Homeಕರ್ನಾಟಕಕುಲಕ್ಕೆ ಮೂಲ ಕೊಡಲಿ ಕಾವು- ದೇವು

ಕುಲಕ್ಕೆ ಮೂಲ ಕೊಡಲಿ ಕಾವು- ದೇವು

- Advertisement -
- Advertisement -

ಕಾಂಗ್ರೆಸ್ ಮತ್ತು ಜೆಡಿಎಸ್‍ನಿಂದ ಬಂಡಾಯವೆದ್ದು ಬೊಂಬಾಯಿಗೆ ಹೋಗಿದ್ದ ಶಾಸಕರ ಸಾಹಸ ಏನೋ ಮಾಡಲು ಹೋಗಿ ಇನ್ನೇನೋ ಆದಂತಿದೆಯಲ್ಲಾ. ಸೂಕ್ಷ್ಮವಾಗಿ ನೋಡಿದರೆ, ಅಂದರೆ ವಿಶ್ವನಾಥ್ ತರ ಆಲೋಚಿಸಿದರೆ, ಅಂತಹ ಆಗಬಾರದ್ದೇನೂ ಆಗಿಲ್ಲವಂತಲ್ಲಾ. ಹೇಗೆಂದರೆ, ಈ ಕುಮಾರಸ್ವಾಮಿ ಸರಕಾರದಲ್ಲಿದ್ದರೆ ಭಿಕ್ಷುಕರಂತೆ ಇರಬೇಕಿತ್ತು. ಕ್ಷೇತ್ರದ ಕೆಲಸಗಳಿಗಾಗಿ ಬೇಡಬೇಕಿತ್ತು. ಆ ಬೇಡಿಕೆ, ರೇವಣ್ಣನ ಖಾತೆಗೆ ಸಂಬಂಧಿಸಿದ್ದರೆ, ಮುಗಿದೇಹೋಯ್ತು. ಮೂಡ್ಕಿಗಿರಪ್ಪನಿಗೆ ಕೋಳಿ ಕೂದು ಪೊರಮಾಡಿ ಕೈಮುಗಿದಂತಾಗುತ್ತಿತ್ತು. ಇನ್ನುಳಿದ ಬೇಡಿಕೆಗಳು ಪಿತಾಜಿಯವರಾದ ದ್ಯಾವೇಗೌಡರ ಆವಗಾಹನೆಗೆ ಹೋಗಬೇಕಿತ್ತು. ಇಂತಹ ಯಾಚಕತನದಲ್ಲಿ ಶಾಸಕರಾಗಿದ್ದುಕೊಂಡು, ಚಿಲ್ಲರೆ ಹಣದೊಂದಿಗೆ ಮನೆಗೆ ಹೋಗಿ ಮತ್ತು ಚುನಾವಣೆಗೆ ಹೋಗಿ ಸೋಲುವುದಕ್ಕಿಂತ ಮಕ್ಕಳ ಕಾಲಕ್ಕೂ ಮುಗಿಯದಷ್ಟು ಹಣವನ್ನು ಮೋದಿ ಶಾರಿಂದ ಪಡೆದು, ಆ ರಮೇಶ್ ಕುಮಾರ್ ಅದೇನು ಮಾಡುತ್ತಾನೋ ನೋಡೇಬಿಡೋಣ ಎಂಬ ತೀರ್ಮಾನಕ್ಕೆ ಬಂದಿದ್ದರಂತಲ್ಲಾ ಥೂತ್ತೇರಿ.

*****

ಕರ್ನಾಟಕದ ರಾಜಕಾರಣಕ್ಕೇ ಶಾಪದಂತಿರುವ ಅಥವಾ ಒಕ್ಕಲಿಗ ಜನಾಂಗದ ನಾಯಕರುಗಳಿಗೇ ಕಂಟಕವಾಗಿರುವ ದ್ಯಾವೇಗೌಡರು ಮೊನ್ನೆ ತಮ್ಮ ಪಾರ್ಟಿ ಕಾರ್ಯಕರ್ತರ ಎದುರು ಒಂದೇ ಕಣ್ಣಿನಲ್ಲಿ ಎಷ್ಟು ಅತ್ತರೂ ಕಣ್ಣೀರು ಬರದೇ ಕರವಸ್ತ್ರದಿಂದ ವರಸಿಕೊಂಡರಂತಲ್ಲಾ. ಗೌಡರ ಈ ಕಣ್ಣೀರಿಗೆ ಮಂಡ್ಯದ ಮಂತ್ರಿಗಳು ಶಾಸಕರು ಮತ್ತು ನಿಷ್ಠಾವಂತರು ಗೌಡರಿಗೆ ಬರೆಯುತ್ತಿರುವ ಅಥವಾ ಬರೆಯಲು ಯತ್ನಿಸುತ್ತಿರುವ ಕಾಗದಗಳ ಪರಿಣಾಮವೆಂದು ಗೌಡರ ಆಪ್ತವಲಯದ ಆಪಾದನೆಯಾಗಿದೆಯಲ್ಲಾ. ಗೌಡರ ಆವಗಾಹನೆಗೆ ಮಂಡ್ಯದ ಮುಖಂಡರು ಬರೆಯುತ್ತಿರುವ ದೂರಿನ ಪಟ್ಟಿ ಇಂತಿದೆಯಲ್ಲಾ.

