Homeಕರ್ನಾಟಕಕುಲಕ್ಕೆ ಮೂಲ ಕೊಡಲಿ ಕಾವು- ದೇವು

ಕುಲಕ್ಕೆ ಮೂಲ ಕೊಡಲಿ ಕಾವು- ದೇವು

- Advertisement -
- Advertisement -

ಕಾಂಗ್ರೆಸ್ ಮತ್ತು ಜೆಡಿಎಸ್‍ನಿಂದ ಬಂಡಾಯವೆದ್ದು ಬೊಂಬಾಯಿಗೆ ಹೋಗಿದ್ದ ಶಾಸಕರ ಸಾಹಸ ಏನೋ ಮಾಡಲು ಹೋಗಿ ಇನ್ನೇನೋ ಆದಂತಿದೆಯಲ್ಲಾ. ಸೂಕ್ಷ್ಮವಾಗಿ ನೋಡಿದರೆ, ಅಂದರೆ ವಿಶ್ವನಾಥ್ ತರ ಆಲೋಚಿಸಿದರೆ, ಅಂತಹ ಆಗಬಾರದ್ದೇನೂ ಆಗಿಲ್ಲವಂತಲ್ಲಾ. ಹೇಗೆಂದರೆ, ಈ ಕುಮಾರಸ್ವಾಮಿ ಸರಕಾರದಲ್ಲಿದ್ದರೆ ಭಿಕ್ಷುಕರಂತೆ ಇರಬೇಕಿತ್ತು. ಕ್ಷೇತ್ರದ ಕೆಲಸಗಳಿಗಾಗಿ ಬೇಡಬೇಕಿತ್ತು. ಆ ಬೇಡಿಕೆ, ರೇವಣ್ಣನ ಖಾತೆಗೆ ಸಂಬಂಧಿಸಿದ್ದರೆ, ಮುಗಿದೇಹೋಯ್ತು. ಮೂಡ್ಕಿಗಿರಪ್ಪನಿಗೆ ಕೋಳಿ ಕೂದು ಪೊರಮಾಡಿ ಕೈಮುಗಿದಂತಾಗುತ್ತಿತ್ತು. ಇನ್ನುಳಿದ ಬೇಡಿಕೆಗಳು ಪಿತಾಜಿಯವರಾದ ದ್ಯಾವೇಗೌಡರ ಆವಗಾಹನೆಗೆ ಹೋಗಬೇಕಿತ್ತು. ಇಂತಹ ಯಾಚಕತನದಲ್ಲಿ ಶಾಸಕರಾಗಿದ್ದುಕೊಂಡು, ಚಿಲ್ಲರೆ ಹಣದೊಂದಿಗೆ ಮನೆಗೆ ಹೋಗಿ ಮತ್ತು ಚುನಾವಣೆಗೆ ಹೋಗಿ ಸೋಲುವುದಕ್ಕಿಂತ ಮಕ್ಕಳ ಕಾಲಕ್ಕೂ ಮುಗಿಯದಷ್ಟು ಹಣವನ್ನು ಮೋದಿ ಶಾರಿಂದ ಪಡೆದು, ಆ ರಮೇಶ್ ಕುಮಾರ್ ಅದೇನು ಮಾಡುತ್ತಾನೋ ನೋಡೇಬಿಡೋಣ ಎಂಬ ತೀರ್ಮಾನಕ್ಕೆ ಬಂದಿದ್ದರಂತಲ್ಲಾ ಥೂತ್ತೇರಿ.

*****

ಕರ್ನಾಟಕದ ರಾಜಕಾರಣಕ್ಕೇ ಶಾಪದಂತಿರುವ ಅಥವಾ ಒಕ್ಕಲಿಗ ಜನಾಂಗದ ನಾಯಕರುಗಳಿಗೇ ಕಂಟಕವಾಗಿರುವ ದ್ಯಾವೇಗೌಡರು ಮೊನ್ನೆ ತಮ್ಮ ಪಾರ್ಟಿ ಕಾರ್ಯಕರ್ತರ ಎದುರು ಒಂದೇ ಕಣ್ಣಿನಲ್ಲಿ ಎಷ್ಟು ಅತ್ತರೂ ಕಣ್ಣೀರು ಬರದೇ ಕರವಸ್ತ್ರದಿಂದ ವರಸಿಕೊಂಡರಂತಲ್ಲಾ. ಗೌಡರ ಈ ಕಣ್ಣೀರಿಗೆ ಮಂಡ್ಯದ ಮಂತ್ರಿಗಳು ಶಾಸಕರು ಮತ್ತು ನಿಷ್ಠಾವಂತರು ಗೌಡರಿಗೆ ಬರೆಯುತ್ತಿರುವ ಅಥವಾ ಬರೆಯಲು ಯತ್ನಿಸುತ್ತಿರುವ ಕಾಗದಗಳ ಪರಿಣಾಮವೆಂದು ಗೌಡರ ಆಪ್ತವಲಯದ ಆಪಾದನೆಯಾಗಿದೆಯಲ್ಲಾ. ಗೌಡರ ಆವಗಾಹನೆಗೆ ಮಂಡ್ಯದ ಮುಖಂಡರು ಬರೆಯುತ್ತಿರುವ ದೂರಿನ ಪಟ್ಟಿ ಇಂತಿದೆಯಲ್ಲಾ.

