Homeಕರ್ನಾಟಕಕುಲಕ್ಕೆ ಮೂಲ ಕೊಡಲಿ ಕಾವು- ದೇವು

ಕುಲಕ್ಕೆ ಮೂಲ ಕೊಡಲಿ ಕಾವು- ದೇವು

- Advertisement -
- Advertisement -

ಕಾಂಗ್ರೆಸ್ ಮತ್ತು ಜೆಡಿಎಸ್‍ನಿಂದ ಬಂಡಾಯವೆದ್ದು ಬೊಂಬಾಯಿಗೆ ಹೋಗಿದ್ದ ಶಾಸಕರ ಸಾಹಸ ಏನೋ ಮಾಡಲು ಹೋಗಿ ಇನ್ನೇನೋ ಆದಂತಿದೆಯಲ್ಲಾ. ಸೂಕ್ಷ್ಮವಾಗಿ ನೋಡಿದರೆ, ಅಂದರೆ ವಿಶ್ವನಾಥ್ ತರ ಆಲೋಚಿಸಿದರೆ, ಅಂತಹ ಆಗಬಾರದ್ದೇನೂ ಆಗಿಲ್ಲವಂತಲ್ಲಾ. ಹೇಗೆಂದರೆ, ಈ ಕುಮಾರಸ್ವಾಮಿ ಸರಕಾರದಲ್ಲಿದ್ದರೆ ಭಿಕ್ಷುಕರಂತೆ ಇರಬೇಕಿತ್ತು. ಕ್ಷೇತ್ರದ ಕೆಲಸಗಳಿಗಾಗಿ ಬೇಡಬೇಕಿತ್ತು. ಆ ಬೇಡಿಕೆ, ರೇವಣ್ಣನ ಖಾತೆಗೆ ಸಂಬಂಧಿಸಿದ್ದರೆ, ಮುಗಿದೇಹೋಯ್ತು. ಮೂಡ್ಕಿಗಿರಪ್ಪನಿಗೆ ಕೋಳಿ ಕೂದು ಪೊರಮಾಡಿ ಕೈಮುಗಿದಂತಾಗುತ್ತಿತ್ತು. ಇನ್ನುಳಿದ ಬೇಡಿಕೆಗಳು ಪಿತಾಜಿಯವರಾದ ದ್ಯಾವೇಗೌಡರ ಆವಗಾಹನೆಗೆ ಹೋಗಬೇಕಿತ್ತು. ಇಂತಹ ಯಾಚಕತನದಲ್ಲಿ ಶಾಸಕರಾಗಿದ್ದುಕೊಂಡು, ಚಿಲ್ಲರೆ ಹಣದೊಂದಿಗೆ ಮನೆಗೆ ಹೋಗಿ ಮತ್ತು ಚುನಾವಣೆಗೆ ಹೋಗಿ ಸೋಲುವುದಕ್ಕಿಂತ ಮಕ್ಕಳ ಕಾಲಕ್ಕೂ ಮುಗಿಯದಷ್ಟು ಹಣವನ್ನು ಮೋದಿ ಶಾರಿಂದ ಪಡೆದು, ಆ ರಮೇಶ್ ಕುಮಾರ್ ಅದೇನು ಮಾಡುತ್ತಾನೋ ನೋಡೇಬಿಡೋಣ ಎಂಬ ತೀರ್ಮಾನಕ್ಕೆ ಬಂದಿದ್ದರಂತಲ್ಲಾ ಥೂತ್ತೇರಿ.

*****

ಕರ್ನಾಟಕದ ರಾಜಕಾರಣಕ್ಕೇ ಶಾಪದಂತಿರುವ ಅಥವಾ ಒಕ್ಕಲಿಗ ಜನಾಂಗದ ನಾಯಕರುಗಳಿಗೇ ಕಂಟಕವಾಗಿರುವ ದ್ಯಾವೇಗೌಡರು ಮೊನ್ನೆ ತಮ್ಮ ಪಾರ್ಟಿ ಕಾರ್ಯಕರ್ತರ ಎದುರು ಒಂದೇ ಕಣ್ಣಿನಲ್ಲಿ ಎಷ್ಟು ಅತ್ತರೂ ಕಣ್ಣೀರು ಬರದೇ ಕರವಸ್ತ್ರದಿಂದ ವರಸಿಕೊಂಡರಂತಲ್ಲಾ. ಗೌಡರ ಈ ಕಣ್ಣೀರಿಗೆ ಮಂಡ್ಯದ ಮಂತ್ರಿಗಳು ಶಾಸಕರು ಮತ್ತು ನಿಷ್ಠಾವಂತರು ಗೌಡರಿಗೆ ಬರೆಯುತ್ತಿರುವ ಅಥವಾ ಬರೆಯಲು ಯತ್ನಿಸುತ್ತಿರುವ ಕಾಗದಗಳ ಪರಿಣಾಮವೆಂದು ಗೌಡರ ಆಪ್ತವಲಯದ ಆಪಾದನೆಯಾಗಿದೆಯಲ್ಲಾ. ಗೌಡರ ಆವಗಾಹನೆಗೆ ಮಂಡ್ಯದ ಮುಖಂಡರು ಬರೆಯುತ್ತಿರುವ ದೂರಿನ ಪಟ್ಟಿ ಇಂತಿದೆಯಲ್ಲಾ.