ಪಿತೃ ಸಮಾನರು ದೈವ ಸಮಾನರೂ ಆದ ಅಪ್ಪಾಜಿಯವರು ಮತ್ತು ಕುಮಾರಣ್ಣನವರಿಗೆ, ನಮ್ಮ ಶಿರಸಾಷ್ಟಾಂಗ ನಮಸ್ಕಾರಗಳು. ಧೈರ್ಯ ಮಾಡಿ ಈ ಪತ್ರ ಬರೆಯುವ ಉದ್ದೇಶವೇನೆಂದರೆ ಮಂಡ್ಯದಲ್ಲಿ ಚಿರಂಜೀವಿ ನಿಖಿಲ್ ಸೋತ ಮೇಲೆ ತಮ್ಮ ಮನೆಯ ವಾತಾವರಣ ಬದಲಾಗಿದೆ. ಮುಖ್ಯವಾಗಿ ನಾವು ಬಂದಾಗ ಮಡಿಮೈಲಿಗೆ ಬ್ರಾಹ್ಮಣ ಅಸ್ಪøಶ್ಯರನ್ನು ನೋಡಿದಂತೆ ನೋಡುತ್ತೀರಿ ಎಂಬ ವಾಕ್ಯಕ್ಕೆ ಗೌಡರು ಸಿಡಿಮಿಡಿಗೊಂಡರಂತಲ್ಲಾ ಥೂತ್ತೇರಿ…

*****

ಮತ್ತೊಂದು ಪತ್ರದ ಸಾರಾಂಶ. ಅಪ್ಪಾಜಿಯವರೆ ನಾವು ನೀವು ಹೇಳಿದಂತೆ ಕೇಳಿದ್ದೇವೆ. ಕಾಲಲ್ಲಿ ತೋರಿದ ಕೆಲಸವನ್ನ ಕೈಲಿ ಮಾಡಿದ್ದೇವೆ. ಕೈಯಿಂದಲೇ ಹಣ ಹಾಕಿ ರಾಜಕಾರಣ ಮಾಡುತ್ತಿದ್ದೇವೆಯೇ ಹೊರತು ನಿಮ್ಮಿಂದ ಹಣ ಪಡೆದಿಲ್ಲ. ಆದರೂ ನಿಮ್ಮ ಮನೆಗೆ ಬಂದಾಗ, ನಮ್ಮನ್ನು ಕಳ್ಳರಂತೆ ನೋಡುತ್ತೀರಿ. ಇಂತಹ ಅವಮಾನ ಸಹಿಸಲಾಗದೆ ಕೆ.ಆರ್.ಪೇಟೆ ನಾರಾಯಣಗೌಡ ಬಿಕರಿಯಾಗಿ ಹೋದ. ನಮಗೆ ಬೂಕನಕೆರೆ ಎಡೂರಪ್ಪ ದೂರದವನಲ್ಲ. ಆದರೂ ನಾವು ನಿಮ್ಮ ಜೊತೆ ಇದ್ದೇವೆ. ಹೇಳಿದ ಕೆಲಸ ಮಾಡಿದ್ದೇವೆ. ಎಳೆ ಹುಡುಗನನ್ನು ತಂದು ಮಂಡ್ಯಕ್ಕೆ ನಿಲ್ಲಿಸಿದಾಗ ಕುಮಾರಣ್ಣನೇ ಸ್ಪರ್ಧಿಸಿದ್ದಾನೆ ಎನ್ನುವಂತೆ ಕೆಲಸ ಮಾಡಿದ್ದೇವೆ. ಕೈಲಿದ್ದ ಕಾಸು ಖಾಲಿಯಾದ ಮೇಲೆ ಕೈ ಸಾಲ ಮಾಡಿದ್ದೇವೆ. ಎಣ್ಣೆ ಅಂಗಡಿ, ಮಿಲಿಟ್ರಿ ಹೋಟೆಲ್ ಬಾಕಿ ಹಾಗೇ ಇದೆ. ಕಿರುಜಾತಿ ಲೀಡರುಗಳನ್ನೆಲ್ಲಾ ತಂದು ನಿಮ್ಮ ಮುಂದೆ ನಿಲ್ಲಿಸಿ ಬಿಕರಿ ಮಾಡಿದೆವು. ಅವರ ಹಳೆ ಬಾಕಿ ಹಾಗೇ ಇದೆ. ನಮ್ಮ ಭಾಷಣದಿಂದ ಜನ ರೊಚ್ಚಿಗೆದ್ದಿದ್ದಾರೆ. ಹೀಗೆ ಮಾತನಾಡಿ ಎಂದು ಹೇಳಿದವರೂ ನೀವೆ. ಈಗ ನಮ್ಮನ್ನ ದೂರುತ್ತಿರುವವರೂ ನೀವೆ. ಹೇಳಿ ನಾವು ಇಲ್ಲೇ ಇರಬೇಕೋ ಅಥವಾ ಬೂಕನಕೆರೆಗೆ ಹೋಗಬೇಕೊ ತಿಳಿಸಿ ಎಂದು ಬರೆದುಬಿಟ್ಟಿದ್ದಾರಲ್ಲ ಥೂತ್ತೇರಿ…

