌಡ್ರು ನಿಂತವುರಂತಲ್ಲಾ ಯಾವುದ್ಲ’ ಎಂದಳು ಜುಮ್ಮಿ.
‘ಅದು ಧಾರುಣವಾದ ಯಲಕ್ಸನ್ನು ಕಣಕ್ಕ’.
‘ಅದ್ಯಾಕ್ಲ’.
‘ಪಾಪ ಆ ಉಮೇಸ್ ಕತ್ತಿ ಬಂಡಾಯದ ನಾಟಕ ಎಬ್ಬಿಸಿ ತನ್ನ ತಮ್ಮನಿಗೇ ಟಿಕೇಟು ಗ್ಯಾರಂಟಿ ಅಂತ ಕಾಯ್ತಾಯಿದ್ದ. ಇನ್ನು ಎಜುಕೇಷನ್ ಮಾರ್ವಾಡಿಯಂತಿರೊ ಕೋರೆ, ಈಗಾಗ್ಲೇ ಎಲ್ಡು ಸಲ ಆಗಿದ್ದು ಸಾಲ್ದು ಅಂತ ಮೂರ್ನೇ ಸಲಕ್ಕೂ ಯಡ್ಯೂರಪ್ಪನ ಜಪ ಮಾಡಿಕ್ಯಂಡು ಕುಂತಿದ್ದ. ಅಂತೋರಿಗೆಲ್ಲ ರಾಜ್ಯಸಭೆ ಸಿಗಲಿಲ್ಲ. ಅಂಗಾಗಿ ಅವುರ ಪಾಲಿಗೆ ಇದು ಧಾರುಣವಾದ ವಿಷಯ’.
‘ಮತ್ಯಾರಿಗೆ ಕೊಟ್ರು’.
‘ಬಿಜೆಪೀಲಿ ಯಾವುದೇ ಬೆನಿಫಿಟ್ ಕೊಡಬೇಕಾದ್ರು ಸಣ್ಣುಡಗರಿಂದ ಲಾಟಿ ಬೀಸಿರಬೇಕು. ಅಂಗಾಗಿ ಬೆಳಗಾವಿ ಈರಣ್ಣ, ರಾಯಚೂರು ಅಶೋಕ ಅನ್ನೊರ್ನ ಕ್ಯಾಂಡಿಡೇಟ್ ಮಾಡಿದ್ರು ಕಣಕ್ಕ. ಅವುರು ಹುಟ್ಟಿದಾಗಿಂದ ಲಾಟಿ ಬೀಸಿದ್ರಂತೆ’.
‘ಕಾಂಗ್ರೆಸ್ಸಿಂದ ಯಾರ್ಲ’.
‘ಕಾಂಗ್ರೆಸ್ಸಿಂದ ಖರಗೆ, ದ್ಯಾವೇಗೌಡ್ರು ಕಣಕ್ಕ. ಕಾಂಗ್ರೆಸ್ಸಲ್ಲಿ ಜಾಸ್ತಿ ಓಟಿದ್ದವಂತೆ ಅದ ದ್ಯಾವೇಗೌಡ್ರಿಗೆ ಕೊಡ್ತರೆ ಅಂಗಾಗಿ ದ್ಯಾವೇಗೌಡ್ರು ಅರ್ಧ ಕಾಂಗ್ರೆಸ್ಸು, ಅರ್ಧ ದಳದ ಕ್ಯಾಂಡೇಟು’.
‘ಈ ಯಂಬತ್ತೇಳನೇ ವಯಸಲ್ಲಿ ಅವುರಿಗೆ ಬೇಕಿತ್ತೆ’ ಎಂದ ಉಗ್ರಿ.
‘ಯಂಬತ್ತೇಳು ಅವರ ಶರೀರಕ್ಕಾಗ್ಯದೆ ಮನಸಿಗಲ್ಲ ಕಣೊ, ನೋಡಿವಿರು ಗೆದ್ದು ಪಾರ್ಲಿಮೆಂಟಿಗೆ ಯಂಗೆ ಇಬ್ಬರು ಭುಜ ಹಿಡಕಂಡೋಯ್ತರೆ ಅದ ನೋಡಕ್ಕೆ ಚಂದ’.


ಇದನ್ನು ಓದಿ: ನಮ್ಮೂರ ಡಾ.ಎಚ್ಚೆನ್‍ಗೆ ನೂರು: ವೈಯಕ್ತಿಕ ನೆನಪುಗಳ ಹಿನ್ನೆಲೆಯಲ್ಲೊಂದು ಸಾಮಾಜಿಕ ನೋಟ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...