ಪಿತೃ ಸಮಾನರು ದೈವ ಸಮಾನರೂ ಆದ ಅಪ್ಪಾಜಿಯವರು ಮತ್ತು ಕುಮಾರಣ್ಣನವರಿಗೆ, ನಮ್ಮ ಶಿರಸಾಷ್ಟಾಂಗ ನಮಸ್ಕಾರಗಳು. ಧೈರ್ಯ ಮಾಡಿ ಈ ಪತ್ರ ಬರೆಯುವ ಉದ್ದೇಶವೇನೆಂದರೆ ಮಂಡ್ಯದಲ್ಲಿ ಚಿರಂಜೀವಿ ನಿಖಿಲ್ ಸೋತ ಮೇಲೆ ತಮ್ಮ ಮನೆಯ ವಾತಾವರಣ ಬದಲಾಗಿದೆ. ಮುಖ್ಯವಾಗಿ ನಾವು ಬಂದಾಗ ಮಡಿಮೈಲಿಗೆ ಬ್ರಾಹ್ಮಣ ಅಸ್ಪøಶ್ಯರನ್ನು ನೋಡಿದಂತೆ ನೋಡುತ್ತೀರಿ ಎಂಬ ವಾಕ್ಯಕ್ಕೆ ಗೌಡರು ಸಿಡಿಮಿಡಿಗೊಂಡರಂತಲ್ಲಾ ಥೂತ್ತೇರಿ…

*****

ಮತ್ತೊಂದು ಪತ್ರದ ಸಾರಾಂಶ. ಅಪ್ಪಾಜಿಯವರೆ ನಾವು ನೀವು ಹೇಳಿದಂತೆ ಕೇಳಿದ್ದೇವೆ. ಕಾಲಲ್ಲಿ ತೋರಿದ ಕೆಲಸವನ್ನ ಕೈಲಿ ಮಾಡಿದ್ದೇವೆ. ಕೈಯಿಂದಲೇ ಹಣ ಹಾಕಿ ರಾಜಕಾರಣ ಮಾಡುತ್ತಿದ್ದೇವೆಯೇ ಹೊರತು ನಿಮ್ಮಿಂದ ಹಣ ಪಡೆದಿಲ್ಲ. ಆದರೂ ನಿಮ್ಮ ಮನೆಗೆ ಬಂದಾಗ, ನಮ್ಮನ್ನು ಕಳ್ಳರಂತೆ ನೋಡುತ್ತೀರಿ. ಇಂತಹ ಅವಮಾನ ಸಹಿಸಲಾಗದೆ ಕೆ.ಆರ್.ಪೇಟೆ ನಾರಾಯಣಗೌಡ ಬಿಕರಿಯಾಗಿ ಹೋದ. ನಮಗೆ ಬೂಕನಕೆರೆ ಎಡೂರಪ್ಪ ದೂರದವನಲ್ಲ. ಆದರೂ ನಾವು ನಿಮ್ಮ ಜೊತೆ ಇದ್ದೇವೆ. ಹೇಳಿದ ಕೆಲಸ ಮಾಡಿದ್ದೇವೆ. ಎಳೆ ಹುಡುಗನನ್ನು ತಂದು ಮಂಡ್ಯಕ್ಕೆ ನಿಲ್ಲಿಸಿದಾಗ ಕುಮಾರಣ್ಣನೇ ಸ್ಪರ್ಧಿಸಿದ್ದಾನೆ ಎನ್ನುವಂತೆ ಕೆಲಸ ಮಾಡಿದ್ದೇವೆ. ಕೈಲಿದ್ದ ಕಾಸು ಖಾಲಿಯಾದ ಮೇಲೆ ಕೈ ಸಾಲ ಮಾಡಿದ್ದೇವೆ. ಎಣ್ಣೆ ಅಂಗಡಿ, ಮಿಲಿಟ್ರಿ ಹೋಟೆಲ್ ಬಾಕಿ ಹಾಗೇ ಇದೆ. ಕಿರುಜಾತಿ ಲೀಡರುಗಳನ್ನೆಲ್ಲಾ ತಂದು ನಿಮ್ಮ ಮುಂದೆ ನಿಲ್ಲಿಸಿ ಬಿಕರಿ ಮಾಡಿದೆವು. ಅವರ ಹಳೆ ಬಾಕಿ ಹಾಗೇ ಇದೆ. ನಮ್ಮ ಭಾಷಣದಿಂದ ಜನ ರೊಚ್ಚಿಗೆದ್ದಿದ್ದಾರೆ. ಹೀಗೆ ಮಾತನಾಡಿ ಎಂದು ಹೇಳಿದವರೂ ನೀವೆ. ಈಗ ನಮ್ಮನ್ನ ದೂರುತ್ತಿರುವವರೂ ನೀವೆ. ಹೇಳಿ ನಾವು ಇಲ್ಲೇ ಇರಬೇಕೋ ಅಥವಾ ಬೂಕನಕೆರೆಗೆ ಹೋಗಬೇಕೊ ತಿಳಿಸಿ ಎಂದು ಬರೆದುಬಿಟ್ಟಿದ್ದಾರಲ್ಲ ಥೂತ್ತೇರಿ…