*****

ಮತ್ತೊಂದು ಪತ್ರದ ಒಕ್ಕಣೆ ಇಂತಿದೆಯಲ್ಲಾ. ತಂದೆಯಿಲ್ಲದ ನನಗೆ ತಂದೆ ಸಮಾನರೂ ಅಣ್ಣನಿಲ್ಲದ ನನಗೆ ಅಣ್ಣನಂತಿರುವ ಕುಮಾರಣ್ಣ, ಮಂಡ್ಯದ ಚುನಾವಣಾ ಫಲಿತಾಂಶದ ನಂತರ ನಾನು ನಿಮ್ಮ ಮನೆಗೆ ಬಂದಾಗ ಅಪ್ಪಾಜಿಯವರು ಅತ್ತ ನೋಡುತ್ತಿದ್ದರು. ನನ್ನ ಕಡೆ ತಿರುಗಲಿಲ್ಲ. ನೀವು ಪ್ರಜಾವಾಣಿಯ ಜಾಹೀರಾತು ನೋಡುತ್ತ ತಲೆ ಎತ್ತಲಿಲ್ಲ. ನಿಜಕ್ಕೂ ಮಂಡ್ಯದಲ್ಲಿ ನಮ್ಮ ನಿಖಿಲ್ ಸೋತಿದ್ದು ನಮ್ಮಿಂದಲ್ಲ ನಿಮ್ಮಿಂದ. ಕೇಳಿ ಮೊದಲನೆಯದಾಗಿ ಮಂಡ್ಯಕ್ಕೆ ಒಂಟಿ ಕರುವಿನಂತೆ ಆ ಹುಡುಗನನ್ನ ತಂದು ನಿಲ್ಲಿಸಿದ್ದು ದೊಡ್ಡ ತಪ್ಪು. ಆ ನಂತರ ಕುಮಾರಣ್ಣ ಮೂರು ಸುಮಲತಾರನ್ನ ಹುಡುಕಿ ತಂದು ನಿಲ್ಲಿಸಿದ್ದು ಇನ್ನು ದೊಡ್ಡ ತಪ್ಪು. ಆನಂತರ ಕುಮಾರಣ್ಣ ಯಶ್ ಎಂಬ ನಟನನ್ನು ಕೀಳಾಗಿ ನಿಂದಿಸಿದ್ದು ಮಹಾ ಅಪರಾಧ. ಆ ನಟನ ಅಭಿಮಾನಿಗಳು ಇಡೀ ಕರ್ನಾಟಕದಲ್ಲಿ ನಮಗೂ ಓಟಾಕಲಿಲ್ಲ. ಕಾಂಗ್ರೆಸ್ಸಿಗೂ ಓಟು ಹಾಕಲಿಲ್ಲ. ಇನ್ನ ದರ್ಶನ್ ಎಂಬ ದೊಡ್ಡ ನಟನನ್ನ ಕುಮಾರಣ್ಣ ಆಡಿಕೊಂಡರು. ಆ ನಟನ ಇಡೀ ಕರ್ನಾಟಕದ ಅಭಿಮಾನಿಗಳು ದಳಕ್ಕೆ ಓಟು ಮಾಡಲಿಲ್ಲ. ಈ ಹಾಳು ಟಿ.ವಿ ಜನ ಕುಮಾರಣ್ಣನ ಮಾತನ್ನ ಒಂದು ತಿಂಗಳು ಅರೆದರು. ಇನ್ನ ರೇವಣ್ಣನ ಮಾತು ಮಂಡ್ಯದ ಮಹಿಳೆಯರ ಓಟನ್ನೇ ಕಸಿಯಿತು. ನಿಖಿಲರನ್ನು ಸೋಲಿಸಿದವರು ನೀವೇ ಹೊರತು ನಾವಲ್ಲ ಥೂತ್ತೇರಿ…