ಪಿತೃ ಸಮಾನರು ದೈವ ಸಮಾನರೂ ಆದ ಅಪ್ಪಾಜಿಯವರು ಮತ್ತು ಕುಮಾರಣ್ಣನವರಿಗೆ, ನಮ್ಮ ಶಿರಸಾಷ್ಟಾಂಗ ನಮಸ್ಕಾರಗಳು. ಧೈರ್ಯ ಮಾಡಿ ಈ ಪತ್ರ ಬರೆಯುವ ಉದ್ದೇಶವೇನೆಂದರೆ ಮಂಡ್ಯದಲ್ಲಿ ಚಿರಂಜೀವಿ ನಿಖಿಲ್ ಸೋತ ಮೇಲೆ ತಮ್ಮ ಮನೆಯ ವಾತಾವರಣ ಬದಲಾಗಿದೆ. ಮುಖ್ಯವಾಗಿ ನಾವು ಬಂದಾಗ ಮಡಿಮೈಲಿಗೆ ಬ್ರಾಹ್ಮಣ ಅಸ್ಪøಶ್ಯರನ್ನು ನೋಡಿದಂತೆ ನೋಡುತ್ತೀರಿ ಎಂಬ ವಾಕ್ಯಕ್ಕೆ ಗೌಡರು ಸಿಡಿಮಿಡಿಗೊಂಡರಂತಲ್ಲಾ ಥೂತ್ತೇರಿ…

*****

ಮತ್ತೊಂದು ಪತ್ರದ ಸಾರಾಂಶ. ಅಪ್ಪಾಜಿಯವರೆ ನಾವು ನೀವು ಹೇಳಿದಂತೆ ಕೇಳಿದ್ದೇವೆ. ಕಾಲಲ್ಲಿ ತೋರಿದ ಕೆಲಸವನ್ನ ಕೈಲಿ ಮಾಡಿದ್ದೇವೆ. ಕೈಯಿಂದಲೇ ಹಣ ಹಾಕಿ ರಾಜಕಾರಣ ಮಾಡುತ್ತಿದ್ದೇವೆಯೇ ಹೊರತು ನಿಮ್ಮಿಂದ ಹಣ ಪಡೆದಿಲ್ಲ. ಆದರೂ ನಿಮ್ಮ ಮನೆಗೆ ಬಂದಾಗ, ನಮ್ಮನ್ನು ಕಳ್ಳರಂತೆ ನೋಡುತ್ತೀರಿ. ಇಂತಹ ಅವಮಾನ ಸಹಿಸಲಾಗದೆ ಕೆ.ಆರ್.ಪೇಟೆ ನಾರಾಯಣಗೌಡ ಬಿಕರಿಯಾಗಿ ಹೋದ. ನಮಗೆ ಬೂಕನಕೆರೆ ಎಡೂರಪ್ಪ ದೂರದವನಲ್ಲ. ಆದರೂ ನಾವು ನಿಮ್ಮ ಜೊತೆ ಇದ್ದೇವೆ. ಹೇಳಿದ ಕೆಲಸ ಮಾಡಿದ್ದೇವೆ. ಎಳೆ ಹುಡುಗನನ್ನು ತಂದು ಮಂಡ್ಯಕ್ಕೆ ನಿಲ್ಲಿಸಿದಾಗ ಕುಮಾರಣ್ಣನೇ ಸ್ಪರ್ಧಿಸಿದ್ದಾನೆ ಎನ್ನುವಂತೆ ಕೆಲಸ ಮಾಡಿದ್ದೇವೆ. ಕೈಲಿದ್ದ ಕಾಸು ಖಾಲಿಯಾದ ಮೇಲೆ ಕೈ ಸಾಲ ಮಾಡಿದ್ದೇವೆ. ಎಣ್ಣೆ ಅಂಗಡಿ, ಮಿಲಿಟ್ರಿ ಹೋಟೆಲ್ ಬಾಕಿ ಹಾಗೇ ಇದೆ. ಕಿರುಜಾತಿ ಲೀಡರುಗಳನ್ನೆಲ್ಲಾ ತಂದು ನಿಮ್ಮ ಮುಂದೆ ನಿಲ್ಲಿಸಿ ಬಿಕರಿ ಮಾಡಿದೆವು. ಅವರ ಹಳೆ ಬಾಕಿ ಹಾಗೇ ಇದೆ. ನಮ್ಮ ಭಾಷಣದಿಂದ ಜನ ರೊಚ್ಚಿಗೆದ್ದಿದ್ದಾರೆ. ಹೀಗೆ ಮಾತನಾಡಿ ಎಂದು ಹೇಳಿದವರೂ ನೀವೆ. ಈಗ ನಮ್ಮನ್ನ ದೂರುತ್ತಿರುವವರೂ ನೀವೆ. ಹೇಳಿ ನಾವು ಇಲ್ಲೇ ಇರಬೇಕೋ ಅಥವಾ ಬೂಕನಕೆರೆಗೆ ಹೋಗಬೇಕೊ ತಿಳಿಸಿ ಎಂದು ಬರೆದುಬಿಟ್ಟಿದ್ದಾರಲ್ಲ ಥೂತ್ತೇರಿ…