*****

ಮತ್ತೊಂದು ಪತ್ರದ ಒಕ್ಕಣೆ ಇಂತಿದೆಯಲ್ಲಾ. ತಂದೆಯಿಲ್ಲದ ನನಗೆ ತಂದೆ ಸಮಾನರೂ ಅಣ್ಣನಿಲ್ಲದ ನನಗೆ ಅಣ್ಣನಂತಿರುವ ಕುಮಾರಣ್ಣ, ಮಂಡ್ಯದ ಚುನಾವಣಾ ಫಲಿತಾಂಶದ ನಂತರ ನಾನು ನಿಮ್ಮ ಮನೆಗೆ ಬಂದಾಗ ಅಪ್ಪಾಜಿಯವರು ಅತ್ತ ನೋಡುತ್ತಿದ್ದರು. ನನ್ನ ಕಡೆ ತಿರುಗಲಿಲ್ಲ. ನೀವು ಪ್ರಜಾವಾಣಿಯ ಜಾಹೀರಾತು ನೋಡುತ್ತ ತಲೆ ಎತ್ತಲಿಲ್ಲ. ನಿಜಕ್ಕೂ ಮಂಡ್ಯದಲ್ಲಿ ನಮ್ಮ ನಿಖಿಲ್ ಸೋತಿದ್ದು ನಮ್ಮಿಂದಲ್ಲ ನಿಮ್ಮಿಂದ. ಕೇಳಿ ಮೊದಲನೆಯದಾಗಿ ಮಂಡ್ಯಕ್ಕೆ ಒಂಟಿ ಕರುವಿನಂತೆ ಆ ಹುಡುಗನನ್ನ ತಂದು ನಿಲ್ಲಿಸಿದ್ದು ದೊಡ್ಡ ತಪ್ಪು. ಆ ನಂತರ ಕುಮಾರಣ್ಣ ಮೂರು ಸುಮಲತಾರನ್ನ ಹುಡುಕಿ ತಂದು ನಿಲ್ಲಿಸಿದ್ದು ಇನ್ನು ದೊಡ್ಡ ತಪ್ಪು. ಆನಂತರ ಕುಮಾರಣ್ಣ ಯಶ್ ಎಂಬ ನಟನನ್ನು ಕೀಳಾಗಿ ನಿಂದಿಸಿದ್ದು ಮಹಾ ಅಪರಾಧ. ಆ ನಟನ ಅಭಿಮಾನಿಗಳು ಇಡೀ ಕರ್ನಾಟಕದಲ್ಲಿ ನಮಗೂ ಓಟಾಕಲಿಲ್ಲ. ಕಾಂಗ್ರೆಸ್ಸಿಗೂ ಓಟು ಹಾಕಲಿಲ್ಲ. ಇನ್ನ ದರ್ಶನ್ ಎಂಬ ದೊಡ್ಡ ನಟನನ್ನ ಕುಮಾರಣ್ಣ ಆಡಿಕೊಂಡರು. ಆ ನಟನ ಇಡೀ ಕರ್ನಾಟಕದ ಅಭಿಮಾನಿಗಳು ದಳಕ್ಕೆ ಓಟು ಮಾಡಲಿಲ್ಲ. ಈ ಹಾಳು ಟಿ.ವಿ ಜನ ಕುಮಾರಣ್ಣನ ಮಾತನ್ನ ಒಂದು ತಿಂಗಳು ಅರೆದರು. ಇನ್ನ ರೇವಣ್ಣನ ಮಾತು ಮಂಡ್ಯದ ಮಹಿಳೆಯರ ಓಟನ್ನೇ ಕಸಿಯಿತು. ನಿಖಿಲರನ್ನು ಸೋಲಿಸಿದವರು ನೀವೇ ಹೊರತು ನಾವಲ್ಲ ಥೂತ್ತೇರಿ…