*****

ಮತ್ತೊಂದು ಪತ್ರದಲ್ಲಿ ದೇವೇಗೌಡರನ್ನ ನೇರಾನೇರ ಪ್ರಶ್ನಿಸಿದೆಯಂತಲ್ಲಾ. ಮಾನ್ಯ ದೇವೇಗೌಡರೆ ತಮ್ಮ ರಾಜಕಾರಣವನ್ನ ನೋಡಿದರೆ, ಕುಲಕ್ಕೆ ಮೂಲ ಕೊಡಲಿ ಕಾವು ಎನ್ನುವಂತೆ ಕಾಣುತ್ತಿದ್ದೀರಿ. ಇವತ್ತು ಒಬ್ಬನೇ ಒಬ್ಬ ಧೀಮಂತ ನಾಯಕ ಒಕ್ಕಲಿಗ ಜನಾಂಗದಲ್ಲಿ ಇಲ್ಲದಂತೆ ಮಾಡಿಬಿಟ್ಟಿದ್ದೀರಿ. ಕಾಂಗ್ರೆಸ್‍ನಲ್ಲೂ ಇಲ್ಲ, ದಳದಲ್ಲೂ ಇಲ್ಲ. ಅದಕ್ಕೆ ಇಲ್ಲಿ ಬಿಜೆಪಿ ಕಾಲೂರಿದ್ದು. ಕುಮಾರಣ್ಣ ಅವರ ಜೊತೆ ಸರಕಾರ ಮಾಡಿ ಕಾಲೂರಲು ಅವಕಾಶ ಮಾಡಿದರು. ಈಗ ನಿಮ್ಮಿಬ್ಬರ ಮನೆತನದ ಬುದ್ಧಿಯಿಂದ ಅತ್ತ ಕಾಂಗ್ರೆಸ್ಸೂ ಹಾಳಾಯ್ತು. ದಳವೂ ಉದುರೊಯ್ತು. ಬಿಜೆಪಿ ಕಾಲೂರಿತು. ಕಾರಣ ಇಷ್ಟೆ. ತಾವು ಅನಾದಿಕಾಲದಿಂದ ಕರ್ನಾಟಕ ಮತ್ತು ದೇಶವನ್ನು ಕುರಿತು ಯೋಚಿಸಿದವರಲ್ಲ. ಬರೇ ಕುಟುಂಬವನ್ನು ಕುರಿತು ಯೋಚಿಸಿದಿರಿ. ಅವರ ಅಂತಿಮ ಹಂತ ಯಾವುದು ಎಂದರೆ, ನಾಡಿನ ಒಕ್ಕಲಿಗ ಜನಾಂಗ ನಿಮ್ಮನ್ನ ನಿಮ್ಮ ಕುಟುಂಬವನ್ನು ತಿರಸ್ಕರಿಸಿದೆ. ನಿಮ್ಮ ಪಾರ್ಟಿ ಆಫೀಸು ಹಾಳಾಗಿದೆ. ನೀವೇ ನೇಮಿಸಿದ ಅಧ್ಯಕ್ಷ ನಿಮಗೆ ತಕ್ಕ ಶಾಸ್ತಿ ಮಾಡಿದ. ಈಗಲಾದರೂ ಸಮಗ್ರ ಕರ್ನಾಟಕದಲ್ಲಿ, ದಳ ಎಂಬ ಪ್ರಾದೇಶಿಕ ಪಾರ್ಟಿ ಉಳಿಸಲು ಕಣ್ಣು ತೆರೆಯಿರಿ. ಮಿಸ್ಟರ್ ದೇವೇಗೌಡ್ ಓಪನ್ ಯುವರ್ ಐ ಥೂತ್ತೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...