*****

ಮತ್ತೊಂದು ಪತ್ರದ ಒಕ್ಕಣೆ ಇಂತಿದೆಯಲ್ಲಾ. ತಂದೆಯಿಲ್ಲದ ನನಗೆ ತಂದೆ ಸಮಾನರೂ ಅಣ್ಣನಿಲ್ಲದ ನನಗೆ ಅಣ್ಣನಂತಿರುವ ಕುಮಾರಣ್ಣ, ಮಂಡ್ಯದ ಚುನಾವಣಾ ಫಲಿತಾಂಶದ ನಂತರ ನಾನು ನಿಮ್ಮ ಮನೆಗೆ ಬಂದಾಗ ಅಪ್ಪಾಜಿಯವರು ಅತ್ತ ನೋಡುತ್ತಿದ್ದರು. ನನ್ನ ಕಡೆ ತಿರುಗಲಿಲ್ಲ. ನೀವು ಪ್ರಜಾವಾಣಿಯ ಜಾಹೀರಾತು ನೋಡುತ್ತ ತಲೆ ಎತ್ತಲಿಲ್ಲ. ನಿಜಕ್ಕೂ ಮಂಡ್ಯದಲ್ಲಿ ನಮ್ಮ ನಿಖಿಲ್ ಸೋತಿದ್ದು ನಮ್ಮಿಂದಲ್ಲ ನಿಮ್ಮಿಂದ. ಕೇಳಿ ಮೊದಲನೆಯದಾಗಿ ಮಂಡ್ಯಕ್ಕೆ ಒಂಟಿ ಕರುವಿನಂತೆ ಆ ಹುಡುಗನನ್ನ ತಂದು ನಿಲ್ಲಿಸಿದ್ದು ದೊಡ್ಡ ತಪ್ಪು. ಆ ನಂತರ ಕುಮಾರಣ್ಣ ಮೂರು ಸುಮಲತಾರನ್ನ ಹುಡುಕಿ ತಂದು ನಿಲ್ಲಿಸಿದ್ದು ಇನ್ನು ದೊಡ್ಡ ತಪ್ಪು. ಆನಂತರ ಕುಮಾರಣ್ಣ ಯಶ್ ಎಂಬ ನಟನನ್ನು ಕೀಳಾಗಿ ನಿಂದಿಸಿದ್ದು ಮಹಾ ಅಪರಾಧ. ಆ ನಟನ ಅಭಿಮಾನಿಗಳು ಇಡೀ ಕರ್ನಾಟಕದಲ್ಲಿ ನಮಗೂ ಓಟಾಕಲಿಲ್ಲ. ಕಾಂಗ್ರೆಸ್ಸಿಗೂ ಓಟು ಹಾಕಲಿಲ್ಲ. ಇನ್ನ ದರ್ಶನ್ ಎಂಬ ದೊಡ್ಡ ನಟನನ್ನ ಕುಮಾರಣ್ಣ ಆಡಿಕೊಂಡರು. ಆ ನಟನ ಇಡೀ ಕರ್ನಾಟಕದ ಅಭಿಮಾನಿಗಳು ದಳಕ್ಕೆ ಓಟು ಮಾಡಲಿಲ್ಲ. ಈ ಹಾಳು ಟಿ.ವಿ ಜನ ಕುಮಾರಣ್ಣನ ಮಾತನ್ನ ಒಂದು ತಿಂಗಳು ಅರೆದರು. ಇನ್ನ ರೇವಣ್ಣನ ಮಾತು ಮಂಡ್ಯದ ಮಹಿಳೆಯರ ಓಟನ್ನೇ ಕಸಿಯಿತು. ನಿಖಿಲರನ್ನು ಸೋಲಿಸಿದವರು ನೀವೇ ಹೊರತು ನಾವಲ್ಲ ಥೂತ್ತೇರಿ…