*****

ಮತ್ತೊಂದು ಪತ್ರದಲ್ಲಿ ದೇವೇಗೌಡರನ್ನ ನೇರಾನೇರ ಪ್ರಶ್ನಿಸಿದೆಯಂತಲ್ಲಾ. ಮಾನ್ಯ ದೇವೇಗೌಡರೆ ತಮ್ಮ ರಾಜಕಾರಣವನ್ನ ನೋಡಿದರೆ, ಕುಲಕ್ಕೆ ಮೂಲ ಕೊಡಲಿ ಕಾವು ಎನ್ನುವಂತೆ ಕಾಣುತ್ತಿದ್ದೀರಿ. ಇವತ್ತು ಒಬ್ಬನೇ ಒಬ್ಬ ಧೀಮಂತ ನಾಯಕ ಒಕ್ಕಲಿಗ ಜನಾಂಗದಲ್ಲಿ ಇಲ್ಲದಂತೆ ಮಾಡಿಬಿಟ್ಟಿದ್ದೀರಿ. ಕಾಂಗ್ರೆಸ್‍ನಲ್ಲೂ ಇಲ್ಲ, ದಳದಲ್ಲೂ ಇಲ್ಲ. ಅದಕ್ಕೆ ಇಲ್ಲಿ ಬಿಜೆಪಿ ಕಾಲೂರಿದ್ದು. ಕುಮಾರಣ್ಣ ಅವರ ಜೊತೆ ಸರಕಾರ ಮಾಡಿ ಕಾಲೂರಲು ಅವಕಾಶ ಮಾಡಿದರು. ಈಗ ನಿಮ್ಮಿಬ್ಬರ ಮನೆತನದ ಬುದ್ಧಿಯಿಂದ ಅತ್ತ ಕಾಂಗ್ರೆಸ್ಸೂ ಹಾಳಾಯ್ತು. ದಳವೂ ಉದುರೊಯ್ತು. ಬಿಜೆಪಿ ಕಾಲೂರಿತು. ಕಾರಣ ಇಷ್ಟೆ. ತಾವು ಅನಾದಿಕಾಲದಿಂದ ಕರ್ನಾಟಕ ಮತ್ತು ದೇಶವನ್ನು ಕುರಿತು ಯೋಚಿಸಿದವರಲ್ಲ. ಬರೇ ಕುಟುಂಬವನ್ನು ಕುರಿತು ಯೋಚಿಸಿದಿರಿ. ಅವರ ಅಂತಿಮ ಹಂತ ಯಾವುದು ಎಂದರೆ, ನಾಡಿನ ಒಕ್ಕಲಿಗ ಜನಾಂಗ ನಿಮ್ಮನ್ನ ನಿಮ್ಮ ಕುಟುಂಬವನ್ನು ತಿರಸ್ಕರಿಸಿದೆ. ನಿಮ್ಮ ಪಾರ್ಟಿ ಆಫೀಸು ಹಾಳಾಗಿದೆ. ನೀವೇ ನೇಮಿಸಿದ ಅಧ್ಯಕ್ಷ ನಿಮಗೆ ತಕ್ಕ ಶಾಸ್ತಿ ಮಾಡಿದ. ಈಗಲಾದರೂ ಸಮಗ್ರ ಕರ್ನಾಟಕದಲ್ಲಿ, ದಳ ಎಂಬ ಪ್ರಾದೇಶಿಕ ಪಾರ್ಟಿ ಉಳಿಸಲು ಕಣ್ಣು ತೆರೆಯಿರಿ. ಮಿಸ್ಟರ್ ದೇವೇಗೌಡ್ ಓಪನ್ ಯುವರ್ ಐ ಥೂತ್ತೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...