*****

ಮತ್ತೊಂದು ಪತ್ರದಲ್ಲಿ ದೇವೇಗೌಡರನ್ನ ನೇರಾನೇರ ಪ್ರಶ್ನಿಸಿದೆಯಂತಲ್ಲಾ. ಮಾನ್ಯ ದೇವೇಗೌಡರೆ ತಮ್ಮ ರಾಜಕಾರಣವನ್ನ ನೋಡಿದರೆ, ಕುಲಕ್ಕೆ ಮೂಲ ಕೊಡಲಿ ಕಾವು ಎನ್ನುವಂತೆ ಕಾಣುತ್ತಿದ್ದೀರಿ. ಇವತ್ತು ಒಬ್ಬನೇ ಒಬ್ಬ ಧೀಮಂತ ನಾಯಕ ಒಕ್ಕಲಿಗ ಜನಾಂಗದಲ್ಲಿ ಇಲ್ಲದಂತೆ ಮಾಡಿಬಿಟ್ಟಿದ್ದೀರಿ. ಕಾಂಗ್ರೆಸ್‍ನಲ್ಲೂ ಇಲ್ಲ, ದಳದಲ್ಲೂ ಇಲ್ಲ. ಅದಕ್ಕೆ ಇಲ್ಲಿ ಬಿಜೆಪಿ ಕಾಲೂರಿದ್ದು. ಕುಮಾರಣ್ಣ ಅವರ ಜೊತೆ ಸರಕಾರ ಮಾಡಿ ಕಾಲೂರಲು ಅವಕಾಶ ಮಾಡಿದರು. ಈಗ ನಿಮ್ಮಿಬ್ಬರ ಮನೆತನದ ಬುದ್ಧಿಯಿಂದ ಅತ್ತ ಕಾಂಗ್ರೆಸ್ಸೂ ಹಾಳಾಯ್ತು. ದಳವೂ ಉದುರೊಯ್ತು. ಬಿಜೆಪಿ ಕಾಲೂರಿತು. ಕಾರಣ ಇಷ್ಟೆ. ತಾವು ಅನಾದಿಕಾಲದಿಂದ ಕರ್ನಾಟಕ ಮತ್ತು ದೇಶವನ್ನು ಕುರಿತು ಯೋಚಿಸಿದವರಲ್ಲ. ಬರೇ ಕುಟುಂಬವನ್ನು ಕುರಿತು ಯೋಚಿಸಿದಿರಿ. ಅವರ ಅಂತಿಮ ಹಂತ ಯಾವುದು ಎಂದರೆ, ನಾಡಿನ ಒಕ್ಕಲಿಗ ಜನಾಂಗ ನಿಮ್ಮನ್ನ ನಿಮ್ಮ ಕುಟುಂಬವನ್ನು ತಿರಸ್ಕರಿಸಿದೆ. ನಿಮ್ಮ ಪಾರ್ಟಿ ಆಫೀಸು ಹಾಳಾಗಿದೆ. ನೀವೇ ನೇಮಿಸಿದ ಅಧ್ಯಕ್ಷ ನಿಮಗೆ ತಕ್ಕ ಶಾಸ್ತಿ ಮಾಡಿದ. ಈಗಲಾದರೂ ಸಮಗ್ರ ಕರ್ನಾಟಕದಲ್ಲಿ, ದಳ ಎಂಬ ಪ್ರಾದೇಶಿಕ ಪಾರ್ಟಿ ಉಳಿಸಲು ಕಣ್ಣು ತೆರೆಯಿರಿ. ಮಿಸ್ಟರ್ ದೇವೇಗೌಡ್ ಓಪನ್ ಯುವರ್ ಐ ಥೂತ್ತೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...